Breaking News

ರಾಜ್ಯ

ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …

Read More »

ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …

Read More »

ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!

ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …

Read More »

ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್

ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …

Read More »

ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆ

ಬೀಜಿಂಗ್: ಐಸ್ ಕ್ರೀಂ ನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಐಸ್ ಕ್ರೀಂ ತಿಂದ ಸಾವಿರಾರು ಜನರು ಆತಂಕಕ್ಕೀಡಾಗಿರುವ ಘಟನೆ ಚೀನಾದ ಟಿಯಾಂಜಿನ್ ಪ್ರದೇಶದಲ್ಲಿ ನಡೆದಿದೆ. ಡಕಿಯಾವಾಡು ಫುಡ್ ಕಂಪನಿ ತಯಾರಿಸಿದ್ದ ಐಸ್ ಕ್ರೀಂ ಬಾಕ್ಸ್ ಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸ್ಥಳೀಯಾಡಳಿತ ಅಧಿಕಾರಿಗಳು ಐಸ್ ಕ್ರೀಂ ಕಂಪನಿಗೆ ಬೀಗ ಹಾಕಿದ್ದು, ಕಂಪನಿಯ ಎಲ್ಲಾ ಉದ್ಯೋಗಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಕಂಪನಿಯ 1600 ಉದ್ಯೋಗಿಗಳ ಪೈಕಿ 600 ಸಿಬ್ಬಂದಿಗಳ ಕೊವಿಡ್ ಪರೀಕ್ಷಾ ವರದಿ …

Read More »

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.

– ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ. ಭಾನುವಾರ ಸವದತ್ತಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಈ ದೇಣಿಗೆಯ ಚೆಕ್ ನೀಡಿದರು. ವಿವಿಧ ಮಠಾಧೀಶರು ಸೇರಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಿಧಿ ಸಂಗ್ರಹ …

Read More »

ಕೇವಲ ʼ10 ನಿಮಿಷ‌ʼಗಳಲ್ಲೇ ನಿಮ್ಮ ʼಆಧಾರ್‌ ಅಪ್ಡೇಟ್ʼ ಮಾಡೋದ್ಹೇಗೆ ಗೊತ್ತಾ?

ಡಿಜಿಟಲ್‌ ಡೆಸ್ಕ್‌ : ಆಧಾರ್ ಕಾರ್ಡ್ ಇಂದು ದೇಶದ ಅತ್ಯಂತ ಪ್ರಮುಖ ಮತ್ತು ವಿಶ್ವಾಸಾರ್ಹ ದಾಖಲೆಗಳಲ್ಲಿ ಒಂದು. ಅನೇಕ ಸಾರ್ವಜನಿಕ ಸಬ್ಸಿಡಿ ಮತ್ತು ನಿರುದ್ಯೋಗ ಪ್ರಯೋಜನ ಯೋಜನೆಗಳ ಪ್ರಯೋಜನ ಪಡೆಯಲು ಸಧ್ಯ ಆಧಾರ್‌ ಅನಿವಾರ್ಯ. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವುದರಿಂದ ಹಿಡಿದು, ಸರಕಾರದ ಪಡಿತರದಿಂದ ಆಹಾರ ಧಾನ್ಯ ಖರೀದಿಸುವವರೆಗೆ, ಆಧಾರ್ ನಿಮಗೆ ಬೇಕೆ ಬೇಕು. ಇಂತಹ ಆಧಾರ್‌ ಅಪ್ ಡೇಟ್ ಮಾಡೋದು ತುಂಬಾನೇ ಅಗತ್ಯ. ಹೌದು, ನಿಮ್ಮ ಆಧಾರ್ ಕಾರ್ಡ್ʼನಲ್ಲಿ ಸಾಮಾನ್ಯವಾಗಿರುವ …

Read More »

ಅಮಿತ್ ಶಾ ಅವರ್ ಬಗ್ಗೆ ಲಕ್ಷ್ಮಣ್ ಸವದಿ ಹೇಳಿದ್ದೇನು ನೋಡಿ..?

ನಸೇವಕ ಸಮಾವೇಶ ಬಳಿಕ ಕಾರ್ಯಕರ್ತರೊಂದಿಗೆ ಬಿಜೆಪಿ ಚಾಣಕ್ಯನ ಮಿಟಿಂಗ್..ಡಿಸಿಎಂ ಲಕ್ಷ್ಮಣ ಸವದಿ ಜನಸೇವಕ ಸಮಾವೇಶವಕ್ಕೆ ಭಾಗಿಯಾಗಲು ಬೆಳಗಾವಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಮಾವೇಶಕ್ಕೂ ಮೊದಲು ಇತ್ತಿಚೆಗೆ ಅಗಲಿದ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅದೇ ರೀತಿ ಇತ್ತಿಚೆಗೆ ಅಗಲಿದ ಬಿಜೆಪಿ ಕಾರ್ಯಕರ್ತರಾದ ಹಿರೇಮಠ ಹಾಗೂ ರಾಜು ಚಿಕ್ಕನಗೌಡರ ಮನೆಗೂ ಭೇಟಿ ನೀಡಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ …

Read More »

ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*     ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …

Read More »

ಚೆನ್ನಾಗಿ ಬೇಯಿಸಿದ ಕೋಳಿ ಸುರಕ್ಷಿತ : ಕೋಳಿ ಮಾರಾಟ ನಿಷೇಧವನ್ನು ಪರಿಶೀಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ:ಚೆನ್ನಾಗಿ ಬೇಯಿಸಿದ ಕೋಳಿ ಮನುಷ್ಯರ ಸೇವನೆಗೆ ಸುರಕ್ಷಿತ , ಆದುದರಿಂದ ಹಕ್ಕಿ ಜ್ವರ ಭೀತಿಯಲ್ಲಿ ಕೋಳಿ ಮಾರಾಟ ನಿಷೇಧ ಹೇರಿರುವುದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋಳಿ ಮಾರಾಟ ನಿಷೇಧವನ್ನು ಪುನರ್​ ಪರಿಶೀಲಿಸಿ ಮತ್ತು ಸೋಂಕಿತವಲ್ಲದ ಪ್ರದೇಶಗಳಿಂದ ಕೋಳಿ ಉತ್ಪನ್ನಗಳ ಮಾರಾಟ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ತಿಳಿಸಿದೆ. ಹಕ್ಕಿಜ್ವರ ಹರಡುವಿಕೆ ಸಂಬಂಧಿಸಿದ ಅವೈಜ್ಞಾನಿಕ ವದಂತಿಗಳಿಗೆ ಗ್ರಾಹಕರು ಕಿವಿಗೊಡಬಾರದು …

Read More »