Breaking News

ರಾಜ್ಯ

ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ರಮೇಶ್ ಜಾರಕಿಹೊಳಿ ಕೊಕ್ ಕೊಟ್ಟ B.S.Y

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರವು ಸೋಂಕು ಹರಡುವುದನ್ನು ತಡೆಯುವಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿಯೇ ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ …

Read More »

“SSLC-PUC ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ”

,ಸದ್ಯಕ್ಕೆ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಈ ಹಿಂದೆಯೇ ಸುರೇಶ್ ಕುಮಾರ್ 21 ದಿನಗಳ ನಂತರವಷ್ಟೇ ಪರೀಕ್ಷೆಗಳ ವಿಚಾರ ಚರ್ಚೆಯಾಗಲಿದೆ ಎಂದು ಹೇಳಿದ್ದರು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ಪರೀಕ್ಷೆಗಳ ಕುರಿತು ಹಲವು ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯ ಹಿರಿಯ …

Read More »

ರಾಜ್ಯದಲ್ಲಿ ಕೊರೊನಾ ವಿರುದ್ಧ ‘3ಟಿ’ ಅಸ್ತ್ರ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಫೈನಲ್ ವಾರ್ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ‘3ಟಿ’ ಅಸ್ತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟು ಜನರಿಗೆ 197 ಕೊರೊನಾ ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 16 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬಾಗಲಕೋಟೆಯಲ್ಲಿ 3 ಮಕ್ಕಳಲ್ಲೇ ಕೊರೊನಾ ಪತ್ತೆಯಾದರೆ, ಹೊಸ 3 ಪ್ರಕರಣಗಳಲ್ಲಿ ಮಕ್ಕಳಿಂದಲೇ …

Read More »

ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಪರಿಸ್ಥಿತಿ ನೋಡಿ ತೀರ್ಮಾನ

ಬೆಂಗಳೂರು: ಲಾಕ್‍ಡೌನ್ ಮಧ್ಯೆ ಎಣ್ಣೆ ಬೇಕು ಎಣ್ಣೆ ಅಂತ ಗಲ್ಲಿಗಲ್ಲಿಯ ಸಂದಿ ಮೂಲೆಯಲ್ಲಿ ಸುತ್ತಾಡುತ್ತಿದ್ದ ಕುಡುಕರಿಗೆ ಅಬಕಾರಿ ಇಲಾಖೆ ಬಿಗ್‍ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇತ್ತೀಚೆಗೆ ಮಾತನಾಡಿ, ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಏ.14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದರು. ಆದರೆ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ನಡೆಸಿದ್ದರು. ಇದಕ್ಕೆ ಬ್ರೇಕ್ ಹಾಕಲು ಅಬಕಾರಿ ಇಲಾಖೆ …

Read More »

ಧಾರವಾಡದಲ್ಲಿ ಏ. 30ರವರೆಗೆ ಕಡಲೆ ಖರೀದಿಗೆ ನೋಂದಣಿ – ಮೇ 12ರವರೆಗೆ ಖರೀದಿ ಪ್ರಕ್ರಿಯೆ

ಧಾರವಾಡ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಯೋಜನೆ ಅಡಿ ಜಿಲ್ಲೆಯ 13 ಖರೀದಿ ಕೇಂದ್ರಗಳಲ್ಲಿ ಏಪ್ರಿಲ್ 30ರವರೆಗೆ ರೈತರಿಂದ ನೋಂದಾಯಿಸಿ ಕೊಂಡು, ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕಡಲೆ ಖರೀದಿ ಕುರಿತು ರೈತ ಮುಖಂಡರು ಹಾಗೂ ಕೃಷಿ ಉತ್ಪನ್ನ ಮಾರಾಟ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಈ ವೇಳೆ …

Read More »

ಕೊರೊನಾ ಸೋಂಕು ದೃಢಪಟ್ಟ ಹುಬ್ಬಳ್ಳಿ ವ್ಯಾಪಾರಿಯ ಟ್ರಾವೆಲ್ ಹಿಸ್ಟರಿ

ಧಾರವಾಡ: ಇಂದು ಧಾರವಾಡ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿಯ ಕಮರಿಪೇಟೆ ಮುಲ್ಲಾ ಓಣಿಯ 27 ವರ್ಷದ ಈ ವ್ಯಕ್ತಿಯು ರಾಜ್ಯದ 194ನೇ ರೋಗಿಯಾಗಿರುವುದರಿಂದ ರೋಗಿ ನಂಬರ್ 194 ಎಂದು ಗುರುತಿಸಲಾಗುತ್ತಿದೆ. 1. ಈ ವ್ಯಕ್ತಿ ಮಾರ್ಚ್ 16ರಂದು ತನ್ನ ಸಹೋದರನೊಂದಿಗೆ ಹುಬ್ಬಳ್ಳಿಯಿಂದ ಹೈದರಾಬಾದಿಗೆ ವಿ.ಆರ್.ಎಲ್ ಬಸ್ ಮೂಲಕ ಪ್ರಯಾಣಿಸಿದ್ದಾರೆ. 2. ಮಾರ್ಚ್ 17 ರಂದು ಬೆಳಗ್ಗೆ 5.30ಕ್ಕೆ ಹೈದರಾಬಾದ್ ತಲುಪಿ. ಅಂದು ಬೆಳಗ್ಗೆ 8.45ಕ್ಕೆ ಹೈದರಾಬಾದಿನಿಂದ …

Read More »

1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ,ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು,44 ಜನರ ರಿಪೋರ್ಟ ನೆಗೆಟೀವ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ.144 ಜನರ ರಿಪೋರ್ಟ ನೆಗೆಟೀವ್ ಬಂದಿದೆ. ಇಂದು ಗುರುವಾರ ಒಂದೇ ದಿನ ಮೂರು ಜನರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 10 ಕ್ಕೇರಿದೆ ಬೆಳಗಾವಿ ಜಿಲ್ಲೆಯ ಒಟ್ಟು 47 ಕೊರೋನಾ ಶಂಕಿತರ ರಿಪೋರ್ಟ್ ಬರಬೇಕಾಗಿದೆ. ಹಿರೇಬಾಗೇವಾಡಿಯಲ್ಲಿ ನಾಲ್ಕು ಜನ,ಬೆಳಗುಂದಿ ಒಂದು,ಬೆಳಗಾವಿ …

Read More »

ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ

ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …

Read More »

ಇಂದು ನಡೆದ ಮಹತ್ವದ ಸಂಪುಟ ಸಭೆಯ ಹೈಲೈಟ್ಸ್ …”

ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು‌ ಸಲಹೆ ಮಾಡಿದ್ದು,ನಾಳೆ ಪ್ರಧಾನಿ‌ ಜೊತೆ ಚರ್ಚಿಸಿದ ಬಳಿಕ ಮುಂದಿನ‌ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ‌ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ‌ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಸಂದರ್ಭದಲ್ಲಿ …

Read More »

17 ದಿನದಲ್ಲಿ ಮೊದಲ 50, ಈಗ ಕೇವಲ 4 ದಿನದಲ್ಲಿ 47 ಮಂದಿಗೆ ಕರ್ನಾಟಕದಲ್ಲಿ ಸೋಂಕು

ಬೆಂಗಳೂರು: ಕೊರೊನಾ ಪೀಡಿತ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 11ನೇ ಸ್ಥಾನ ಸಿಕ್ಕಿರಬಹುದು. ಆದರೆ ಲಾಕ್‍ಡೌನ್ ಮಧ್ಯೆ ಕೊರೊನಾ ಪೀಡಿತರ ಸಂಖ್ಯೆ ದಿಢೀರ್ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದ್ದು ಮಾರ್ಚ್ 8 ರಂದು. ಖಾಸಗಿ ಕಂಪನಿಯ ಟೆಕ್ಕಿಗೆ ಕೊರೊನಾ ಬಂದಿತ್ತು. ಇದಾದ 17 ದಿನದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50ಕ್ಕೆ ಏರಿಕೆ ಆಗಿತ್ತು. ಮಾರ್ಚ್ 31ಕ್ಕೆ 100ನೇ ಪ್ರಕರಣ ಬಂದಿತ್ತು. ಅಂದರೆ ಮಾರ್ಚ್ 25 …

Read More »