Breaking News

ರಾಜ್ಯ

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಕೋಲ್ಕತ್ತಾ : ಇಂದು ಕೊಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ( 70 ) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರಿದ್ದು, ರಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜ ಹಾರಿಸುವ ಮೂಲಕ ತಮ್ಮ ಸೇರ್ಪಡೆಯನ್ನು ಸ್ಪಷ್ಟವಾಗಿ ಘೋಷಿಸುತ್ತಾರೆ. ಈ ಹಿಂದೆ ಸಿಪಿಎಂಗೆ ಆಪ್ತರಾಗಿದ್ದ ಮಿಥುನ್ , ಕೆಲಕಾಲ ಟಿಎಂಸಿ ಸಂಸದರಾಗಿ ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ …

Read More »

ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆದ ಕಾರಣ ತಿಳಿದಿಲ್ಲ;: H.D.K.

ಕೋಲಾರ: ದಿನೇಶ್ ಕಲ್ಲಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬ ವಿಚಾರ ತಿಳಿದಿಲ್ಲ ಎಂದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿ ಇದೆ. ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಗೌರವ‌ ಉಳಿಸಿಕೊಳ್ಳುವ‌ ನಿಟ್ಟಿನಲ್ಲಿ ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. …

Read More »

ರಾಸಲೀಲೆ ಪ್ರಕರಣ : ಸಂತ್ರಸ್ತ ಯುವತಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು, ಮಾ.7- ರಾಸಲೀಲೆ ಸಿಡಿಗಳು ಬಹಿರಂಗಗೊಳ್ಳುತ್ತಿದ್ದಂತೆ ತಲೆಮರೆಸಿಕೊಂಡಿರುವ ಸಂತ್ರಸ್ತ ಯುವತಿಯ ಪತ್ತೆಗಾಗಿ ಕಬ್ಬನ್‍ಪಾರ್ಕ್ ಠಾಣೆ ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ಶೋಧ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಆಕೆ ಮತ್ತು ಕುಟುಂಬದ ಸದಸ್ಯರಿಗಾಗಿ ಬೆಂಗಳೂರು ನಗರ ಪೊಲೀಸರು ಹುಡುಕಾಡುತ್ತಿದ್ದಾರೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ಅವರು ಈ ಬಗ್ಗೆ ದೂರು ನೀಡಿದ ನಂತರದಿಂದಲೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು ಸಂತ್ರಸ್ತ ಯುವತಿಯ ಪತ್ತೆಗಾಗಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ.ಈಗಾಗಲೇ ಬೆಂಗಳೂರಿನ ಆರ್‍ಟಿ …

Read More »

ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ.   ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

Read More »

ತಮಿಳುನಾಡಿನಲ್ಲಿ 60 ಸೀಟು ಕೇಳಿದ ಬಿ ಜೆ ಪಿ ಗೆ 20ಸೀಟು

ಚೆನ್ನೈ: ತಮಿಳುನಾಡಿನಲ್ಲಿ ಏ.6ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟದ ನಡುವಣ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಂಡಿದ್ದು, ಬಿಜೆಪಿ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಹಿಂದೆ 60 ಕ್ಷೇತ್ರಕ್ಕೆ ಬಿಜೆಪಿ ಬೇಡಿಕೆ ಇಟ್ಟಿತ್ತು. ಆದರೆ ಕೇವಲ 20 ಕ್ಷೇತ್ರಗಳನ್ನು ಮಾತ್ರ ಎಐಎಡಿಎಂಕೆ ಬಿಟ್ಟುಕೊಟ್ಟಿದೆ. ಇದೇ ವೇಳೆ ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಬಿಜೆಪಿಯನ್ನು ಬೆಂಬಲಿಸುವುದಾಗಿ ಎಐಎಡಿಎಂಕೆ ಘೋಷಿಸಿದೆ. ಈ ಬೆನ್ನಲ್ಲೇ …

Read More »

ಗೇೂಕಾಕ ತಾಲ್ಲೂಕಿನ ಪಿ ಜಿ.ಹುಣಶ್ಯಾಳ ಕ್ರಾಸ್ ಬಳಿ ಜಾರಕಿಹೋಳಿ ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ.

ಗೋಕಾಕ: ತಾಲೂಕಿನ ಪಿ.ಜಿ. ಹುಣಶ್ಯಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ, ಸದಸ್ಯರು ಹಾಗೂ ಗ್ರಾಮಸ್ಥರು ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ದಿನದಿಂದ ದಿನಕ್ಕೆ ರಂಗೆರುತ್ತಿರುವ ಪಿ.ಜಿ ಹುಣಶ್ಯಾಳ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆ. ದಿನೇಶ ಕಲ್ಲಹಳ್ಳಿಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ. ನಕಲಿ ಸಿ.ಡಿ ತಯಾರಿಸಿ ವಿರೋದಿಗಳಿಂದ ಷಡ್ಯಂತ್ರ ರೂಪಿಸಿರುವ ನಕಲಿ ಸಿ.ಡಿಯಿಂದಾಗಿ ರಮೇಶ ಜಾರಕಿಹೊಳಿ ಅವರ ರಾಜಕೀಯ ಕ್ಷೇತ್ರದಲ್ಲಿನ ಏಳಿಗೆ ಸಹಿಲಾರದವರ ಷಡ್ಯಂತ್ರದಿಂದ ಇಷ್ಟು ದಿನದಿಂದ ರಾಜಕೀಯವಾಗಿ ಮುಂದು ವರೆದದನ್ನು …

Read More »

ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ

ಬೆಳಗಾವಿ:   ಸದಾ ಒಂದಿಲ್ಲದೊಂದು  ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ  ಸಂಘಟನೆ  ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ  ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …

Read More »

ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ

ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ  ತವಗ ಗ್ರಾಮದ ಇಬ್ಬರು ಅಭಿಮಾನಿಗಳು  ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು  ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್  ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …

Read More »

ಬಿಗ್‌ಬಾಸ್‌ ಮನೆಯಿಂದ ಧನುಶ್ರೀ ಔಟ್‌?

ಬಿಗ್‌ಬಾಸ್‌ ಸೀಸನ್‌-8ರ ಮೊದಲ ವಾರ ಮನೆಯಿಂದ ಹೊರಹೋಗೋ ಸ್ಪರ್ಧಿ ಯಾರು? ಭಾನುವಾರ ಎಲ್ಲರ ತಲೆಗೆ ಹುಳ ಬಿಟ್ಟಿರೋ ಪ್ರಶ್ನೆ ಇದು. ಶನಿವಾರ ಎಪಿಸೋಡ್‌ಗಳಲ್ಲಿ ಎಲಿಮನೇಷನ್‌ ನಡೀತಾ ಇತ್ತು. ಆದ್ರೆ, ಈ ವಾರ ಎಲಿಮನೇಷನ್‌ ರೌಂಡ್‌ನ ಭಾನುವಾರಕ್ಕೆ ಮುಂದೂಡಲಾಗಿದ.   ನಿನ್ನೆಯ ಎಪಿಸೋಡ್‌ನಲ್ಲಿ ಶುಭಾ ಪೂಂಜಾ ಹಾಗೂ ಗಾಯಕ ವಿಶ್ವನಾಥ್‌ ಸೇವ್ ಆಗಿದ್ದಾರೆ. ಇನ್ನೂ ನೇರವಾಗಿ ನಾಮಿನೇಟ್ ಆಗಿರೋ ನಿರ್ಮಲಾ, ರಘು ಗೌಡ ಹಾಗೂ ಟಿಕ್‌ಟಾಕ್‌ ಸ್ಟಾರ್ ಧನುಶ್ರೀ ಡೇಂಜರ್‌ ಝೋನ್‌ನಲ್ಲಿದ್ದಾರೆ. …

Read More »

ರಾಬರ್ಟ್ ಗೆ 2 ಮುಖ್ಯ ಚಿತ್ರಮಂದಿರಗಳು..!

ಈ ಹಿಂದೆ ಸಿನಿಮಾಗಳು 1ಮುಖ್ಯ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿದ್ದವು. ಹೌದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವ ಯಾವುದಾದರೂ ಒಂದು ಚಿತ್ರಮಂದಿರವನ್ನು ಮುಖ್ಯ ಚಿತ್ರಮಂದಿರ ಎಂದು ಘೋಷಿಸಿ ಚಿತ್ರಗಳನ್ನ ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಇದೀಗ ಕಾಲ ಬದಲಾಗಿದೆ ಕೆಜಿ ರಸ್ತೆಯ ಚಿತ್ರಮಂದಿರ ಮಾತ್ರವಲ್ಲದೆ ಬೇರೆ ಚಿತ್ರಮಂದಿರಗಳನ್ನು ಸಹ ಮುಖ್ಯ ಚಿತ್ರಮಂದಿರ ಎಂದು ಘೋಷಿಸಲಾಗುತ್ತಿದೆ. ಇದೀಗ ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಸಹ 2ಮುಖ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮಾರ್ಚ್ 11 ರಂದು …

Read More »