Breaking News

ರಾಜ್ಯ

ಆರು ತಿಂಗಳಲ್ಲಿ ರೈತರಿಗೆ ಯಾವ ರೀತಿ ಒಳ್ಳೆಯದು ಆಗುತ್ತದೆ ಎಂಬುದನ್ನು ನೋಡಿ:B.S.Y.

ಬೆಂಗಳೂರು: ಆರು ತಿಂಗಳಲ್ಲಿ ರೈತರಿಗೆ ಯಾವ ರೀತಿ ಒಳ್ಳೆಯದು ಆಗುತ್ತದೆ ಎಂಬುದನ್ನು ನೋಡಿ ಎಂದು ಸಿಎಂ ಯಡಿಯೂರಪ್ಪ ಮಸೂಧೆ ವಿರೋಧಿಸಿ ಪ್ರತಿಭಟನೆ ನಡೆಸಿದವರಿಗೆ ಸವಾಲು ಎಸೆದಿದ್ದಾರೆ. ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ನಿರ್ಣಯವಾಗಿದ್ದು. ಎಪಿಎಂಸಿಯ ಬಾಗಿಲು ಮುಚ್ಚಿಲ್ಲ. ರೈತರು ಈಗ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. 6 ತಿಂಗಳ ಕಾದು ನೋಡಿ. ರೈತರಿಗೆ …

Read More »

ಮೋದಿ, ಬಿಎಸ್‍ವೈ ಸರ್ಕಾರ ರೈತರ ಪರ ಕೆಲಸ ಮಾಡ್ತಿದೆ: ಕಟೀಲ್

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಮನೆಗೆ ನಳಿನ್ ಕುಮಾರ್ ಕಟೀಲ್ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಳೀನ್‍ಗೆ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕಟೀಲ್, ಅಶೋಕ್ ಗಸ್ತಿ …

Read More »

ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದುಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ರೈತ

ಬೆಳಗಾವಿ : ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ  ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದು ರೈತ ಮುಖಂಡನೊಬ್ಬ ಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ಘಟನೆ ನಡೆದಿದೆ. ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಂದ್ ಗೆ ಕರೆ ನೀಡಿದ್ದೆವೆ. ಇಂತಹ ಸಂದರ್ಭದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ನಡೆಸಿ, ಬಂದ್ ಗೆ ವಿರೋಧ ವ್ಯಕ್ತ ಪಡಿಸಿಬೇಡಿ, ಸಾರ್. ಬಸ್ ಸಂಚಾರ ನಿಲ್ಲಿಸಿ ಎಂದು ರೈತ ಮುಖಂಡ …

Read More »

ಪೇಟ ತೊಟ್ಟು ಕತ್ತೆ ಮೇಲೆ ಬಂದ ವಾಟಾಳ್

ಬೆಂಗಳೂರು: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನೆ ಮಾಡಲಾಗಿದೆ. ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಕತ್ತೆಯ ಮೇಲೆ ಮೆರವಣಿಗೆ ಬರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ವಾಟಾಳ್ ಮಂಗಳವಾದ್ಯಗಳ ದೊಡ್ಡ ತಂಡದೊಂದಿಗೆ ಆಗಮಿಸಿದ್ದರು. ಇವರ ಜೊತೆಗೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು. ಮಂಗಳವಾದ್ಯಗಳ ಮಧ್ಯೆ …

Read More »

ಹಿರಿಯ ಯಕ್ಷಗಾನ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

ಮಂಗಳೂರು: ಅಸೌಖ್ಯದಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಹವ್ಯಾಸಿ ಭಾಗವತರಾಗಿಯೂ, ಕೆಲ ವರ್ಷ ವೃತ್ತಿ ಮೇಳಗಳಲ್ಲಿ ಭಾಗವತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೈರಂಗಳ, ಬಪ್ಪನಾಡು, ಮಲ್ಲ, ಮಧೂರು, ಇರಾ, ಕುಂಟಾರು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ್ದಾರೆ. ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದರು. ತನ್ನ ವಿಶಿಷ್ಟ ಶೈಲಿಯ ಹಾಡುಗಾರಿಕೆಯಿಂದ ಅಭಿಮಾನಿಗಳನ್ನು …

Read More »

ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್

ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …

Read More »

ಕೋವಿಡ್‌ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್‌ಡಿಎಂಎ ಕಾಯ್ದೆ ಅಡಿ ಕೇಸ್‌ – ಕಮಲ್‌ ಪಂಥ್‌ ಎಚ್ಚರಿಕೆ

ಬೆಂಗಳೂರು: ಬಲವಂತವಾಗಿ ಪ್ರತಿಭಟನೆಗೆ ಇಳಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಎಚ್ಚರಿಕೆ ನೀಡಿದ್ದಾರೆ. ಬಂದ್ ಸಂಬಂಧ ನಾವು ಯಾರಿಗೂ ಅನುಮತಿಯನ್ನು ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.   ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ …

Read More »

ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ

ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. …

Read More »

ನಾಳೆಯ ಹೋರಾಟ ಯಾವ ಸ್ವರೂಪ ಬೇಕಾದ್ರೂ ಪಡೀಬೋದು: ಕರವೇ ಅಧ್ಯಕ್ಷ ಎಚ್ಚರಿಕೆ

ಬೆಂಗಳೂರು: ಸೋಮವಾರ ಕರ್ನಾಟಕ ಬಂದ್ ಯಾವ ಸ್ವರೂಪ ಬೇಕಾದ್ರು ಪಡೆಯಬಹುದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ ನೀಡಿದ್ದಾರೆ. ರೈಲು, ವಿಮಾನ, ಹೆದ್ದಾರಿ, ಸಾರಿಗೆ ಓಡಾಟದಲ್ಲಿ ಏನು ಬೇಕಾದ್ರು ಆಗಬಹುದು. ಭೂಸುಧಾರಣಾ, ಎಪಿಎಂಪಿ ಕಾಯ್ದೆ ವಿರುದ್ಧ ಹೋರಾಟ ನಿಲ್ಲಲ್ಲ. ಈ ಎರಡು ಕಾಯ್ದೆಗಳು, ರೈತರಿಗೆ ಮರಣ ಶಾಸನ ಬರೆದಂತೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಂಡ ಸರ್ಕಾರಗಳು. ರೈತರನ್ನು ಉದ್ದಾರ ಮಾಡ್ತೀವಿ ಅಂತಾರೆ. ಒಳ್ಳೆ ಬೆಲೆ ಸಿಗುತ್ತೆ ಅಂತಿದ್ದಾರೆ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »