Breaking News

ರಾಜ್ಯ

ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ

ಹೈದರಾಬಾದ್: ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನ ಭಕ್ತವತ್ಸಲ ನಗರದಲ್ಲಿ ನಡೆದಿದೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ 21 ವರ್ಷದ ಯುವತಿ, ಈ ವಿಡಿಯೋದಲ್ಲಿ ಕುತ್ತಿಗೆಗೆ ದುಪ್ಪಟ್ಟವನ್ನು ಸುತ್ತಿಕೊಂಡು ‘ಶಿವ ನನ್ನ ಜೊತೆ ಮಾತನಾಡು’ ಎಂದು ಮನವಿ ಮಾಡಿಕೊಂಡಿದ್ದಾಳೆ. ನಂತರ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಮನವಿಯ ವಿಡಿಯೋ ಸಾಮಾಜಿಕ …

Read More »

ಬಾಲಿವುಡ್ ಹಿರಿಯ ನಟಿ ರೇಖಾ ಅವರ ಸೆಕ್ಯುರಿಟಿ ಗಾರ್ಡ್ ಗೂ ಕೋವಿಡ್ ಸೋಂಕು

ಮುಂಬೈ, ಜುಲೈ.12- ಬಾಲಿವುಡ್ ಹಿರಿಯ ನಟಿ ರೇಖಾ ಅವರ ಸೆಕ್ಯುರಿಟಿ ಗಾರ್ಡ್ ಗೂ ಕೋವಿಡ್ ಸೋಂಕು ತಗುಲಿದೆ. ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ರೇಖಾ ನಿವಾಸದ ಹೊರಗೆ ಹಾಕಿರುವ ನೊಟೀಸ್ ಹಾಕಿ ಸ್ಥಳೀಯರ ಗಮನಕ್ಕೆ ತರಲಾಗಿದೆ. ರೇಖಾ ಅವರ ನಿವಾಸ ಸೇರಿದಂತೆ ಇಡೀ ಪ್ರದೇಶವನ್ನು ಸ್ಯಾನಿತೈಸ್ ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕಿ. ಅವರನ್ನು ಪರೀಕ್ಷೆ ಒಳಪಡಿಸಲು ಸೂಚಿಸಲಾಗಿದೆ ಎಂದು ಬಿಎಂಸಿ ತಿಳಿಸಿದೆ. ರೇಖಾ ಅವರ …

Read More »

KSRTC ಸಿಬ್ಬಂದಿಗೆ ವೇತನವನ್ನು ನೀಡುತ್ತೇವೆ: ಸಾರಿಗೆ ಸಚಿವ ಸವದಿ

ಚಿಕ್ಕೋಡಿ: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.ಪ್ರತಿ ತಿಂಗಳು …

Read More »

ತಾಯಿಯ ಸಾಲ ವಾಪಸ್ ಕೊಡದ್ದಕ್ಕೆ ಯುವಕನ ಕೊಲೆ-

ಕಲಬುರಗಿ: ಹಣಕಾಸಿನ ವಿಚಾರಕ್ಕೆ ಮೂವರು ಸ್ನೇಹಿತರು ಯುವಕನನ್ನು ಕೊಲೆ ಮಾಡಿದ್ದರು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಾರಫೈಲ್ ಬಡಾವಣೆ ನಿವಾಸಿಗಳಾದ ಸುನೀಲ್ ಅಲಿಯಾಸ್ ಸೋನು, ಶಿವಲಿಂಗ ಹುಲಿಮನಿ ಮತ್ತು ರಾಜು ಬಂಧಿತ ಆರೋಪಿಗಳು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಾರಫೈಲ್ ಬಡಾವಣೆ ನಿವಾಸಿ ವಿಶಾಲ್‍ನನ್ನ ಜೂನ್ 26 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೃತ ವಿಶಾಲ್ ಆರೋಪಿ ಸುನೀಲ್ ತಾಯಿ ಬಳಿ 3 ಲಕ್ಷ …

Read More »

ಬೆಳಗಾವಿ ಜಿಲ್ಲೆಯ ಕಡೆಯಿಂದಲೂ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.

ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು. ‌

Read More »

ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ: ಈರಣ್ಣಾ ಕಡಾಡಿ

ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.  ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …

Read More »

ಕೊರೊನಾದಿಂದ ಕೆಲಸ ಕಳ್ಕೊಂಡ ತಂದೆ- ಬಿರಿಯಾನಿ ಮಾರಲು ನಿಂತ ಮಗ

ಹುಬ್ಬಳ್ಳಿ: ಕೊರೊನಾ ಮಹಾಮಾರಿ ಅದೆಷ್ಟೋ ಜನರ ಉದ್ಯೋಗ ಕಸಿದುಕೊಂಡು ಮೂಲೆ ಸೇರುವಂತೆ ಮಾಡಿದೆ. ಅಲ್ಲದೇ ಅನೇಕರು ಬೇರೆ ಉದ್ಯೋಗ ಮಾಡಲಾಗದೆ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಲೇಜಿಗೆ ಹೋಗಿ ವ್ಯಾಸಂಗ ಮಾಡಬೇಕಿದ್ದ ವಿದ್ಯಾರ್ಥಿಗಳಿಬ್ಬರು ಬಿರಿಯಾನಿ ಮಾರುವ ಮೂಲಕ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದಾರೆ. ಚೇತನ ಹಳ್ಳಿಕೇರಿ ತಂದೆ ಗ್ಯಾರೇಜ್ ನಡೆಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಗ್ರಾಹಕರು ಕಡಿಮೆಯಾಗಿ ಗ್ಯಾರೇಜ್ ಮುಚ್ಚಿದ್ದಾರೆ. ಹೀಗಾಗಿ ಕುಟುಂಬ ನಿರ್ವಹಣೆಗಾಗಿ ಚೇತನ ತನ್ನ …

Read More »

ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು,

ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ದೃಡಪಟ್ಟಿತ್ತು. ಗುರುವಾರ ಬೆಳಗ್ಗೆ ಓಪೆಕ್ ಆಸ್ಪತ್ರೆಯ ಐಸೊಲೇಶನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಈತ ಹೈಪರ್ ಟೆನ್ಶನ್, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇಂದು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಕೋವಿಡ್-19 ನಿಯಮಾನುಸಾರ ಅಂತ್ಯಕ್ರಿಯೆ …

Read More »

ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ. ದೂಧ್‌ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. …

Read More »