ನಿಪ್ಪಾಣಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ತಮ್ಮ ಭಿವಶಿ ಗ್ರಾಮದ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದರು. ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರೈತರ ಹಾಗೂ ಗ್ರಾಮದ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು. …
Read More »3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. B.S.Y.
ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ 9ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಿಗೆ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ರಾಜ್ಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಯಡಿಯೂರಪ್ಪ ಪ್ರವಾಸ ಹಮ್ಮಿಕೊಂಡಿದ್ದಾರೆ. ಇದೇ ವೇಳೆ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಯಾವುದೇ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಬಹುದೆಂಬ ಹಿನ್ನೆಲೆಯಲ್ಲಿ …
Read More »ವಿದ್ಯುತ್ ಬಿಲ್ ಕಟ್ಟಲಾಗದೆ ರೈತ ಆತ್ಮಹತ್ಯೆಗೆ ಶರಣು
ವಿದ್ಯುತ್ ಬಿಲ್ ಪಾವತಿ ಮಾಡದೇ ಇದ್ದ ಕಾರಣ ವಿದ್ಯಾತ್ ಸರಬರಾಜು ಇಲಾಖೆ, ತನ್ನ ಗೋಧಿ ಗಿರಣಿ ಹಾಗೂ ಮೋಟರ್ ಬೈಕ್ ಅನ್ನು ವಶಕ್ಕೆ ಪಡೆದ ಕಾರಣ ಮಧ್ಯ ಪ್ರದೇಶದ ಛತ್ತರ್ಪುರ ಜಿಲ್ಲೆಯ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುನೇಂದ್ರ ರಜಪೂತ್ ಹೆಸರಿನ 35 ವರ್ಷದ ಈತ ಆತ್ಮಹತ್ಯಾ ನೋಟ್ ಬರೆದಿಟ್ಟಿದ್ದು, ತನ್ನ ದೇಹದ ಭಾಗಗಳನ್ನು ಸರ್ಕಾರಕ್ಕೆ ಕೊಟ್ಟು, ಅವುಗಳನ್ನು ಮಾರಿ ಬಾಕಿ ಪಾವತಿ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ. ರಜಪೂತ್ 87 ಸಾವಿರ ರೂ.ಗಳಷ್ಟು …
Read More »ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್ಗೆ ಜಾಗೆ ನೀಡುವ ಸಂಬಂಧ …
Read More »ಯಮಕನಮರಡಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಕೇಸ್: ಆರೋಪಿ ಬಂಧನ ಪ್ರೀತಿಯ ವಿಚಾರಕ್ಕೆ ಗುಂಡಿನ ದಾಳಿ ಮಾಡಿದ ಆರೋಪಿ!
ಬೆಳಗಾವಿ: ಯಮಕನಮರಡಿಯಲ್ಲಿ ಡಿ. 16 ರಂದು ಕಾಂಗ್ರೆಸ ಕಾರ್ಯಕರ್ತರನ ಗುಂಡು ಹಾರಿಸಿದ ಪ್ರಕರಣ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಗಲ್ಲಿಯ ವಿನಾಯಕ ಹೊರಕೇರಿ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡಿ ಗ್ರಾಮದ ಬಸದಿ ಕಟ್ಟೆ ಮೇಲೆ ಕುಳಿತುಕೊಂಡಿದ್ದ ವೇಳೆ ಭರಮಾ ದೂಪದಾಳಿ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಯಕ ಗುಂಡಿನ ದಾಳಿ ನಡೆಸಿದ್ದ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು …
Read More »ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ
ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.
Read More »ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ. ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …
Read More »ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನಿಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ರಮೇಶ್ ಜಾರಕಿಹೊಳಿ
ನವದೆಹಲಿ; ಹೊಸ ವರ್ಷದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಸ್ಸಾಂ ನ ಗುವಾಹಟಿಯ ನೀಲಾಚಲ ಬೆಟ್ಟದ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನಿಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್, ಶಾಸಕ ಮಹೇಶ್ ಕುಮಟಳ್ಳಿ ಸಾಥ್ ನೀಡಿದ್ದಾರೆ. ಕಾಮಾಕ್ಯ ದೇವಾಲಯದಲ್ಲಿ ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಹಾಗೂ ತಾರ ದೇವಿ ರೂಪದಲ್ಲಿ ಜಗನ್ಮಾತೆಯನ್ನು ಆರಾಧಿಸಲಾಗುತ್ತಿದ್ದು, ಮಹಾಮಾರಿ ಕೊರೊನಾ ಸೋಂಕು …
Read More »ಹೊಸ ವರ್ಷಾಚರಣೆ ಕಿಕ್, ಅಬಕಾರಿ ಇಲಾಖೆಗೆ ಭರ್ಜರಿ ಕಲೆಕ್ಷನ್..!
ಬೆಂಗಳೂರು,ಜ.1-ಕೋವಿಡ್-19, ಬ್ರಿಟನ್ನ ರೂಪಾಂತರಿ ವೈರಸ್, ಹಾಗೂ ಪೊಲೀಸರ ಕಟ್ಟುನಿಟ್ಟಿನ ಕ್ರಮದ ನಡುವೆಯೂ ನಿನ್ನೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಬಕಾರಿ ಇಲಾಖೆಗೆ ಭರ್ಜರಿ ಕಿಕ್ ಹೊಡೆದಿದೆ. ನಿನ್ನೆ ಒಂದೇ ದಿನ ಅಬಕಾರಿ ಇಲಾಖೆಗೆ ಸುಮಾರು 151 ಕೋಟಿಗೂ ಅಧಿಕ ವಹಿವಾಟು ನಡೆದಿದ್ದು, ಇತ್ತೀಚಿನ ದಿನಗಳಲ್ಲಿ ಇದು ದಾಖಲೆ ಪ್ರಮಾಣದ ವಹಿವಾಟು ಎನ್ನಲಾಗಿದೆ. ನಿನ್ನೆ ಬೆಳಗ್ಗೆಯಿಂದ ರಾತ್ರಿಗೆ ಮುಕ್ತಾಯಗೊಂಡ ವಹಿವಾಟಿನಲ್ಲಿ ಸುಮಾರು 2.23 ಲಕ್ಷ ಕಾಟನ್ಬಾಕ್ಸ್ ಭಾರತೀಯ ಮದ್ಯ(120 ಕೋಟಿ 21 ಲಕ್ಷ) …
Read More »ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತ
ಶಿವಮೊಗ್ಗ: ಬೆಂಗಳೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹೊಸನಗರ ತಾಲೂಕಿನ ಅರಸಾಳು ಸಮೀಪ ರೈಲು ಹಳಿ ತಪ್ಪಿದೆ. ತಿರುವಿನಲ್ಲಿ ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ. ಡ್ರಿಲ್ ಮೆಲ್ಟ್ ಕಟ್ ಆಗಿದ್ದೇ ಘಟನೆಗೆ ಕಾರಣವಾಗಿದ್ದು, ರೈಲ್ವೆ ಇಂಜಿನ್ ಗಾಲಿ ಹಳಿಯಿಂದ ಜಾರಿದೆ. ಪ್ರಯಾಣಿಕರಿಗೆ ರೈಲ್ವೆ ಇಲಕಹೆ ಪರ್ಯಾಯ ವ್ಯವಸ್ಥೆ ಮಾಡಿದೆ.
Read More »
Laxmi News 24×7