Breaking News

ರಾಜ್ಯ

ಅಂದೊಂದಿತ್ತು ಕಾಲ’ ಚಿತ್ರೀಕರಣಕ್ಕೆ ಪುನೀತ್‌ ಕ್ಲ್ಯಾಪ್‌

ಬೆಂಗಳೂರು: ‘ನಮ್ಮ ಬಸವ’ ಚಿತ್ರದಲ್ಲಿ ‘ಅಂದೊಂದಿತ್ತು ಕಾಲ’ಕ್ಕೆ ಹೆಜ್ಜೆ ಹಾಕಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಸೋಮವಾರ, ಅಣ್ಣ ರಾಘವೇಂದ್ರ ರಾಜ್‌ಕುಮಾರ್‌ ಅವರ ಹಿರಿಯ ಪುತ್ರ ನಟ ವಿನಯ್‌ ರಾಜ್‌ಕುಮಾರ್‌ ಅವರ ಹೊಸ ಚಿತ್ರ ‘ಅಂದೊಂದಿತ್ತು ಕಾಲ’ಕ್ಕೆ ಕ್ಲ್ಯಾಪ್‌ ಮಾಡುವ ಮುಖಾಂತರ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ನಾಗರಬಾವಿಯ ವಿನಾಯಕ ವೆಂಕಟೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಿತು. ರಾಘವೇಂದ್ರ ರಾಜ್‌ಕುಮಾರ್‌, ನಿರ್ದೇಶಕ ಪ್ರೇಮ್‌ ಸೇರಿದಂತೆ ಗಣ್ಯರು ಹಾಜರಿದ್ದರು. ಅದಿತಿ ಪ್ರಭುದೇವ ಹಾಗೂ …

Read More »

ಇಂಧನ ದರ ಏರಿಕೆ ಶಾಕ್ ಬೆನ್ನಲ್ಲೇ ಸಗಟು ಹಣದುಬ್ಬರ ದರ ಏರಿಕೆ

ನವದೆಹಲಿ: ಜನವರಿಯಲ್ಲಿ ಸಗಟು ಹಣದುಬ್ಬರ ದರ ಶೇಕಡ2.03 ಕ್ಕೆ ಏರಿಕೆಯಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ. ಇಂಧನ ದರ ಏರಿಕೆ ಪರಿಣಾಮವಾಗಿ ಹಣದುಬ್ಬರ ದರ ಏರಿಕೆಯಾಗಿದೆ. ಸಗಟು ಹಣದುಬ್ಬರ ದರ ಶೇಕಡ 2.03 ರಷ್ಟು ಹೆಚ್ಚಳವಾಗಿದೆ. ಕಚ್ಚಾ ಪೆಟ್ರೋಲ್, ನೈಸರ್ಗಿಕ ಅನಿಲ ದರ ಹೆಚ್ಚಳವಾಗಿದೆ. ಜನವರಿ ತಿಂಗಳಲ್ಲಿ ಶೇಕಡ 9.48 ರಷ್ಟು ಏರಿಕೆಯಾಗಿತ್ತು. ಇಂಧನ ಮತ್ತು ಆಹಾರೇತರ ಉತ್ಪನ್ನಗಳು ಬೆಲೆ ಒತ್ತಡವನ್ನು ಎದುರಿಸಬೇಕಾಗಿದ್ದು, …

Read More »

ಮತ್ತೆ ಏರಿಕೆ ಕಂಡ ಪೆಟ್ರೋಲ್ ಹಾಗೂ ಡೀಸೆಲ್ ದರ

ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ದರ ದೇಶದಲ್ಲಿ ದಿನೇದಿನೇ ಹೆಚ್ಚುತ್ತಿದ್ದು, ಗ್ರಾಹಕರನ್ನು ಚಿಂತೆಗೀಡಾಗುವುದೂ ಮಾಡುತ್ತಿದೆ. ಇಂದು ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ 26 ಪೈಸೆ ಹೆಚ್ಚಳವಾಗಿದೆ . ಡೀಸೆಲ್ ದರ ಲೀಟರ್ ಗೆ 29 ಪೈಸೆ ಹೆಚ್ಚಳ ಮಾಡಲಾಗಿದೆ . ಪೆಟ್ರೋಲ್ ದರ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 88.99 ರೂಪಾಯಿಗಳಾಗಿವೆ . ಡೀಸೆಲ್ ಗೆ ಲೀಟರ್ ದರ 79.35 ರೂಪಾಯಿಗಳಾಗಿವೆ . ಕೇಂದ್ರ ಸರ್ಕಾರ …

Read More »

ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ:ಉಮೇಶ ಕತ್ತಿ ಇದೀಗ ಯೂಟರ್ನ್

ಬೆಂಗಳೂರು : ಮನೆಯಲ್ಲಿ ಟಿ ವಿ, ಬೈಕ್, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಉಮೇಶ ಕತ್ತಿ ಇದೀಗ ಯೂಟರ್ನ್ ಹೊಡೆದಿದ್ದಾರೆ. ಸಚಿವರ ಹೇಳಿಕೆ ಸಾರ್ವಜನಿಕರು, ಸ್ವಪಕ್ಷ ಹಾಗೂ ವಿರೋಧ ಪಕ್ಷದ ನಾಯಕರಿಂದ ವಿರೋಧ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ …

Read More »

ಜಾತಿ ನಿಂದನೆ ಆರೋಪದ ಮೇಲೆ ಯುವರಾಜ್ ಸಿಂಗ್ ವಿರುದ್ಧ ಎಫ್‌ಐಆರ್

ಚಂಡೀಗಢ : 2020 ರಲ್ಲಿ ಇನ್ ಸ್ಟಾ ಗ್ರಾಮ್ ಲೈವ್ ವೇಳೆ ಯುವರಾಜ್ ಸಿಂಗ್ ದಲಿತರ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂಬ ಆರೋಪದ ಮೇಲೆ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ . ವಕೀಲರೊಬ್ಬರು ನೀಡಿರುವ ದೂರಿನ ಪ್ರಕಾರ, ಕ್ರಿಕೆಟಿಗರಾದ ಯಜುವೇಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ಬಗ್ಗೆ ಮಾತನಾಡುವ ವೇಳೆ ಯುವರಾಜ್ ಸಿಂಗ್ ಜಾತಿ ನಿಂದನೆ ಪದ ಬಳಸಿದ್ದಾರೆ ಎಂದು ಹೇಳಿದ್ದು, ಈ …

Read More »

ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ …

Read More »

‘ಅನ್ನಭಾಗ್ಯ’ಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌

ಬೆಂಗಳೂರು: ‘ಅನ್ನಭಾಗ್ಯ’ಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌ ಅನ್ನು ಜಾರಿಗೆ ತರಲು ಮುಂದಾಗಿದ್ದು, ಈ ನಡುವೆ ರಾಜ್ಯ ಸರ್ಕಾರ ಹಾಗೂ ನಾಗರೀಕ ಆಹಾರ ಪೂರೈಕೆ ಸಚಿವ ಉಮೇಶ್ ಕತ್ತಿ ವಿರುದ್ದ ಖುದ್ದು ಬಿಜೆಪಿ ನಾಯಕರುಗಳೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ನಡುವೆ ಈ ಬಗ್ಗೆ ಶಾಸಕ ಸೋಮಶೇಖರ ರೆಡ್ಡಿ ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಫ್ರಿಡ್ಜ್‌ ಹಾಗೂ ವಾಹನಗಳು ಇದ್ದೇ ಇರುತ್ತವೆ, ಸರ್ಕಾರ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಟಿವಿ ಸಹಕಾರಿಯಾಗಲಿದೆ ಅವೇ ಇರಬಾರದು …

Read More »

ಮಾರುಕಟ್ಟೆಯಲ್ಲಿ ಓಡಾಡ್ತಿವೆ 50, 200ರೂ. ಮುಖಬೆಲೆಯ ‌ʼನಕಲಿ ನೋಟುʼಗಳು, ಈ ರೀತಿ ಚೆಕ್‌ ಮಾಡಿ ತಗೊಳ್ಳಿ..!

ನವದೆಹಲಿ: 50 ಮತ್ತು 200 ರೂಪಾಯಿ ಮುಖ ಬೆಲೆಯ ನಕಲಿ ನೋಟುಗಳು ಚಲಾವಣೆ ಆಗ್ತಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಈ ಬಗ್ಗೆ ಮಾಹಿತಿ ನೀಡಿದೆ. ಇನ್ನು ನಕಲಿ ನೋಟುಗಳನ್ನ ಹೇಗೆ ಗುರುತಿಸಬೇಕು ಎನ್ನುವುದ್ರ ಬಗ್ಗೆಯೂ ಸ್ಪಷ್ಟವಾಗಿ ತಿಳಿಸಿದೆ. ಆರ್ ಬಿಐ ಆರ್ಥಿಕ ಜಾಗೃತಿ ಸಪ್ತಾಹ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕೇಂದ್ರ ಬ್ಯಾಂಕಿನ ಪ್ರಾದೇಶಿಕ ನಿರ್ದೇಶಕ ಲಕ್ಷ್ಮೀಕಾಂತ್ ರಾವ್ ಮಹತ್ವದ ಮಾಹಿತಿ ನೀಡಿದ್ದಾರೆ. ನಕಲಿ ನೋಟು ಪತ್ತೆ ಮಾಡುವುದು …

Read More »

ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೆ ನಗದು ಪಾವತಿ ವ್ಯವಸ್ಥೆಗೆ ಆಗ್ರಹ

ಬೆಂಗಳೂರು,ಫೆಬ್ರವರಿ 15:ಕೊರೊನಾ ಲಾಕ್‌ಡೌನ್‌ನಿಂದಾಗಿ ನಮ್ಮ ಮೆಟ್ರೋ ಸಂಚಾರವನ್ನು ಹಲವು ತಿಂಗಳುಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಸೇವೆ ಪುನಾರಂಭಗೊಂಡಿದ್ದು, ಪ್ರತಿಯೊಬ್ಬರಿಗೂ ಕಾರ್ಡ್‌ ಪಡೆದು ಪ್ರಯಾಣಿಸುವುದು ಕಷ್ಟವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಟೋಕನ್ ಹಾಗೂ ನಗದು ಪಾವತಿ ವ್ಯವಸ್ಥೆ ಜಾರಿಗೊಳಿಸಬೇಕು ಎನ್ನುವ ಆಗ್ರಹ ಕೇಳಿಬಂದಿದೆ. ಮೆಟ್ರೋ ರೈಲು ಸೇವೆ ಪಡೆಯಬೇಕಾದರೆ 50 ರೂ. ನೀಡಿ ಮೆಟ್ರೋ ಕಾರ್ಡ್ ಖರೀದಿಸಿದ ಬಳಿಕವಷ್ಟೇ ಸೇವೆ ಲಭ್ಯವಾಗಲಿದೆ.ಕಾರ್ಡ್ ಖರೀದಿ ವೇಳೆಯೂ ನಗದು ಸ್ವೀಕರಿಸುತ್ತಿಲ್ಲ, ಬದಲಾಗಿ ಕ್ರೆಡಿಟ್ ಮತ್ತು ಡೆಬಿಟ್ …

Read More »

ವಾಟ್ಸಾಪ್, ಫೇಸ್‌ಬುಕ್‌ಗೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್ ಜಾರಿ

ನವದೆಹಲಿ: ತನ್ನ ಹೊಸ ಖಾಸಗಿತನ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ವಾಟ್ಸಾಪ್ ಮತ್ತು ಅದರ ಮಾತೃ ಸಂಸ್ಥೆ ಫೇಸ್ ಬುಕ್ ಗೆ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ನಾಲ್ಕು ವಾರಗಳಲ್ಲಿ ಟೆಕ್ ದೈತ್ಯರಿಂದ ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ. ಭಾರತದಲ್ಲಿ ವಾಟ್ಸಾಪ್ ತನ್ನ ಹೊಸ ಗೌಪ್ಯತಾ ನೀತಿಯನ್ನು ಜಾರಿಗೆ ತರದಂತೆ ನಿರ್ಬಂಧ ಹೇರಬೇಕು ಮತ್ತು ಐರೋಪ್ಯ ಒಕ್ಕೂಟ ಪ್ರದೇಶದಲ್ಲಿ ಬಳಕೆದಾರರಿಗೆ ಅನ್ವಯವಾಗುವ ಗೌಪ್ಯತಾ ನೀತಿಯನ್ನು …

Read More »