Breaking News

ರಾಜ್ಯ

ಹೆಸ್ಕಾಂನಲ್ಲಿ 248 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಸ್ಕಾಂನಲ್ಲಿ ಒಂದು ವರ್ಷದ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ, ನೇಮಕಾತಿ ಸೇರಿದಂತೆ ಇನ್ನಿತರ ವಿವರಗಳು ಇಲ್ಲಿವೆ. ಹುಬ್ಬಳ್ಳಿ ವಿದ್ಯುತ್​​ ಸರಬರಾಜು ಕಂಪನಿ ನಿಯಮಿತದಿಂದ ಪ್ರಸಕ್ತ ಸಾಲಿನ ವೃತ್ತಿ ತರಬೇತಿಗಾಗಿ 248 ಐಟಿಐ ಅಪ್ರೆಂಟಿಸ್​ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಸ್ಕಾಂನಲ್ಲಿ ಕಾರ್ಯ ನಿರ್ವಹಣೆ ಅನುಭವವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸಲಾಗುತ್ತಿದ್ದು, ಈ ವೇಳೆ ಆಯ್ಕೆಯಾದ …

Read More »

ಪ್ರಮೋದ್ ಶೆಟ್ಟಿ’ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ

ಜಲಪಾತ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ವಿಭಿನ್ನ‌ ಪಾತ್ರ ಮಾಡುತ್ತಿದ್ದು,‌ ಈ‌ ಚಿತ್ರದಲ್ಲಿ ಅವರ ಫಸ್ಟ್​ ಲುಕ್ ರಿವೀಲ್ ಆಗಿದೆ. ಖಳನಟ ಹಾಗೂ ಪೋಷಕ ಪಾತ್ರಗಳಲ್ಲಿ ಸ್ಯಾಂಡಲ್​​ವುಡ್ ನಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಟ‌ ಪ್ರಮೋದ್ ಶೆಟ್ಟಿ. ‌ಇದೀಗ ‘ಜಲಪಾತ’ ಎಂಬ‌ ಸಿನಿಮಾದಲ್ಲಿ ಪ್ರಮೋದ್ ವಿಭಿನ್ನ‌ ಪಾತ್ರ ಮಾಡುತ್ತಿದ್ದಾರೆ. ‌ಈ‌ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರ ಫಸ್ಟ್​ ಲುಕ್ ರಿವೀಲ್​ ಆಗಿದೆ. ನಿರ್ದೇಶಕ ರಮೇಶ್ ಬೇಗಾರ್ ರಚಿಸಿ, ನಿರ್ದೇಶಿಸಿರುವ ಜಲಪಾತ ಚಿತ್ರದಲ್ಲಿ …

Read More »

ಎಲ್ಲ ರಂಗದಲ್ಲಿ ವೈಫಲ್ಯ ಕಂಡಿರುವುದೇ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಾಧನೆ: ಬೊಮ್ಮಾಯಿ ಟೀಕೆ

ಬೆಂಗಳೂರು: ಎಲ್ಲ ರಂಗದಲ್ಲಿ ವೈಫಲ್ಯ ಕಂಡಿರುವುದೇ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಾಧನೆಯಾಗಿದೆ. ಇಷ್ಟು ದಿನದಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು‌. ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಸರ್ಕಾರದ ನೂರು ದಿನದ ಸಂಭ್ರಮವನ್ನು ಟೀಕಿಸಿ ಸರಣಿ ಟ್ಚೀಟ್ ಮಾಡಿರುವ ಬೊಮ್ಮಾಯಿ, ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು …

Read More »

ಒಂದು ದಿನ ಮೊದಲೇ ಮುಂಬೈಗೆ ಮಮತಾ: ಇಂಡಿಯಾ ಸಭೆಗೂ ಮುನ್ನ ಬಿಗ್​ ಬಿ ಭೇಟಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೊಡೆತಟ್ಟಿ 28 ವಿಪಕ್ಷಗಳು ರೂಪಿಸಿಕೊಂಡಿರುವ I.N.D.I.A ಮೈತ್ರಿಕೂಟದ ಮೂರನೇ ಸಭೆ ಆಗಸ್ಟ್​ 31 ಮತ್ತು ಸೆಪ್ಟೆಂಬರ್​ 1 ರಂದು ಮುಂಬೈನಲ್ಲಿ ನಡೆಯಲಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಂದು ದಿನ ಮುಂಚೆ ಅಂದರೆ ಆಗಸ್ಟ್​ 30 ರಂದು ಮಹಾರಾಷ್ಟ್ರಕ್ಕೆ ಆಗಮಿಸಲಿದ್ದಾರೆ.   ಅಂದು ಬಾಲಿವುಡ್​​ನ ಖ್ಯಾತ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದು, ರಕ್ಷಾ …

Read More »

ವಿಷಾಹಾರ ಸೇವನೆ.. ಸಮತಾ ಆಶ್ರಮ ಶಾಲೆಯ 170 ವಿದ್ಯಾರ್ಥಿಗಳು ಅಸ್ವಸ್ಥ

ಸಾಂಗ್ಲಿ(ಮಹಾರಾಷ್ಟ್ರ): ಸಮತಾ ಆಶ್ರಮ ಶಾಲೆಯ ಮಕ್ಕಳು ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸಾಂಗ್ಲಿ – ಜತ್ತ ತಾಲೂಕಿನ ಉಮಡಿಯಲ್ಲಿ ನಡೆದಿದೆ. ಒಟ್ಟು 170 ವಿದ್ಯಾರ್ಥಿಗಳು ಆಹಾರ ಸೇವಿಸಿದ್ದು, ಫುಡ್​ ಪಾಯಿಸನ್​ ಆಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ತಕ್ಷಣವೇ ಮದ್ಗ್ಯಾಲ್‌ನಲ್ಲಿರುವ ಗ್ರಾಮೀಣ ಪ್ರಥಮ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಪ್ರಥಮ ಚಿಕಿತ್ಸೆ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕೆಲ ವಿದ್ಯಾರ್ಥಿಗಳನ್ನು ಸಾಂಗ್ಲಿ ಹಾಗೂ ಮಿರಾಜ್​​ನಲ್ಲಿರುವ ಸರಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ …

Read More »

ಅಂಕೋಲಾದ ಕೆಂದಗಿ ಗ್ರಾಮಕ್ಕಿಲ್ಲ ರಸ್ತೆ: ಗಾಯಾಳುವನ್ನ ಜೋಳಿಗೆಯಲ್ಲಿಟ್ಟು 15 ಕಿ.ಮೀ ಸಾಗಿಸಿದ ಗ್ರಾಮಸ್ಥರು

ಕಾರವಾರ : ಭಾರತ ಸ್ವಾತಂತ್ರ್ಯ ಹೊಂದಿ 75 ವರ್ಷ ಕಳೆದರೂ ಇನ್ನೂ ರಸ್ತೆ ಸಂಪರ್ಕವಿಲ್ಲದ ಗ್ರಾಮಗಳು ಬಹಳಷ್ಟಿವೆ ಎಂದರೆ ಅಚ್ಚರಿಯಾಗದೇ ಇರೋದಿಲ್ಲ. ಹೀಗೆ ರಸ್ತೆ ಸಮಸ್ಯೆಯಿದ್ದ ಗ್ರಾಮವೊಂದರಿಂದ ಗಾಯಾಳುವನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಹಳ್ಳಗಳಿಂದ ಜಲದಿಗ್ಭಂದನಕ್ಕೊಳಗಾಗಿದ್ದ ಗ್ರಾಮದಿಂದ ಸುಮಾರು 15 ಕಿ.ಮೀ ದೂರ ಹರಸಾಹಸಪಟ್ಟು, ಹಳ್ಳ ದಾಟಿಸಿ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗಿ ಗ್ರಾಮದ ಉಮೇಶ್ ಗೌಡ ಎಂಬುವರು​ …

Read More »

‘ಬಿಜೆಪಿಯಲ್ಲಿ ನಾಯಕರೊಂದಿಗೆ ಭಿನ್ನಾಭಿಪ್ರಾಯ ಇರೋದು ಸತ್ಯ,: ಶಂಕರ ಪಾಟೀಲ ಮುನೇನಕೊಪ್ಪ

ಹುಬ್ಬಳ್ಳಿ: ನನಗೆ ಈವರೆಗೂ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಬೇಕೆಂಬ ಆಹ್ವಾನ ಕಾಂಗ್ರೆಸ್ ಮುಖಂಡರಿಂದ ಬಂದಿಲ್ಲ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ನೀಡಿದ್ದಾರೆ. ಕಳೆದ ಕಲವು ದಿನಗಳಿಂದ ಶಂಕರ ಪಾಟೀಲ ಮುನೇನಕೊಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿರುವ ಅವರು, ”ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹಿತರು ಇದ್ದಾರೆ, ಬಂಧುಗಳು …

Read More »

ಇಸ್ರೋ ಮಹತ್ವದ ಘೋಷಣೆ: ಸೂರ್ಯನ ಅಧ್ಯಯನಕ್ಕೆ ಬಾಹ್ಯಾಕಾಶದಲ್ಲಿ ಆದಿತ್ಯ-L1 ವೀಕ್ಷಣಾಲಯ; ಸೆ.2ರಂದು ಉಡ್ಡಯನ

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್​-1 ವೀಕ್ಷಣಾಲಯ ಹೊತ್ತ ರಾಕೆಟ್‌ ಅನ್ನು ಸೆಪ್ಟೆಂಬರ್​ 2ರಂದು ಬೆಳಗ್ಗೆ 11:50 ನಿಮಿಷಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಇಂದು (ಸೋಮವಾರ) ಘೋಷಿಸಿದೆ. ಸೂರ್ಯನ ಅಧ್ಯಯನ ಮಾಡುವ ಭಾರತದ ಮೊಟ್ಟ ಮೊದಲ ಬಾಹ್ಯಾಕಾಶ ವೀಕ್ಷಣಾಲಯ ಇದಾಗಿದೆ. ಈ ಮಿಷನ್ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ …

Read More »

ಕಾಂಗ್ರೆಸ್​ ಕಾರ್ಯಕರ್ತೆಯ ಅವಹೇಳನ ಆರೋಪ; ಸೂಲಿಬೆಲೆ ವಿರುದ್ಧ ಎಫ್​ಐಆರ್​

ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ ಸೂಲಿಬೆಲೆ ಪೋಸ್ಟ್​ಗೆ ಸೌಗಂಧಿಕ ರಘುನಾಥ್ …

Read More »

ಯಾದಗಿರಿ: ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿ 24 ಜನರು ಅಸ್ವಸ್ಥ

ಯಾದಗಿರಿ: ಕಲುಷಿತ ನೀರು ಸೇವಿಸಿ 22 ಮಕ್ಕಳು, ಇಬ್ಬರು ವಯಸ್ಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಅಸ್ವಸ್ಥರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮಸ್ಥರಾದ ಯಲ್ಲಪ್ಪ ಛಲುವಾದಿ ಮಾತನಾಡಿ, “ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಎದುರಿನ ಕೈ ಪಂಪ್ (ಕೊಳವೆಬಾವಿ) ನೀರನ್ನು ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ತಟ್ಟೆ ತೊಳೆಯಲು ಮತ್ತು ಕುಡಿಯಲು ಬಳಸಿದ್ದಾರೆ. ಇದರಿಂದಾಗಿ ಅಸ್ವಸ್ಥಗೊಂಡಿರುವ ಅನುಮಾನವಿದೆ” ಎಂದು ಶಂಕೆ ವ್ಯಕ್ತಪಡಿಸಿದರು. …

Read More »