Breaking News

ರಾಜ್ಯ

ಇಂದು ರಾಜ್ಯಕ್ಕಾಗಮಿಸುತ್ತಿದ್ದಾರೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು,ಫೆ.17- ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಮಿಂಚಿನ ಬೆಳವಣಿಗೆಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಜೆ ನವದೆಹಲಿಯಿಂದ ಆಗಮಿಸಲಿರುವ ಅವರು, ಇಂದು ರಾತ್ರಿ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಕೆಲವು ನಾಯಕರ ಜೊತೆ ಔಪಚಾರಿಕವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.ಆದರೆ, …

Read More »

BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ತೈಲದ ಬೆಲೆ ಏರಿಕೆ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ 100 ರೂ. ಸನಿಹಕ್ಕೆ ಬಂದಿದೆ. ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ …

Read More »

ಪಿಎಂ ಕೇರ್ಸ್​ ಲೆಕ್ಕವನ್ನೇ ಕೊಡದವರು ರಾಮ ಮಂದಿರ ಹಣದ ಲೆಕ್ಕಾ ಕೊಡ್ತಾರ?; ಸಿದ್ದರಾಮಯ್ಯ

ಬೆಂಗಳೂರು (ಫೆಬ್ರವರಿ 16); ಕೊರೋನಾ ಸಂದರ್ಭದಲ್ಲಿ ಜನರಿಂದ ಸಂಗ್ರಹಿಸಲಾದ ಪಿಎಂ ಕೇರ್ಸ್​ ಹಣದ ಲೆಕ್ಕವನ್ನೇ ಕೊಡದವರು, ಇದೀಗ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲು ಮುಂದಾಗಿರುವ ಹಣದ ಲೆಕ್ಕ ಕೊಡ್ತಾರಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ ನೀಡುತ್ತಿದ್ದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು. ಅಲ್ಲದೆ, ದೇವಾಲಯ …

Read More »

ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …

Read More »

ಶ್ರೀಮಂತ ರೈತ..! ಹೆಲಿಕಾಪ್ಟರ್ ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಹಾಲು ಉತ್ಪಾದಕ..!!

ಭಿವಾಂಡಿ: ಮಹಾರಾಷ್ಟ್ರದ ಭಿವಾಂಡಿಯ ರೈತ ಮತ್ತು ಉದ್ಯಮಿ ಜನಾರ್ಧನ್ ಭೋಯಿರ್ ಅವರು 30 ಕೋಟಿ ರೂಪಾಯಿಯ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಹಾಲು ಉತ್ಪಾದಕರಾಗಿರುವ ಜನಾರ್ಧನ್ ಡೈರಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ದೇಶದ ವಿವಿಧ ನಗರಗಳಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದರಿಂದ ತಮ್ಮ ಪ್ರವಾಸ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಡೈರಿ ವ್ಯವಹಾರಗಳಿಗೆ ಆಗಾಗ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಗೆಪ್ರಯಾಣಿಸಬೇಕಿದೆ. ನಾನು ಭೇಟಿ ನೀಡಲಿರುವ ಎಲ್ಲಾ ನಗರಗಳಲ್ಲಿ ವಿಮಾನ ನಿಲ್ದಾಣಗಳು ಇರುವುದಿಲ್ಲ. …

Read More »

ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ

ಗಂಗಾವತಿ: ಕೃಷಿಯಲ್ಲಿ ಆಧುನಿಕ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳುತ್ತಿದ್ದು ಕೂಲಿಕಾರರ ಕೊರತೆಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ಭಾಗದಲ್ಲಿ ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆಯ ಮೂಲಕ ಶೇ.50 ರಷ್ಟು ಖರ್ಚು ಉಳಿತಾಯ ಮಾಡಲಾಗುತ್ತಿದೆ. ಒಂದು ಎಕರೆ ಭತ್ತದ ಗದ್ದೆಗೆ ಕ್ರಿಮಿನಾಶಕ ಸಿಂಪರಣೆಗೆ ನಾಲ್ಕು ಕೂಲಿ ಕಾರ್ಮಿಕರು ಬೇಕಾಗುತ್ತದೆ. ಸಹಜವಾಗಿ ಒಂದು ಲೀಟರ್ ಕ್ರಿಮಿನಾಶಕ ಒಂದು ಎಕರೆಗೆ ಸಿಂಪರಣೆ ಮಾಡಲಾಗುತ್ತದೆ.‌ ಆದರೆ ಡ್ರೋಣ್ ಮೂಲಕ ಒಂದು ಲೀಟರ್ ನಲ್ಲಿ ಎರಡು ಎಕರೆ …

Read More »

ಮಧ್ಯ ಪ್ರದೇಶ: ಬಸ್ ಕಾಲುವೆಗೆ ಬಿದ್ದು 35 ಮಂದಿ ಸಾವು, ಹಲವು ಪ್ರಯಾಣಿಕರು ನಾಪತ್ತೆ

ಸಿಧಿ/ರೇವಾ/ಭೋಪಾಲ್: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯ ಪಾಟ್ನಾ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ ಬಿದ್ದಿದ್ದು, ಏಳು ಮಹಿಳೆಯರು ಸೇರಿದಂತೆ ಕನಿಷ್ಠ 35 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಕಾಲುವೆಯಿಂದ 35ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ 40 ದಾಟಬಹುದು ಎಂದು ಇನ್ಸ್‌ಪೆಕ್ಟರ್ ಜನರಲ್(ರೇವಾ ವಲಯ) ಉಮೇಶ್ ಜೋಗಾ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಉತ್ತರ ಕನ್ನಡ ಜಿಲ್ಲಾಧಿಕಾರಿ ಆಗಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ. ಪಿ ಅವರು ಅಧಿಕಾರಿ ಸ್ವೀಕರಿಸಿದರು. ಮೂಲತಃ ತಮಿಳುನಾಡಿನ ಮಧುರೈ ನವರಾದ ಅವರು 2013 ರ ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು, ಪ್ರೋಬೆಷನರಿ ಅವಧಿಯನ್ನು ಬಳ್ಳಾಯರಿಯಲ್ಲಿ ಪೂರೈಸಿದ್ದಾರೆ. ಜಮಖಂಡಿ ಉಪವಿಭಾಗಾಧಿಕಾರಿಯಾಗಿ, ಬೆಳಗಾವಿ ಸ್ಮಾರ್ಟ್ ಸಿಟಿಯ ಎಂಡಿಯಾಗಿ, ಶಿವಮೊಗ್ಗ ಮಹಾನಗರ ಪಾಲಿಕೆಯ ಕಮಿಷನರ್ ಆಗಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಂಡಿ, ರಾಮನಗರ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ …

Read More »

ಪಕ್ಷ ಬಿಟ್ಟು ಹೊದಂತಾ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ : ಸತೀಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ಪಕ್ಷ ಬಿಟ್ಟು ಹೊದಂತಾ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಆಹ್ವಾನ ಮಾಡುವುದು ಪಕ್ಷ ಕಟ್ಟುವ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಲಾಗುತ್ತಿದ್ದು, ಗೋಕಾಕದಿಂದಲೇ ಆರಂಭಿಸಲಾಗಿದೆ. ಅಶೋಕ …

Read More »

ಉಮೇಶ್ ಕತ್ತಿಗೆ ಐಎಎಸ್ ಲಾಬಿಯೇ ಗೊತ್ತಿಲ್ಲ : ಕತ್ತಿಯನ್ನು ತಿವಿದ ಹೊನ್ನಾಳ್ಳಿ ಓರಿ

ಬೆಂಗಳೂರು : ನಮ್ಮದು ಬಡವರ, ಶೋಷಿತರ ಪರವಾದ ಸರ್ಕಾರ. ಈ ರೀತಿ ಧ್ವಂದ್ವ ಹೇಳಿಕೆಗಳನ್ನು ನೀಡಬಾರದು. ಉಮೇಶ್ ಕತ್ತಿಗೆ ಐಎಎಸ್ ಲಾಬಿಯೇ ಗೊತ್ತಿಲ್ಲ ಎಂಬುದಾಗಿ CM ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಪಡಿತರ ಕಾರ್ಡ್ ವಿಚಾರವಾಗಿ ಸಚಿವ ಉಮೇಶ್ ಕತ್ತಿ ಗೊಂದಲದ ಹೇಳಿಕೆ ಕುರಿತಂತೆ ಮಾತನಾಡಿದಂತ ಅವರು, ಉಮೇಶ ಕತ್ತಿ, IAS ಲಾಬಿಯೇ ಗೊತ್ತಿಲ್ಲ. ನಮ್ಮದು ಬಡವರ, ಶೋಷಿತರ ಪರವಾದ ಸರ್ಕಾರ. ಈ ರೀತಿಯ ದ್ವಂದ್ವ ಹೇಳಿಕೆಗಳನ್ನು ನೀಡಬಾರದು. …

Read More »