Breaking News

ರಾಜ್ಯ

ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕೆಲವಸ್ತುಗಳು …

Read More »

ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆ

  ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅರಭಾವಿಯ ಆನಂದ ಧರ್ಮಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಸಿಬಿ …

Read More »

ಬಿಜೆಪಿ-ಜೆಡಿಎಸ್‍ನ ಮೈತ್ರಿಗೆ ಜಯ : ಉಪಸಭಾಪತಿಯಾಗಿ ಪ್ರಾಣೇಶ್ ಆಯ್ಕೆ

ಬೆಂಗಳೂರು,ಜ.29-ಬಿಜೆಪಿ-ಜೆಡಿಎಸ್‍ನ ಮೈತ್ರಿಗೆ ವಿಧಾನಪರಿಷತ್‍ನಲ್ಲಿ ಮದಲ ಹಂತದ ಯಶಸ್ಸು ಸಿಕ್ಕಿದ್ದು, ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಉಪಸಭಾಪತಿಯಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಸುಪಸಭಾಪತಿ ಸ್ಥಾನಕ್ಕೆ ನಿನ್ನೆ ಎಂ.ಕೆ.ಪ್ರಾಣೇಶ್ ಮತ್ತು ಕಾಂಗ್ರೆಸ್‍ನ ಕೆ.ಸಿ.ಕೊಂಡಯ್ಯ ನಾಮಪತ್ರ ಸಲ್ಲಿಸಿದ್ದರು. ಇಂದು ಬೆಳಗ್ಗೆ ನಡೆದ ಚುನಾವಣೆಯ ಪ್ರಕ್ರಿಯೆಯಲ್ಲಿ ಎಂ.ಕೆ.ಪ್ರಾಣೇಶ್ 41 ಮತಗಳನ್ನು ಪಡೆದು ಚುನಾಯಿತರಾದರು. ಕಾಂಗ್ರೆಸ್‍ನ 24 ಸದಸ್ಯರು ವಿರುದ್ಧವಾಗಿ ಮತ ಹಾಕಿದರು. ಪ್ರಾಣೇಶ್ ಪರವಾಗಿ ಜೆಡಿಎಸ್‍ನ ಸದಸ್ಯರು ಮತ ಚಲಾಯಿಸಿದ್ದು ವಿಶೇಷವಾಗಿತ್ತು.ಮೂರು ಪಕ್ಷಗಳು ಉಪಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ …

Read More »

ಮುಂಬೈ ನಮ್ದು, ನಮಗೇ ಸೇರಬೇಕು: ಡಿಸಿಎಂ ಸವದಿ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಭಾರೀ ಸಂಚಲನ

ನಾವು ಮುಂಬೈ ಕರ್ನಾಟಕದವರಾಗಿದ್ದು, ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದರು. ಅವರು ನೀಡಿದ ಈ ಹೇಳಿಕೆ ಮಹಾರಾಷ್ಟ್ರದಲ್ಲಿ ಸಂಚಲನ ಮೂಡಿಸಿದೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಅದು ಮಹಾರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ ಎಂದು ತಿಳಿಸಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ಅವರು ಮರಾಠಿ …

Read More »

ಪೊಲೀಸರಿಗೆ ವಾರದ ರಜೆ ಕಡ್ಡಾಯ:ಪ್ರವೀಣ್‌ ಸೂದ್‌

ಬೆಂಗಳೂರು –  ಪೊಲೀಸರಿಗೆ ವಾರದ ರಜೆ ನೀಡುತ್ತಿಲ್ಲವೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಕಡ್ಡಾಯವಾಗಿ ಸಿಬ್ಬಂದಿಗೆ ವಾರದ ರಜೆ ನೀಡುವಂತೆ ಗುರುವಾರ ತುರ್ತು ಸುತ್ತೋಲೆ ಹೊರಡಿಸಿದ್ದಾರೆ. ”ರಾಜ್ಯ ಪೊಲೀಸ್‌ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡಲು ಸೂಚಿಸಿದ್ದು ತಪ್ಪಿದರೆ, ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಸುತ್ತೋಲೆಯಲ್ಲಿ ಎಚ್ಚರಿಸಿದ್ದಾರೆ. ರಾಜ್ಯದ ಪೊಲೀಸ್‌ ಕಮಿಷನರ್‌ಗಳು, ಐಜಿಪಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಈ …

Read More »

ಸಚಿವ ಮಾಧುಸ್ವಾಮಿಗೆ ಹಿಂದಿನ ಸಾಲು!

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ವಿರೋಧ ಪಕ್ಷಗಳು ನಿರಂತರ ನಡೆಸುತ್ತಿದ್ದ ವಾಗ್ದಾಳಿಗೆ ಗುರಾಣಿಯಂತೆ ನಿಲ್ಲುತ್ತಿದ್ದ ಸಚಿವ ಜೆ.ಸಿ.ಮಾಧುಸ್ವಾಮಿಗೆ ಈಗ ‘ಹಿಂಬಡ್ತಿ’ ಆಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾಗಿದ್ದಾಗ ಅವರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಇತ್ತು. ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆ ಬಳಿಕ ಇದೀಗ ಎರಡನೇ ಸಾಲಿನಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಾಧುಸ್ವಾಮಿ ಅವರು ಈ …

Read More »

ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ವಿಕಲಚೇತನರನ್ನು ಸಮಾಜ ಗೌರವದಿಂದ ನಡೆಸಿಕೊಳ್ಳಬೇಕು. ಅವರ ಬಗ್ಗೆ ಕೀಳುರಿಮೆ ಮಾಡದೇ ಆದರದಿಂದ ನೋಡಿಕೊಳ್ಳಬೇಕು. ವಿಕಲಚೇತನರ ಪ್ರಗತಿಗಾಗಿ …

Read More »

ಎರಡನೇ ಮಗುವಿನ ಆಗಮನದ ದಿನಾಂಕ ತಿಳಿಸಿದ ಸೈಫ್-ಕರೀನಾ ದಂಪತಿ

ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೊದಲ ಮಗ ತೈಮೂರ್‌ಗೆ ಈಗ ನಾಲ್ಕು ವರ್ಷವಾಗಿದ್ದು, ಈಗ ಎರಡನೇ ಮಗುವಿಗೆ ಗರ್ಭಿಣಿ ಆಗಿದ್ದಾರೆ ನಟಿ ಕರೀನಾ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಮಗುವಿನ ಡಿಲೆವರಿ ಡೇಟ್‌ ಅನ್ನು ಹೇಳಿದ್ದಾರೆ ಸೈಫ್ ಅಲಿ ಖಾನ್. ಫೆಬ್ರವರಿ ಮೊದಲ ವಾರದಲ್ಲಿ ಕರೀನಾ ಮಗುವಿಗೆ ಜನ್ಮ ನೀಡಲಿದ್ದಾರಂತೆ. ಈ ವಿಷಯವನ್ನು ಸೈಫ್ ಅಲಿ ಖಾನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. …

Read More »

ಮಂಗಳವಾರ ರಜಾದಿನ’ ಚಿತ್ರದ ನೀನೆ ಗುರು, ನೀನೆ ಗುರಿ, ನೀನೆ ಗುರುತು ಹಾಡು ಬಿಡುಗಡೆ

ಬೆಂಗಳೂರು: ಕೋವಿಡ್ ಅಬ್ಬರದಿಂದ ತತ್ತರಿಸಿದ್ದ ಚಂದನವನ ಮತ್ತೆ ನಿಧಾನವಾಗಿ ತಲೆ ಎತ್ತುತ್ತಿದ್ದು, ಹಲವು ಸಿನಿಮಾಗಳು ಬಿಡುಗಡೆಗೆ ತಯಾರಿ ನಡೆಸಿವೆ. ಈ ನಡುವೆ ಬಿಗ್ ಬಾಸ್ ಖ್ಯಾತಿಯ ಚಂದನ್ ಆಚಾರ್ ಅಭಿನಯದ ‘ಮಂಗಳವಾರ ರಜಾದಿನ’ ಸಿನಿಮಾದ ನೀನೆ ಗುರು, ನೀನೆ ಗುರಿ, ನೀನೆ ಗುರುತು ಎಂಬ ಹಾಡನ್ನು ನಟ ಅಭಿಷೇಕ್ ಅಂಬರೀಷ್ ಬಿಡುಗಡೆಗೊಳಿಸಿದ್ದು, ಇದೀಗ ಯುಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಗೌಸ್ ಫೀರ್ ಅವರ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಹಾಡು …

Read More »

ರಾಜಕೀಯ ವೈರಿ ಡಿಕೆಶಿ ಕೊಠಡಿಗೆ ಯೋಗೇಶ್ವರ್ ಪ್ರವೇಶ: ಇಲ್ಲೂ ಇದೆಯಾ ಸಾಹುಕಾರ್ ಪಾತ್ರ?

ಬೆಂಗಳೂರು: ಇತ್ತೀಚೆಗಷ್ಟೇ ಸಚಿವ ಸ್ಥಾನ ಪಡೆದಿರುವ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಇದೀಗ ಕೊಠಡಿ ರಾಜಕೀಯ ಆರಂಭಿಸಿದ್ದಾರೆ. ತಮ್ಮ ರಾಜಕೀಯ ಬದ್ಧವೈರಿ ಡಿ ಕೆ ಶಿವಕುಮಾರ್ ಅವರು ಸಚಿವರಾಗಿದ್ದ ಪಡೆದಿದ್ದ ಕೊಠಡಿಯನ್ನೇ ಪಡೆದಿದ್ದಾರೆ. ಹೌದು. ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಡಿ ಕೆ ಶಿವಕುಮಾರ್ ಪಡೆದಿದ್ದ ಕೊಠಡಿಗೆ ಇಂದು ಸಿ.ಪಿ ಯೋಗೇಶ್ವರ್ ಪ್ರವೇಶಿಸಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 336, 337 ಪಡೆದಿರುವ ಸಿ.ಪಿ.ಯೋಗೇಶ್ವರ್, ಇಂದು …

Read More »