ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ದೇಶದಲ್ಲೇ 73ನೇ ರ್ಯಾಂಕ್ ಪಡೆದಿದ್ದು, ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. ನವ ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಇಂದು 2020ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್ಯಾಂಕಿಂಗ್ (ಎನ್ಐಆರ್ಎಫ್) ಬಿಡುಗಡೆಗೊಳಿಸಿದ್ದು, 1.85 ಅಂಕ ವೃದ್ಧಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು 73ನೇ ರ್ಯಾಂಕ್ ಪಡೆದು, ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಮೂರನೇ ಸ್ಥಾನ ಪಡೆದಿದೆ. …
Read More »ಪರೀಕ್ಷೆ ನಡೆಸಿದಾಗ ಕಳ್ಳಾಟವಾಡುತ್ತಾ ಕೊರೊನಾ?
ಬೆಂಗಳೂರು: ಸಂಪರ್ಕಿತರನ್ನು ಕೂಡಲೇ ಪರೀಕ್ಷಿಸಿದರೆ ಪಕ್ಕಾ ರಿಸಲ್ಟ್ ಗೊತ್ತೇ ಆಗಲ್ಲವಂತೆ. ಸಂಪರ್ಕಿತರನ್ನು ಪರೀಕ್ಷೆ ನಡೆಸಿದರೆ ನೆಗೆಟಿವ್ ಬರುವ ಸಾಧ್ಯತೆಯೇ ಹೆಚ್ಚು ಎಂದು ಕೊರೊನಾ ಸೋಂಕು ಪರೀಕ್ಷೆ ಸಂಬಂಧ ಹೊಸ ಅಧ್ಯಯನ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಯಲಾಗಿದೆ. ತಕ್ಷಣ ಪರೀಕ್ಷೆ ಮಾಡಿದರೆ ನೆಗೆಟಿವ್ ಬರುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಇನ್ನಷ್ಟು ಅನಾಹುತ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅನ್ನಲ್ಸ್ ಆಫ್ ಇಂಟರ್ನಲ್ ಮೆಡಿಸನ್ ಜನರಲ್ನಲ್ಲಿ ಸಂಶೋಧನಾ ವರದಿಯಲ್ಲಿ …
Read More »ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್ನ ಮಹಿಳಾ ಉದ್ಯೋಗಿಗೆ ಕೊರೊನಾ…..
ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಹರಡಿ ಆತಂಕವನ್ನು ಹೆಚ್ಚಿಸಿದೆ. ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ಅದರಲ್ಲೂ ಮಹಿಳೆ ಪ್ರಯಾಣದ ಹಿನ್ನೆಲೆ ಬೆಂಗಳೂರಿನ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸೋಂಕಿತ ಮಹಿಳೆಯು ಶಿವಾಜಿನಗರದ ನಿವಾಸಿಯಾಗಿದ್ದು ಕೊರೊನಾ ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಿಸಿಕೊಂಡಿದ್ದರು. ಸದ್ಯ ರಿಪೋರ್ಟ್ ಬಂದಿದ್ದು, ಸೋಂಕು ತಗುಲಿರುವುದು …
Read More »ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ……
ವಿಜಯಪುರ: ಕೊರೊನಾ ಪಾಸಿಟಿವ್ ಪೀಡಿತ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ, ಇಂಡಿ ಪಟ್ಟಣಗಳಲ್ಲಿ ಓಡಾಟ ಮಾಡಿ ಆತಂಕ ಮೂಡಿಸಿದ್ದಾನೆ. ಜಿಲ್ಲೆಯ ಇಂಡಿಯಿಂದ ಬೈಕಿನಲ್ಲಿ ಸಹೋದರನ ಜೊತೆಗೆ ಲಚ್ಯಾಣ ಗ್ರಾಮಕ್ಕೂ ತೆರಳಿರುವ ವ್ಯಕ್ತಿ ಬುಧವಾರ ದಿಢೀರನೆ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಈತ ಕಲಬುರಗಿ ಜಿಲ್ಲೆಯಲ್ಲಿ 14 ದಿನಗಳ ಕಾಲ ಇನಸ್ಟಿಟ್ಯೂಷನಲ್ ಕ್ವಾರಂಟೈನ್ ಮುಗಿಸಿದ್ದಾನೆ. ಮೇ 16 ರಂದು ಮುಂಬೈನಿಂದ ಪತ್ನಿ ತವರೂರಿಗೆ ತೆರಳಿದ್ದ ವೇಳೆ ಕ್ವಾರಂಟೈನ್ ಗೆ ಒಳಗಾಗಿದ್ದ ಈತ …
Read More »ನಾವು ನಮ್ಮ ಪ್ರಾಣ ಕೊಟ್ಟೆವು ಆದ್ರೆ ನಮ್ಮ ಹಕ್ಕು ಬಿಡಲಾರೆ ವು………
ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …
Read More »14ನೇ ಮಹಡಿಯಿಂದ ಬಿದ್ದು ಸುಶಾಂತ್ ಸಿಂಗ್ ರಜಪೂತ ಮಾಜಿ ಮ್ಯಾನೇಜರ್ ಸಾವು
ಮುಂಬೈ: 14ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಿಶಾ ಸಲಿಯನ್ ಸಾವನ್ನಪ್ಪಿದ ಯುವತಿ. ಬಾಲಿವುಡ್ ಸೆಲೆಬ್ರಿಟಿಗಳಾದ ಸುಶಾಂತ್ ಸಿಂಗ್ ರಜಪೂತ್, ಭಾರತಿ, ವರುಣ್ ಶರ್ಮಾ ಸೇರಿದಂತೆ ಹಲವರ ಮ್ಯಾನೇಜರ್ ಆಗಿ ದಿಶಾ ಕೆಲಸ ಮಾಡಿಕೊಂಡಿದ್ದರು. ಸೋಮವಾರ ರಾತ್ರಿ ಕಟ್ಟಡ ಮೇಲಿಂದ ಬಿದ್ದಿರೋ ದಿಶಾರನ್ನು ಕೂಡಲೇ ಸ್ಥಳೀಯರು ಬೋರಿವಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ದಿಶಾ ಸಾವನ್ನಪ್ಪಿರೋದನ್ನ ಖಚಿತ ಪಡಿಸಿದ್ದಾರೆ. ದಿಶಾ ತನ್ನ ಗೆಳೆಯನ ಜೊತೆ ಫ್ಲ್ಯಾಟ್ …
Read More »3 ತಿಂಗಳಾದ್ರೂ ಬಾರದ 3 ಸಾವಿರ ಪ್ರೋತ್ಸಾಹ ಧನ- ಆಶಾ ಕಾರ್ಯಕರ್ತೆಯರು ಆಕ್ರೋಶ…..
ಕಲಬುರಗಿ/ಚಿತ್ರದುರ್ಗ: ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವ ಪಣಕಿಟ್ಟು ಸರ್ಕಾರ ನಿರ್ವಹಿಸಿದ ಕೆಲಸ ಮಾಡಿದ್ದಾರೆ. ಹೀಗಿದ್ದರು ಸಹ ರಾಜ್ಯ ಸರ್ಕಾರ ಘೋಷಿಸಿದ್ದ ಮೂರು ಸಾವಿರ ರೂಪಾಯಿ ಪ್ರೋತ್ಸಾಹ ಹಣ ಮಾತ್ರ ನೀಡಿಲ್ಲ ಎಂದು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು 44-45 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪಮಾನ ಇದ್ದರೂ ಮನೆ ಮನೆಗೆ ಹೋಗಿ ಸರ್ವೇ ಮಾಡಿದ್ದೆವೆ. ಮನೆಯಲ್ಲಿದವರಿಗೇ ಕ್ವಾರಂಟೈನ್ ಹಾಗೂ ಪಾಸಿಟಿವ್ ಬಂದವರನ್ನು ಆಸ್ಪತ್ರೆಗೆ ಸಾಗಿಸುವ …
Read More »ತಮಿಳುನಾಡಿನಲ್ಲಿ ಡಿಎಂಕೆ ಶಾಸಕನನ್ನೇ ಬಲಿ ಪಡೆದ ಕಿಲ್ಲರ್ ಕೊರೊನಾ.!
ಚೆನ್ನೈ, ಜೂ.10- ಡೆಡ್ಲಿ ಕೊರೊನಾ ಸೋಂಕಿಗೆ ಡಿಎಂಕೆ ಮುಖಂಡ ಮತ್ತು ಶಾಸಕ ಜೆ. ಅನ್ಬಳಗನ್(62) ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟರು. ಮಧುಮೇಹ, ಅಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡ ಸಮಸ್ಯೆಗಳಿಂದ ಬಳಸುತ್ತಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ತಗುಲಿದ …
Read More »ಮಹಾರಾಷ್ಟ್ರ ಕಂಟಕದಿಂದ ಯಾದಗಿರಿ ಜಿಲ್ಲೆಯ ಜನತೆ ತತ್ತರ……..
ಯಾದಗಿರಿ: ಮಹಾರಾಷ್ಟ್ರ ಕಂಟಕದಿಂದ ಜಿಲ್ಲೆಯ ಜನತೆ ತತ್ತರಿಸಿ ಹೋಗಿದ್ದು, ಈಗ ಮತ್ತೊಂದು ಆತಂಕ ಎದುರಾಗಿದೆ. ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಲ್ಲಿದ್ದವರನ್ನು ಮನೆಗೆ ಕಳುಹಿಸಿದ ಪರಿಣಾಮ ಯಾದಗಿರಿ ನಗರದಲ್ಲಿ ಕೊರೊನಾ ಭೀತಿ ಶುರುವಾಗಿದೆ. ಕೊರೊನಾ ಪರೀಕ್ಷೆಯ ವರದಿ ಬರುವ ಮುನ್ನವೇ ಮಹಾರಾಷ್ಟ್ರದಿಂದ ಬಂದವರನ್ನು ಮನೆಗೆ ಕಳುಹಿಸಲಾಗಿದೆ. ನಗರದ ವಿವಿಧ ವಾರ್ಡ್ ಗಳಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ 18 ಜನರಿಗೆ, ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕು ಪತ್ತೆಯಾದ 18 ಜನ …
Read More »SSLC ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದು ಪಡಿಸಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ…….
ಮಡಿಕೇರಿ: ಕೆಲ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಎಲ್ಲ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ …
Read More »
Laxmi News 24×7