Breaking News

ರಾಜ್ಯ

ಶಾಂಕಿಗ್ ನ್ಯೂಸ್‌ : ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾ‌ನಪರಿಷತ್ ಉಪಸಭಾಪತಿ !

ಚಿಕ್ಕಮಗಳೂರು : ಜೆಡಿಎಸ್ ದಿಂದ ವಿಧಾ‌ನ ಪರಿಷತ್ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲ್ಲೂಕಿನ ಗುಣಸಾಗರದ ಸಮೀಪ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ವರದಿಯಾಗಿದ್ದು, ನಾಡಿನ ಜನತೆಯನ್ನು ಬೆಚ್ಚಿ ಬಿಳುವಂತೆ ಮಾಡಿದೆ. ಈಚೆಗೆ ವಿಧಾನ ಪರಿಷತ್ ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತ ವೇಳೆ ಕಾಂಗ್ರೆಸ್ ನಾಯಕರು ಎಳೆದುಕೊಂಡು ಹೊರ ನಡೆದಿದ್ದರು. ಅಲ್ಲಿ ನಡೆದ ಗಲಾಟೆಯಿಂದ ನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತಿದ್ದರು ಖಚಿತ …

Read More »

ಡಿ. 31ರೊಳಗೆ ಐಟಿಆರ್ ಫೈಲಿಂಗ್ ಮಾಡದಿದ್ದಲ್ಲಿ 10,000 ರೂ. ದಂಡ

ಈ ವರ್ಷ ಡಿಸೆಂಬರ್ 31ನೇ ತಾರೀಕು ಆದಾಯ ತೆರಿಗೆಯ ಐಟಿಆರ್ ಫೈಲಿಂಗ್ ಗಡುವು ಮುಕ್ತಾಯ ಆಗುತ್ತದೆ. ಒಂದು ವೇಳೆ ಅಷ್ಟರೊಳಗೆ ಫೈಲಿಂಗ್ ಆಗಲಿಲ್ಲ ಅಂದರೆ ಏನಾಗುತ್ತದೆ ಗೊತ್ತಾ? ಕಳೆದ ವರ್ಷಕ್ಕೂ ಈ ಸಲಕ್ಕೂ ವ್ಯತ್ಯಾಸ ಇದೆ. ಕಳೆದ ವರ್ಷದಲ್ಲಿ ಏನಾದರೂ ಗಡುವು ಮುಗಿದ ಕೆಲ ತಿಂಗಳ ನಂತರ ಫೈಲಿಂಗ್ ಮಾಡಿದರೂ ಅದಕ್ಕೆ ದಂಡ ಅಂತ 5000 ರುಪಾಯಿ ಹಾಕಲಾಗುತ್ತಿತ್ತು. ಈ ವರ್ಷ ಆ ಮೊತ್ತ 10,000 ರುಪಾಯಿ ಆಗಿದೆ. ಅಂದ …

Read More »

ಬೆಂಗಳೂರಿನ ಮೂವರಿಗೆ ರೂಪಾಂತರ ಸೋಂಕು ದೃಢ: ಸಚಿವ ಡಾ.ಸುಧಾಕರ್ ಜ. 1 ರಿಂದ ಶಾಲಾ ಆರಂಭಕ್ಕೆ ತೊಂದರೆ ಇಲ್ಲ!!

ಬೆಂಗಳೂರು: ಇಂಗ್ಲೆಂಡ್​ನಲ್ಲಿ ಪತ್ತೆಯಾದ ಮ್ಯೂಟಂಟ್​ ಕೊರೊನಾ ವೈರಸ್​ ಭಾರತಕ್ಕೂ ಕಾಲಿಟ್ಟಿದ್ದು, 6 ಮಂದಿಯಲ್ಲಿ ರೂಪಾಂತರ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಬೆಂಗಳೂರಿನಲ್ಲಿ ಮೂವರಿಗೆ ವೈರಸ್ ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 10 ಲ್ಯಾಬ್ ಇದೆ. ಇಂಗ್ಲೆಂಡ್​ನಿಂದ ಬಂದ 1614 ಜನರ ಪೈಕಿ 26 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೆನೆಟಿಕ್ ಸೀಕ್ವೆನ್ಸಿಂಗ್ ಆದ …

Read More »

ಔಷಧಿ ಬದಲು ಕ್ರಿಮಿನಾಶಕ ಕುಡಿದು ಗ್ರಾ.ಪಂ ಅಭ್ಯರ್ಥಿ ಸಾವು..!

ಆತ ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ವಿಧಿಯ ಬರಹವೇ ಬೇರೆಯಾಗಿತ್ತು. ಇನ್ನೇನು ಗೆದ್ದೇ ಗೆಲ್ಲುತ್ತೇನೆ ಎಂದುಕೊಂಡಿದ್ದ ಆತ ಸಾವಿಗೀಡಾಗಿದ್ದಾರೆ. ಈ ಘಟನೆ ನಡೆದಿರೋದು ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ಈ ಗ್ರಾಮದ ಅರ್ಗತ್ಯಾರು ನಿವಾಸಿ ಜಯಂತ ಪ್ರಭು ಮೃತ ದುರ್ದೈವಿ. ಹೌದು, ಬಾಯಿ ಹುಣ್ಣಾಗಿದೆ ಎಂದು ಅದಕ್ಕೆ ಸಂಬಂಧಪಟ್ಟ ಔಷಧಿ ಬದಲು ಖಾಲಿ ಬಾಟಲಿಯಲ್ಲಿ ತುಂಬಿಟ್ಟಿದ್ದ ಕ್ರಿಮಿನಾಶಕ ಕುಡಿದು ಸಾವನ್ನಪ್ಪಿದ್ದಾರೆ. ಆ ಕ್ರಿಮಿನಾಶಕವನ್ನು ಅಲ್ಪ ಪ್ರಮಾಣದಲ್ಲಿ …

Read More »

ಕಸ್ತೂರಿ ರಂಗನ್ ವರದಿಯು ಸಂಪೂರ್ಣ ಅವೈಜ್ಞಾನಿಕವಾಗಿದೆ.: ವರದಿ ತಿರಸ್ಕರಿಸಿದ ರಾಜ್ಯಸರಕಾರ

ಬೆಂಗಳೂರು : ಡಾ.ಕಸ್ತೂರಿ ರಂಗನ್ ವರದಿಯ ಬಗ್ಗೆ ಇಂದು ಸಚಿವ ಸಂಪುಟ ಉಪಸಮಿತಿಯ ಸಭೆಯನ್ನು ಸಮಿತಿ ಅಧ್ಯಕ್ಷ ಆನಂದ ಸಿಂಗ್ ಅವರ ನೇತೃತ್ವದಲ್ಲಿ ನಡೆಸಿ, ವರದಿ ಕುರಿತು ಸಮಿತಿ ಸದಸ್ಯರೊಂದಿಗೆ ವರದಿಯ ಸಾಧಕ – ಭಾದಕಗಳ ಕುರಿತು ವಿಸ್ತೃತವಾಗಿ  ಚರ್ಚಿಸಲಾಯಿತು.  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಪರಿಸರ ಖಾತೆ ಸಚಿವ  ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದು ಈ  ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕಸ್ತೂರಿ ರಂಗನ್ ವರದಿಯು …

Read More »

ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳ ವಶಕ್ಕೆ

ಬೆಳಗಾವಿ: ಗೋಲಿಹಳ್ಳಿ ವಲಯದ ಕಿತ್ತೂರು ಕಾಯ್ದಿಟ್ಟ ಅರಣ್ಯದಲ್ಲಿ ಅಕ್ರಮವಾಗಿ ನುಗ್ಗಿ ಚಿಗರೆಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ. ಅರಣ್ಯ ಅಪರಾಧಗಳನ್ನು ರೂಢಿಗತ( Habitual Offenders) ಮಾಡಿಕೊಂಡಿರುವ ಇವರು ಅರಣ್ಯಾಧಿಕಾರಿಗಳ ಕಣ್ಣು ತಪ್ಪಿಸಿ ವನ್ಯಭೇಟೆಗೆ ಇಳಿಯುತ್ತಾರೆ ಎಂದು ತಿಳಿದುಬಂದಿದೆ. ಕಿತ್ತೂರು ಬಳಿಯ ಕಾಯ್ದಿಟ್ಟ ಅರಣ್ಯದಲ್ಲಿ ಗುಂಡು ಹಾರಿಸಿದ ಖದೀಮರಿಂದ ಜಿಂಕೆ ತಪ್ಪಿಸಿಕೊಂಡಿದ್ದು, ಬೆಳಗಾವಿ ವಿನಾಯಕ ನಗರದ ಉದ್ದವ ರಾಜೇಂದ್ರ ನಾಯಕ, ಕಾಕತಿ ದೇಸಾಯಿ ಗಲ್ಲಿಯ ಸಾಗರ …

Read More »

ಪ್ರಧಾನಿ ಮೋದಿ ಗಡ್ಡ ಬಿಟ್ಟಿರುವುದಕ್ಕೂ ರಾಮ ಮಂದಿರ ನಿರ್ಮಾಣಕ್ಕೂ ಸಂಬಂಧವಿದೆಯೇ……….?

ಬಾಗಲಕೋಟೆ: ಪ್ರಧಾನಿ ಮೋದಿ ಗಡ್ಡ ಬಿಟ್ಟಿರುವುದಕ್ಕೂ ರಾಮ ಮಂದಿರ ನಿರ್ಮಾಣಕ್ಕೂ ಸಂಬಂಧವಿದೆಯೇ ಎಂಬ ಹೊಸ ಚರ್ಚೆ ಆರಂಭವಾಗಿದ್ದು, ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ನೀಡಿರುವ ಹೇಳಿಕೆ ಈ ಚರ್ಚೆಗೆ ಇನ್ನಷ್ಟು ಪುಷ್ಠಿ ನೀಡುವಂತಿದೆ. ಬಾಗಲಕೋಟೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಣಿಕೆ ಸಂಗ್ರಹಕ್ಕೆ ಚಾಲನೆ ನೀಡಿದ ಸ್ವಾಮೀಜಿ, ನಮ್ಮಲ್ಲಿ ದೇವಸ್ಥಾನದ ಕಾರ್ಯ ನಡೆಯುವಾಗ ದೀಕ್ಷಾ ಬದ್ಧರಾಗುವುದಿದೆ. ಅದೇ ರೀತಿ ಪ್ರಧಾನಿ ಮೋದಿ ಅವರು ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ದೀಕ್ಷೆ …

Read More »

ನಾನು ದನದ ಮಾಂಸ ತಿನ್ನುತ್ತೇನೆ. ಬೇಡ ಎನ್ನಲು ನೀನು ಯಾವನು: ಸಿದ್ದರಾಮಯ್ಯ

ಬೆಂಗಳೂರು, ಡಿ.28- ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್‍ನ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಹೊಸದಲ್ಲ. 1964ರಲ್ಲೆ ಕಾಂಗ್ರೆಸ್ ಜಾರಿಗೆ ತಂದಿತ್ತು. ಈಗ ಅದನ್ನು ಪರಿಷ್ಕರಣೆ ಮಾಡಿ …

Read More »

ಬಿಜೆಪಿಯವರು 7 ವರ್ಷದಲ್ಲೇ ಮಾರಿದ್ರು: ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ಕಾಂಗ್ರೆಸ್ ಏನು ಮಾಡದಿದ್ರೆ ಸಂಸ್ಥೆಗಳನ್ನು ಹೇಗೆ ಮಾರಾಟ ಮಾಡುತಿದ್ರು?

ಗೋಕಾಕ: ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಅಭಿವೃದ್ದಿಗೊಳಿಸಿದ ದೇಶವನ್ನು ಬಿಜೆಪಿಯವರು ಕೇವಲ 7 ವರ್ಷದಲ್ಲಿ ಮಾರಾಟ ಮಾಡಿದ್ದಾರೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ ಎಲ್ ಎಲ್ಲವನ್ನು ಕಾಂಗ್ರೆಸ್ ನವರು 70ವರ್ಷಗಳ …

Read More »

ಬಿಬಿಎಂಪಿ ಚುನಾವಣಾ ಅಖಾಡಕ್ಕಿಳಿಯಲು ಓವೈಸಿ ತಯಾರಿ..!

ಬೆಂಗಳೂರು,ಡಿ.28-ಬಿಬಿಎಂಪಿ ಚುನಾವಣೆಗೆ ಇನ್ನು ಮುಹೂರ್ತ ನಿಗಧಿಯಾಗದಿದ್ದರೂ ಅಸಾದುದ್ದಿನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಈಗಾಗಲೇ ಪಕ್ಷದ ಅಭ್ಯರ್ಥಿಗಳ ಹುಡುಕಾಟ ಆರಂಭಿಸಿದೆ. ಗ್ರೇಟರ್ ಹೈದ್ರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅದ್ಭುತ ಸಾಧನೆ ಮಾಡಿ ಬೀಗುತ್ತಿರುವ ಓವೈಸಿ ತನ್ನ ಮುಂದಿನ ಗುರಿಯನ್ನು ಕರ್ನಾಟಕದ ಮೇಲೆ ಇಟ್ಟಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿರುವ ಓವೈಸಿ ಇದರ ಜತೆಗೆ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂ ಕೋರ್ಟ್ …

Read More »