Breaking News

ರಾಜ್ಯ

ಒಬ್ಬನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 6 ಬಾಲಕರೂ ನೀರುಪಾಲು

ಮದುವೆಗೆಂದು ಬಂದಿದ್ದ ಒಂದೇ ಕುಟುಂಬದ ಬಾಲಕರು, ನದಿಯಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿ ಆರು ಬಾಲಕರೂ ನೀರು ಪಾಲಾಗಿರುವ ಘಟನೆ ನಡೆದಿದೆ. ತೆಲಂಗಾಣದ ಭೂಪಾಲಪಲ್ಲಿಯ ಮಹದೇವಪುರ ಮಂಡಲದಲ್ಲಿ ಈ ದುರಂತ ಸಂಭವಿಸಿದೆ. ಮದುವೆ ಸಮಾರಂಭಕ್ಕೆಂದು ಬಂದಿದ್ದ ಆರು ಜನ ಅಪ್ರಾಪ್ತ ಬಾಲಕರು ತಮಗೆ ಈಜಲು ಬಾರದಿದ್ದರೂ, ಗೋದಾವರಿನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಓರ್ವ ಬಾಲಕ ನೀರಿನ …

Read More »

ಜೂನ್ 15ಕ್ಕೆ ಪ್ರತಿಭಾ ಪುರಸ್ಕಾರ

2024-25ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡಾ 80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವಿದ್ಯಾರ್ಥಿಗಳನ್ನು ಜೂನ್ 15 (ಭಾನುವಾರ) ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿನಂದಿಸಲಿದ್ದಾರೆ. ಕುವೆಂಪುನಗರದ ಸಚಿವರ‌ ಗೃಹ ಕಚೇರಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದನಾ ಪತ್ರಗಳನ್ನು ಸಚಿವರು ವಿತರಿಸಲಿದ್ದಾರೆ. 600ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಸಚಿವರು ‌ಅಭಿನಂದಿಸಿ, …

Read More »

ಲಕ್ಷ್ಮಣ ಸವದಿ ಕಾರು ಅಪಘಾತ

ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿಯ ದರೂರ್ ಬಳಿ ನಡೆದಿದೆ.ಲಕ್ಷ್ಮಣ ಸವದಿ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ.ಅಪಘಾತದ ಬಳಿಕ ಲಕ್ಷ್ಮಣ ಸವದಿ ಬೇರೆ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಾಯಂಕಾಲ 4:00 …

Read More »

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ

ಬೆಂಗಳೂರು, ಜೂನ್​ 08: ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆ …

Read More »

ಸವದತ್ತಿ ರಾಯಚೂರು ಜಿಲ್ಲೆಯಲ್ಲೂ ಅಬ್ಬರಿಸಿದ ಮಳೆಭಾರಿ ಮಳೆನದಿ ಸ್ವರೂಪ ಪಡೆದ ಹೊಲ-ಗದ್ದೆಗಳು

ಬೆಳಗಾವಿ: ಪೂರ್ವ ಮುಂಗಾರು ಬಳಿಕ ಸೈಲೆಂಟ್ ಆಗಿದ್ದ ಮಳೆರಾಯ ಮತ್ತೆ ಅಬ್ಬರಿಸಿದ್ದು, ಸವದತ್ತಿ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೌದು, ನಿನ್ನೆ ಸಂಜೆ ಸವದತ್ತಿ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಒಂದು ಗಂಟೆಗೂ ಅಧಿಕ ಕಾಲ‌ ಮಳೆ ಸುರಿಯಿತು. ಭಾರಿ ಮಳೆಗೆ ಇಲ್ಲಿನ ಗದ್ದೆಗಳು ಸಂಪೂರ್ಣ ಜಲಾವೃತವಾಗಿದ್ದವು. ರಸ್ತೆ ಮೇಲೆ ರಭಸವಾಗಿ ನೀರು ಹರಿದ ಪರಿಣಾಮ ಎರಡು ಗಂಟೆ ಸಂಚಾರ ಬಂದ್ ಆಗಿತ್ತು. ವಾಹನ ಸವಾರರು …

Read More »

ಮಗ ನಮ್ಮ ಜೊತೆಗಿದ್ದಿದ್ದರೆ ಸಾಕಾಗಿತ್ತು. ದುಡ್ಡು ಕೊಟ್ಟರೆ ಮಗ ಮತ್ತೆ ವಾಪಸ್​ ಬರೊಲ್ಲ ಸಾರ್.. ಮುನ್ನೆಚ್ಚರಿಕೆ ವಹಿಸಬೇಕು.. ಇದು ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯ ತಂದೆಯ ನುಡಿ..

ತುಮಕೂರು: ಇತ್ತೀಚಿಗೆ (ಜೂನ್​ 4) ಆರ್ ಸಿಬಿ ವಿಜಯೋತ್ಸವದ ವೇಳೆ ಮೃತಪಟ್ಟ ತುಮಕೂರು ಮೂಲದ ವಿದ್ಯಾರ್ಥಿ ಮನೋಜ್ ಕುಟುಂಬಕ್ಕೆ ಸರ್ಕಾರದ ಆದೇಶದಂತೆ 25 ಲಕ್ಷ ರೂಪಾಯಿ ಹಣದ ಚೆಕ್ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭಾನುವಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೃತ ವಿದ್ಯಾರ್ಥಿ ಮನೋಜ್ ತಂದೆ ದೇವರಾಜ್, ಚೆಕ್ ಕೊಟ್ಟಿದಾರೆ ಸರ್.. ಮಗ ಬರೊಲ್ವಲ್ಲ. ಚೆಕ್ ಕೊಟ್ಟರೆ ಮಗಾ ಬರ್ತಾನಾ, ಇದ್ದೋನು ಒಬ್ಬನೇ ಮಗ ಎಂದು ನೊಂದು …

Read More »

ಗೌಂಡವಾಡದಲ್ಲಿ ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ , ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ:ಸತೀಶ್ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಬಳಸಿ ಗೌಂಡವಾಡದಲ್ಲಿ ಅಭಿವೃದ್ಧಿ ಸುಮಾರು 40 ಲಕ್ಷ ಅನುದಾನದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನ ಸುಮಾರು 40 ಲಕ್ಷ ಅನುದಾನದಲ್ಲಿ ಕಾಮಗಾರಿರಸ್ತೆ ಹಾಗೂ ಚರಂಡಿ ನಿರ್ಮಾಣ ಗಣ್ಯರಿಂದ ಕಾಮಗಾರಿಗೆ ಚಾಲನೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ವಿಶೇಷ ಅನುದಾನದಲ್ಲಿ …

Read More »

ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ

ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೆ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿದರು. ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದೆ. ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಲಾಗಿದೆ. …

Read More »

ಬೈಕ್​ಗೆ ಕಾರು ಡಿಕ್ಕಿ – ಇಬ್ಬರು ಸವಾರರು ಸಾವು

ರಾಯಚೂರು: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ರಾಯಚೂರಿನ ಯರಗೇರಾ ಬಳಿ ಘಟನೆ ಸಂಭವಿಸಿದೆ. ಯರಗೇರಾದ ಮಂತ್ರಾಲಯ – ರಾಯಚೂರು ಸಂಪರ್ಕ ಕಲ್ಪಿಸುವ ರಸ್ತೆಯ ರಾಯಚೂರು ವಿಶ್ವವಿದ್ಯಾಲಯ ಬಳಿ ಈ ಅಪಘಾತ ನಡೆದಿದೆ. ಕರೆಬೂದೂರು ಗ್ರಾಮದ ಉರುಕುಂದ ಈರಣ್ಣ (42) ಹಾಗೂ ಲಕ್ಷ್ಮಣ ತಿಮ್ಮಪ್ಪ ಮೃತಪಟ್ಟವರು. ಉರುಕುಂದ ಅವರು ಅಪಘಾತವಾದ ಕೆಲಹೊತ್ತಲ್ಲೇ ಮೃತಪಟ್ಟರೆ, ಲಕ್ಷ್ಮಣ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. …

Read More »

ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ

ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ ರಾಜ್ಯ ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್ ರವಿಕುಮಾ‌ರ್ ರಾಜಿನಾಮೆಗೆ ಆಗ್ರಹಿಸಿ ಜೂನ್ 10 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಾಗರ ಬಣ ಕರೆ ಕೊಟ್ಟಿದೆ. ಕಲಬುರ್ಗಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಜೂನ್ 10ರಂದು ರಾಜ್ಯಾದ್ಯಂತ …

Read More »