ನವದೆಹಲಿ : ಕೊರೋನಾ ಸೋಂಕಿನಿಂದ ಉಂಟಾಗುವ ಸಾವು ತಡೆಯುವಲ್ಲಿ ಅಥವಾ ಸಾಮಾನ್ಯ ಸೋಂಕು ತೀವ್ರ ಪ್ರಮಾಣಕ್ಕೆ ಹೋಗುವುದನ್ನು ನಿಲ್ಲಿಸುವಲ್ಲಿ ಪ್ಲಾಸ್ಮಾ ಥೆರಪಿಯಿಂದ ವಿಶೇಷ ಪ್ರಯೋಜನವೇನೂ ಆಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ದೇಶದ 39 ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯ ಪ್ರಯೋಜನದ ಬಗ್ಗೆ ಏ.22ರಿಂದ ಜು.12ರವರೆಗೆ ಐಸಿಎಂಆರ್ ತಂಡ ಅಧ್ಯಯನ ನಡೆಸಿತ್ತು. ಆಸ್ಪತ್ರೆಗೆ ದಾಖಲಾದ 464 ಮಂದಿ ಸಾಮಾನ್ಯ ಪ್ರಮಾಣದ …
Read More »ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ
ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ 8,071 ಕೋಟಿ ರು. ಅಂದಾಜು ಹಾನಿಯಾಗಿದ್ದು, ಎಸ್ಡಿಆರ್ಎಫ್ ನಿಯಮಗಳ ಅನ್ವಯ 628.7 ಕೋಟಿ ರು. ಅನುದಾನ ಮಾತ್ರ ಬರುತ್ತದೆ. ಇದು ಸಾಕಾಗುವುದಿಲ್ಲ. ಈ ಬಾರಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಅಲ್ಲದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ನೆರೆ ಹಾನಿ ನಿಯಂತ್ರಿಸಲು ಪ್ರವಾಹ ಮುನ್ಸೂಚನೆ ಹಾಗೂ ಪ್ರತಿಕ್ರಿಯೆಗಾಗಿ …
Read More »ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ
ಭೂತರಾಮನಹಟ್ಟಿ, ಹಿರೇಬಾಗೇವಾಡಿ ಎರಡು ಕಡೆ ವಿವಿ ಕಾರ್ಯಚಟುವಟಿಕೆ ಹೆಚ್ಚುವರಿ ಕಟ್ಟಡಕ್ಕಾಗಿ ಹಿರೇಬಾಗೇವಾಡಿಗೆ ಸ್ಥಳಾಂತರ ಅಭಿವೃದ್ದಿ ದೃಷ್ಠಿಯಿಂದ ಈ ನಿರ್ಧಾರ ಬೆಳಗಾವಿ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸದ್ಯ ಭೂತರಾಮನಹಟ್ಟಿಯಲ್ಲಿರುವ ವಿಶ್ವ ವಿದ್ಯಾಲಯ ಅರಣ್ಯ ಪ್ರದೇಶದ ಜಾಗದ ಅಧೀನದಲ್ಲಿರುವುದಿಂದ ಹೆಚ್ಚುವರಿ ಕಟ್ಟಡ, ಮತ್ತೀತರ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. …
Read More »ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು………….
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ದಾಖಲಿಸಿದ್ದಾರೆ. ಚಾಮರಾಜ ಪೇಟೆ ಪೊಲೀಸ್ ಠಾಣೆಯಲ್ಲಿ ಜಮೀರ್ ದೂರು ದಾಖಲಿಸಿದ್ದು, ಪೊಲೀಸರು ದೂರಿನ ಆಧಾರದ ಅನ್ವಯ ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಮಾಧ್ಯಮಗಳಲ್ಲಿ ಬಂದ ಸಂಬರಗಿ ಅವರ ಮಾತಿನ ವಿಡಿಯೋಗಳನ್ನು ತಮ್ಮ ದೂರಿನೊಂದಿಗೆ ಜಮೀರ್ ಸಾಕ್ಷಿಯಾಗಿ ನೀಡಿದ್ದಾರೆ. ಸಂಬರಗಿ ವಿರುದ್ಧ 100 ಕೋಟಿ ರೂ …
Read More »ಆಟಿಕೆಗಳಂತೆ ಕೊಚ್ಚಿ ಹೋಯ್ತು ಬೈಕುಗಳು –
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್ಮೆಂಟ್ಗಳು ಜಲಾವೃತವಾಗಿವೆ. ಜನರು ಹೊರ ಬರುವುದಕ್ಕೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಮಳೆಗೆ ಪೂರ್ತಿ ಜಲಾವೃತವಾಗಿದ್ದ ಹೊರಮಾವು ನಗರಕ್ಕೆ ರಾತ್ರಿ ಸುರಿದ ಮಳೆ ಜಲದಿಗ್ಬಂಧನ ಹಾಕಿದೆ. ಆರ್ಆರ್ ನಗರದಲ್ಲಿ ರಾಜಕಾಲುವೆ ಒಡೆದುಕೊಂಡು ಮನೆಗಳಿಗೆ ನೀರು ನುಗ್ಗಿದೆ. ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಚೊಕ್ಕಸಂದ್ರ, ಶಿವಾನಂದ ಸರ್ಕಲ್, ಪೀಣ್ಯ, ದಾಸರಹಳ್ಳಿ ಮತ್ತು …
Read More »T20: ಡೇವಿಡ್ ಮಾಲನ್ ನಂ.1 ಬ್ಯಾಟ್ಸ್ಮನ್
ದುಬಾೖ: ಇಂಗ್ಲೆಂಡಿನ ಡೇವಿಡ್ ಮಾಲನ್ ಟಿ20 ಕ್ರಿಕೆಟಿನ ನೂತನ ನಂಬರ್ ವನ್ ಬ್ಯಾಟ್ಸ್ಮನ್ ಆಗಿ ಮೂಡಿಬಂದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಮಿಂಚಿದ ಮಾಲನ್ 4 ಸ್ಥಾನ ಮೇಲೇರಿ ಮೊದಲ ಸಲ ಅಗ್ರಸ್ಥಾನದ ಗೌರವ ಸಂಪಾದಿಸಿದರು. ಕಳೆದ ನವೆಂಬರ್ನಲ್ಲಿ ನಂ.2 ಎನಿಸಿದ್ದು ಮಾಲನ್ ಅವರ ಈವರೆಗಿನ ಅತ್ಯುತ್ತಮ ರ್ಯಾಂಕಿಂಗ್ ಆಗಿತ್ತು. ಇದರಿಂದ ಪಾಕಿಸ್ಥಾನದ ಬಾಬರ್ ಆಜಂ ಅವರಿಗೆ ನಂ.1 ಸ್ಥಾನ ನಷ್ಟವಾಯಿತು. ಅವರೀಗ ದ್ವಿತೀಯ ಸ್ಥಾನಕ್ಕೆ ಇಳಿದಿದ್ದಾರೆ. ದ್ವಿತೀಯ ಸ್ಥಾನದಲ್ಲಿದ್ದ ಕೆ.ಎಲ್. ರಾಹುಲ್ …
Read More »ಗೆದ್ದು ನಂ.1 ಸ್ಥಾನ ಮರಳಿ ಪಡೆದ ಆಸೀಸ್
ಸೌತಾಂಪ್ಟನ್: ಇಂಗ್ಲೆಂಡ್ ಎದುರಿನ ಅಂತಿಮ ಟಿ20 ಪಂದ್ಯವನ್ನು 5 ವಿಕೆಟ್ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯ ತನ್ನ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿತು. ಜತೆಗೆ ನಂ.1 ಗೌರವವನ್ನೂ ಮರಳಿ ಸಂಪಾದಿಸಿತು. ಸತತ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡ ಬಳಿಕ ಇಂಗ್ಲೆಂಡ್ ಟಿ20 ತಂಡ ರ್ಯಾಂಕಿಂಗ್ನಲ್ಲಿ ಆಸ್ಟ್ರೇಲಿಯವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ನೆಗೆದಿತ್ತು. ಆದರೀಗ 3ನೇ ಪಂದ್ಯವನ್ನು ಜಯಿಸುವ ಮೂಲಕ ಕಾಂಗರೂ ಪಡೆ ಮತ್ತೆ ನಂ.1 ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಯಿತು. ಸರಣಿಯನ್ನು ಕ್ಲೀನ್ಸ್ವೀಪ್ …
Read More »2016ರ ಬಳಿಕ ಆರ್ಸಿಬಿ ತಂಡ ಸಮತೋಲಿತವಾಗಿದೆ: ವಿರಾಟ್ ಕೊಹ್ಲಿ
ದುಬೈ: ಐಪಿಎಲ್ 2016ರ ಬಳಿಕ ಪ್ರಸ್ತುತ ಬೆಂಗಳೂರು ತಂಡ ಅತ್ಯಂತ ಸಮತೋಲಿತ ತಂಡವಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಬೆಂಗಳೂರು ತಂಡ 2016ರ ಫೈನಲ್ ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು. ಈ ಬಾರಿ ಯುವ ಮತ್ತು ಅನುಭವಿ ಆಟಗಾರರ ಉತ್ತಮ ಸಂಯೋಜನೆ ಇದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೇಕಾದ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ವಿರಾಟ್ ಆರ್ಸಿಬಿ ಟಿವಿಗೆ ತಿಳಿಸಿದರು. ತಂಡದ ಯುವ …
Read More »ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ರೈತರು ಸದ್ಭಳಕೆ ಮಾಡಿಕೊಳ್ಳಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪ್ ಸೆಟ್ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ಆರ್ ಆರ್ ಸಂಖ್ಯೆಗಳನ್ನು ಪಡೆದು 50 ರೂ. ನೋಂದಣಿ ಶುಲ್ಕ ಪಾವತಿಸಿದ ರೈತರು ತಮ್ಮ ಅನುಕೂಲದ ಪ್ರಕಾರ ಸರ್ವಿಸ್ ವೈರ್ ಗಳ ಮೂಲಕ ವಿದ್ಯುತ್ …
Read More »ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು, ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ನಡುವೆ ಹೊಡೆದಾಟವಾಗಿದ್ದು, ತಮ್ಮ ಕೊಲೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ತಮ್ಮ ಸಲೀಂಪಾಷಾ (28)ಕೊಲೆಯಾಗಿದ್ದು, ಅಣ್ಣ ಅಪ್ಸರ್ಪಾಷಾ(32)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ-ತಮ್ಮಂದಿರಿಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆಗೆ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪ್ಸರ್ಪಾಷಾ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಸಲೀಂಪಾಷಾನ ಮೂಗು, ಬಾಯಿಯಲ್ಲಿ ರಕ್ತ ಬಂದಿದೆ. ಕೂಡಲೇ ಗಾಯಾಳುವನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ …
Read More »
Laxmi News 24×7