ಬೆಳಗಾವಿ – ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿಆರ್ ಪಿಎಫ್ ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ ಮಾಸ್ಕ್ ಧರಿಸಿರಲಿಲ್ಲ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಮಾರಾಮಾರಿ ಹಂತಕ್ಕೆ ಹೋಗಿತ್ತು. ನಂತರ ಯೋಧನನ್ನು ಅಮಾನವೀಯವಾಗಿ ಠಾಣೆಗೆ ಕರೆದೊಯ್ದು ಹಿಂಸಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಯೋಧನಿಗೆ ಕೊಳ ತೊಡಿಸಿ ಕೂಡ್ರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ …
Read More »ಬೆಳಗಾವಿ ಯೋಧನಿಗೆ ಬಾಸುಂಡೆ ಬರೋ ಹಾಗೆ ಥಳಿತ
ಬೆಳಗಾವಿ: ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ್ ಅವರಿಗೆ ಬಾಸುಂಡೆ ಬರುವ ಹಾಗೆ ಸದಲಗಾ ಪೊಲೀಸರು ಥಳಿಸಿರುವ ಆರೋಪಗಳು ಕೇಳಿ ಬಂದಿದೆ. ಯೋಧನಿಗೆ ಬಾಸುಂಡೆ ಬಂದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಪೊಲೀಸರ ನಡೆಗೆ ಕಿಡಿಕಾರಿದ್ದಾರೆ. ಏಪ್ರಿಲ್ 23ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಮತ್ತು ಯೋಧನ ನಡುವೆ ಗಲಾಟೆ ನಡೆದಿತ್ತು. ತದನಂತರ ಪೊಲೀಸರು ಯೋಧನನ್ನು ಠಾಣೆಗೆ ಕರೆದುಕೊಂಡು ಕೈಗೆ ಕೋಳ ಹಾಕಿದ್ದರು. …
Read More »ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆ
ರಾಜ್ಯದಲ್ಲಿ ಇಂದು 9 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇವರಲ್ಲಿ 8 ಜನರು ಕಲಬುರ್ಗಿಯವರು. ಬೆಳಗಾವಿಯಲ್ಲಿ ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಬಾಲಕನಿಗೆ ರೋಗಿ ನಂಬರ್ 293 ರಿಂದ ಸೋಂಕು ತಗುಲಿದೆ. ಕಲಬುರ್ಗಿಯಲ್ಲಿ ಸೋಂಕಿತರ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕಲಬುರ್ಗಿಯಲ್ಲಿ 4, 12 ಹಾಗೂ 17 ವರ್ಷದ ಬಾಲಕಿಯರಿಗೆ ಸೋಂಕು ದೃಢಪಟ್ಟಿದೆ. ಹುಕ್ಕೇರಿ ತಾಲೂಕು ಎಂದರೆ ಈಗಾಗಲೆ ಪತ್ತೆಯಾಗಿರುವ ಸಂಕೇಶ್ವರ ಪಟ್ಟಣದ ಬಾಲಕನಿರಬಹುದು ಎಂದು …
Read More »ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ. ಮಂಗಳೂರಿನ ಟೌನ್ ಹಾಲ್ ಬಳಿಯಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ 37 ಬಸ್ಗಳಲ್ಲಿ 1,100 ಜನ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಕಳುಸಿಕೊಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಯಿಂದ ನೂರಾರು ಕಾರ್ಮಿಕರು ಏಕಾಏಕಿ ಮಂಗಳೂರಿಗೆ ಆಗಮಿಸಿದ್ದರು. ಟೌನ್ ಹಾಲ್ನಲ್ಲಿ ಜಮಾಯಿಸಿದ್ದ ಅವರನ್ನು ಅವರ …
Read More »ಶಿವಮೊಗ್ಗ:ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ: ಕೊರೊನಾ ಲಾಕ್ಡೌನ್ನಿಂದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ರೋಗಿಗಳಿಗೆ ರಕ್ತದಾನ ಮಾಡುವವರ ಕೊರತೆ ಸಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇವಲ ಪ್ರಾರ್ಥನೆ, ಆರಾಧನೆ, ಪೂಜೆ ಪುನಸ್ಕಾರಕ್ಕೆ ಸೀಮಿತವಾಗಿದ್ದ ಪುರೋಹಿತರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಎಲ್ಲಾ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಶೇಖರಣೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಇರುವ ರೋಗಿಗಳಿಗೆ ರಕ್ತ ಪೂರೈಕೆ ಮಾಡಲು ಕಷ್ಟವಾಗುತ್ತಿದೆ. ಕೊರೊನಾ ಸಮಸ್ಯೆ ಹೊರತುಪಡಿಸಿ, ಇತರೆ ರೋಗಿಗಳಿಗೆ ರಕ್ತದ …
Read More »ಸಾಸ್ತಾನ ಟೋಲ್ ಸಿಬ್ಬಂದಿ ಜೊತೆ ಮಂಡ್ಯದ ಸೋಂಕಿತ ಮಾತು – 6 ಮಂದಿ ಕ್ವಾರಂಟೈನ್
ಉಡುಪಿ: ಮುಂಬೈನಿಂದ ಹೊರಟ ಖರ್ಜೂರ ಸಾಗಿಸುವ ಲಾರಿ ಹತ್ತಿ ಮಂಡ್ಯಕ್ಕೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಲಾರಿ ಪಾಸ್ ಆಗಿದ್ದ ಟೋಲ್ ಗೇಟ್ನ ಆರು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಲಾರಿ ಮಹಾರಾಷ್ಟ್ರದಿಂದ ಕರ್ನಾಟಕ ಪ್ರವೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಯ ವಿಡಿಯೋ ಪತ್ತೆಯಾಗಿದೆ. ಲಾರಿ ಒಳಗಿದ್ದ ವ್ಯಕ್ತಿ ತೆಕ್ಕಟ್ಟೆ ಸಮೀಪದ ಶಿವಪ್ರಸಾದ್ ಪೆಟ್ರೋಲ್ ಪಂಪ್ ಬಳಿ ಇಳಿದು ಸ್ನಾನ ಮುಗಿಸಿದ್ದು, ನಂತರ ಅಲ್ಲೇ ತಿಂಡಿ ತಿಂದಿದ್ದಾರೆ. ಆಮೇಲೆ …
Read More »ಕೊರೊನಾ ಹೋರಾಟಕ್ಕಾಗಿ 18 ವರ್ಷಗಳ ನಂತ್ರ ಮತ್ತೆ ನರ್ಸ್ ಆದ ಮೇಯರ್
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೇಯರ್ 18 ವರ್ಷಗಳ ನಂತರ ಮತ್ತೆ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಮೇಯರ್ ಕಿಶೋರಿ ಪೆಡ್ನೇಕರ್ ಅವರು ಕೊರೊನಾ ವಿರುದ್ಧದ ಹೋರಾಟದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಈ ಮೂಲಕ ವೈದ್ಯಕೀಯ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕಿಶೋರಿ ಪೆಡ್ನೇಕರ್ ರಾಜಕೀಯಕ್ಕೆ ಬರುವ ಮೊದಲು ನರ್ಸ್ …
Read More »ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್………….
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ನಾಳೆಯಿಂದ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಅನುಮತಿ ಸಿಗಲಿದೆ. ಕ್ರಷರ್ ವ್ಯವಹಾರ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಸಬ್ರಿಜಿಸ್ಟ್ರಾರ್ ಚೇರಿಗೆ ಬರುವ ಮುನ್ನ ಕಚೇರಿಗೆ ಕರೆ ಮಾಡಿ ಅಧಿಕಾರಿಗಳಿಗೆ ಸಮಯ ಕೇಳಿ ಬರಬೇಕಾಗುತ್ತದೆ.ಕಚೇರಿಗೆ ಬರುವವವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಕಂದಾಯ ಸಚಿವ ಅಶೋಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಅಗತ್ಯ ಸೇವೆ ಜೊತೆ ಆರ್ಥಿಕ …
Read More »ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು
ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ …
Read More »ಭಾರತದಲ್ಲಿ ಲಾಕ್ಡೌನ್ 3.0 ಫಿಕ್ಸ್..! ವಿಸ್ತರಣೆಗೆ ಕೆಲವು ರಾಜ್ಯಗಳಿಂದ ಇಂಗಿತ …………
ನವದೆಹಲಿ-ಮುಂಬೈ, ಏ.24-ಲಾಕ್ಡೌನ್ ವಿಸ್ತರಣೆಯ ಎರಡನೇ ಹಂತದಲ್ಲೂ ಕೊರೊನಾ ಹಾವಳಿ ಕಳವಳಕಾರಿ ಮಟ್ಟದಲ್ಲಿ ಮುಂದುವರಿದಿದೆ. ಕೋವಿಡ್-19 ವೈರಸ್ನನ್ನು ನಿಯಂತ್ರಿಸಲು ಮತ್ತೆ ಲಾಕ್ಡೌನ್ ವಿಸ್ತರಿಸಬೇಕೆಂಬ ಇಂಗಿತವನ್ನು ಕೆಲವು ರಾಜ್ಯಗಳು ವ್ಯಕ್ತಪಡಿಸಿವೆ. ಆದರೆ ಕೆಲವು ರಾಜ್ಯಗಳು ವಿಸ್ತರಣೆ ಬಗ್ಗೆ ಭಿನ್ನ ನಿಲುವು ಹೊಂದಿವೆ. ಈ ಬೆಳವಣಿಗೆಯಿಂದಾಗಿ ಮೇ 3ರ ನಂತರವೂ ಲಾಕ್ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳು ಹೇಳುತ್ತಿವೆ. ಮಹಾರಾಷ್ಟ್ರ, ದೆಹಲಿ, ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಸೇರಿದಂತೆ …
Read More »
Laxmi News 24×7