Breaking News

ರಾಜ್ಯ

ಕೊರೊನಾ ಭಯ : ಹಾಸ್ಟೆಲ್-ಪಿಜಿ ಬಿಟ್ಟು ಮನೆಗಳಿಗೆ ವಾಪಸಾಗುವಂತೆ ಸೂಚನೆ.

ಬೆಂಗಳೂರು, ಮಾ.17- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಮತ್ತು ಪಿಜಿಯಲ್ಲಿರುವವರು ತಮ್ಮ ಮನೆಗಳಿಗೆ ವಾಪಸಾಗುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಹೊರ ಊರಿನಿಂದ ಆಗಮಿಸಿ ನಗರದ ಹಾಸ್ಟೆಲ್ ಮತ್ತು ಪಿಜಿಯಲ್ಲಿ ತಂಗಿರುವವರು ಕೂಡಲೇ ತಮ್ಮ ಊರುಗಳಿಗೆ ಹಿಂದಿರುಗುವಂತೆ ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಊರಿಗೆ ತೆರಳಲು ಸಾಧ್ಯವಾಗದೆ ಹಾಸ್ಟೆಲ್‍ನಲ್ಲೇ ತಂಗಿರುವ ವಿದ್ಯಾರ್ಥಿಗಳು ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಅನಿಲ್‍ಕುಮಾರ್ …

Read More »

ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ.

ಹಾವೇರಿ: ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಮಾದೇವಪ್ಪ ಒಡೇನಪುರ ಅವರು ಒಂದು ಎಕರೆ ಇಪ್ಪತ್ತು ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದ್ದಾರೆ. ಮೆಕ್ಕೆಜೋಳದ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದ್ದರಿಂದ ರೈತ ಈ ರೀತಿ ಮಾಡಿದ್ದಾರೆ. ಒಂದು ಕ್ವಿಂಟಾಲ್ ಮೆಕ್ಕೆಜೋಳದ ಬೆಲೆ ಕೇವಲ ಒಂದು ಸಾವಿರ …

Read More »

ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೊಂಕು ಹರಡದಂತೆ ತಡೆಯಲು ಜಿಲ್ಲಾಡಳಿತ ಮುಂಜಾಗೃತವಾಗಿ ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯ ಎಲ್ಲ ಸಂತೆ,ಮತ್ತು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ

ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೊಂಕು ಹರಡದಂತೆ ತಡೆಯಲು ಜಿಲ್ಲಾಡಳಿತ ಮುಂಜಾಗೃತವಾಗಿ ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯ ಎಲ್ಲ ಸಂತೆ,ಮತ್ತು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ದಿನನಿತ್ಯದ ಪೂಜೆ ಮತ್ತು ಇನ್ನಿತರ ಧಾರ್ಮಿಕ ಕಾರ್ಯಗಳಿಗೆ ವಿನಾಯತಿ ನೀಡಲಾಗಿದ್ದು,ಇಂದಿನಿಂದ ಒಂದು ವಾರದವರೆಗೆ ಜಿಲ್ಲೆಯಲ್ಲಿ ಸಂತೆ ,ಮತ್ರು ಜಾತ್ರೆ ನಡೆಯುವಂತಿಲ್ಲ ಎಂದು ಕಟ್ಟು ನಿಟ್ಟಿನ ಆದೇಶ ಮಾಡಲಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕು ಹರಡದಂತೆ ತಡೆಯಲು ದೊಡ್ಡ,ದೊಡ್ಡ ಶಾಪಿಂಗ್ ಮಾಲ್ ಮತ್ತು ಸೂಪರ್ …

Read More »

ಕೊರೊನಾ ವಿರುದ್ಧ ಸೆಣಸುತ್ತಿರುವ ಆರೋಗ್ಯ ಸಿಬ್ಬಂದಿ ಸೇವೆಗೆ ಪ್ರಧಾನಿ ಮೆಚ್ಚುಗೆ

ನವದೆಹಲಿ: “ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ಸನ್ನು ಎದುರಿಸುವಲ್ಲಿ ನಮ್ಮ ದೇಶದ ವೈದ್ಯರು, ಶುಶ್ರೂಷಕರು, ಆರೋಗ್ಯ ಇಲಾಖೆಗಳ ಸಿಬ್ಬಂದಿ ದೊಡ್ಡ ಮಟ್ಟದಲ್ಲಿ ಪರಿಶ್ರಮ ಪಡುತ್ತಿದ್ದು, ಅವರ ಈ ಸೇವೆಯನ್ನು ಭಾರತ ಯಾವತ್ತೂ ನೆನಪಿನಲ್ಲಿಟ್ಟುಕೊಂಡಿರುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟ್ವೀಟರ್‌ನಲ್ಲಿ #IndiaFightsCorona ಎಂಬ ಹ್ಯಾಶ್‌ಟ್ಯಾಗ್‌ನಡಿ, ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಕೊರೊನಾ ತಂದಿರುವ ಬಿಕ್ಕಟ್ಟು ಹಾಗೂ ಭೀತಿಯ ಸನ್ನಿವೇಶವನ್ನು ಭಾರತ ಎದುರಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “”ಕೊರೊನಾ ವೈರಸ್‌ ಹರಡುವಿಕೆಯನ್ನು …

Read More »

ಬಾರದ ಲೋಕಕ್ಕೆ ಮರಳಿದ ಪಾಪು

ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಕಳೆದ ಸುಮಾರು ಒಂದು ತಿಂಗಳಿನಿಂದ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ಅವರು ನಿಧನರಾದರು. ಭಾನುವಾರವಷ್ಟೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದರು. ಬಾರದ ಲೋಕಕ್ಕೆ ಮರಳಿದ ಪಾಪು….. ಬೆಳಗಾವಿ-ಪತ್ರಿಕಾ ಲೋಕದ ಉಜ್ವಲ ತಾರೆ, ಕರ್ನಾಟಕ ವಿದ್ಯಾವರ್ಧಕ ‌ಸಂಘದ ಅಧ್ಯಕ್ಷರಾಗಿದ್ದ ಡಾ.ಪಾಟೀಲ ಪುಟ್ಟಪ್ಪ ಇನ್ನಿಲ್ಲ. ಹುಬ್ಬಳ್ಳಿಯ …

Read More »

ಅಲಮಟ್ಟಿ ಎತ್ತರ ಹೆಚ್ಚಿಸಲು ನಾಳೆ ಜಲಸಂಪನ್ಮೂಲ ಸಚಿವರ ದೆಹಲಿ ಚಲೋ….!!!

ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆಯ ಕಾನೂನು ತೊಡಕುಕುಗಳು ನಿವಾರಣೆಯಾದ ಬಳಿಕ ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗ ಅಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ   ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು ಏರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ದಿ. 17.03.2020 ಮಂಗಳವಾರ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ ರಮೇಶ್ ಜಾರಕಿಹೊಳಿಯವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …

Read More »

ರೋನಾ ಸೊಂಕು ಹರಡದಂತೆ ಪಾಲಿಕೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಬೆಳಗಾವಿಯ ,ಬಿಗ್ ಬಝಾರ್,ರಿಲಾಯಿನ್ಸ್ ಡಿ ಮಾರ್ಟ್ ಸೇರಿದಂತೆ ಇನ್ನಿತರ ಬೃಹತ್ತ್ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆದೇಶಿಸಿದ್ದು ಮದ್ಯಾಹ್ನ ಕಾರ್ಯಾಚರಣೆ ಆರಂಭವಾಗಲಿದೆ

ಬೆಳಗಾವಿ- ಕರೋನಾ ಸೊಂಕು ಹರಡದಂತೆ ಪಾಲಿಕೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಬೆಳಗಾವಿಯ ,ಬಿಗ್ ಬಝಾರ್,ರಿಲಾಯಿನ್ಸ್ ಡಿ ಮಾರ್ಟ್ ಸೇರಿದಂತೆ ಇನ್ನಿತರ ಬೃಹತ್ತ್ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆದೇಶಿಸಿದ್ದು ಮದ್ಯಾಹ್ನ ಕಾರ್ಯಾಚರಣೆ ಆರಂಭವಾಗಲಿದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು (SI) ತಂಡ ರಚಿಸಲಾಗಿದ್ದು ಈ ತಂಡ ಮದ್ಯಾಹ್ನ ದಿಂದ ಬೆಳಗಾವಿಯ ,ಡಿ ಮಾರ್ಟ್ ಮಳಿಗಳನ್ನು ,ರಿಲಾಯಿನ್ಸ ಮಳಿಗೆ,ಬಿಗ್ ಬಝಾರ್ ,ಸೇರಿದಂತೆ ಜನ ಹೆಚ್ವಿನ ಸಂಖ್ಯೆಯಲ್ಲಿ ಸೇರುವ ನಗರದ ದೊಡ್ಡ ದೊಡ್ಡ …

Read More »

ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ, ಸುಳ್ಳು ಸುದ್ದಿ ಹರಡಿಸಬೇಡಿ: ವೈದ್ಯರ ಮನವಿ

ಬೆಳಗಾವಿ/ಚಿಕ್ಕೋಡಿ: ವೈದ್ಯ ಓರ್ವರಿಗೆ ಕೊರೊನಾ ರೋಗ ಬಂದಿದೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಎಲ್ಲ ವೈದ್ಯರು ಪತ್ರಿಕಾಗೋಷ್ಠಿ ನಡೆಸಿ ನಮ್ಮಲ್ಲಿ ಯಾರಿಗೂ ಕೊರೊನಾ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಐಎಂಎ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೈದ್ಯರು, ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ. ಈ ಬಗ್ಗೆ ಯಾರು ಸುಳ್ಳು ಸುದ್ದಿ ಹರಡದಂತೆ …

Read More »

ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬೆಂಗಳೂರು: ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಮಾದರಿ ಯೋಜನಡೆಯಡಿ ಪ್ರಾಯೋಗಿಕವಾಗಿ ಮತ್ತಿಕೆರೆ ವಾರ್ಡಿನಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಡಾ. ಅಶ್ವತ್ಥನಾರಾಯಣ ಮಾತನಾಡಿದರು. ಸ್ವಚ್ಛತೆಯ ದೃಷ್ಟಿಯಿಂದ ಪ್ರಮುಖ ಕಾರ್ಯಕ್ರಮವಾದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದು ಸಾರ್ವಜನಿಕರು ಸೇರುವ ಕಾರ್ಯಕ್ರಮವಲ್ಲ ಎಂದು ಮೊದಲೇ ಸೂಚನೆ …

Read More »

ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ.

ರಾಯಚೂರು: ಕೊರೊನಾ ವೈರಸ್ ಭೀತಿಯಿಂದ ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳು ಬೀದಿಗೆ ಬರುವಂತಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಸಾರ್ವಜನಿಕ ಸಂಪರ್ಕ ಇರುವ ಜಿಲ್ಲಾಧಿಕಾರಿ ಕಚೇರಿಯ ಆವಾಕ, ಜಾವಕ ವಿಭಾಗಗಳನ್ನ ಕಚೇರಿಯಿಂದ ಹೊರಕ್ಕೆ ಇಡಲಾಗಿದೆ. ವಾಹನ ಪಾರ್ಕಿಂಗ್ ಬಳಿ ಟೇಬಲ್ ಹಾಕಿಕೊಂಡು ಸಿಬ್ಬಂದಿ ಕುಳಿತಿದ್ದಾರೆ. ರಸ್ತೆಯಲ್ಲೆ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ ಸಿಬ್ಬಂದಿ ಮರದ ಕೆಳಗೆ ಫೈಲ್ ಗಳನ್ನ ಹಿಡಿದು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಆದೇಶದ ಮೇರೆಗೆ ಎರಡು ವಿಭಾಗ ಕಚೇರಿಯಿಂದ ಹೊರಗೆ …

Read More »