ಬೆಂಗಳೂರು, ಏ.24- ಕೊರೊನಾ ಲಾಕ್ಡೌನ್ನಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿ ಬೊಕ್ಕಸ ಖಾಲಿಯಾಗಿದ್ದು, ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು ಆರಂಭಿಸಿದೆ. ಆರ್ಥಿಕ ವರ್ಷದಲ್ಲಿ ಸರ್ಕಾರ ಭಾರೀ ಆದಾಯ ಖೋತಾ ಕಂಡಿದ್ದು, ಇತ್ತ ಜಿಎಸ್ಟಿ ತೆರಿಗೆ ನಷ್ಟವೂ ದುಪ್ಪಟ್ಟು ಆಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಲ್ಪಸ್ವಲ್ಪ ಆರ್ಥಿಕ ನೆರವು ಬಂದಿದ್ದು, ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ. ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಸರಿದೂಗಿಸಲು ಲಾಕ್ ಡೌನ್ ಸಡಿಲಿಕೆ ಮಾಡುವ ಕೆಲವು …
Read More »ಇಬ್ಬರಲ್ಲಿ ಕೊರೊನಾ ಪತ್ತೆ, ಪಾದರಾಯನಪುರ ಪುಂಡರು ಬೆಂಗಳೂರಿಗೆ ಶಿಫ್ಟ್ :,,,,,,
ರಾಮನಗರ, ಏ.24- ಪಾದರಾಯನಪುರದಲ್ಲಿ ದಾಂಧಲೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ರಾಮನಗರ ಜೈಲಿನಲ್ಲಿದ್ದ 121 ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದ್ದು, ಉಳಿದ 119 ಮಂದಿ ಆರೋಪಿಗಳನ್ನು 14 ಬಸ್ಗಳ ಮೂಲಕ ಬೆಂಗಳೂರಿಗೆ ಕರೆತರಲಾಯಿತು. ಬಸ್ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.ಪಾದರಾಯನಪುರ ಗಲಭೆಯಲ್ಲಿ …
Read More »ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ಮೇಯರ್ ಗೆ ಅಪಮಾನ..!
ಬೆಂಗಳೂರು : ಲಾಕ್ಡೌನ್ ಹಿನ್ನೆಲೆಯಲ್ಲಿ ಅಳೆದು ತೂಗಿ ಮಂಡಿಸಲಾದ ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ಮೇಯರ್ ಅವರ ಭಾವಚಿತ್ರವೇ ನಾಪತ್ತೆ..! ಬಜೆಟ್ ಪುಸ್ತಕದಲ್ಲಿ ಮೇಯರ್ ಭಾವಚಿತ್ರ ಪ್ರಕಟಿಸುವುದು ಶಿಷ್ಟಾಚಾರ. ಆದರೆ, ಈ ಬಾರಿಯ ಪುಸ್ತಕದಲ್ಲಿ ಮೇಯರ್ ಗೌತಮ್ಕುಮಾರ್ ಅವರ ಭಾವಚಿತ್ರ ಇಲ್ಲದೆ ಇರುವುದರಿಂದ ಅವರಿಗೆ ಉದ್ದೇಶಪೂರ್ವಕವಾಗಿಯೇ ಅಪಮಾನ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಬಜೆಟ್ ಪುಸ್ತಕದಲ್ಲಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ …
Read More »ಪ್ರಶಸ್ತಿಗಳ ಸುರಿಮಳೆ, ಅಣ್ಣಾವ್ರ ಕುಟುಂಬದ ದಾಖಲೆ..!
ವರನಟ ಡಾ.ರಾಜ್ಕುಮಾರ್ ಅವರ ಜನ್ಮ ದಿನ ಏಪ್ರಿಲ್ 24ರಂದು. ರಾಜ್ ಮತ್ತು ಅವರ ಕುಟುಂಬದ ಸಾಧನೆ ಅನನ್ಯ. ಈ ಕುರಿತು ಒಂದು ಪಕ್ಷಿನೋಟ ಇಲ್ಲಿದೆ. ಬಾಲಿವುಡ್ ಅಥವಾ ಹಿಂದಿ ಚಿತ್ರರಂಗದಲ್ಲಿ ರಾಜ್ಕಪೂರ್ ಕುಟುಂಬ ದೊಡ್ಡ ಹೆಸರು ಮಾಡಿದೆ. ಈ ಕುಟುಂಬದ ಪೃಥ್ವಿರಾಜ್ ಕಪೂರ್, ರಾಜ್ಕಪೂರ್, ಶಮ್ಮಿ ಕಪೂರ್, ಶಶಿಕಪೂರ್ ಈ ನಾಲ್ವರು ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವುದು ಭಾರತೀಯ ಚಿತ್ರರಂಗದಲ್ಲೇ ಒಂದು ಅಪೂರ್ವ …
Read More »ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ …….
ಬೆಂಗಳೂರು, ಏ.24-ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆಯವರು ಸೇರಿದಂತೆ ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ …
Read More »ಯುವ ವಕೀಲರ ಬ್ಯಾಂಕ್ ಖಾಯತೆಗೆ ತಲಾ 5 ಸಾವಿರ ಹಣ ಜಮೆ
ಬೆಂಗಳೂರು : ಬೆಂಗಳೂರು ವಕೀಲರ ಸಂಘವು ಹಿರಿಯ ಹಾಗೂ ಇತರ ವಕೀಲರಿಂದ ದೇಣಿಗೆ ಸಂಗ್ರಹಿಸಿ, ಸಂಕಷ್ಟದಲ್ಲಿದ್ದ 368 ಅರ್ಹ ಯುವ ವಕೀಲರಿಗೆ ತಲಾ 5 ಸಾವಿರ ರೂ.ಗಳಂತೆ ಒಟ್ಟು 18,40,000 ರೂ. ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸಿದೆ. ಕೊರೋನಾದ ಸಂಕಷ್ಟದ ಕಾಲದಲ್ಲಿ ಹಿರಿಯ ಹಾಗೂ ಇತರೆ ವಕೀಲರಿಂದ 19,14,501 ರೂ.ಗಳನ್ನು ದೇಣಿಗೆ ಸಂಗ್ರಹಿಸಲಾಗಿತ್ತು ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ತಿಳಿಸಿದ್ದಾರೆ. ಏಪ್ರಿಲ್ 6 ರಂದು ಸಂಘದ …
Read More »ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಮನೆ,ಅಂಗಡಿಗಳ ಮುಂದೆ ಉಗುಳುವುದು, ಅನುಮಾನಾಸ್ಪದ
ಬೆಂಗಳೂರು: ಕೊರೊನಾ ಭೀತಿಯ ನಡುವೆಯೇ ಬೆಂಗಳೂರಿನ ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡಿ ಜನರಲ್ಲಿ ಮತ್ತಷ್ಟು ಭಯ ಹುಟ್ಟಿಸಿದ್ದಾನೆ. ಹೊಂಗಸಂದ್ರದ ಕೊರೊನಾ ಪೀಡಿತ ಪ್ರದೇಶ ವಿದ್ಯಾಜ್ಯೋತಿ ನಗರದ ಸುತ್ತಮುತ್ತ ವ್ಯಕ್ತಿ ಓಡಾಟ ನಡೆಸುತ್ತಿದ್ದಾನೆ. ಅಲ್ಲಿ ಈಗಾಗಲೇ 9 ಜನರಿಗೆ ಪಾಸಿಟಿವ್ ಬಂದಿದ್ದು, ಪರಿಣಾಮ ಹೊಂಗಸಂದ್ರ ಸಂಪೂರ್ಣ ಸೀಲ್ ಡೌನ್ ಆಗಿದೆ. ಇದರ ಮಧ್ಯೆ ಈತನ ವರ್ತನೆ ಕಂಡು ಹೊಂಸಂದ್ರದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಈ ಅನುಮಾನಸ್ಪದ ವ್ಯಕ್ತಿ ಉಗುಳುವುದು, ಮನೆಗಳ ಮುಂದೆ, …
Read More »ಟ್ರೆಂಡ್ ಆಯ್ತು ಪಿಲ್ಲೋ ಚಾಲೆಂಜ್ – ಬೆತ್ತಲ ಮೈಗೆ ದಿಂಬು ಕಟ್ಟಿ ಸೆಲೆಬ್ರಿಟಿ ಫೋಟೋ ಪೋಸ್ಟ್
ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರವಾದ ಹೊಸ ಹೊಸ ಚಾಲೆಂಜ್ಗಳು ಟ್ರೆಂಡ್ ಆಗುತ್ತಲೇ ಇರುತ್ತೆ. ಕೆಲವೊಂದು ಚಾಲೆಂಜ್ಗಳು ಸಿಕ್ಕಾಪಟ್ಟೆ ವೈರಲ್ ಆಗಿಬಿಡುತ್ತದೆ. ಆದೇ ಪಟ್ಟಿಗೆ ಈಗ ಪಿಲ್ಲೋ ಚಾಲೆಂಜ್ ಕೂಡ ಸೇರಿಕೊಂಡಿದೆ. ಸದ್ಯ ಲಾಕ್ಡೌನ್ ಅಲ್ಲಿ ‘ಬಿ ದ ರಿಯಲ್ ಮ್ಯಾನ್ ಚಾಲೆಂಜ್’, ‘ಡಾಲ್ಗೊನಾ ಕಾಫಿ ಚಾಲೆಂಜ್’, ‘ಹೋಂ ಗಾರ್ಡನ್ ಚ್ಯಾಲೆಂಜ್’ ಹೀಗೆ ಅನೇಕ ಚಾಲೆಂಜ್ಗಳು ಟ್ರೆಂಡ್ ಆಗುತ್ತಿದೆ. ಈ ಮಧ್ಯೆ ಸಿಕ್ಕಾಪಟ್ಟೆ ವೈರಲ್ ಆಗಿರೋದು ಪಿಲ್ಲೋ ಚಾಲೆಂಜ್. ಈ ಚಾಲೆಂಜ್ಗೆ …
Read More »ಮೇ 3ರವರೆಗೆ ಭಟ್ಕಳದಲ್ಲಿ ನಿಯಮ ಸಡಿಲಿಕೆ ಇಲ್ಲ: ಶಿವರಾಮ್ ಹೆಬ್ಬಾರ್
ಕಾರವಾರ: ಮೇ 3ರ ತನಕ ಭಟ್ಕಳದಲ್ಲಿ ಕಟ್ಟುನಿಟ್ಟಿನ ನಿಯಮ ಮುಂದುವರಿಯಲ್ಲಿದ್ದು, ರಂಜಾನ್ ಹಬ್ಬಕ್ಕೂ ಇದರಿಂದ ವಿನಾಯಿತಿ ಇಲ್ಲ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಇಂದು ಸಂಜೆ ಭಟ್ಕಳಕ್ಕೆ ಆಗಮಿಸಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದರು. ಭಟ್ಕಳದ ತಂಜೀಂ ಸಂಸ್ಥೆ ರಂಜಾನ್ ಹಬ್ಬಕ್ಕಾಗಿ ತಮಗೆ ದಿನದಲ್ಲಿ ಕನಿಷ್ಟ 2 ಗಂಟೆಯಾದರೂ ವಿನಾಯಿತಿ ನೀಡಬೇಕು ಎಂದು ಮನವಿ ಸಲ್ಲಿಸಿದ್ದರು. ಮನವಿಯನ್ನು ನಯವಾಗಿ ತಿರಸ್ಕರಿಸಿದ …
Read More »ಬೆಂಗ್ಳೂರಿಗೆ ಲಾಕ್ಡೌನ್ನಿಂದ ಸದ್ಯಕ್ಕಿಲ್ಲ ರಿಲೀಫ್………
ಬೆಂಗಳೂರು: ಸರ್ಕಾರ ಮಹಾಮಾರಿ ಕೊರೊನಾ ವೈರಸ್ ಅನ್ನು ಹೊಡೆದೊಡಿಸಲು ಲಾಕ್ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಈ ಲಾಕ್ಡೌನ್ ಇಡೀ ದೇಶಾದ್ಯಂತ 3ರವರೆಗೂ ಮುಂದುವರಿಯಲಿದೆ. ಆದರೆ ಸಿಲಿಕಾನ್ ಸಿಟಿಗೆ ಮಾತ್ರ ಲಾಕ್ಡೌನ್ನಿಂದ ಮೇ 3ರಂದು ರಿಲೀಫ್ ಇಲ್ಲ. ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ರಾಜಧಾನಿ ಬೆಂಗಳೂರಲ್ಲಿ ದಾಖಲಾಗಿವೆ. ಈ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಬಿಬಿಎಂಪಿ 19 ಕಂಟೈನ್ಮೆಂಟ್ ಝೋನ್ಗಳೆಂದು ವಿಂಗಡಿಸಿ, ಬಿಗಿ ಭದ್ರತೆ ಒದಗಿಸುತ್ತಿದೆ. ಆದರೆ ಈ ಕಂಟೈನ್ಮೆಂಟ್ ಝೋನ್ಗಳು ನಾರ್ಮಲ್ …
Read More »
Laxmi News 24×7