Home / ರಾಜ್ಯ (page 378)

ರಾಜ್ಯ

ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಚುನಾವಣಾ ಅಕ್ರಮ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ ಆದೇಶಕ್ಕೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.   ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ ಸೋಮವಾರ ಅರ್ಜಿ ವಜಾಗೊಳಿಸಿದೆ. ವಿವರವಾದ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. …

Read More »

 G20 ಶೃಂಗಸಭೆ ಶೇ 100ಕ್ಕೆ 100ರಷ್ಟು ಒಮ್ಮತದ ಮೂಲಕ ತೆರೆಕಂಡಿದೆ.

ನವದೆಹಲಿ: G20 ಶೃಂಗಸಭೆ ಶೇ 100ಕ್ಕೆ 100ರಷ್ಟು ಒಮ್ಮತದ ಮೂಲಕ ತೆರೆಕಂಡಿದೆ. ಹಿಂದೆಂದೂ ಕಾಣದಷ್ಟು ಘೋಷಣೆಗಳಿಗೆ ಸಭೆಯ ಎಲ್ಲ ಸದಸ್ಯರಿಂದ ಅನುಮೋದನೆ ಪಡೆಯಲಾಗಿದೆ. ರಷ್ಯಾ- ಉಕ್ರೇನ್​​​ ವಿಚಾರದ ಬಗ್ಗೆ ಅತ್ಯಂತ ಸಮಚಿತ್ತದ ನಿರ್ಣಯ ಕೈಗೊಳ್ಳುವಲ್ಲಿ ಜಿ-20 ಅಧ್ಯಕ್ಷತೆ ವಹಿಸಿದ್ದ ಭಾರತ ಯಶಸ್ವಿಯಾಗಿದೆ. ಒಟ್ಟಾರೆ ಶೃಂಗದ ಯಶಸ್ವಿಯಾದ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಭಾರತವನ್ನು ಹೊಗಳಿವೆ. ಜಾಗತಿಕ ದಕ್ಷಿಣದ ಧ್ವನಿ(ಗ್ಲೋಬಲ್​ ಸೌತ್​)ನ ಗುಣಗಾನ ನಡೆದಿದೆ. ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮತ್ತು ಕಾಳಜಿ ವಹಿಸುವಲ್ಲಿ ಭಾರತದ …

Read More »

ಮೀಸಲು ದಿನವೂ ಭಾರತ – ಪಾಕ್​ ಪಂದ್ಯಕ್ಕೆ ಮಳೆ ಅಡ್ಡಿ.. ಓವರ್​ ಕಡಿತಗೊಳಿಸಿ ಮ್ಯಾಚ್​ ನಡೆಯುವುದೇ?

ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್​​ ಸೂಪರ್​ ಫೋರ್​ ಪಂದ್ಯದ ಭಾರತ ಪಾಕಿಸ್ತಾನ ಮ್ಯಾಚ್​ಗೆ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮೀಸಲು ದಿನವನ್ನು ಎಸಿಸಿ ಪ್ರಕಟಿಸಿತ್ತು. ಆದರೆ ವಿಪರ್ಯಾಸ ಎಂದರೆ ಮೀಸಲು ದಿನವೂ ಮಳೆ ಕಾಡುತ್ತಿದ್ದು, 3 ಗಂಟೆಗೆ ಆರಂಭವಾಗಬೇಕಾಗಿದ್ದ ಪಂದ್ಯ ವಿಳಂಬವಾಗಿದೆ. ನಿನ್ನೆ (ಭಾನುವಾರ) 24.1 ಓವರ್​ ವರೆಗಿನ ಇನ್ನಿಂಗ್ಸ್​ನ್ನು ಭಾರತ ಆಡಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು. ನಿನ್ನೆ ಸಂಜೆ 5ರ ಸುಮಾರಿಗೆ ಆರಂಭವಾದ ಮಳೆ ಸುಮಾರು …

Read More »

ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣವಾದ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಅನಿವಾರ್ಯ ಎಂದು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ಮೈತ್ರಿ ವಿಚಾರವಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. …

Read More »

ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಳಗಾವಿ : ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕುಖ್ಯಾತ ರೌಡಿ ವಿಶಾಲ್ ಸಿಂಗ್ ಎಂಬಾತನನ್ನು ಬೆಳಗಾವಿ ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.   ಕಳೆದ ಸಪ್ಟೆಂಬರ್ 1 ರಂದು ಪ್ಲ್ಯಾಟ್ ತೋರಿಸುವುದಾಗಿ ನಂಬಿಸಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ಆತನ ಕಾರಿನಲ್ಲಿ ಅಪಹರಿಸಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮೂಲದ ಕುಖ್ಯಾತ ರೌಡಿ ವಿಶಾಲಸಿಂಗ್ ಚೌಹಾನ್ ( 25 ) ಬಂಧಿಸಲಾಗಿದೆ,   ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ …

Read More »

ಗಣೇಶೋತ್ಸವ ವಿಸರ್ಜನಾ ಹೊಂಡಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾದ ಮಹಾನಗರ ಪಾಲಿಕೆ

ಗಣೇಶೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಡಳಿತವು ನಗರದ ಗಣೇಶೋತ್ಸವ ವಿಸರ್ಜನಾ ಹೊಂಡಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದೆ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ನಗರದ ಇಂದ್ರಪ್ರಸ್ಥನಗರದಲ್ಲಿರುವ ಜಕ್ಕಿನಹೊಂಡ ಕೆರೆಯನ್ನು ಸ್ವಚ್ಛಗೊಳಿಸಲಾಯಿತು. ನಗರದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆಯನ್ನು ಕಪಿಲೇಶ್ವರ ಕೆರೆ, ಜಕ್ಕಿನಹೊಂಡ ಕೆರೆ, ಅಂಗೋಲ್ ಕೆರೆ ಮುಂತಾದೆಡೆ ಮಾಡಲಾಗುತ್ತದೆ. ಈ ಎಲ್ಲ ಕೆರೆಗಳ ಸ್ವಚ್ಛತೆ, ಸಣ್ಣಪುಟ್ಟ ದುರಸ್ತಿ, ಬಣ್ಣ ಬಳಿಯುವುದು ಇತ್ಯಾದಿ ಕಾರ್ಯ …

Read More »

ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ 11ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೆಳಗಾವಿ: ಸಾಧಕರ ಸಾಧನೆ ಹಿಂದೆ ಪರಿಶ್ರಮ ಮತ್ತು ಕಣ್ಣೀರಿನ ಕಥೆ ಇರುತ್ತದೆ. ಎಷ್ಟೋ ರಾತ್ರಿಗಳನ್ನು ಹಗಲುಗಳನ್ನಾಗಿ ಪರಿವರ್ತಿಸಿಕೊಂಡಾಗ ಮಾತ್ರ ಸಾಧಕರಾಗಲು ಸಾಧ್ಯ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಮುರುಗೇಶ ಎಚ್.ಎಂ. ಅಭಿಪ್ರಾಯಪಟ್ಟರು. ನಗರದ ಭಡಕಲ್ ಗಲ್ಲಿಯ ಬನಶಂಕರಿ ದೇವಸ್ಥಾನದ ಸಭಾಗೃಹದಲ್ಲಿ ರವಿವಾರ ಗುರು ವಿವೇಕಾನಂದ ವಿವಿಧೋದ್ದೇಶಗಳ ಸಹಕಾರ ಸಂಘದ 11ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು. ಸಾಧನೆಯ ಮೆಟ್ಟಿಲು …

Read More »

ನೈಜ ಘಟನೆಯ ‘ದೈಜಿ’ ಚಿತ್ರದಲ್ಲಿ ಬಹುಭಾಷಾ ನಟ ರಮೇಶ್ ಅರವಿಂದ್

ಕನ್ನಡ ಸೇರಿ ತಮಿಳು, ತೆಲುಗು, ಮಲಯಾಳಂನಲ್ಲೂ ನಟಿಸಿರುವ ಬಹುಭಾಷಾ ನಟ ರಮೇಶ್ ಅರವಿಂದ್ ಅವರು ದೈಜಿ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಶಿವಾಜಿ ಸುರತ್ಕಲ್ ಭಾಗ 1 ಮತ್ತು 2 ಸಿನಿಮಾಗಳ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ‘ದೈಜಿ’ ಎಂದು ಇಡಲಾಗಿದ್ದು, ಇದಕ್ಕೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ …

Read More »

JDS ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದೀರ್ಘವಾದ ಚರ್ಚೆ ಆಗಬೇಕು ಎಂದ ಬೊಮ್ಮಾಯಿ

ಬಳ್ಳಾರಿ: ಕರ್ನಾಟಕದಲ್ಲಿ 4 ತಿಂಗಳ ಆಡಳಿತ ನೋಡಿದಾಗ ಎಲ್ಲರೂ ಸೇರಿ ಜನರ ಪರವಾಗಿ ಮತ್ತು ರಾಜಕೀಯವಾಗಿ ಸರ್ಕಾರವನ್ನು ವಿರೋಧ ಮಾಡುವ ಅವಶ್ಯಕತೆ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಕುರಿತಂತೆ ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಏನು ಹೇಳಿಕೆ ನೀಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದೀರ್ಘವಾದ ಚರ್ಚೆ ಎಲ್ಲಾ ಹಂತದಲ್ಲೂ ಆಗಬೇಕು ಎಂದರು. ಶನಿವಾರ …

Read More »

ವಿಶ್ವ ನಾಯಕರ ಭೋಜನಕ್ಕೆ ಚಿನ್ನ , ಬೆಳ್ಳಿ ಲೇಪಿತ ಪಾತ್ರೆಗಳ ಬಳಕೆ: ಶರದ್ ಪವಾರ್

ಮುಂಬೈ (ಮಹಾರಾಷ್ಟ್ರ): ಸೆಪ್ಟೆಂಬರ್ 9 ಮತ್ತು 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ವಿಶ್ವ ನಾಯಕರಿಗೆ ಏರ್ಪಡಿಸಲಾದ ಔತಣಕೂಟದಲ್ಲಿ ಬೆಳ್ಳಿ ಮತ್ತು ಚಿನ್ನಲೇಪಿತ ಪಾತ್ರೆಗಳ ಬಳಕೆಯ ಬಗ್ಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.   ಭಾನುವಾರ ದಕ್ಷಿಣ ಮುಂಬೈನಲ್ಲಿ ನಡೆದ ತಮ್ಮ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, “ಇಂತಹ ಕಾರ್ಯಕ್ರಮಗಳು (ಜಿ20) ಈ ಹಿಂದೆ ಭಾರತದಲ್ಲಿ ಎರಡು ಬಾರಿ …

Read More »