ಚಿಕ್ಕಮಗಳೂರು: ಇಬ್ಬರು ದರೋಡೆಕೋರರಿಂದ ಹಾಡಹಗಲೇ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ನಗರ ಎಐಟಿ ಸರ್ಕಲ್ ನಲ್ಲಿ ನಡೆದಿದೆ. ಎಐಟಿ ಸರ್ಕಲ್ ನಲ್ಲಿರುವ ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡ ಎಂಬವರ ಮನೆ ಬಳಿ ಪಲ್ಸರ್ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಯುವಕರು ತಲೆಗೆ ಹೆಲ್ಮೆಟ್ ಧರಿಸಿ ಕೈಯಲ್ಲಿ ಚಾಕು ಹಿಡಿದು ಮನೆಯೊಳಗೆ ಪ್ರವೇಶಿಸಿದ್ದಾರೆ. ಮನೆಯಲ್ಲಿ ಚಂದ್ರೇಗೌಡ ಪತ್ನಿ ಒಬ್ಬರೇ ಇದ್ದಿದ್ದು, ಅವರ ಕೈ ಬಾಯಿಗೆ ವೇಲ್ ನಿಂದ ಕಟ್ಟಿ ದರೋಡೆಗೆ ಯತ್ನಿಸಿದ್ದಾರೆ. …
Read More »ಕಂಗನಾ-ಹೃತಿಕ್ ಕೇಸ್: ವಿಚಾರಣೆಗೆ ಹಾಜರಾದ ‘ಕ್ರಿಶ್’ ಹೀರೋ
ಮಹಾರಾಷ್ಟ್ರ: 5 ವರ್ಷ ಹಳೆಯ ಕೇಸ್ ಒಂದರಲ್ಲಿ ಹೃತಿಕ್ ರೋಷನ್ ಇಂದು ಮುಂಬೈ ಪೊಲೀಸ್ ಸ್ಟೇಷನ್ಗೆ ಬಂದು ಕ್ರೈಂ ಬ್ರಾಂಚ್ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ಧಾರೆ. 2016ರಲ್ಲಿ ನಟ ಹೃತಿಕ್ ರೋಷನ್ ಮುಂಬೈ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಿಸಿದ್ರು. 2013ರಿಂದ 2014ರವರೆಗೆ ನನ್ನ ಹೆಸರಲ್ಲಿ ನಕಲಿ ಇ-ಮೇಲ್ ಐಡಿ ರಚಿಸಿ, ಕಂಗನಾ ಜೊತೆ ಯಾರೋ ಮಾತನಾಡ್ತಿದ್ಧಾರೆ ಅಂತ ದೂರಿದ್ದರು. ಆದ್ರೆ ಕಂಗನಾ ಮಾತ್ರ ಹೃತಿಕ್ ನನ್ನ ಜೊತೆ ಪ್ರೀತಿಯ …
Read More »ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧ
ನವದೆಹಲಿ: ಮಾರ್ಚ್ 31ರ ತನಕ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಆದೇಶಿಸಿದೆ. ಕಳೆದ ವರ್ಷ ಮಾರ್ಚ್ 23ರ ಬಳಿಕ ಅಂತಾರಾಷ್ಟ್ರೀಯ ವಿಮಾನಯಾನ ಸಂಚಾರವನ್ನು ಕೋವಿಡ್-19 ಹಿನ್ನೆಲೆಯಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಈಗ ಮಾರ್ಚ್ 31ರ ತನಕ ಮುಂದುವರಿಸಿದೆ ಎಂದು ಡಿಜಿಸಿಎ ತಿಳಿಸಿದೆ. ವಿಶೇಷ ವಿಮಾನ ಹಾಗೂ ಸರಕು ಸಾಗಾಣೆಗೆ ಈ ನಿಷೇಧ ಅನ್ವಯ ಆಗಲ್ಲ. ನಿಗದಿತ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಡಿಜಿಸಿಎ …
Read More »ಗಮನ ಸೆಳೆದ ಬನಶಂಕರಿ ದೇವಿಯ ತರಕಾರಿ ಪೂಜೆ
ರಬಕವಿ-ಬನಹಟ್ಟಿ: ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಹಳೆಯ ನೀರಿನ ಟ್ಯಾಂಕ್ ಹತ್ತಿರ ಇರುವ ಬನಶಂಕರಿ ದೇವಸ್ಥಾನದ ಜಾತ್ರೆಯ ನಿಮಿತ್ತವಾಗಿ ಬನಶಂಕರಿ ದೇವಿಗೆ ಶುಕ್ರವಾರ 108 ತರಕಾರಿ ಮತ್ತು ವಿವಿಧ ರೀತಿಯ ಹಣ್ಣು ಹಂಪಲುಗಳಿಂದ ಶೃಂಗಾರದ ಪೂಜೆಯನ್ನು ಕೈಗೊಳ್ಳಲಾಯಿತು. ತರಕಾರಿಗಳಿಂದ ಮಾಡಲಾದ ಶೃಂಗಾರದ ಪೂಜೆ ಭಕ್ತರ ಗಮನ ಸೆಳೆಯಿತು. ಅರ್ಚಕರಾದ ಬಸಪ್ಪ ಮಂಡಿ ಹಾಗೂ ಸಂಗಪ್ಪ ಕೊಳ್ಳಿ, ಬಸು ನುಚ್ಚಿ, ರಾಜು ಶೀಲವಂತ, ಕಾಡು ಬಬಲಾದಿ ಮಧ್ಯ ರಾತ್ರಿಯಿಂದ ತರಕಾರಿ …
Read More »ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ
ಕೊಪ್ಪಳ: ವಿಜಯಾನಂದ ಕಾಶಪ್ಪನವರ್ ಅವರು ದೊಡ್ಡವರು ಅವರಷ್ಟು ದೊಡ್ಡನಾಯಕ ನಾನಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ನಾವು ಲೀಡ್ ತೆಗೆದುಕೊಳ್ಳಲ್ಲ. ಕಾಶಪ್ಪನವರ್ ರಾಷ್ಟ್ರೀಯ ಅಧ್ಯಕ್ಷರು ಅವರೇ ಮೀಸಲಾತಿ ಹೋರಾಟಕ್ಕೆ ಲೀಡ್ ತಗೆದುಕೊಳ್ಳಲಿ. ಅವರಷ್ಟು ನಾವು ದೊಡ್ಡವರಲ್ಲ. ಅವರು ಹೋರಾಟ ಏನು ಮಾಡ್ತಾರೋ ದೇವರು ಕೊಟ್ಟಷ್ಟು ಅವರು ಮಾಡಲಿ. ಸರ್ಕಾರದ ಭಾಗವಾಗಿ ನಾವು …
Read More »ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ.
ಲಾಗೋಸ್: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ. ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ ಎಂದು ಪೋಷಕರೊಬ್ಬರು …
Read More »ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ ಹಿಮಾ ದಾಸ್
2018ರಲ್ಲಿ ನಡೆದ ವಿಶ್ವ ಕಿರಿಯರ ಚಾಂಪಿಯನ್ ಶಿಪ್ ನಲ್ಲಿ 400 ಮೀಟರ್ ಓಟದಲ್ಲಿ ಹಿಮಾ ದಾಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ರು. ಇಡೀ ಭಾರತ ಆಗ ಆಕೆಯನ್ನ ಕೊಂಡಾಡಿತ್ತು. ಇದೀಗ ಮತ್ತೆ ಆಕೆಯನ್ನ ಕಂಡು ಭಾರತದ ಮಂದಿ ಹೆಮ್ಮೆ ಪಡುತ್ತಿದ್ದಾರೆ. ಸದ್ಯ ಅಸ್ಸಾಂನ ಡಿಎಸ್ಪಿ ಯಾಗಿ ಹುದ್ದೆ ಸ್ವೀಕರಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದಾರೆ. ಹಿಮಾದಾಸ್ ಡಿಎಸ್ಪಿಯಾಗಿರುವುದು ಎಲ್ಲರಿಗೂ ಖುಷಿ ತಂದಿದೆ. ಎಲ್ಲರ ಪ್ರೊಫೈಲ್ ನಲ್ಲೂ ಆ ಬಗ್ಗೆ ಬರೆದು, ಹಿಮಾದಾಸ್ …
Read More »ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ
ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂ. ಇದ್ದದ್ದು, ಇಂದು 47,170 ರೂ. ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ ನಿನ್ನೆ 43,400 ರೂ. ಇದ್ದದ್ದು, ಇಂದು 43,240 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ …
Read More »ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ.. ಥೂ ಎಂದು ಸರ್ಕಾರಕ್ಕೆ ಉಗಿತಿರೋ ಜನ…
ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ. ಮೂರು ದಿನಗಳ ಬಳಿಕ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ. ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.47 ರೂ. ಗೆ ಏರಿಕೆಯಾಗಿದೆ. ಇನ್ನು …
Read More »ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ: ಡಿಸಿಎಂ ಲಕ್ಷ್ಮಣ್ ಸವದಿ
ಜಯಪುರ : ಬಿಎಟಿಸಿ ಬಸ್ ದರ ಹೆಚ್ಚಳದ ನಂತ್ರ, ಸಾರಿಗೆ ಬಸ್ ಪ್ರಯಾಣದ ದರ ಕೂಡ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ, ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲವೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕಳೆದ ವರ್ಷವೇ ಬಸ್ …
Read More »
Laxmi News 24×7