Breaking News

ರಾಜ್ಯ

ಎರಡೂ ಕೈಗಳಿಲ್ಲದಿದ್ದರೂತನ್ನ ಕಾಲಿನಿಂದ ಮತ ಹಾಕಿದಲಕ್ಷ್ಮೀ

ಗುಂಡುಮುಣುಗು:ಕಾಲಿನಿಂದ ಮತ ಚಲಾಯಿಸುವ ಲಕ್ಷ್ಮೀ.!? ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಂಡು ಮುಣುಗು ಗ್ರಾಮದ, ವಿಶೇಷ ಚೇತನೆ ಲಕ್ಷ್ಮೀ ಇಂದು ತನ್ನ ಕಾಲಿನಿಂದ ಮತ ಹಾಕಿದಳು.ಎರಡೂ ಕೈಗಳಿಲ್ಲದ ಯುವತಿ ಲಕ್ಷ್ಮಿ ಮತದಾನದ ಹಕ್ಕು ಪಡೆದಾಗಿನಿಂದ,ಎಲ್ಲಾ ಚುನಾವಣೆಯಲ್ಲಿ ಭಾಗವಹಿಸಿ ಕಾಲಿನಿಂದಲೇ ಮತ ಚಲಾಯಿಸುತ್ತಿದ್ದಾಳೆ. ಇದು ಎಂತಹವರನ್ನೂ ನಿಬ್ಬೆರಗಾಗಿಸುವ ಸಂಗತಿ ಯಾಗಿದೆ, ಗ್ರಾಮ ಪಂಚಾಯಿತಿಗೆ ಭಾನುವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ. ಗುಂಡುಮುಣುಗು ಗ್ರಾಮದ ಮತಗಟ್ಟೆ 47ರಲ್ಲಿ ಲಕ್ಷ್ಮೀದೇವಿ ಕಾಲಿನಿಂದ ಮತದಾನ ಮಾಡಿದರು, …

Read More »

ಗ್ರಾ.ಪಂ. ಚುನಾವಣೆ ಅಂತ್ಯ: 2ನೇ ಹಂತದಲ್ಲಿ ಶೇ. 80.71 ಮತದಾನ – ಡಿ. 30ಕ್ಕೆ ಫಲಿತಾಂಶ

ಬೆಂಗಳೂರು: ಕೆಲವೊಂದು ಕಡೆ ಗದ್ದಲ, ಮತದಾನ ಬಹಿಷ್ಕಾರಗಳ ಮಧ್ಯೆ ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಡಿ. 22ರಂದು ಮೊದಲ ಹಂತದ ಮತದಾನವಾದರೆ ನಿನ್ನೆ ಭಾನುವಾರ 109 ತಾಲೂಕುಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ನಿನ್ನೆ ಶೇ. 80.71ರಷ್ಟು ಮತದಾನ ಆಗಿರುವ ಮಾಹಿತಿ ಇದೆ. ಎರಡೂ ಹಂತಗಳಲ್ಲೂ ಶೇ. 80ಕ್ಕಿಂತ ಹೆಚ್ಚು ಮತದಾನವಾದಂತಾಗಿದೆ. ನಿನ್ನೆ 2ನೇ ಹಂತದಲ್ಲಿ 39,378 ಸದಸ್ಯರ ಆಯ್ಕೆಗೆ 2,709 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ …

Read More »

ಅಪಹರಣಕ್ಕೆ ಒಳಗಾದ ಮಹಿಳೆಯನ್ನು ಪತ್ತೆ ಹಚ್ಚಲು ಯಶಸ್ವಿ

ಡಿ.25ರಂದು ಶಿರಸಿಯ ಬಸವೇಶ್ವರ ನಗರದಿಂದ  ಋತಿಕಾ/ ಮಣಿಕಂಠ ಕೊಡಿಯಾ ವಯಾ ೧೮ ವರ್ಷ ಇವಳನ್ನು ಅವಳ  ತಾಯಿ ರೂಪಾ ಶಿರ್ಸೆಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಬಗ್ಗೆ ಗಂಡ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಶಿರಸಿ ಪೊಲೀಸರು ಡಿಎಸ್ಪಿ ರವಿ ಡಿ ನಾಯ್ಕ  ಸಿಪಿಐ  …

Read More »

ಕೊರೋನಾ ಮತ್ತೆ ಕಂಗೆಡಿಸಿದೆ. ಕಳೆದ 24 ಗಂಟೆಯಲ್ಲಿ 60 ಜನರು ಕೊರೋನಾದಿಂದ ಸಾವಿಗೀಡಾಗಿದ್ದಾರೆ

ಮುಂಬೈ – ಭಾರಿ ಅಬ್ಬರದ ನಂತರ ತಣ್ಣಗಾಗಿದ್ದ ಕೊರೋನಾ ಮತ್ತೆ ಮಹಾರಾಷ್ಟ್ರವನ್ನು ಕಂಗೆಡಿಸಿದೆ. ಕಳೆದ 24 ಗಂಟೆಯಲ್ಲಿ 60 ಜನರು ಕೊರೋನಾದಿಂದ ಸಾವಿಗೀಡಾಗಿದ್ದಾರೆ. 2854 ಜನರಿಗೆ ಒಂದೇ ದಿನ ಸೋಂಕು ದೃಢಪಟ್ಟಿದೆ. ಕೊರೋನಾ ಮತ್ತು ಪ್ರವಾಹದಿಂದಾಗಿ ಮುಂಬೈ ಮಹಾನಗರ ಸೇರಿದಂತೆ ಬಹುತೇಕ ಮಹಾರಾಷ್ಟ್ರ ರಾಜ್ಯ ಕಂಗೆಟ್ಟುಹೋಗಿತ್ತು. ಅದರಿಂದ ಇನ್ನೇನು ಚೆತರಿಕೆ ಕಾಣುತ್ತಿದೆ ಎನ್ನುವ ಹೊತ್ತಿಗೆ ಮತ್ತೆ ಕೋರೋನಾ ಅಬ್ಬರಿಸತೊಡಗಿದೆ. ಬ್ರಿಟನ್ ನಿಂದ ಆಗಮಿಸಿರುವ 16 ಜನರು ಸೇರಿದಂತೆ 2854 ಜನರಿಗೆ …

Read More »

ಬಸ್- ಕ್ರೂಸರ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು !

ಮೊಳಕಾಲ್ಮುರು: ಬಸ್ ಹಾಗೂ ಕ್ರೂಸರ್ ಮಧ್ಯೆ ಮೊಳಕಾಲ್ಮುರು ತಾಲ್ಲೂಕಿನ ಬಿಜಿ ಕೆರೆ ಬಳಿ ಭಾನುವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿಮ್ಮಣ್ಣ(40) ಪತ್ನಿ ರತ್ನಮ್ಮ(38) ಸೋಮನಮರಡಿ ಗ್ರಾಮದ ದುರುಗಪ್ಪ(16), ಗಜಲಿ ಗ್ರಾಮದ ಮಹೇಶ (19) ಹಾಗು 55 ವರ್ಷದ ಓರ್ವ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆ ದೆವದುರ್ಗ ತಾಲೂಕಿನ ಹುಣಸೂರು ಗ್ರಾಮದವರಾಗಿದ್ದಾರೆ ಎನ್ನಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಸ್ …

Read More »

ಗ್ರಾಪಂ.ಚುನಾವಣೆಗೆ ಸ್ಪರ್ಧಿಸಿದ್ದ ಅಂಬೋಜಿ ನಿಧನ

ಖಾನಾಪುರ : ತಾಲ್ಲೂಕಿನ ನ್ಯಾಯವಾದಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಸಿ.ಬಿ.ಅಂಬೋಜಿ (64) ಭಾನುವಾರ ಬೆಳಿಗಿನ ಜಾವ ನಿಧನರಾದರು. ಬಿಷ್ಟಾದೇವಿ ಜೀರ್ಣೊದ್ದಾರ ಟ್ರಸ್ಟ್ ಅಧ್ಯಕ್ಷರಾಗಿದ್ದರು. ಕಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಕ್ಕೇರಿ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮಂಗಳವಾರ ನಡೆದ ಗ್ರಾಪಂ ಚುಣಾವಣೆಗೆ ಕಕ್ಕೇರಿ ಗ್ರಾಮದ ವಾರ್ಡ್ ನಂ.2ಕ್ಕೆ ಸ್ಪರ್ಧೆ ಮಾಡಿದ್ದರು.

Read More »

ಮೂರು ಸಾವಿರ ಮಠದ ಆಸ್ತಿ ವಾಪಸ್ ನೀಡಿ: ಕೆಎಲ್ಇ ಸಂಸ್ಥೆಗೆ ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯ

ಹುಬ್ಬಳ್ಳಿ : ಹುಬ್ಬಳ್ಳಿಯ ಮೂರು ಸಾವಿರ ಮಠದ ಆಸ್ತಿಯನ್ನು ಕೆ ಎಲ್ ಇ ಸಂಸ್ಥೆಯವರು ವಾಪಸ್ ಮಠಕ್ಕೆ ನೀಡಬೇಕು ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೂರು ಸಾವಿರ ಮಠದ ಆಸ್ತಿಯಲ್ಲಿ ನಗರದ ಗಬ್ಬೂರು ಬಳಿ ಕೆಎಲ್ ಇ ಸಂಸ್ಥೆ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಕೆಎಲ್‌ಇ ಸಂಸ್ಥೆಯವರಿಗೆ ಮಠದಿಂದ 24 ಎಕರೆ 30 ಗುಂಟೆ ಜಾಗ ಕೊಟ್ಟಿದ್ದು ತಪ್ಪು. ಮಠದ ಆಡಳಿತ ಮಂಡಳಿ ನೇತೃತ್ವದಲ್ಲೇ …

Read More »

ಗೋಕಾಕ: ಜ.6 ರಂದು ತೆರಿಗೆ ಸಂದಾಯ ಮಾಡದ 21 ವಾಹನಗಳ ಹರಾಜು!!

ಗೋಕಾಕ: ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯ ಪ್ರಕಾರ ತೆರಿಗೆ ಸಂದಾಯ ಮಾಡದಿರುವ ಕಾರಣ ಮುಟ್ಟುಗೋಲು ಹಾಕಿಕೊಂಡಿರುವ 21 ವಾಹನಗಳನ್ನು ಜ. 6 ರಂದು ಮುಂಜಾನೆ 10.30 ಘಂಟೆಗೆ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಬಹಿರಂಗು ಹರಾಜು ಮಾಡಲಾಗುವುದು ಸಾರಿಗೆ ಅಧಿಕಾರಿ ಟಿ.ಜೆ.ಹೇಮಾವತಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಬಾಕಿ ಇರುವ ತೆರಿಗೆ ಸಂದಾಯ ಮಾಡಿ ವಾಹನವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳುಲು …

Read More »

ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ

ರಾಮದುರ್ಗ: ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್​ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್‌ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್​ ಭೇಟಿ ನೀಡಿ ಪರಿಶೀಲನೆ …

Read More »

ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ

ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು. ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ …

Read More »