Breaking News

ರಾಜ್ಯ

ಕೊನೆಗೂ ಬಳ್ಳಾರಿಯನ್ನು ವಿಭಜಿಸಿ ಹೊಸ ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಸರ್ಕಾರ; ಹೊಸಪೇಟೆ ಕಾರ್ಯಸ್ಥಾನ!

ಬೆಂಗಳೂರು (ಫೆಬ್ರವರಿ 08); ಸಚಿವ ಆನಂದ್​ ಸಿಂಗ್ ಅವರ ಮನವಿಗೆ ಕೊನೆಗೂ ಮನ್ನಣೆ ನೀಡಿರುವ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ಒಡೆದು ಹೊಸ ವಿಜಯನಗರ ಜಿಲ್ಲೆಯನ್ನು ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಘೋಷಿಸಿದೆ. ಆ ಕುರಿತು ಅಧಿಕೃತ ಆದೇಶವನ್ನೂ ಸಹ ರಾಜ್ಯ ಸರ್ಕಾರ ಹೊರಡಿಸಿದೆ. ಹೊಸಪೇಟೆಯನ್ನು ಕಾರ್ಯಸ್ಥಾನವನ್ನಾಗಿಸಿ ವಿಜಯನಗರ ಎಂಬ ಹೊಸ ಜಿಲ್ಲೆಯನ್ನು ಘೋಷಿಸಬೇಕು ಎಂಬ ಕೂಗು ಬಹುದಿನಗಳಿಂದಲೂ ಇದೆ. ಕೊಪ್ಪಳವನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಸಂದರ್ಭದಲ್ಲೇ ಈ ಕೂಗು …

Read More »

ವಾಲ್ಮೀಕಿ ಜಾತ್ರೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಚರ್ಚೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಗೋಕಾಕ : ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದಲೂ ಇದೆ. ಆ ವಿಷಯವಾಗಿ ವಾಲ್ಮೀಕಿ ಜಾತ್ರೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಸಹ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಮಹರ್ಷಿ ವಾಲ್ಮೀಕಿ …

Read More »

ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.

  ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು …

Read More »

ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ:

ಮಂಗಳೂರು: ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ ನೀಡುವುದಾಗಿ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್, ಬಿಲ್ಲವ ಸಮುದಾಯದ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಕೋಟಿ ಚೆನ್ನೈಯ್ಯರ ವಿರುದ್ಧ ಕೀಳಾಗಿ ಮಾತನಾಡಿದ್ದರು. ನಾಲ್ಕು ದಿನಗಳ ಒಳಗಾಗಿ ಜಗದೀಶ್ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿಯುತ್ತೇವೆ. ಹೀಗೆ ಮಸಿ ಬಳಿಯುವ ಬಿಲ್ಲವ ಯುವಕರಿಗೆ 1 ಲಕ್ಷ …

Read More »

ಒಂದು ಟ್ವೀಟ್ ಮತ್ತು ಟೂಲ್​ಕಿಟ್​ನಿಂದ ಹಲವು ಸಂಗತಿಗಳು ಬಯಲಾಗಲಿವೆ: ವಿದೇಶಾಂಗ ಸಚಿವ

ದೆಹಲಿ: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಮಾಡಿದ್ದ ಟ್ವೀಟ್​ಗೆ, ಭಾರತೀಯ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು ಸರಿ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಸ್ವೀಡನ್​ನ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಡಿಲೀಟ್ ಮಾಡಿರುವ ಟ್ವೀಟ್​ನಲ್ಲಿ ಟೂಲ್​ಕಿಟ್ ಡಾಕ್ಯುಮೆಂಟ್ ಹಂಚಿಕೊಂಡಿದ್ದಳು. ಅದಾದ ಬಳಿಕ ದೆಹಲಿ ಪೊಲೀಸರು, ಟೂಲ್​ಕಿಟ್​ಗೆ ಖಲಿಸ್ತಾನಿ ಸಂಬಂಧ ಇರುವುದನ್ನು ಪತ್ತೆಮಾಡಿದ್ದರು. ಈ ಘಟನೆಗಳು ನಡೆದು ಎರಡು ದಿನಗಳ ಬಳಿಕ (ಫೆ.6) …

Read More »

ಮತ್ತೆ ಕುಸಿತ ಕಂಡ ಬಂಗಾರದ ಬೆಲೆ

ನವದೆಹಲಿ : ಚಿನ್ನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸುದ್ದಿ. ಇಲ್ಲಿಯವರೆಗೆ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ ಈಗ ಕ್ರಮೇಣವಾಗಿ ಕುಸಿಯುತ್ತಿದೆ. ಇದರಿಂದಾಗಿ ಬಂಗಾರ ಕೊಳ್ಳಬೇಕೆಂದುಕೊಂಡಿದ್ದ ಆಭರಣ ಪ್ರಿಯರಿಗೆ ಇದೊಂದು ಸಮಾಧಾನಕರ ಸಂಗತಿ. ಈ ಹಿಂದೆ ಗರಿಷ್ಠ 56,000 ರೂಗಳನ್ನು ತಲುಪಿದ್ದು, ಪ್ರಸ್ತುತ 10 ಗ್ರಾಂ ಬೆಲೆ ಈಗ 48,000 ರೂ.ಗೆ ಕುಸಿದಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 48,000 ರೂ. 22 ಕ್ಯಾರೆಟ್ …

Read More »

ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ.

ಶಿಲ್ಲಾಂಗ್: ದೇಶದಲ್ಲಿ ತೈಲೋತ್ಪನ್ನಗಳ ದರಗಳು ಏರಿಕೆಯಾಗಿದ್ದು, ದೇಶಾದ್ಯಂತ ಜನರು ಈ ಬಗ್ಗೆ ಕಿಡಿ ಕಾರುತ್ತಿದ್ದಾರೆ. ಈ ನಡುವೆ ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ. ಹೌದು ಈ ಬಗ್ಗೆ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಮಾಹಿತಿ ನೀಡಿದ್ದು, ರಾಜ್ಯದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸೋಮವಾರ ಮಧ್ಯರಾತ್ರಿಯಿಂದ 2 ರೂ.ಗೆ ಇಳಿಸಲು ಮೇಘಾಲಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ‘ಮೇಘಾಲಯದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತ

ಚಿಕ್ಕೋಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರವಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಲತಾ ರಾಜೇಂದ್ರ ಪಾಟೀಲ (38) ಹಾಗೂ ಆಕೆಯ ಪುತ್ರಿ ಅನಿಷಾ ರಾಜೇಂದ್ರ ಪಾಟೀಲ (16) ಮೃತ ದುರ್ದೈವಿಗಳು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಸೌಂದಲಗಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಐದು ಜನರಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. …

Read More »

ಒಬ್ಬ ಅಪರಾಧಿಗೆ ಗಲ್ಲುಶಿಕ್ಷೆಯನ್ನು ಪ್ರಕಟಿಸಿದ ನಂತರ ಪೆನ್ ನಿಬ್ಬನ್ನು ಮುರಿಯುವುದೇಕೆ ಗೊತ್ತೇ

ನ್ಯಾಯಾಂಗದಲ್ಲಿ ನಮಗೆ ಗೊತ್ತಿರದ ಹಲವಾರು ವಿಷಯಗಳು ಅಡಕವಾಗಿರುತ್ತವೆ. ಅದರಲ್ಲಿ ಒಂದು ಈ ಪದ್ಧತಿಯು ಆಗಿದೆ ಕೋರ್ಟನಲ್ಲಿ ಅಪರಾಧಿಯ ವಿರುದ್ಧ ವಾದ ವಿವಾದ ಇದ್ದಮೇಲೆ ನ್ಯಾಯಾಧೀಶರು ಶಿಕ್ಷೆಯ ತೀರ್ಪನ್ನು ಪಟ್ಟಿ ಮಾಡುತ್ತಾರೆ. ಆದರೆ ಆ ಶಿಕ್ಷೆಯ ಗಲ್ಲುಶಿಕ್ಷೆ ಆಗಿದ್ದರೆ ಅಪರಾಧಿಯನ್ನು ಗಲ್ಲಿಗೇರಿಸಲು ಹೇಳಿದ ನ್ಯಾಯಾಧೀಶರು ವ್ಯಕ್ತಿಯನ್ನು ಗಲ್ಲಿಗೇರಿಸಲು ಹೇಳುವ ನ್ಯಾಯಾಧೀಶರು ವ್ಯಕ್ತಿಯ ಪೇಪರ್ ಗಳ ಮೇಲೆ ತಮ್ಮ ಸಹಿಯನ್ನು ಮಾಡಿ ಪೆನ್ನಿನ ನಿಬ್ಬನ್ನು ಮುರಿಯುತ್ತಾರೆ. ಅದು ಯಾಕೆ ಗೊತ್ತಾ? ಅದನ್ನ ಈ …

Read More »

ಜೀವನಾಂಶ ಕುರಿತಾಗಿ ಹೈಕೋರ್ಟ್ ಮಹತ್ವದ ಆದೇಶ: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹಳು

ಬೆಂಗಳೂರು: ಪತ್ನಿ ವಿದ್ಯಾವಂತಳಾಗಿದ್ದಾಳೆ ಎನ್ನುವ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲ. ಹಾಗಾಗಿ ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಅರ್ಹರಾಗಿರುತ್ತಾರೆ. ಅವರು ವಿದ್ಯಾರ್ಹತೆ ಹೊಂದಿದ ಮಾತ್ರಕ್ಕೆ ಜೀವನ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕೌಟುಂಬಿಕ ಪ್ರಕರಣವೊಂದರಲ್ಲಿ ಮೈಸೂರು ಕೌಟುಂಬಿಕ ನ್ಯಾಯಾಲಯ, ಪತಿ-ಪತ್ನಿಯ ವಿವಾಹವನ್ನು ಅನೂರ್ಜಿತಗೊಳಿಸಿದ್ದು, ಪತ್ನಿಗೆ ಪ್ರತಿ ತಿಂಗಳು ಮೂರು ಸಾವಿರ ರೂಪಾಯಿ ಜೀವನಾಂಶ ನೀಡುವಂತೆ ಸೂಚಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿ …

Read More »