ಶಿವಮೊಗ್ಗ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಶಿವಮೊಗ್ಗ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಹೊಸನಗರದ ಸಾಗರ ರಸ್ತೆಯ ರಮಾನಂದ್ ಎಂಬವರ ಮನೆಯಲ್ಲಿ ಶುಕ್ರವಾರ ಮಧ್ಯಾಹ್ನ ಹಾವು ಪ್ರತ್ಯಕ್ಷವಾಗಿದ್ದು, ಮನೆಯ ಹೊರಗಡೆ ಇದ್ದ ನಾಯಿ ಹಾವನ್ನು ಕಂಡು ಬೊಗಳಲು ಆರಂಭಿಸಿದೆ. ಅಲ್ಲದೇ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳು ಸಹ ಹಾವನ್ನು ಕಂಡು ಹಾವು ಹಾವು ಎಂದು ಕೂಗಿದ್ದಾರೆ. ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ದೂರವಾಣಿ ಮೂಲಕ ವಿಷಯ …
Read More »ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್
ಮಂಗಳೂರು: ನಾಡಿನೆಲ್ಲೆಡೆ ನಾಗರಪಂಚಮಿ. ಆದರೆ ಈ ಕೊರೊನಾ ನಾಗರಪಂಚಮಿ ಆಚರಣೆಗೂ ಅಡ್ಡಿಯಾಗಿದೆ. ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ. ಇಂದು ನಡೆಯುತ್ತಿರುವ ನಾಗರಪಂಚಮಿ ಪೂಜೆಗೆ ಸಾರ್ವಜನಿಕರಿಗೆ ಅವಕಾಶ ನೀಡದಿರಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಪಾಡಲು ಕಷ್ಟಕರವಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಾಗರಪಂಚಮಿಗೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದರೆ ಈ ಬಾರಿ ಅರ್ಚಕರಿಂದ ಮಾತ್ರ …
Read More »ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್
ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ …
Read More »ಕೊರೊನಾ ಸಂಕಷ್ಟವೇ ಬಂಡವಾಳ- ಮಾಟಕ್ಕೆ ಪರಿಹಾರ ಮಾಡುತ್ತೇನೆಂದು ಪೂಜಾರಿ ವಂಚನೆ
ಹಾಸನ: ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಪೂಜಾರಿಗಳ ತಂಡ, ನಿಮಗೆ ಆಗದವರು ನಿಮ್ಮ ಜಮೀನಿನಲ್ಲಿ ಹಂದಿ ತಲೆ ಹೂತಿಟ್ಟು ಮಾಟ ಮಾಡಿಸಿದ್ದಾರೆ. ತಲೆಯನ್ನು ನಾವು ಹೊರ ತೆಗೆದು ಮಾಟದಿಂದ ಮುಕ್ತಿ ಕೊಡಿಸುತ್ತೇವೆ ಎಂದು ವಂಚಿಸುತ್ತಿದೆ. ಜಿಲ್ಲೆಯ ಗಾಣಿಗರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ತಂಡವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದಾರೆ. ದೇವರ ವಿಗ್ರಹದೊಂದಿಗೆ ಆಗಮಿಸಿದ ದಿಲೀಪ್, ತಾನೇ ತಂದಿರುವ ಹಂದಿ ತಲೆಯನ್ನು ಮೊದಲೇ ಹೂತಿಟ್ಟು, ನಂತರ ಅದೇ ಜಾಗದಲ್ಲಿ ಗುಂಡಿ ತೆಗೆಸಿ …
Read More »50 ಜನ ರೋಗಿಗಳ ಶವಗಳನ್ನು ಹೈದರಾಬಾದ್ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ.
ಹೈದರಾಬಾದ್: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ 50 ಜನ ರೋಗಿಗಳ ಶವಗಳನ್ನು ಹೈದರಾಬಾದ್ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ. ಸರ್ಕಾರದ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರ್ರಗಡ್ಡ ಶವಾಗಾರದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ. ದೇಶಾದ್ಯಂತ ವ್ಯಾಪಿ ಭಾರೀ ಖಂಡನೆ ವ್ಯಕ್ತವಾಗಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಕುರಿತು ಸ್ಪಷ್ಟನೆ ನೀಡಿರುವ ತೆಲಂಗಾಣ ಆರೋಗ್ಯ ಇಲಾಖೆ, ಈ ಮೃತ ದೇಹಗಳು ಒಂದೇ ದಿನ ಸಾವನ್ನಪ್ಪಿದವರದ್ದಲ್ಲ. ಕಳೆದ …
Read More »ಕೆಎಂಸಿಯಲ್ಲಿ ಕೊರೊನಾ ಚಿಕಿತ್ಸೆ ನಡುವೆ ಪುತ್ತಿಗೆ ಶ್ರೀಗಳಿಂದ ಪ್ರತಿದಿನ ಪೂಜೆ
ಉಡುಪಿ: ಪುತ್ತಿಗೆ ಸ್ವಾಮೀಜಿಗೆ ಕೊರೊನಾ ಸೋಂಕು ಹರಡಿದ್ದು, ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಸ್ವಾಮೀಜಿ ವಿಶ್ರಾಂತಿಯ ಜೊತೆಗೆ ನಿರಂತರ ಪೂಜೆ ಪುನಸ್ಕಾರದಲ್ಲಿ ತೊಡಗಿದ್ದಾರೆ. ಅನುಷ್ಠಾನಗಳನ್ನು ಮಾಡುತ್ತಿದ್ದಾರೆ. ಆaಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೂ ನಿತ್ಯ ಜಪ ಅನುಷ್ಠಾನಗಳಲ್ಲಿ ಪುತ್ತಿಗೆ ಶ್ರೀಗಳು ತೊಡಗಿಸಿಕೊಂಡಿರುವುದು ಗಮನಸೆಳೆದಿದೆ. ಉಡುಪಿ ಮಾತ್ರವಲ್ಲ ಅಮೆರಿಕ ಸೇರಿದಂತೆ ಹಲವಾರು ದೇಶಗಳಲ್ಲಿ ತಮ್ಮ ಶಾಖಾಮಠಗಳನ್ನು ಹೊಂದಿರುವ ಸ್ವಾಮೀಜಿ ಈ ಬಾರಿ ಉಡುಪಿಯಲ್ಲೇ ಚಾತುರ್ಮಾಸ್ಯ ವೃತ ಕೈಗೊಂಡಿದ್ದರು.ಚಾತುರ್ಮಾಸ್ಯಕ್ಕೆ ಸಂಕಲ್ಪ ಮಾಡಿದ್ದ ಸಮಯದಲ್ಲಿ …
Read More »ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಪ್ರಾಣಬಿಟ್ಟ ಸರ್ಕಾರಿ ವೈದ್ಯ ಸಾವು
ಬೆಂಗಳೂರು: ಕೋವಿಡ್ 19 ವರದಿ ಇಲ್ಲದೆ ಮೂರು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿದ ಪರಿಣಾಮ ಸರ್ಕಾರಿ ವೈದರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು. ಮೃತ ದುರ್ದೈವಿಯನ್ನು ಡಾ. ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಕೋವಿಡ್ 19 ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅನಾರೋಗ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದವು. ಮಂಜುನಾಥ್ ಅವರು ರಾಮನಗರ ಜಿಲ್ಲೆಯಲ್ಲಿರುವ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ …
Read More »ಇಂದು ಮುಂದುವರೆದ ಕೊರೋನಾ ದಾಳಿ ಮತ್ತೆ 214 ಸೊಂಕಿತರ ಪತ್ತೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ …
Read More »ಬಸವ ಭೀಮ ಸೇನೆಯಿಂದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಸನ್ಮಾನ
ಬೆಳಗಾವಿ: ಬಸವ ಪಂಚಮಿ ಹಿನ್ನೆಲೆಯಲ್ಲಿ ಬಸವ ಭೀಮ ಸೇನೆ ಸಂಸ್ಥಾಪಕ ಆರ್.ಎಸ್.ದರ್ಗೆಅವರು ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಮಾನವ ಬಂಧುತ್ವ ವೇದಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿದರು. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ಜುಲೈ 27 ರವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ , ಕಳೆದ …
Read More »ಕೊರೋನಾ ಸೋಂಕಿನಿಂದ ಹೊರಬಂದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರು
ಬೆಂಗಳೂರು,ಜು.23- ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬೆಂಗಳೂರು ನಗರದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ. ಕೊರೊನಾ ವಾರಿಯರ್ಸ್ಗಳಾಗಿ ವಿವಿಧ ಸ್ಥಳಗಳಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಸೋಂಕು ತಗುಲಿತ್ತು. ತಕ್ಷಣ ಇವರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದೀಗ ಗುಣಮುಖರಾದ 109 ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸಿ, ಸಾಮಾಜಿಕ …
Read More »
Laxmi News 24×7