Breaking News
Home / ರಾಜ್ಯ (page 33)

ರಾಜ್ಯ

ಕುಮಾರಸ್ವಾಮಿ ಸರ್ಕಾರ ಬರುವುದು ಖಚಿತ: ದೇವೇಗೌಡ

ಹಾಸನ: ‘ಈವರೆಗೂ ನಾನು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ಯಾರು ಏನೇ ಕುತಂತ್ರ ಮಾಡಿದರೂ, ಏನೇ ಹೋರಾಟ ಮಾಡಿದರೂ ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ಸರ್ಕಾರ ಬರುವುದು ಖಚಿತ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು. ತಾಲ್ಲೂಕಿನ ಕಟ್ಟಾಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಕಾವೇರಿ ನೀರಿಗಾಗಿ ಹೋರಾಡಿದ್ದೇನೆ.ಹೇಮಾವತಿ ನೀರನ್ನು ನಾವು ಬಳಸಬಾರದು ಎಂದು ಈಗ ಆದೇಶ ಮಾಡುತ್ತಾರೆ. ರಾಜ್ಯದಲ್ಲಿ ಅಧಿಕಾರದ ದರ್ಪ ಮಿತಿಮೀರಿದೆ. ಮೂರು ಸಲ ಬಂದು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುತ್ತೇನೆ ಎಂದು …

Read More »

200 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ದೇಶ ಆಳುತ್ತೇವೆ ಎನ್ನುತ್ತಿರುವುದು ಹಾಸ್ಯಾಸ್ಪದ

ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ 200 ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತದೆ ಎನ್ನುವುದನ್ನು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಅವರು ಇಂದು ಹಾವೇರಿ ಜಿಲ್ಲೆಯ ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಡ್ಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ …

Read More »

ಮೋದಿ ಪಿಎಂ ಆದ್ರೆ..ಚಿಕನ್‌, ಮಟನ್‌ ತಿನ್ನೋದು ಬ್ಯಾನ್‌!; ಚುನಾವಣಾ ಪ್ರಚಾರ

ನವದೆಹಲಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಕೆಸರೆರಚಾಟ ಸಾಮಾನ್ಯ. ಆದಾಗ್ಯೂ, ಕೆಲವು ನಾಯಕರು ಹೇಳುವ ಹೇಳಿಕೆ, ಭರವಸೆ ಮಾತ್ರ ಚುನಾವಣೆಯಲ್ಲಿ ಗೆಲ್ಲ ಬೇಕು ಎನ್ನುವ ಗುರಿಯಾಗಿರುತ್ತದೆ. ಇದಕದ್ಕೆ ಉತ್ತಮ ಉದಾಹರಣೆ ಎನ್ನುವಂತೆ ಡಿಎಂಕೆ ನಾಯಕರೊಬ್ಬರು ಆಡಿದ್ದು, ತಮಿಳುನಾಡಿನಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್‌ ಆಗಿದೆ.   ಡಿಎಂಕೆ ಪಕ್ಷದ ನಾಯಕರೊಬ್ಬರು, ಹಾಗೇನಾದರೂ ಮೋದಿ ಮತ್ತೊಮ್ಮೆ ಆಯ್ಕೆಯಾದಲ್ಲಿ ನಿಮ್ಮ ಇಷ್ಟದ ಆಹಾರ ತಿನ್ನೋಕು ಬಿಡೋದಿಲ್ಲ ಎಂದು ಹೇಳಿದ್ದಾರೆ. ಚೆನ್ನೈನಲ್ಲಿ ನಡೆದ ಪ್ರಚಾರದ ವೇಳೆ …

Read More »

ಬಿಜೆಪಿ ಸೇರಿ, ಇಲ್ಲವೇ ಇಡಿ ದಾಳಿ ಎದುರಿಸಿ ಎಂದು ಬೆದರಿಕೆ ಹಾಕಲಾಗುತ್ತಿದೆ: ಅತಿಶಿ

ನವದೆಹಲಿ, ಏ.2 (ಪಿಟಿಐ) : ಬಿಜೆಪಿಗೆ ಸೇರಬೇಕು ಅಥವಾ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲು ಸಿದ್ಧರಾಗಿರಬೇಕು ಎಂದು ತಮ್ಮ ನಿಕಟವರ್ತಿಯೊಬ್ಬರಿಗೆ ಬೆದರಿಕೆ ಹಾಕಲಾಗಿದೆ ಎಂದುದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಜೊತೆಗೆ ಆಮ್ ಆದ್ಮಿ ಪಕ್ಷದ ಮೂವರು ನಾಯಕರಾದ ದೆಹಲಿ ಸಚಿವ ಸೌರಭ್ ಭಾರದ್ವಾಜ್ , ಶಾಸಕ ದುರ್ಗೇಶ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಸಹ ಬಂಧಿಸಲಾಗುವುದು ಎಂದು ಬೆದರಿಸಲಾಗಿದೆ ಎಂದಿದ್ದಾರೆ.

Read More »

ಚುನಾವಣಾ ರಾಜಕಾರಣಕ್ಕೆ’ ಗುಡ್‌ಬೈ ಹೇಳಿದ ಸಿಎಂ

ಮೈಸೂರು, ಏಪ್ರಿಲ್ 02: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರಿನಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ತವರು ಕ್ಷೇತ್ರದಲ್ಲಿಯೇ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರ ಅವರ ಅಭಿಮಾನಿಗಳಲ್ಲಿ ಆಘಾತ ನೀಡಿದೆ.   ಜಿಲ್ಲೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ …

Read More »

ತಿಹಾರ್‌ನಿಂದಲೇ ಸರ್ಕಾರ ನಡೆಸ್ತಾರಾ ಕೇಜ್ರೀವಾಲ್?

ನವದೆಹಲಿ(ಏ.02): ಅಬಕಾರಿ ನೀತಿಯಲ್ಲಿನ ಅಕ್ರಮಗಳ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿಗೆ ಹೋದ ನಂತರವೂ, ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಜೈಲಿನಿಂದಲೇ ಓಡುತ್ತದೆ ಎಂದು ಹೇಳುತ್ತಿದೆ, ಆದರೆ ಪ್ರಸ್ತುತ ನಿಯಮಗಳು ಮತ್ತು ನಿಬಂಧನೆಗಳನ್ನು ಗಮನಿಸಿದರೆ ಅದು ತುಂಬಾ ಕಷ್ಟಕರವೆಂದು ತೋರುತ್ತದೆ. ಎನ್‌ಸಿಟಿ ದೆಹಲಿ ಕಾಯ್ದೆಯ ಪ್ರಕಾರ, ದೆಹಲಿಗೆ ಸಂಬಂಧಿಸಿದ ಎಲ್ಲಾ ಫೈಲ್‌ಗಳು ಕೇಂದ್ರ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್‌ಗೆ ಕಳುಹಿಸಲ್ಪಡುತ್ತವೆ, ಆದರೆ ಇದು …

Read More »

ಈ ವಾರ ಕರ್ನಾಟಕ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ:

ನವದೆಹಲಿ: ಮುಂದಿನ ಏಳು ದಿನಗಳಲ್ಲಿ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಪ್ರತ್ಯೇಕವಾಗಿ ಚದುರಿದ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ. ಐಎಂಡಿಯ ಬೆಳಿಗ್ಗೆ ಬುಲೆಟಿನ್ ಪ್ರಕಾರ, ಏಪ್ರಿಲ್ 3-5 ರಂದು ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶ, ಏಪ್ರಿಲ್ 3 ಮತ್ತು 5 ರಂದು ಉತ್ತರಾಖಂಡ ಮತ್ತು ಏಪ್ರಿಲ್ 4 ಮತ್ತು 5 ರಂದು ಪಶ್ಚಿಮ ಉತ್ತರ ಪ್ರದೇಶದ ಮೇಲೆ …

Read More »

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ; ರೋಗಿ ಬಲಿ; ಕುಟುಂಬದವರಿಂದ ಪ್ರತಿಭಟನೆ

ಯಾದಗಿರಿ: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ನರಳಿ, ನರಳಿ ಪ್ರಾಣ ಬಿಟ್ಟಿರುವ ಘಟನೆ ಯಾದಗಿರಿ ಜಿಲ್ಲೆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ವ್ಯಕ್ತಿಯ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಭೀಮರಾಯ (60) ವಾಂತಿ ಹಾಗೂ ಉಸಿರಾಟದ ಸಮಸೆಯಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿ 2 ಗಂಟೆ ಕಳೆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ. ಕುಟುಂಬದವರು ಚಿಕಿತ್ಸೆ ನೀಡುವಂತೆ ಅಂಗಲಾಚಿದರೂ …

Read More »

ಟೀಕೆ-ಟಿಪ್ಪಣಿಗೆ ಪ್ರತಿಕ್ರಿಯೆ ಕೊಡುವುದಿಲ್ಲ: ಜಗದೀಶ ಶೆಟ್ಟರ್

ಬೆಳಗಾವಿ: ‘ಇದು ರಾಷ್ಟ್ರೀಯ ವಿಚಾರಧಾರೆಗಳ ಆಧಾರದಲ್ಲಿ ನಡೆಯುವ ಚುನಾವಣೆ. ಇಲ್ಲಿ ರಾಷ್ಟ್ರೀಯ ವಿಚಾರಗಳೇ ಚರ್ಚೆಯಾಗಬೇಕು. ಆದರೆ, ಕಾಂಗ್ರೆಸ್‌ನವರಿಂದ ಸಣ್ಣ-ಪುಟ್ಟ ‌ವಿಷಯ ಚರ್ಚಿಸಲಾಗುತ್ತಿದೆ. ಇದಕ್ಕೆ ನಾವು ಉತ್ತರ ನೀಡುವುದಿಲ್ಲ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ನನ್ನ ಕರ್ಮಭೂಮಿ. ಆದರೆ, ಕಾಂಗ್ರೆಸ್‌ನವರು ನಾನು ಹೊರಗಿನವನು ಎನ್ನುತ್ತಿದ್ದಾರೆ. ಅವರಿಗೆ ಚರ್ಚಿಸಲು ಯಾವುದೇ ವಿಷಯವೇ ಇಲ್ಲ. ಟೀಕೆ-ಟಿಪ್ಪಣಿಗೆ ಯಾವುದೇ ಪ್ರತಿಕ್ರಿಯೆ …

Read More »

ಮೂಲಸೌಲಭ್ಯದಿಂದ ವಂಚಿತ: ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

ಸವದತ್ತಿ (ಬೆಳಗಾವಿ ಜಿಲ್ಲೆ): ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಯರಗಟ್ಟಿ ತಾಲ್ಲೂಕಿನ ಹಿರೇಬೂದನೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳಗಲಿ ಗ್ರಾಮಸ್ಥರು, ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಿರೇಬೂದನೂರ ಗ್ರಾಮ ಪಂಚಾಯ್ತಿ ಕಚೇರಿಗೆ ಸೋಮವಾರ ತೆರಳಿದ ಗ್ರಾಮಸ್ಥರು, ‘ಚುನಾಯಿತ ಪ್ರತಿನಿಧಿಗಳು ನಮಗೆ ಮೂಲಸೌಕರ್ಯ ಒದಗಿಸುವ ಗೋಜಿಗೆ ಹೋಗಿಲ್ಲ. ಇಲ್ಲಿ ಪ್ರತಿಯೊಂದಕ್ಕೂ ಪರದಾಡುವ ಸ್ಥಿತಿ ಇದ್ದು, ಮೂಲಸೌಕರ್ಯ ಒದಗಿಸಿಕೊಡಬೇಕು. ಇಲ್ಲದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ’ ಎಂದು ಪಿಡಿಒ ಗುರುಪಾದ ಗಿರೆಣ್ಣವರ ಅವರಿಗೆ ಮನವಿ ಸಲ್ಲಿಸಿದರು. …

Read More »