Breaking News

ರಾಜ್ಯ

ಸ್ಯಾಂಡಲ್‍ವುಡ್ ಮತ್ತೊಬ್ಬ ನಿರ್ದೇಶಕನ್ನು ಬಲಿ ಪಡೆದ ಕೊರೊನಾ..!

ಬೆಂಗಳೂರು, ಡಿ.25- ಕೊರೊನಾ ಮಾರಿಯು ಸ್ಯಾಂಡಲ್‍ವುಡ್ ಅನ್ನು ಬೆಂಬಿಡದಂತೆ ಕಾಡುತ್ತಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್ (45) ನಿನ್ನೆ ರಾತ್ರಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ಮೋಹಕ ತಾರೆ ರಮ್ಯಾ ಅಭಿನಯದ ಕಂಠಿ ಚಿತ್ರ ನಿರ್ದೇಶಿಸುವ ಮೂಲಕ ಚಿತ್ರ ಪಯಣ ಆರಂಭಿಸಿದ ರಾಮನಗರ ಚಿಕ್ಕಮುಳುವಾಡಿ ಗ್ರಾಮದ ಭರತ್ ಹೊಸ ಸಿನಿಮಾದ ತಯಾರಿಯಲ್ಲಿರುವಾಗಲೇ ತಮ್ಮ ಬಣ್ಣದ ಲೋಕದ ಪಯಣ ಮುಗಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿರ್ದೇಶನದ …

Read More »

ಪ್ರವಾಸಿ ತಾಣಗಳು ಕೊರೋನಾ ಹರಡುವುದಕ್ಕೆ ರಹದಾರಿಗಳಾಗಿ ಬಿಡುತ್ತವಾ ಎನ್ನುವ ಆತಂಕ?

ಕೊಡಗು: ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ಸರ್ಕಾರಿ ರಜೆ ಬಂದಿದ್ದೇ ತಡ, ಕೊಡಗು ಜಿಲ್ಲೆಗೆ ಸಾವಿರಾರು ಪ್ರವಾಸಿಗರು ದಾಂಗುಡಿ ಇಟ್ಟಿದ್ದಾರೆ. ಹೀಗಾಗಿ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ದುಬಾರೆ, ದುಬಾರೆ ಸಾಕಾನೆ ಶಿಬಿರ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಸಾವಿರಾರು ಪ್ರಯಾಣಿಕರು ತುಂಬಿ ತುಳುಕುತಿದ್ದಾರೆ. ಆದರೆ ಎಲ್ಲೆಡೆ ಸಾಮಾಜಿಕ ಅಂತರ ಮಾತ್ರ ಸಂಪೂರ್ಣ ಮಾಯವಾಗಿಬಿಟ್ಟಿದೆ. ಹೌದು, ವಿಶ್ವ ಪ್ರಸಿದ್ಧ ದುಬಾರೆ ಸಾಕಾನೆ …

Read More »

ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ

ವಿಜಯಪುರ: ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂಬ ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸದಾನಂದಗೌಡ ಹೇಳಿದ್ದು ನೂರಕ್ಕೆ ನೂರರಷ್ಟು ನಿಜ. ಒಳ್ಳೆಯ ಸಲಹೆ ನೀಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರು ತಾವು ಪ್ರಧಾನಿಯಲ್ಲ, ಸಾಮಾನ್ಯ ಸೇವಕ ಎನ್ನುವಾಗ ನಾನು ಸಾಮಾನ್ಯ ಕಾರ್ಯಕರ್ತನೆ ಎಂದು ಹೇಳಿದ್ದಾರೆ. ನಾನು ಓರ್ವ ಸಾಮಾನ್ಯ ಶಾಸಕ. ರಾಷ್ಟ್ರೀಯ ನಾಯಕ ಎಂದು ನಾನೆಲ್ಲೂ ಹೇಳಿಲ್ಲ. ನಾನು ವಾಜಪೇಯಿ ಅವಧಿಯಲ್ಲಿ ಕೇಂದ್ರ ಸಚಿವನಾಗಿದ್ದೆ. ಡಿ.ವಿ.ಸದಾನಂದಗೌಡರು …

Read More »

ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು

ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …

Read More »

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ

ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.   ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

Read More »

ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !

ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …

Read More »

ಅನಿಲ್ ಬೆನಕೆ ಮರಾಠಿ ಬ್ಯಾನರ್‌ಗೆ ಕಪ್ಪು ಮಸಿ..ಬ್ಯಾನರ್ ಹರಿದು ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾಂವಿ ಆಕ್ರೋಶ.

ಅನಿಲ್ ಬೆನಕೆ ಮರಾಠಿ ಬ್ಯಾನರ್‌ಗೆ ಕಪ್ಪು ಮಸಿ..ಬ್ಯಾನರ್ ಹರಿದು ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾಂವಿ ಆಕ್ರೋಶ. ಬೆಳಗಾವಿ ಆರ್‌ಟಿಒ ಸರ್ಕಲ್‌ನಲ್ಲಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮತ್ತು ತಂಡ ಅಳವಡಿಸಿದ್ದ ಮರಾಠಿ ಭಾಷೆಯ ಬ್ಯಾನರ್‌ಗೆ ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಆಯೋಜಿಸಿರುವ ಕ್ರಿಕೆಟ್ ಟೂರ್ನಾಮೆಂಟ್ ಮಾಹಿತಿ ನೀಡುವ ಪ್ರಚಾರ ಫಲಕವನ್ನು ಆರ್‌ಟಿಒ ಸರ್ಕಲ್ ಬಳಿ ಮರಾಠಿ ಭಾಷೆಯಲ್ಲಿ ಅಳವಡಿಸಲಾಗಿದೆ. ಶಾಸಕ …

Read More »

ಅಟಲ್ ಬೀಹಾರಿ ವಾಜಪೇಯಿಗೆ ದೇಶದ ನಮನ

ನವದೆಹಲಿ,ಡಿ.25-ರಾಷ್ಟ್ರಪತಿ ರಾಮಾನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಮಾಜಿ ಪ್ರಧಾನಿ ದಿವಂಗತ ಅಟಲ್ ಬೀಹಾರಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ವಾಜಪೇಯಿ ಸ್ಮರಣಾರ್ಥ ಏರ್ಪಡಿಸಿದ್ದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವರುಗಳು ಕೇಸರಿ ಪಕ್ಷದಿಂದ ದೇಶದ ಮೊಟ್ಟ ಮೊದಲ ಪ್ರಧಾನಮಂತ್ರಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ವಾಜಪೇಯಿ ಅವರಿಗೆ ನಮನ ಸಲ್ಲಿಸಿದರು. ಅಜಾತಶತ್ರು ವಾಜಪೇಯಿ ಅವರನ್ನು ಕುರಿತು ರಾಷ್ಟ್ರಪತಿ ಕೋವಿಂದ್ ಅವರು, ಸದೈವ …

Read More »

“ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿ: ಸಾಮಾಜಿಕ ಹೋರಾಟಗಾರರು, ಚಿತ್ರರಂಗದ ಗಣ್ಯರು,ಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು

ಬೆಂಗಳೂರು; ಜಾತಿಗಳಿಗೆ, ಮಠಗಳಿಗೆ ಕೋಟ್ಯಾಂತರ ಹಣವನ್ನು ನೀಡುತ್ತಾ “ಮತ ರಾಜಕಾರಣ” ಮಾಡುವ ಬದಲು ಸರ್ಕಾರವು ನಾಡಿನ ಭಾಷೆಯಾದ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿಗೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆ ಮಾಡಬೇಕು. ಈ ಮೂಲಕ ಕನ್ನಡದ ಸಂಶೋಧನೆಗಳು, ಕನ್ನಡದ ಹಳಮೆಯನ್ನು ಸಾಧಿಸುತ್ತಲೇ ಕನ್ನಡದ ನಾಳೆಯನ್ನು ಕಟ್ಟಬಹುದಾದ ಕನ್ನಡದ್ದೇ ಕೆಲಸಗಳನ್ನು ಮಾಡಲು ಆದ್ಯತೆ ನೀಡಬೇಕು. ತುರ್ತಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಚಲನಚಿತ್ರ ನಿರ್ದೇಶಕ, ರಂಗಕರ್ಮಿ ಬಿ.ಸುರೇಶ ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ …

Read More »

ನಾ ಕಾವೂಂಗಾ, ನಾ ಕಾನೇ ದೂಂಗಾ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರಮೋದಿಯವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ? :

ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು. ‘’ ಬಿ.ಎಸ್. ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ …

Read More »