Breaking News

ರಾಜ್ಯ

ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ

ಬೆಂಗಳೂರು, ಜ.20- ಮರಾಠಿ ಭಾಷಿಗರ ಬಾಹುಳ್ಯ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ ಇಂದು ಮಹತ್ವದ ಸಭೆ ನಡೆಸಿತು. ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿಚಂದ್ರು, ಮಂಜುನಾಥ್ ದೇವು, ಗಿರೀಶ್ ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ …

Read More »

ಜನರ ಆಕ್ರೋಶಕ್ಕೆ ಮಣಿದ ‘ತಾಂಡವ್’ ತಂಡ: ವಿವಾದಿತ ದೃಶ್ಯಕ್ಕೆ ಕತ್ತರಿ ಪ್ರಯೋಗ

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳೊಂದಿಗೆ ನಡೆದ 2ನೇ ಸುತ್ತಿನ ಮಾತುಕತೆಯ ನಂತರ ‘ತಾಂಡವ್’ ವೆಬ್ ಸೀರೀಸ್ ತಂಡ ಕೊನೆಗೂ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು ತೆಗೆದುಹಾಕಿದೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಎದುರಿಸಿ, ಬಾಲಿವುಡ್ ನಟ ಸೈಫ್ ಆಲಿಖಾನ್ ಅಭಿನಯದ ತಾಂಡವ್ ವೆಬ್ ಸೀರೀಸ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತಾಗಿ ತಾಂಡವ್ ತಂಡ ಕೂಡ ಬಹಿರಂಗವಾಗಿ ಕ್ಷಮೆಯಾಚಿಸಿತ್ತು. ಇದೀಗ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು …

Read More »

ಅಂತರ್‌ರಾಜ್ಯ ಕಾರ್‌ ಲೋನ್‌ ಜಾಲ ಬೇಧಿಸಿದ ಪೊಲೀಸ್‌

ಮುಂಬೈ: ಅಂತರ್‌ ರಾಜ್ಯ ಕಾರ್‌ ಲೋನ್‌ ವಂಚನೆ ಜಾಲವನ್ನು ಮುಂಬೈ ಕ್ರೈ ಬ್ರ್ಯಾಂಚ್‌ ಬೇಧಿಸಿದ್ದು, 19 ಲಕ್ಷುರಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬ್ಯಾಂಕ್‌ ಒಂದರ ಮಾಜಿ ಲೋನ್‌ ಎಕ್ಸಿಕ್ಯೂಟಿವ್‌ ಕೂಡ ಸೇರಿದ್ದಾನೆ. ಆರೋಪಿಗಳು ಈ ಕಾರುಗಳನ್ನು ಮುಂಬೈ ಅಲ್ಲದೆ ಬೆಂಗಳೂರು, ಅಹ್ಮದಾಬಾದ್‌ನಲ್ಲಿ ಅಡ ಇಟ್ಟಿರುವ ಸಂಗತಿ ಕೂಡ ಬೆಳಕಿಗೆ ಬಂದಿದೆ. ಮರ್ಸಿಡಿಸ್‌ ಬೆನ್ ‌l, ಆಡಿ, ಟೊಯೊಟಾ ಇನ್ನೋವಾ, ಫಾರ್ಚೂನರ್‌, ಫೋರ್ಡ್‌, ಮಿನಿಕೂಪರ್‌ನಂಥ …

Read More »

SSLC ಪರೀಕ್ಷೆಗೆ ಹಾಜರಾತಿ ವಿನಾಯಿತಿ: ಪರೀಕ್ಷಾ ಮಂಡಳಿ

ಬೆಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಕುರಿತ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಿದೆ. ಈ ವರ್ಷ ಪರೀಕ್ಷೆಗೆ ಕನಿಷ್ಠ ಹಾಜರಾತಿ ಇರುವುದಿಲ್ಲ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂಬ ಬಗ್ಗೆ ಜ.11ರಂದು ಉದಯವಾಣಿ’ ವಿಸ್ತೃತ ವರದಿ ಪ್ರಕಟಿಸಿತ್ತು. ಈಗ ಮಂಡಳಿ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ಅದನ್ನು ಸ್ಪಷ್ಟವಾಗಿ ತಿಳಿಸಲಾಗಿದೆ. ಜೂನ್‌ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆಯ ಪ್ರಕ್ರಿಯೆ ಹೇಗಿರಬೇಕು …

Read More »

ಬೆಳಗಾವಿಯ ಶ್ರೀನಿವಾಸ ತಾಳೂಕರ ಕನ್ನಡ ನಿಷ್ಠೆಗೆ ಒಲಿದು ಬಂತು ನಾಡೋಜ ಜೋಶಿಯವರಿಂದ ಅಭಿಮಾನದ ಸನ್ಮಾನ

ದೂರದರ್ಶನ ಚಂದನ ಕೇಂದ್ರದ ನಿರ್ದೇಶಕರಾಗಿ ಅತ್ಯಂತ ಜವಾಬ್ದಾರಿಯುತವಾಗಿ, ಪ್ರಾಮಾಣಿಕ ನಿಷ್ಠೆಯಿಂದ ಸೇವೆ ಸಲ್ಲಿಸಿ ಪ್ರತಿಷ್ಠಿತ,ನಾಡೋಜ ಪ್ರಶಸ್ತಿಗೆ ಭಾಜನರಾಗಿ, #ಸಂತ ಶಿಶುನಾಳ ಶರೀಫರ ಗುರುಗಳಾದ #ಗುರುಗೋವಿಂದ #ಭಟ್ಟರ ವಂಶಸ್ಥರಾಗಿ ಸದಾ ಕನ್ನಡ ಮಂತ್ರವನ್ನು ಜಪಿಸುತ್ತಾ ವಿವಿಧ ರೀತಿಯಲ್ಲಿ ಕನ್ನಡಮ್ಮನ ಸೇವೆ ಸಲ್ಲಿಸುತ್ತಿರುವ ದೂರದರ್ಶನ ಕೇಂದ್ರ ಚಂದನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕರಾದ ನಾಡೋಜ ಡಾ. ಮಹೇಶ್ ಜೋಶಿ ಅವರ ಸರಳತೆಯನ್ನು ಯಾವ ಕನ್ನಡಿಗನೂ ಸಹ ಮೆಚ್ಚದೆ ಇರಲಾರ. ಎಲ್ಲೋ ದೂರಿನ ಬೆಂಗಳೂರಿನಲ್ಲಿದ್ದುಕೊಂಡು …

Read More »

ಕಾಕತಿ ವ್ಯಾಪ್ತಿಯಲ್ಲಿ ಬಿಂದಾಸ್ ಕಳ್ಳತನ..!

ಬೆಳಗಾವಿಯಲ್ಲಿ ಕಳ್ಳರ ಕೈಚಳಕ ಮತ್ತಷ್ಟು ಬಲಗೊಳ್ಳುತ್ತಿದೆ. ಮನೆಗಳ್ಳತನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲೂ ಕಾಕತಿ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಕಳ್ಳರು ಮಾತ್ರ ಬಿಂದಾಸ್ ಆಗಿ ಕಳ್ಳತನ ಮಾಡುತ್ತಿದ್ದಾರೆ. ಯಾಕೆಂದರೆ ಬಹುಶಃ ಇಲ್ಲಿಯವರೆಗೆ ಆಗಿರುವ ಕಳ್ಳತನಗಳಲ್ಲಿ ಒಂದೇ ಒಂದು ಕಳ್ಳತನ ಪ್ರಕರಣವನ್ನು ಅಲ್ಲಿನ ತನಿಖಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಹೀಗಾಗಿ ಬಹುಶಃ ಕಳ್ಳರು ಇಲ್ಲಿ ಬಿಂದಾಸಾಗಿ ಹಾಡಹಗಲೇ ಮನೆಗಳಿಗೆ ಕನ್ನ ಹಾಕಿ ದೊಚುತ್ತಿದ್ದಾರೆ. ನಿನ್ನೆ (ಮಂಗಳವಾರ 19) ಮಧ್ಯಾಹ್ನ 12 ಗಂಟೆ ಸುಮಾರಿಗೆ …

Read More »

ಸಿಎಂ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ. ಆದ್ರೆ ಯಾವುದೇ ರೀತಿ ರೈತರ ಬಗ್ಗೆ ಕಾಳಜಿ ಅವರಿಗಿಲ್ಲ. ಬಿಜೆಪಿ ಕಾರ್ಪೊರೇಟರ್ ಪರ ಇರುವುದರಿಂದ ಕಾಯ್ದೆ ಹಿಂಪಡೆಯಲು ಹಿಂದೆಟು ಹಾಕುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಂದು ನಡೆದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಕಾರ್ಪೊರೇಟರ್ ಪರ ಇವೆ. ಆದ ಕಾರಣ ಸರ್ಕಾರ …

Read More »

ಕಾಂಗ್ರೆಸ್ ನ ಮತ್ತಿಬ್ಬರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ !

ಬೆಂಗಳೂರು : ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಆದೇಶ ನೀಡಿದ್ದಾರೆ. ಮೂವರು ನಾಯಕರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಗಾಗಲೇ ನೇಮಕ ಮಾಡಲಾಗಿದೆ. ನಾಯಕರು ಸಹ ರಾಜ್ಯಾದ್ಯಂತ …

Read More »

ಬೆಳಗಾವಿಯ 19 ವರ್ಷದ ಯುವತಿ ಕಾಣೆ

ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ. ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ. ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, …

Read More »

ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

ಬೆಂಗಳೂರು: ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್‌ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶದ ಬಳಿಕ ರಾಜಭನವನಕ್ಕೆ ತೆರಳಲು ಹೋಗುತ್ತಿದ್ದಾಗ ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ “ಹೂ ದಿ ಹೆಲ್‌” ಎಂದು ಹೇಳಿ ಮಹಿಳಾ ಸಿಬ್ಬಂದಿಯ ಮೇಲೆ …

Read More »