Breaking News

ರಾಜ್ಯ

ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. …

Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ. ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ …

Read More »

ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು : ಜಿಲ್ಲಾಧಿಕಾರಿ ಕೆ. ರಾಜೇಂದ್ರ

ಜಮಖಂಡಿ. ಏ. 23 : ಬಾಗಲಕೋಟೆ ಜಿಲ್ಲೆಯಲ್ಲಿ ಮೂರುದಿಂದ ಯಾವುದೆ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್‌ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತಿದ್ದೆವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು. ನಗರದ ಬಾರ್ಪೆಟ್‌ಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೋತೆ ಮಾತನಾಡಿದರು. ಜಿಲ್ಲೆ ರೆಡ್ ಜೋನ್‌ನಲ್ಲಿರುವದರಿಂದ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್, ಗುರುವಾರ ಮಾತ್ರ ಬೆಳಗಾವಿ ಜಿಲ್ಲೆಯಲ್ಲಿಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ

ಬೆಳಗಾವಿ: ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನ ಮಾಹಿತಿ ಪ್ರಕಾರ ಇಂದು ಒಂದೇ ದಿನಕ್ಕೆ 18 ಕೊರೊನಾ ಸೋಂಕು ತಗುಲಿದವರು ಪತ್ತೆಯಾಗಿದ್ದಾರೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ಮಾತ್ರ ಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ. ಇದರಿಂದ ಜಿಲ್ಲೆಯ ಜನರು ನಿಟ್ಟಿಸಿರು ಬಿಡುವಂತಾಗಿದೆ. ಹೆಚ್ಚು ಸೋಂಕಿತರು ಪತ್ತೆಯಾದ ಪಟ್ಟಿಯಲ್ಲಿ ಬೆಳಗಾವಿ ಮೂರನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಒಟ್ಟು 43 ಪ್ರಕರಣಗಳು ಪತ್ತೆಯಾಗಿದೆ. ಸೋಂಕಿತರಲ್ಲಿ ಮೂವರು ಡಿಶ್ಚಾರ್ಜ್ ಆಗಿದ್ದಾರೆ. ಒಬ್ಬರ ಮೃತ ಪಟ್ಟಿದ್ದಾರೆ. ಉಳಿದ …

Read More »

ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ.

ಬೆಳಗಾವಿ: ಬಸವ ಜಯಂತಿಯ ನಿಮಿತ್ತ ಮಾನವ ಬಂಧುತ್ವ ವೇದಿಕೆ ಅಂಗ ಸಂಸ್ಥೆಯಾದ ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಹ್ವಾನಿಸಿದೆ. “ಬಸವ ತತ್ವಗಳಿಂದ ಅಖಂಡ ಕರ್ನಾಟಕದ ಕಲ್ಯಾಣ ಸಾಧ್ಯ” ಎಂಬ ವಿಷಯದ ಕುರಿತು 8 ನಿಮಿಷಗಳ ವಿಡಿಯೋ ಗಳನ್ನು ಆಹ್ವಾನಿಸಲಾಗಿದೆ. ಅತ್ಯುತ್ತಮ ವಿಷಯ ಮಂಡನೆ ಒಳಗೊಂಡ ವಿಡಿಯೋ ಗಳನ್ನೂ ಆಯ್ಕೆ ಮಾಡಿ ಪ್ರಥಮ, ದ್ವೀತಿಯ, ತೃತೀಯ ಮತ್ತು ಸಮಾಧಾನಕರ ಶ್ರೇಣಿಯ 5 ಬಹುಮಾನ ಗಳನ್ನು …

Read More »

ಬೀದರ್:ಜಮಾತ್‍ಗೆ ಹೋಗಿ ಬಂದಿದ್ದ 3 ಮಂದಿ ಡಿಸ್ಚಾರ್ಜ್……

ಬೀದರ್: ಕಳೆದ 23 ದಿನಗಳಿಂದ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ ಜಮಾತ್‍ಗೆ ಹೋಗಿ ಬಂದಿದ್ದ ದುಬಲಗುಂಡಿ ಗ್ರಾಮದ ಇಬ್ಬರು ಹಾಗೂ ಹಳ್ಳಿಖೇಡ ಬಿ ಪಟ್ಟಣದ ಒಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, ಅಂಬುಲೆನ್ಸ್ ಮೂಲಕ ಅವರ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ …

Read More »

ದ.ಕನ್ನಡದಲ್ಲಿ ಕೊರೊನಾಗೆ ಎರಡನೇ ಬಲಿ- ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ. ಬಂಟ್ವಾಳದ ಕೊರೊನಾ ಸೋಂಕಿತ ಮಹಿಳೆ ಏಪ್ರಿಲ್ 19ರಂದು ಮೃತರಾಗಿದ್ದರು. ಈ ಬೆನ್ನಲ್ಲೇ ಕೊರೊನಾ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಕೂಡ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಸಾವು ಇದಾಗಿದೆ. 75 ವರ್ಷದ ವೃದ್ಧೆ …

Read More »

ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.

ಕೊಪ್ಪಳ: ಲಾಕ್‍ಡೌನ್ ಶುರುವಾದಗಿನಿಂದ ಪೊಲೀಸರು ಹಗಲಿರುಳು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೂ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ. ಪೊಲೀಸರು ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರೆ. ಈ ಮೂಲಕ ಕೊಪ್ಪಳ ನಗರ ಠಾಣಾ ಪೊಲೀಸರು ವಿಭಿನ್ನ ರೀತಿಯಲ್ಲಿ ಕೊರೊನಾ ವೈರಸ್ ಜಾಗೃತಿ ಮೂಡಿಸಿದ್ದಾರೆ. ಭಾರತ ಲಾಕ್‍ಡೌನ್ ನಡುವೆಯೂ ವಾಹನ …

Read More »

ಬುದ್ಧಿ ಹೇಳಿದ್ದಕ್ಕೆ ಪೊಲೀಸರ ಮೇಲೆ ಯೋಧನಿಂದ ಹಲ್ಲೆ

ಚಿಕ್ಕೋಡಿ: ಮಾಸ್ಕ್ ಹಾಕಿಕೊಳ್ಳಿ ಹಾಗೇ ಮನೆ ಬಿಟ್ಟು ಹೊರಗಡೆ ತಿರುಗಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರ ಮೇಲೆ ಸಿ.ಆರ್.ಪಿ.ಎಫ್ ಯೋಧ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಎಕ್ಸಂಬಾ ಪಟ್ಟಣದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಹೊರಗಡೆ ರಸ್ತೆಯಲ್ಲಿ ಮಾಸ್ಕ್ ಇಲ್ಲದೆ ತಿರಾಗುಡುತ್ತಿದ್ದ ಸಿ.ಆರ್.ಪಿ.ಎಫ್ ಯೋಧ ಸಚಿನ್ ಸಾವಂತ್ ನಿಗೆ ಪೊಲೀಸರು ಮನೆಯಿಂದ ಹೊರಗೆ ತಿರುಗಾಡಬೇಡಿ. ಮಾಸ್ಕ್ ಧರಿಸಬೇಕು ಎಂದು …

Read More »