Breaking News

ರಾಜ್ಯ

ಗಾಂಧಿ ಜಯಂತಿ 2023: ‘ಬಾಪು’ ನೆನಪು.. ಭಾರತದ ಸ್ವಾತಂತ್ರ್ಯ ಹೋರಾಟದ ಸಂಕೇತ

ಹೈದರಾಬಾದ್: ಅಕ್ಟೋಬರ್ 2, 1869 ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮೋಹನ್​ದಾಸ ಕರಮಚಂದ್​ ಗಾಂಧಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಹೋರಾಟ ಮಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅಹಿಂಸಾತ್ಮಕವಾಗಿ ಹೋರಾಟ ಮಾಡಿ ಒಂದು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾನ್ ಸಂತ. ಅವರ ಈ ಹೋರಾಟ ಜನಮಾನಸದಲ್ಲಿ ಎಂದೂ ಅಳಿಸಲಾಗದ ಒಂದು ಹೆಜ್ಜೆ ಗುರುತು. ಮಹಾತ್ಮ ಗಾಂಧಿ ಅಥವಾ ಬಾಪು ಎಂದು ಪ್ರೀತಿಯಿಂದ ಕರೆಯಲ್ಪಡುವ ಮೋಹನ್‌ದಾಸ್ ಕರಮಚಂದ್ …

Read More »

ಅರಿಶಿನ ಮಂಡಳಿ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಘೋಷಣೆ.. 12 ವರ್ಷದ ಬಳಿಕ ಚಪ್ಪಲಿ ಧರಿಸಿದ ರೈತ

ನಿಜಾಮಾಬಾದ್ (ತೆಲಂಗಾಣ): ತೆಲಂಗಾಣದಲ್ಲಿ ಅರಿಶಿನ ಮಂಡಳಿ ಸ್ಥಾಪಿಸುವುದಾಗಿ ಭಾನುವಾರ ಮಹಬೂಬ್‌ನಗರದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಘೋಷಿಸಿದ ಬೆನ್ನಲ್ಲೇ ಸುಮಾರು 12 ವರ್ಷಗಳ ನಂತರ ರೈತರೊಬ್ಬರು ಕಾಲಿಗೆ ಚಪ್ಪಲಿ ಹಾಕಿದ್ದಾರೆ. ಉತ್ತಮ ಬೆಲೆಯಿಲ್ಲದೆ ಅರಿಶಿನ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಬಲ ಬೆಲೆ ಪಡೆಯಲು ರಾಜ್ಯದಲ್ಲಿ ಮಂಡಳಿ ಸ್ಥಾಪಿಸಬೇಕು ಎಂದು ನಿಜಾಮಾಬಾದ್ ಜಿಲ್ಲೆಯ ಮೋರ್ತಾಡ್ ಮಂಡಲದ ಪಾಲೆಂ ಗ್ರಾಮದ ರೈತ ಮುತ್ಯಾಲ ಮನೋಹರರೆಡ್ಡಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಅರಿಶಿನ ಮಂಡಳಿ ಸ್ಥಾಪನೆ ಮಾಡಬೇಕೆಂಬ …

Read More »

ಮತ್ತೆ ಮುನ್ನೆಲೆಗೆ ಬಂದ ಕುರುಬ ಸಮುದಾಯದ ಎಸ್​ಟಿ ಮೀಸಲಾತಿ ಹೊರಾಟ: ನಾಳೆ ಬೃಹತ್ ಸಮಾವೇಶ – ಲಕ್ಷ್ಮಣ್ ರಾಮ ಚಿಂಗಳೆ

ಚಿಕ್ಕೋಡಿ(ಬೆಳಗಾವಿ): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿನ್ನೆಲೆ ನಾಳೆ ರಾಜಕೀಯ ಪವರ್ ಪಾಯಿಂಟ್ ಬೆಳಗಾವಿ ನಗರದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕುರುಬ ಸಮುದಾಯದ ಮಹಾಧಿವೇಶನ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಈ ಸಮಾವೇಶಕ್ಕೆ ದೇಶದ ಮೂಲೆ ಮೂಲೆಗಳಿಂದ ರಾಜಕೀಯ ನಾಯಕರು ಆಗಮಿಸಲಿದ್ದು ಅವರುಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಎಸ್​ಟಿ ಮೀಸಲಾತಿ ನೀಡಬೇಕು, ಹಕ್ಕು ಮಂಡನೆ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ …

Read More »

ಕೆಲಸ ಮುಗಿಸಿ ಮಲಗಿದ್ದ ಕಾರ್ಮಿಕರು.. ಗುಡಿಸಲಿಗೆ ನುಗ್ಗಿ ಮೂವರ ಪ್ರಾಣ ಪಡೆದ ವಾಹನ!

ಅಮರಾವತಿ, ಮಹಾರಾಷ್ಟ್ರ: ಅಮರಾವತಿ ಜಿಲ್ಲೆಯಿಂದ ಭೀಕರ ರಸ್ತೆ ಅಪಘಾತದ ಸುದ್ದಿಯೊಂದು ಹೊರಬಿದ್ದಿದೆ. ಸೋಮವಾರ (ಇಂದು) ಮುಂಜಾನೆ 5.30ಕ್ಕೆ ರಸ್ತೆ ಕಾಮಗಾರಿಗೆ ಎಂದು ಮೆಲ್ಘಾಟ್‌ಗೆ ತೆರಳಿದ್ದ ಬುಡಕಟ್ಟು ಕಾರ್ಮಿಕರ ಮೇಲೆ ಟ್ರಕ್‌ ಹರಿದಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಬಂದಿರುವ ಮಾಹಿತಿ ಪ್ರಕಾರ ಬುಲ್ಧಾನ ತಾಲೂಕಿನ ಮಲ್ಕಾಪುರದಿಂದ ನಂದೂರ ರಸ್ತೆಯ ರಾಷ್ಟ್ರೀಯ ಹೆದ್ದಾರಿ ನಂ.6ರಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ ಬದಿ ನಿರ್ಮಿಸಿದ್ದ ಗುಡಿಸಲಿನಲ್ಲಿ ಮೊರಗಡ …

Read More »

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇಂದು ನಡೆದಿದೆ. ಮೂವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನೆರೆದಿದ್ದ ಜನರನ್ನು ಚದುರಿಸಿದರು. ಪೊಲೀಸರ ಮೇಲೂ ಕಲ್ಲು …

Read More »

ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಬಾರಿಗೆ ಕುರುಬ ಸಮಾಜದಿಂದ ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ ನಡೆಯುತ್ತಿದೆ ಎಂದು ಶಫರ್ಡ್ಸ್‌ ಇಂಡಿಯಾ ಇಂಟರ್ನ್ಯಾಷನಲ್ ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ ಮಾಹಿತಿ ನೀಡಿದ್ದಾರೆ.   ಕಾರ್ಯಕ್ರಮ ನಡೆಯಲಿರುವ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುರುಬ ಸಮಾಜದ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಮತ್ತು …

Read More »

ಈದ್ ಮಿಲಾದ್​ ಮೆರವಣಿಗೆಗೆ ಗಣೇಶ ಮಂಡಳಿಗಳ ಮುಖಂಡರ ಸಾಥ್

ಬೆಳಗಾವಿ : ಬೆಳಗಾವಿಯಲ್ಲಿಂದು ಪ್ರವಾದಿ ಮೊಹಮ್ಮದ್ ಪೈಗಂಬರ್​ ಅವರ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಈದ್‌-ಮಿಲಾದ್‌ ಮೆರವಣಿಗೆ ವಿಜೃಂಭಣೆಯಿಂದ ಜರುಗಿದ್ದು, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮುಖಂಡರೂ ಕೂಡ ಸಾಥ್ ನೀಡುವ ಮೂಲಕ ಭಾವೈಕ್ಯತೆ ಮೆರೆದರು.   ಪ್ರತಿ ವರ್ಷ ಈದ್‌-ಮಿಲಾದ್‌ ದಿನವೇ ಮೆರವಣಿಗೆ ನಡೆಯುತ್ತಿತ್ತು. ಈ ಬಾರಿಯೂ ಸೆಪ್ಟೆಂಬರ್ 28ರಂದು ಹಬ್ಬದ ದಿನವೇ ಮೆರವಣಿಗೆಗೆ ಎಲ್ಲ ರೀತಿ ಸಿದ್ಧತೆಯನ್ನು ಮುಸ್ಲಿಂ ಸಮುದಾಯದವರು ಮಾಡಿಕೊಂಡಿದ್ದರು. ಆದರೆ, ಅದೇ ದಿನ ಸಾರ್ವಜನಿಕ ಗಣೇಶ ಮೂರ್ತಿಗಳ ನಿಮಜ್ಜನೆ …

Read More »

ನಿಮಗೆ ಕಾಂಗ್ರೆಸ್‌ನಲ್ಲಿ 7 ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟುಬೇಕಿತ್ತು?ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ

ಬೆಳಗಾವಿ: ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ, ಮಾಜಿ ಸಚಿವ ಹೆಚ್‌.ವಿಶ್ವನಾಥ್ ಹೇಳಿದರು. “ನಿಮಗೆ ಕಾಂಗ್ರೆಸ್‌ನಲ್ಲಿ ಅವಕಾಶಗಳು ಸಿಕ್ಕಿವೆ. 33 ಸಚಿವರಲ್ಲಿ ಏಳು ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟು ಸ್ಥಾನ ಬೇಕಿತ್ತು” ಎಂದು ಅವರು ಪ್ರಶ್ನಿಸಿದರು. ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆದ …

Read More »

ಸಿಎಂ ಸ್ಥಾನದ ಬಯಕೆ ಹೊಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಈ ರೀತಿ …

Read More »

ಭದ್ರಾವತಿ ಬಳಿ ಲಾರಿ ಓವರ್​ಟೇಕ್ ವೇಳೆ ಭೀಕರ ಅಪಘಾತ: ಬೈಕ್​ನಲ್ಲಿದ್ದ ಮೂವರು ಬಾಲಕರ ದುರ್ಮರಣ

ಶಿವಮೊಗ್ಗ: ಲಾರಿ ಹಾಗೂ ಎರಡು ಬೈಕ್​​ಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕು ಕಲ್ಲಿಹಾಳ್ ಹಾಗೂ ಅರಹತೊಳಲು ಗ್ರಾಮದ ನಡುವೆ ಕಳೆದ ರಾತ್ರಿ ನಡೆದಿದೆ. ಮರದ ತುಂಡು ತುಂಬಿಕೊಂಡು ಹೊರಟಿದ್ದ ಲಾರಿಗೆ ಬೈಕ್​ಗಳು ಮಧ್ಯದಿಂದ ಬಂದು ಡಿಕ್ಕಿ ಹೊಡೆದಿವೆ ಎಂದು ತಿಳಿದುಬಂದಿದೆ. ಒಂದು ಬೈಕ್​​ನಲ್ಲಿದ್ದ ಮೂವರು ಅಪ್ರಾಪ್ತರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರನ್ನು ಭದ್ರಾವತಿ ತಾಲೂಕು ಜಂಬರಘಟ್ಟ ಗ್ರಾಮದ ಶಶಾಂಕ್(17), ಯಶವಂತ್(17) ಹಾಗೂ ವಿಕಾಸ್(17) …

Read More »