Breaking News

ರಾಜ್ಯ

ಇಂದು ಬೆಳಗಾವಿ ಕಂದಾಯ ಇಲಾಖೆ ಸಚಿವ ಆರ್.ಅಶೋಕ ಭೇಟಿ ನೀಡಿ,

ಬೆಳಗಾವಿ: ಕಂದಾಯ ಇಲಾಖೆ ಸಚಿವ ಆರ್.ಅಶೋಕ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದಾದ ಹಾನಿಯನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹುಕ್ಕೇರಿ ಪಟ್ಟಣ, 1.40ಕ್ಕೆ ಎಲಿಮಿನ್ನೋಳಿಗೆ ಭೇಟಿ ನೀಡಲಿದ್ದಾರೆ. ಬಳಿಕ 3.10ಕ್ಕೆ ಕಲ್ಲೋಳ ಸೇತುವೆ, 3.30ಗಂಟೆಗೆ ಯಡೂರ, ಯಡೂರವಾಡಿ, 4.10ಕ್ಕೆ ಇಂಗಳಿ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಲಿದ್ದಾರೆ‌. ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾನಿ ಪರಿಶೀಲಿಸಿ ಭರವಸೆ ಸುರಿಮಳೆ‌ ಸುರಿಸಿದ್ದಾರೆ.   https://youtu.be/-mjImckkvpc *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …

Read More »

ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ

ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಅವರು ಕರೆ ನೀಡಿದರು. https://youtu.be/-mjImckkvpc     ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ …

Read More »

ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?:H.D.K.

ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ …

Read More »

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆ

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಕ್ಟೋಬರ್ 16ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಎಮ್.ನಿಂಗಪ್ಪ, ಉಪಾಧ್ಯಕ್ಷರಾಗಿ ಎನ್.ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಿಟೈನಿಂಗ್ ಅಧಿಕಾರಿಗಳ ಸಮಕ್ಷಮದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಸಂದಭ೯ದಲ್ಲಿ ಸಂಘದ ನಿಧೇ೯ಶಕರಾದ ಮಂಜುನಾಥಗೌಡ,ಜಿ.ನಾ‍ಗರಾಜ,ಹೊನ್ನೂರ್ ಬೀ,ಬಿ.ವೀರೇಶ್,ಹೆಚ್.ಮೂಗಪ್ಪ,ಎಸ್.ಮೆಹಬೂಬ್ ಸಾಬ,ಬಿ.ಖಾಸೀಂ ಪೀರ್,ಕೆ.ಬಸವನಗೌಡ,ವೈ.ಪ್ರಸನ್ನಕುಮಾರ್,ಶ್ರೀಮತಿ ಎನ್.ನಿಮ೯ಲಮ್ಮ ಹಾಜರಿದ್ದರೆಂದು ಕಾಯ೯ದಶಿ೯ಗಳಾದ‍ ಬಸಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದಭ೯ದಲ್ಲಿ ಪೊಲೀಸ್ ಪೇದೆ ಲೋಕೇಶ್ ಹಾಜರಿದ್ದರು.

Read More »

ಸ್ವಲ್ಪ ಮಟ್ಟಿಗೆ ಮಳೆ ಹಾಗೂ ಪ್ರವಾಹ ತಗ್ಗಿದರೂ ಜನರಲ್ಲಿರುವ ಭೀತಿ ಮಾತ್ರ ಕಡಿಮೆಯಾಗಿಲ್ಲ.

ಬೆಂಗಳೂರು: ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಯಿಂದಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಅಕ್ಷರಸಹ ನಲುಗಿ ಹೋಗಿವೆ, ಒಂದೆಡೆ ಮಳೆ, ಮತ್ತೊಂದೆಡೆ ಭೀಮಾ, ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿ ಜನ ಕಂಗಾಲಾಗಿದ್ದಾರೆ. ಮನೆ ಕಳೆದುಕೊಂಡು ಬೀದಿಯಲ್ಲಿ ನಿಲ್ಲುವಂತಾಗಿದೆ. ಇದೀಗ ಸ್ವಲ್ಪ ಮಟ್ಟಿಗೆ ಮಳೆ ಹಾಗೂ ಪ್ರವಾಹ ತಗ್ಗಿದರೂ ಜನರಲ್ಲಿರುವ ಭೀತಿ ಮಾತ್ರ ಕಡಿಮೆಯಾಗಿಲ್ಲ. ವಿಜಯಪುರ ಹಾಗೂ ಕಲಬುರಗಿಯ ಭೀಮಾ ನದಿ ತೀರಗಳಲ್ಲಿ ಹಲವು ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನ ಅನ್ನ, …

Read More »

ಕಾರಜೋಳ ಪುತ್ರ‌ ಅವರ ಆರೋಗ್ಯ ಸ್ಥಿತಿ ಗಂಭೀರ

ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ‌ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.

Read More »

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …

Read More »

ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ:ಕಟೀಲ್

ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್‍ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ …

Read More »

ನಾಳೆಸಿದ್ದರಾಮಯ್ಯ ಬೆಳಗಾವಿ ಗೆ

ಬೆಂಗಳೂರು, ಅ.18- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಳೆಯಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ತಮ್ಮ ಸ್ವಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ 12.30ಕ್ಕೆ ತಲುಪಲಿದ್ದಾರೆ. ಬಾದಾಮಿಯಲ್ಲಿ ಕೆಡಿಪಿ ಸಭೆ ನಡೆಸಿ ಅಂದು ಅಲ್ಲೆ ವಾಸ್ತವ್ಯ ಹೂಡಲಿದ್ದಾರೆ. ಮಾರನೇ ದಿನ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ …

Read More »

ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ

ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ …

Read More »