Breaking News

ರಾಜ್ಯ

ದೆಹಲಿ ಗಡಿಯಲ್ಲಿ ಇಂಟರ್‌ನೆಟ್‌ ಸೇವೆ ಬಂದ್‌

ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ. ಸಿಂಘು, ಟಿಕ್ರಿ, ಗಾಜಿಪುರ್ ಗಡಿಯಲ್ಲಿ ಜ.31ರ ರಾತ್ರಿ 11 ಗಂಟೆಯವರೆಗೆ ತಾತ್ಕಾಲಿಕವಾಗಿ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ …

Read More »

ಬೆಳಗಾವಿ ಕೃಷ್ಣಾ ಪಾಟೀಲ್ ಎಂಬುವವರ ಹೋರಿಯನ್ನು 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ

ಧಾರವಾಡ: ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಬಸಪ್ಪ ಅವರಿಗೆ ಸೇರಿದ ಹೋರಿಯೊಂದು 4.55 ಲಕ್ಷ ರೂ.ಗೆ ಬಿಕಾರಿಯಾಗಿ ಎಲ್ಲರ ಹುಬ್ಬೆರುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಬೆಳಗುಂದಿಯ ಕೃಷ್ಣಾ ಪಾಟೀಲ್ ಎಂಬುವವರು ಈ ಹೋರಿಯನ್ನು ಹುಡುಕಿಕೊಂಡು ಬಂದು, 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ. ಹೋರಿಯ ಮಾಲೀಕ ಬಸಪ್ಪ ಅವರ ತಂದೆ ಭೀಮಪ್ಪ ಕಳೆದ ನಾಲ್ಕು ವರ್ಷಗಳ ಹಿಂದೆ ರಾಣೆಬೆನ್ನೂರ ತಾಲೂಕು ದೇವರಗುಡ್ಡದಲ್ಲಿ 30 ಸಾವಿರ ರೂಪಾಯಿಗೆ ಜೋಡಿ ಹೋರಿ …

Read More »

ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ

ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.

Read More »

ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗೋಕಾಕ ಆಯ್ಕೆ

ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ. ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಂಚ್ಯಾಳ, ನಗರ ಸೇವಕರಾದ ಅಬ್ಬಾಸ ದೇಸಾಯಿ, ಸಂತೋಷ …

Read More »

ಕರ್ತವ್ಯದ ಸಮಯದಲ್ಲಿ ಕ್ರಿಮಿನಲ್ ಜತೆಗೆ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ

ಮಂಗಳೂರು : ಕರ್ತವ್ಯದ ವೇಳೆಯಲ್ಲಿ ಬಾರಿನಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬನೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪುಲ್ ವೈರಲ್ ಆಗಿದೆ. ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ …

Read More »

ಗಾಂಧಿಯನ್ನು ಕೊಂದವರ ಪ್ರತಿಮೆ ಮಾಡಿ ಪೂಜಿಸುವ ಕೆಲಸ,ಇದಕ್ಕಿಂತ ದೇಶದ್ರೋಹ ಮತ್ತೊಂದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಯಾವುದಕ್ಕಾಗಿ ಗಾಂಧೀಜಿ ಹೋರಾಟ ಮಾಡಿದ್ರು ಅದು ಈಗ ದೇಶದಲ್ಲಿ ನೆಲೆಸುತ್ತಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ರೈತ ಸಂಘಟನೆಗಳು ಆಚರಿಸುತ್ತಿರುವ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧೀಜಿ ದೇಶದಲ್ಲಿ ಶಾಂತಿ ನೆಲೆಸಬೇಕು, ಎಲ್ಲರೂ ನೆಮ್ಮದಿಯಿಂದ ಬಾಳಬೇಕು, ಸೌಹಾರ್ದತೆ ನೆಲೆಸಬೇಕು ಎಂದುಕೊಂಡವರು. ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಡಿದ್ರೋ ಅದಕ್ಕಿಂತಲೂ ಹೆಚ್ಚು ಶಾಂತಿ ಸೌಹಾರ್ದತೆಗಾಗಿ ಹೋರಾಡಿದವರು. ಗಾಂಧೀಜಿ ಜೊತೆಗೆ ಬಹಳಷ್ಟು ಜನ ಹೋರಾಟ ಮಾಡಿದ್ದಾರೆ, ಅವರನ್ನೂ ನಾವು ಸ್ಮರಿಸಬೇಕು …

Read More »

ಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಸ್. ಮಿಥುನ್ (33), ವಿ ರಘು (47), ಶಿವರಾಜು ಕೆ (30) ಬಂಧಿತ ಆರೋಪಿಗಳು. ಬಂಧಿತರಿಂದ 5. 5 ಲಕ್ಷ ರೂ. ಸೇರಿ 5 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಆರೋಪಿಗಳು, ಲೈಸೆನ್ಸ್ ಇಲ್ಲದೆ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಜೂಜಾಟ ನಡೆಸಿದ್ದರು. ಪೋಲೀಸರು ಖಚಿತ ಮಾಹಿತಿ …

Read More »

ಮಹಾ ಸಿಎಂ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳ ಭುಗಿಲೆದ್ದ ಆಕ್ರೋಶ: 1 ಲಕ್ಷ ಕನ್ನಡಿಗರೊಂದಿಗೆ ಮಹಾರಾಷ್ಟ್ರ ಗಡಿಗೆ ನುಗ್ಗಲು ಸಜ್ಜು

ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದು, ರೈಲ್ವೆ ಚಳುವಳಿ ಆರಂಭಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಬೆಳಗಾವಿ ನಮ್ಮದು, ರಾಜ್ಯದ ಒಂದಿಂಚು ಜಾಗವನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧ ಮಾಡಬೇಕು. …

Read More »

“ಕರ್ನಾಟಕಕ್ಕೆ ಮಹಾದಾಯಿ ನದಿಯ 1 ಹನಿ ನೀರನ್ನೂ ಕೊಡಲ್ಲ”

ಪಣಜಿ,ಜ.30- ನನ್ನ ಪಕ್ಷದವರೇ ಇರಲಿ ಅಥವಾ ಬೇರೆ ಯಾರೇ ಇರಲಿ ರಾಜ್ಯದ ಹಿತ ಕಡೆಗಣಿಸಿ ಮಹಾದಾಯಿ ನದಿಯಿಂದ ಒಂದೂ ಹನಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತೆ ಕ್ಯಾತೆ ತೆಗೆದಿದ್ದಾರೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಮಂಡಿಸಿದ್ದ ನಿಲುವಳಿ ಸೂಚನೆ ಮೇಲೆ ಉತ್ತರಿಸಿರುವ ಪ್ರಮೋದ್ ಸಾವಂತ್, ಮಹದಾಯಿಯಿಂದ ನೀರು ಹರಿಸುವಂತೆ ನನ್ನ ಪಕ್ಷವೇ ನನ್ನ ಮೇಲೆ ಒತ್ತಡ ಹಾಕಿದರೂ ನಾನು ಭಾಗುವುದಿಲ್ಲ ಎಂದು …

Read More »

5 ಸಾವಿರ ಡೋಸ್‌ ಲಸಿಕೆ ವೇಸ್ಟ್‌!

ನವದೆಹಲಿ: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭವಾ ದಾಗಿನಿಂದ ಈವರೆಗೆ ಅಂದರೆ ಜ.16ರಿಂದ 29ರವರೆಗೆ 5 ರಾಜ್ಯಗಳಲ್ಲಿ ಸುಮಾರು 5 ಸಾವಿರ ಡೋಸ್ ಗಳಷ್ಟು ಲಸಿಕೆ ವ್ಯರ್ಥವಾಗಿ ಹೋಗಿದೆ. ಈ ಪೈಕಿ ತ್ರಿಪುರಾ ಮೊದಲ ಸ್ಥಾನದಲ್ಲಿದ್ದು ಇಲ್ಲಿ ಶೇ.11ರಷ್ಟು ಲಸಿಕೆ ವೇಸ್ಟ್‌ ಆಗಿದೆ ಎಂದು ಹಿಂದುಸ್ತಾನ್‌ ಟೈಮ್ಸ್‌ನ ವರದಿ ತಿಳಿಸಿದೆ. ಲಸಿಕೆಯ ಒಂದು ಸೀಸೆ ತೆರೆದರೆ, ಅದನ್ನು 4 ಗಂಟೆಗಳ ಒಳಗಾಗಿ ಬಳಸಬೇಕು. ತದ ನಂತರ ಬಳಸುವಂತಿಲ್ಲ. ಆದರೆ, ಲಸಿಕೆ …

Read More »