Breaking News

ರಾಜ್ಯ

I PL ಫೈನಲ್ ಮೇನಿಯಾ: ದುಬಾರಿಕಾರಿಗೆ ವಿಶೇಷ ಅಲಂಕಾರ ಮಾಡಿದ ಆರ್‌ಸಿಬಿ ಫ್ಯಾನ್ಸ್‌

ಮೈಸೂರು: ಐಪಿಎಲ್ ಫೈನಲ್ ಗೆಲ್ಲಲು ಪಂಜಾಬ್​ ಕಿಂಗ್ಸ್ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಸೆಣಸಲಿವೆ. ಅಂತಿಮ ಘಟ್ಟದಲ್ಲಿ ಬೆಂಗಳೂರು ತಂಡ ಗೆಲುವು ಸಾಧಿಸಲೆಂದು ಮೈಸೂರಿನ ಉದ್ಯಮಿಯೊಬ್ಬರು ತಮ್ಮ ದುಬಾರಿ ಬೆಲೆಯ ಕಾರಿಗೆ RCB ತಂಡದ ಆಟಗಾರರ ಪೋಸ್ಟರ್‌ಗಳನ್ನು ಹಾಕುವ ಮೂಲಕ ಗಮನ ಸೆಳೆದಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ RCB ತಂಡ ಪಂಜಾಬ್​ ಕಿಂಗ್ಸ್ ವಿರುದ್ಧ ಗೆಲ್ಲಲೆಂದು ಚಾಮುಂಡಿ ಬೆಟ್ಟಕ್ಕೆ ಹೋಗಿ ನಾಡಿನ …

Read More »

ಕಮಲ್ ಹಾಸನ್ ವಿವಾದಿತ ಹೇಳಿಕೆ: ಬೂಕರ್ ಪುರಸ್ಕೃತೆ ಬಾನು ಮುಷ್ತಾಕ್, ದೀಪಾ ಭಾಸ್ತಿ ಹೇಳುವುದೇನು?

ಬೆಂಗಳೂರು: ಕನ್ನಡಕ್ಕೆ 8 ಜ್ಞಾನ ಪೀಠ ಪ್ರಶಸ್ತಿ, ಒಂದು ಬೂಕರ್ ಪ್ರಶಸ್ತಿ ಸಿಕ್ಕಿದೆ. ಅದೇ ಅದಕ್ಕೆ ಉತ್ತರ ಎಂದು ಕಮಲ್ ಹಾಸನ್ ಹೇಳಿಕೆಗೆ ಬಾನು ಮುಷ್ತಾಕ್ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೂಕರ್ ಪ್ರಶಸ್ತಿ ನನ್ನೊಬ್ಬಳಿಗೆ ಸಿಕ್ಕಿದ್ದು ಅಲ್ಲ, ಕನ್ನಡಕ್ಕೆ ಮತ್ತು ಕನ್ನಡದ ಜನತೆಗೆ ಸಿಕ್ಕಿದೆ. ಸರ್ಕಾರ ಅದಕ್ಕೆ ಅಭಿನಂದನೆ ಸಲ್ಲಿಸಿದೆ.‌ ಕಮಲ್ ಹಾಸನ್ ಹೇಳಿಕೆ ಸಂಬಂಧ ನಾನು ಉತ್ತರ ಹೇಳಿದ್ದೇನೆ. ಕನ್ನಡಕ್ಕೆ 8 ಜ್ಞಾನ ಪೀಠ ಪ್ರಶಸ್ತಿ, ಒಂದು …

Read More »

ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್ ಫೋರ್ಸ್ ರಚನೆ: ಆರ್‌.ಅಶೋಕ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಆಪಾದನೆ ಮಾಡಿ ಹಿಂದೂ ಕಾರ್ಯಕರ್ತರ …

Read More »

ಪುನೀತ್ ರಾಜ್​ಕುಮಾರ್ ಮೂರ್ತಿಗೆ ಪೂಜೆ ಸಲ್ಲಿಸಿ, ಆರ್‌ಸಿಬಿ ಗೆಲುವಿಗೆ ಪ್ರಾರ್ಥನೆ

ಹಾವೇರಿ: ದಿವಂಗತ ಪುನೀತ್ ರಾಜ್​ಕುಮಾರ್ ಅವರು ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆಲ್ಲುವ ಕನಸು ಕಂಡಿದ್ದರು. ನಮ್ಮ ತಂಡ ಫೈನಲ್ ಪ್ರವೇಶಿಸಬೇಕು, ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕುಳಿತು ನೋಡಬೇಕು ಎಂದು ಅವರು ಹೇಳುತ್ತಿದ್ದರು. ಆದರೆ, ಆ ಆಸೆ ಈಡೇರಲಿಲ್ಲ. ಇದೀಗ ಆರ್‌ಸಿಬಿ ಫೈನಲ್ ತಲುಪಿದೆ. ನಾಳೆ ಸಂಜೆ ನಡೆಯುವ ಪಂದ್ಯದಲ್ಲಿ ಎದುರಾಳಿ ಪಂಜಾಬ್ ಕಿಂಗ್ಸ್ ಜೊತೆ ಸೆಣಸಲಿದೆ. ಈ ಮಧ್ಯೆ ಹಾವೇರಿ ತಾಲೂಕು ಯಲಗಚ್ಚ ಗ್ರಾಮದಲ್ಲಿ ಪುನೀತ್​ ರಾಜ್​ಕುಮಾರ್ ದೇವಾಲಯ ಕಟ್ಟಿಸಿರುವ ಪ್ರಕಾಶ್ …

Read More »

ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆ

ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆ ಬೆಳಗಾವಿ ಸುಪ್ರಸಿದ್ಧ ಆಪ್ಟೆಕ್ ಇನ್ನೋವ್ಹೇಷನ್’ನ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ಮತ್ತು ಗೋವಾ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ. ಬೆಳಗಾವಿ ನಗರದ ಆಪ್ಟೆಕ್ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಾದ ಬೆಳಗಾವಿಯ ಕರುಣಾ ಭೂದರ್ಗಡೆ ಮತ್ತು ದಾಂಡೇಲಿಯ ನೇಹಾ ನಾಯರ್ ದಾಂಡೇಲಿ ಗೋವಾ ಮತ್ತು ಬೆಂಗಳೂರಿನ ವಿಮಾನ ನಿಲ್ದಾಣಗಳಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾಗಿದ್ದಾರೆ. …

Read More »

ಕ್ವೀಕ್ ಆಕ್ಷನ್…ಸಂತಿಬಸ್ತವಾಡಕ್ಕೆ ಸಿಐಡಿ ತಂಡ… ಧರ್ಮಗ್ರಂಥ ಸುಟ್ಟ ಪ್ರಕರಣದ ತನಿಖೆ ಆರಂಭ

ಕ್ವೀಕ್ ಆಕ್ಷನ್…ಸಂತಿಬಸ್ತವಾಡಕ್ಕೆ ಸಿಐಡಿ ತಂಡ… ಧರ್ಮಗ್ರಂಥ ಸುಟ್ಟ ಪ್ರಕರಣದ ತನಿಖೆ ಆರಂಭ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡದಿಂದ ಆರೋಪಿಗಳ ಪತ್ತೆಗೆ ತನಿಖೆ ಪ್ರಾರಂಭವಾಗಿದೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಸುಟ್ಟ ಪ್ರಕರಣ ಪೊಲೀಸರಿಗೆ ತಲೆ ದಂಡವಾಗಿ ಪರಿಣಮಿಸಿದೆ. ನಿನ್ನೆಯಷ್ಟೇ ಕಮಿಷ್ನರ್ ಭೂಷಣ್ ಬೋರಸೆ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಮಾಧ್ಯಮಗೋಷ್ಟಿ ನಡೆಸ ಮಾಹಿತಿಯನ್ನು ನೀಡಿದ್ದರು. ಇಂದು …

Read More »

ಅಧಿಕಾರಿಯ ಪ್ರತಿಕೃತಿಗೆ ಹಾಲು ತುಪ್ಪದ ಅಭಿಷೇಕ

ದೊಡ್ಡಬಳ್ಳಾಪುರ: ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ವಿನೂತನ ಪ್ರತಿಭಟನೆ ಮೂಲಕ ಗಮನ ಸೆಳೆದಿದೆ. ಕೆರೆಯ ದಂಡೆಯ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಯ ಪ್ರತಿಕೃತಿಗೆ ಹಾಲು, ತುಪ್ಪ ಮತ್ತು ಗಂಧದ ಅಭಿಷೇಕ ಮಾಡುವ ಮೂಲಕ ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಸುವಂತೆ ಪ್ರತಿಭಟನೆ ಮಾಡಿದರು ದೊಡ್ಡಬಳ್ಳಾಪುರ ತಾಲೂಕು ಚಿಕ್ಕತುಮಕೂರು ಕೆರೆಯ ದಂಡೆಯ ಮೇಲೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮವನ್ನು ಅರ್ಕಾವತಿ ನದಿ ಹೋರಾಟ ಸಮಿತಿ …

Read More »

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಿದ ಹಿಂದೂ ಸಂಘಟನೆಗಳ ನಿಯೋಗ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇತ್ತೀಚಿಗೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಸೇಡಿನಿಂದ ಆದದ್ದಲ್ಲ, ಮರಳು ಮಾಫಿಯಾದಿಂದ ಆಗಿರುವಂಥದ್ದು. ಸರ್ಕಾರ ಇದಕ್ಕೆ ಬಣ್ಣ ಕಟ್ಟುವ ಮೂಲಕ ಹಿಂದೂ ನಾಯಕರನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಹಿಂದೂ ಮುಖಂಡ ಹಾಗೂ ಶ್ರೀರಾಮಸೇನೆ ಸಂಘಟನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ನಿಯೋಗ ಇಂದು ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ …

Read More »

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ಪ್ರತಿಭಟನೆ ರಾಜಕೀಯಪ್ರೇರಿತ, ಆಲಮಟ್ಟಿ ಡ್ಯಾಂ ಎತ್ತರಿಸಲು ಮಹಾ ಸಿಎಂ ಆಕ್ಷೇಪ: ಡಿಕೆಶಿ

ಬೆಂಗಳೂರು: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್​​ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ. ಸರ್ಕಾರವನ್ನು ಬ್ಲ್ಯಾಕ್ ಮೇಲ್ ಮಾಡಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಕಾಲದಲ್ಲಿ ಈ ಕೆನಾಲ್ ಯೋಜನೆ ಮಂಜೂರಾತಿ ಆಗಿದೆ. ಯಡಿಯೂರಪ್ಪ ಅಧಿಕಾರದಲ್ಲಿ ಯೋಜನೆಗೆ ತಡೆ ನೀಡಿದ್ದರು. ಆಗ ಯೋಜನೆ ವೆಚ್ಚ 600 ಕೋಟಿ ರೂ ಇತ್ತು.‌ ಈಗ ಯೋಜನಾ ವೆಚ್ಚ ಸುಮಾರು 900 ಕೋಟಿ ರೂ‌.ನಿಂದ ಸಾವಿರ ಕೋಟಿಗೆ …

Read More »

ದಿನಾಂಕ 1-6-2025 ರಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ(ರಿ)ಬೆಂಗಳೂರು ರಾಜ್ಯಾದ್ಯಂತ ವಿವಿಧ ಬೇಡಿಕೆಗಳು ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ

ಘಟಪ್ರಭಾ:- ದಿನಾಂಕ 1-6-2025 ರಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ(ರಿ)ಬೆಂಗಳೂರು ರಾಜ್ಯಾದ್ಯಂತ ವಿವಿಧ ಬೇಡಿಕೆಗಳು ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡ ಹಿನ್ನಲೆ ಇಂದು ಘಟಪ್ರಭಾ ಪುರಸಭೆಯ ಪೌರಸೇವಾ ನೌಕರರು ಸೇರಿ ಅನಿರ್ದಿಷ್ಟಾವಧಿ ಮುಷ್ಕರದ ಹೋರಾಟಕ್ಕೆ ರವಿವಾರದಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ಗೋಕಾಕ ತಾಲೂಕ ಘಟಕದ ವತಿಯಿಂದ ಬೆಂಬಲ ಸೂಚಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿಲಾಯಿತು ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ …

Read More »