ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …
Read More »2+3+4 ಮುಖ್ಯವಾದರೂ ಅವರ ಹಿಂದೆ ಇನ್ನು ತುಂಬಾ ಹೆಚ್ಚಿನ ಜನರಿದ್ದಾರೆ; ರಮೇಶ್ ಜಾರಕಿಹೊಳಿ
ಬೆಂಗಳೂರು: ನಮ್ಮ ವಕೀಲರು ಮಾಧ್ಯಮದ ಜೊತೆ ಮಾತನಾಡಬೇಡಿ ಅಂದಿದ್ದಾರೆ. ಆದರೆ, ನೀವೂ ಮುಂಜಾನೆಯಿಂದ ಕಾಯ್ತಿದ್ದೀರಿ. ಅದಕ್ಕೆ ಮಾತನಾಡ್ತಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ತಮ್ಮ ನಿವಾಸದಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ವಿಚಾರವಾಗಿ ಅಧಿಕೃತವಾಗಿ ನಾನು ದೂರು ನೀಡಿದ್ದೇನೆ. ಎಲ್ಲಾ ರಾಜಕೀಯದವರು ಮಾಡಿರುವ ಷಡ್ಯಂತ್ರ. ಬ್ಲಾಕ್ ಮೇಲ್ ಮಾಡಿದ್ದಾರೆ. ಅದಕ್ಕಾಗಿ ದೂರು ನೀಡಿದ್ದೇನೆ. ದಾರಿ ತಪ್ಪಿಸುವ ರೀತಿ ಮಾಡಬೇಡಿ. ಇವತ್ತು ಎಫ್ ಐಆರ್ ದಾಖಲಾಗಿದೆ ಎಂದರು. ನಾನು ಬೇಕಾದರೂ ವಿಚಾರಣೆಗೆ ಹೋಗ್ತಿನಿ. ನಾವು ನೇರವಾಗಿ ಹೆಸರು ಹೇಳಿದರೆ ಕೇಸ್ …
Read More »ಮೊಮ್ಮಕಳ್ಳನ್ನು ಆಡಿಸುವ ವಯಸ್ಸಿನಲ್ಲಿ ಮತ್ತೊಂದು ಮದುವೆಹುಟ್ಟಿಸಿದ ಮಕ್ಕಳು ಕೊಚ್ಚಿ ಕೊಲೆ ಮಾಡಿದ ಘಟನೆ
ಬೆಳಗಾವಿ: ಮೊಮ್ಮಕಳ್ಳನ್ನು ಆಡಿಸುವ ವಯಸ್ಸಿನಲ್ಲಿ ಮತ್ತೊಂದು ಮದುವೆ ಆಗಿ ಆಸ್ತಿಯಲ್ಲಿ ಎರಡನೆಯ ಹೆಂಡತಿಗೆ ಪಾಲು ಕೊಡಲು ಹೊರಟಿದ್ದ ವ್ಯಕ್ತಿಯನ್ನು ತಾನೇ ಹುಟ್ಟಿಸಿದ ಮಕ್ಕಳು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ 62 ವರ್ಷದ ಯಲಪ್ಪ ಹರಕಿ ಎಂಬಾತ ಕಳೆದ 35 ವರ್ಷದ ಹಿಂದೆಯೇ ಮದುವೆ ಆಗಿ ಮೂರು ಮಕ್ಕಳ ತಂದೆ ಕೂಡಾ ಆಗಿದ್ದ,ಅದ್ಯಾಕೋ ಮೊದಲೇನೆಯ ಹೆಂಡತಿ ಹಾಗೂ ಮಕ್ಕಳನ್ನು ಬಿಟ್ಟು ಇನ್ನೊಂದು …
Read More »ಕಾರಿನಲ್ಲಿ ಸ್ಪೋಟಕ ಪತ್ತೆ ಪ್ರಕರಣ : ತಿಹಾರ್ ಜೈಲಿಗೆ ಮುಂಬಯಿ ಪೊಲೀಸ್ ಭೇಟಿ
ಮುಂಬಯಿ: ಅಂಬಾನಿ ನಿವಾಸದ ಬಳಿ ಸ್ಫೋಟಕವಿದ್ದ ಕಾರನ್ನು ತಾವೇ ನಿಲ್ಲಿಸಿದ್ದು ಎಂದು “ಜೈಶ್-ಉಲ್-ಹಿಂದ್’ ಸಂಘಟನೆಯ ಹೆಸರಿನಲ್ಲಿ ಟೆಲಿಗ್ರಾಂ ಆಯಪ್ ಸಂದೇಶದ ಹಿನ್ನೆಲೆಯಲ್ಲಿ ಮುಂಬಯಿ ಪೊಲೀಸರು, ಶನಿವಾರ ತಿಹಾರ್ ಜೈಲಿಗೆ ಭೇಟಿ ನೀಡಿ, ಅಲ್ಲಿ ಸೆಂಟ್ರಲ್ ಜೈಲ್ ಸಂಖ್ಯೆ 8ರಲ್ಲಿ ಬಂಧಿತನಾಗಿರುವ ತಹ್ಸಿನ್ ಅಖ್ತರ್ ಎಂಬಾತನನ್ನು ವಿಚಾರಣೆ ಗೊಳಪಡಿಸಿದರು. ಭಾರತದಲ್ಲಿ ಇಂಡಿಯನ್ ಮುಜಾಹಿದ್ದೀನ್ ಗುಂಪುಗಳನ್ನು ನಿರ್ವಹಿಸುತ್ತಿದ್ದ ಆರೋಪದಡಿ 2014ರಲ್ಲಿ ಈತ ಬಂಧನಕ್ಕೊಳಗಾಗಿದ್ದ. ವೇಝ್ ಅರ್ಜಿ ವಜಾ: ಇದೇ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಮನ್ಸುಖ್ …
Read More »ಚಿತ್ರದುರ್ಗ: ‘ಶರಣ ಸೇನೆ’ ಉದ್ಘಾಟನೆ ಇಂದು
ಚಿತ್ರದುರ್ಗ: ‘ಶರಣ ಸೇನೆ ಹೆಸರಿನಲ್ಲಿ ಧರ್ಮಾತೀತ, ಜಾತ್ಯತೀತ ಹಾಗೂ ಪಕ್ಷಾತೀತ ಸಂಘಟನೆ ಸ್ಥಾಪಿಸಲಾಗಿದೆ’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು. ‘ಮುರುಘಾ ಮಠದಲ್ಲಿ ಮಾರ್ಚ್ 14ರಂದು ಬೆಳಿಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆಯಾಗಲಿದೆ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆಗೆ ಚಾಲನೆ ನೀಡುವರು. ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಸೇನೆಯ ಲೋಗೊ …
Read More »ಕುದುರೆ ಏರಿ ನಿಂತ. ಚೆಂದನೇ ಪೋಸ್ ಕೊಟ್ಟ.. ಹೆಣ್ಮಕ್ಕಳು ಫಿದಾ. ಗಂಡುಮಕ್ಕಳು ಗರಂ!
ಮುಂಬೈ: ಇಲ್ಲಿ ಕುದುರೆ ಮೇಲೆ ಏರಿನಿಂತು ಫೋಟೋಗೆ ಪೋಸ್ ಕೊಟ್ಟವನು ಖ್ಯಾತ ಬಾಲಿವುಡ್ ನಟ ವಿಕ್ಕಿ ಕೌಶಲ್. ಅಪಾಯಕಾರಿ ಎನ್ನುವಂಥ ಪೋಸ್ ನೀಡಿರುವ ಈತ ಇದೀಗ ಸಾಮಾಜಿಕ ಜಾಲತಾಣದ ಹೀರೋ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿಧವಾದ ಪೋಟೋದಲ್ಲಿ ಕಾಣಿಸಿಕೊಂಡಿರುವ ನಟ ಕುದುರೆ ಸವಾರಿ ಮಾಡುವಾಗ ಬಳಸಲಾಗುವ ಉಡುಪನ್ನು ಧರಿಸಿದ್ದು, ಜೊತೆಯಲ್ಲಿ ಹೆಲ್ಮೆಟ್ ಹಾಗೂ ಕಾಲಿಗೆ ಶೂ ಧರಿಸಿದ್ದು, ಕುದುರೆ ಮೇಲೆ ನಿಂತು ಬ್ಯಾಲೆನ್ಸ್ …
Read More »ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಆಪ್ತ, ಮಾಜಿ ಶಾಸಕ ಎಂ.ವಿ. ನಾಗರಾಜ್ ಮೂಲಕ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಿಡಿ ಪ್ರಕರಣದ ವಿರುದ್ಧ ಮಾಜಿ ಶಾಸಕ ನಾಗರಾಜ್, ರಮೇಶ್ ಜಾರಕಿಹೊಳಿ ಪರವಾಗಿ ಲಿಖಿತ ದೂರು ದಾಖಲಿಸಿದ್ದು, ನಕಲಿ ಸಿಡಿ ತಯಾರಿಸಿ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿ ತೇಜೋವಧೆ ಮಾಡಲಾಗಿದೆ ಎಂದು ರಮೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಸಿಡಿಯಲ್ಲಿರುವುದು ತಾನಲ್ಲ ಎಂದು …
Read More »ಇತಿಹಾಸದ ನಗರಿಯಾಗಿರುವ ಹಂಪಿಯು ಕೋಟೆ ಗೋಡೆಯ ಒಂದು ಭಾಗದಲ್ಲಿ ಕುಸಿತ
ಹಂಪಿ: ಐತಿಹಾಸಿಕ ನೆಲೆಗಟ್ಟಾಗಿರುವ ಹೊಸಪೇಟೆ ತಾಲ್ಲೂಕಿನ ಹಂಪಿ ಕಮಲ ಮಹಲ್ ಸ್ಮಾರಕ ಸುತ್ತಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಗ್ಗೆ ಕುಸಿದುಬಿದ್ದಿದೆ. ಕಲ್ಲುಗಳಿಂದ ನಿರ್ಮಿಸಿದ್ದ ಗೋಡೆಯ ಒಂದು ಭಾಗ ಭಾಗಶಃ ಕುಸಿದಿದ್ದು, ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ. ಘಟನೆಯಲ್ಲಿ ಯಾವುದೇ ಸ್ಮಾರಕಕ್ಕೆ ಹಾನಿಯಾಗಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ . ಕಾಳಿಮುತ್ತು ಮಾಹಿತಿ ನೀಡಿದ್ದಾರೆ. ಈ ಬಗ್ಗೆ …
Read More »ಸಿದ್ದರಾಮಯ್ಯ ಆರಂಭಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಹಾವೇರಿ, ಮಾರ್ಚ್ 13: ಸಿದ್ದರಾಮಯ್ಯ ಆರಂಭಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದರು. ಹಾವೇರಿಯು ಕಾಂಗ್ರೆಸ್ನ …
Read More »ಎಸ್ಐಟಿ’ ತನಿಖೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಹತ್ವದ ಪ್ರತಿಕ್ರಿಯೆ!
ಬೆಂಗಳೂರು, ಮಾ. 13: ರಮೇಶ್ ಜಾರಕಿಹೊಳಿ ಅವರ ‘ಸಿಡಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದು, ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಈಗಾಗಲೇ ‘ಸಿಡಿ’ ಕುರಿತು ಎಸ್ಐಟಿ ತನಿಖೆ ಆರಂಭಿಸಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂಬ ಮಾಹಿತಿಯಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗದೆ ಸರಿಯಾದ ತನಿಖೆ ನಡೆಸುವುದು ಅಸಾಧ್ಯ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸುತ್ತಾರಾ ಎಂಬ ಪ್ರಶ್ನೆಗೆ …
Read More »
Laxmi News 24×7