Breaking News

ರಾಜ್ಯ

ಡ್ರಗ್ಸ್ ಪ್ರಕರಣ – ಡ್ಯಾನ್ಸರ್ ಕಿಶೋರ್‌ಗೆ ಅ.9ರವರೆಗೆ ನ್ಯಾಯಾಂಗ ಬಂಧನ

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಬಂಧಿಸಿದಂತೆ ಬಂಧಿತರಾಗಿರುವ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಹಾಗೂ ಅಕೀಲ್ ನೌಶೀನ್‍ನನ್ನು ಅಕ್ಟೋಬರ್ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರನ್ನು ಶುಕ್ರವಾರ ನಾರ್ಕೊಟಿಕ್ ಕ್ರೈಂ ಪೊಲೀಸರು ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ ಪೊಲೀಸರು, ಅ.9 ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಕಳೆದ ಆರು ದಿನಗಳಿಂದ ಆರೋಪಿಗಳು ನಾರ್ಕೊಟಿಕ್ ಪೊಲೀಸರ ವಶದಲ್ಲಿದ್ದರು. ಸೆಪ್ಟೆಂಬರ್ 19ರಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ …

Read More »

ಜಿಲ್ಲಾಧಿಕಾರಿ ಕಾಳಜಿಗೆ ಮನಸೋತು ಮಗುವಿಗೆ ಡಿಸಿ ಹೆಸರಿಟ್ಟ ದಂಪತಿ

ಬಳ್ಳಾರಿ: ಜನ್ಮವಿತ್ತ ಮಗುವಿಗೆ ತಮ್ಮ ಜಿಲ್ಲೆಯ ಡಿಸಿ ಹೆಸರನ್ನೇ ನಾಮಕರಣ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ನೆಲೆಸಿರುವ ದಂಪತಿ ತಮ್ಮ ಮಗುವಿಗೆ ಡಿಸಿ ಎಸ್.ಎಸ್.ನಕುಲ್ ಅವರ ಹೆಸರನ್ನಿಟ್ಟಿದ್ದಾರೆ. ಮಹಿಳೆಯ ತವರು ಮನೆ ಬಳ್ಳಾರಿಯಾಗಿದ್ದರಿಂದ ಕಳೆದ ಎರಡು ತಿಂಗಳ ಹಿಂದೆ ಹೆರಿಗೆಗೆಂದು ಬಳ್ಳಾರಿಗೆ ಬಂದಿದ್ದರು. ಈ ವೇಳೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈ ವೇಳೆ ಹೆರಿಗೆಯನ್ನು ಯಶಸ್ವಿಯಾಗಿಯೇ ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಾಡಿಸಲಾಗಿತ್ತು. ಅದೃಷ್ಟವಶಾತ್ ತಾಯಿಗೆ …

Read More »

ರಾಮನಗರ: ಹೇಗೇ ಸತ್ತರೂ ಕೊರೋನಾ ಸಾವೆಂದು ದಾಖಲಿಸಿ ಹಣ ಲೂಟಿ; ಜಿಲ್ಲಾಧಿಕಾರಿ ವಿರುದ್ಧ ಸಿಡಿದ ಜನ

ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)

ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 26.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13 ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / …

Read More »

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು ಚದುರಂಗದಾಟ

ಮುಳಬಾಗಿಲು: ಟೊಮೆಟೊಗೆ ಬೇಡಿಕೆ ಹೆಚ್ಚಿದ್ದು, ದರವೂ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ತಾಲ್ಲೂಕಿನ ಕಸಬಾ ಹೋಬಳಿ ಎನ್. ವಡ್ಡಹಳ್ಳಿ ಗ್ರಾಮದ ಆರ್‌ಸಿ ಉಪ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಶುಕ್ರವಾರ 15 ಕೆಜಿ ಬಾಕ್ಸ್‌ಗೆ ₹ 400 ರಿಂದ ₹ 450ಕ್ಕೆ ಏರಿಕೆಯಾಗಿದೆ. ಬುಧವಾರ, ಗುರುವಾರ ₹ 300 ರಿಂದ ₹ 400ಕ್ಕೆ ಮಾರಾಟವಾಗಿತ್ತು. ಕಳೆದ ವಾರ ₹ 850ಕ್ಕೆ ಮಾರಾಟವಾಗಿತ್ತು. ಶುಕ್ರವಾರ ಮಾರುಕಟ್ಟೆಗೆ 50 …

Read More »

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಅನ್ನದಾತರು

ಬೆಂಗಳೂರು, – ಅನ್ನದಾತರ ಆಕ್ರೋಶ ಬುಗಿಲೆದ್ದಿದೆ. ಎಪಿಎಂಸಿ, ಭೂ ಸುಧಾರಣೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು, ಕಾರ್ಮಿಕರು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕತರು ಇಂದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳ ಶಾಹಿಗಳ ಪರವಾಗಿವೆ. ರೈತರ ಪಾಲಿಗೆ ಕಂಟಕವಾಗಿದೆ ಎಂದು ರೈತ ಸಂಘಟನೆಗಳು ವಿವಿಧ …

Read More »

ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡ್ತೀನಿ ಅಂದಿದ್ರು ಗಾನ ಗಂಧರ್ವ

ದಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಅಂದರೆ ಅದೇನೋ ಪ್ರೀತಿ. ಮುಂದಿನ ಜನ್ಮದಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಅನೇಕ ಬಾರಿ ಹೇಳಿದ್ದರು. ಒಂದು ದಶಕಗಳ ಕಾಲ ಎದೆತುಂಬಿ ಹಾಡುವೆನು ಕಾರ್ಯಕ್ರಮವನ್ನು ನಡೆಸಿಕೊಂಡವುದರ ಜೊತೆಗೆ ಬೇರೆ ಭಾಷೆಗಳಲ್ಲಿ ಕೂಡ ಸಂಗೀತದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಜೊತೆಗೆ ತಾವೇ ತೀರ್ಪುಗಾರರಾಗಿ ಹತ್ತು ಹಲವು ಸಂಗೀತದ ಶೋಗಳಲ್ಲಿ ಕುಳಿತಿದ್ದರು. ಈ ವೇಳೆ ಪುಟಾಣಿ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಂಗೀತದ ಸರಿ-ತಪ್ಪುಗಳನ್ನು …

Read More »

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ.

ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …

Read More »

ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ.: ರಮೇಶ್ ಜಾರಕಿಹೊಳಿ

ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ …

Read More »