Breaking News
Home / ರಾಜ್ಯ (page 408)

ರಾಜ್ಯ

ರಾಜ್ಯ ಕಾಂಗ್ರೆಸ್​ನಲ್ಲಿ ಮೂರ್ನಾಲ್ಕು ಗುಂಪುಗಳಿವೆ.

ಹಾವೇರಿ : ರಾಜ್ಯ ಕಾಂಗ್ರೆಸ್​ನಲ್ಲಿ ಮೂರ್ನಾಲ್ಕು ಗುಂಪುಗಳಿವೆ. ಈ ಗುಂಪುಗಳ ಬಗ್ಗೆ ಮತದಾರರಿಗೆ ಗೊತ್ತಾದರೆ, ಲೋಕಸಭೆ ಚುನಾವಣೆಯಲ್ಲಿ ಹಿನ್ನೆಡೆಯಾಗಲಿದೆ. ಹೀಗಾಗಿ, ಕಾಂಗ್ರೆಸ್‌ನವರು ಘರ್​ ವಾಪ್ಸಿ ವದಂತಿ ಹಬ್ಬಿಸಿದ್ದಾರೆ ಎಂದು ಮಾಜಿ ಸಚಿವ ಬಿ. ಸಿ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಸ್ ಟಿ ಸೋಮಶೇಖರ್​ ಬಿಜೆಪಿಯ ಸಭೆಯಲ್ಲಿ ಭಾಗವಹಿಸಿದ್ದಾರೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಒಳ್ಳೆಯ ಮಾತನಾಡಿದ್ದಕ್ಕೆ ಈ ರೀತಿ ಪ್ರಚಾರ …

Read More »

ಸಾಹಿತಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧ: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೆ ರಕ್ಷಣೆ ಕೊಟ್ಟಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ಮಾಡುತ್ತೇವೆ. ಹಿರಿಯ ಅಧಿಕಾರಿಗಳೇ ಈ ಬಗ್ಗೆ ತನಿಖೆ ನಡೆಸುತ್ತಾರೆ. ಸಾಹಿತಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ ಒಂದು ವರ್ಗದ ಜನ ವಿರೋಧಿಸುವ ಕೆಲಸ ಮಾಡ್ತಿದ್ದಾರೆ. …

Read More »

ಬಗರ್​ ಹುಕುಂ ಭೂಮಿಗೆ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಉಪ ತಹಶೀಲ್ದಾರ್​ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಶಿವಮೊಗ್ಗ: ಬಗರ್ ಹುಕುಂ ಭೂಮಿ ಖಾತೆ ವಿಷಯವಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವಾಗ ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ನಾಡ ಕಚೇರಿಯ ಉಪ ತಹಶೀಲ್ದಾರ್ ಪರಮೇಶ್ ನಾಯ್ಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.   ಎರಡು ಎಕರೆ ಬಗರ್ ಹುಕುಂ ಭೂಮಿ ಖಾತೆಗೆ ಸೇರಿಸಲು ಶಿವರಾಜ್​ ಎಂಬುವರಿಂದ 40 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಈಶ್ವರ ನಾಯಕ್ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. …

Read More »

ಬೆಂಗಳೂರು: ವಿದ್ಯುತ್​ ಕಂಬ ಉರುಳಿಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ

ಬೆಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ವಿದ್ಯುತ್​ ತಂತಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜು ಬಳಿ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಿಯಾ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಇಲ್ಲಿನ ಕಾಲೇಜಿನಿಂದ ಹಿಂತಿರುಗುವಾಗ ಅವಘಡ ಸಂಭವಿಸಿದೆ. ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಿಂದ ಪ್ರಿಯಾ …

Read More »

ಕೊಲೆ ಪ್ರಕರಣದಲ್ಲಿ ಪುತ್ರ ಮತ್ತು ಪತಿ ಭಾಗಿಯಾಗಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಮೈಸೂರು: ಯುವಕನ ಕೊಲೆ ಪ್ರಕರಣದಲ್ಲಿ ಮಗ ಮತ್ತು ಪತಿ ಜೈಲುಪಾಲಾದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಸಾವಿನ ವಿಚಾರ ತಿಳಿದು ಪತಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಮೃತಪಟ್ಟವರನ್ನು ಸಾಮ್ರಾಟ್ ಹಾಗೂ ಆತ್ಮಹತ್ಯೆಗೆ ಶರಣಾದವರನ್ನು ಇಂದ್ರಾಣಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕಳೆದ ಶನಿವಾರ ರಾತ್ರಿ ಮೈಸೂರು ನಗರದ ವಿದ್ಯಾನಗರದ 4 ನೇ ಕ್ರಾಸ್​​ನ ನಿವಾಸಿ ಬಾಲರಾಜ್ ಎಂಬುವನನ್ನು ಕ್ಷುಲ್ಲಕ ಕಾರಣಕ್ಕಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. …

Read More »

ಚುನಾವಣೆಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕ್ರಿಕೆಟ್ ದಂತಕಥೆ, ಭಾರತರತ್ನ ಪ್ರಶಸ್ತಿ ಪುರಸ್ಕೃತ ಸಚಿನ್​ ತೆಂಡೂಲ್ಕರ್​ ಅವರನ್ನು ಭಾರತೀಯ ಚುನಾವಣಾ ಆಯೋಗವು ತನ್ನ ರಾಷ್ಟ್ರೀಯ ರಾಯಭಾರಿ ಎಂದು ಗುರುತಿಸಿದೆ.

ನವದೆಹಲಿ: ಭಾರತ ಕ್ರಿಕೆಟ್​ ಇತಿಹಾಸದಲ್ಲಿ ಸಚಿನ್​ ತೆಂಡೂಲ್ಕರ್​ ಎಂಬುದೊಂದು ದೊಡ್ಡ ಅಧ್ಯಾಯ. ಕೋಟ್ಯಂತರ ಅಭಿಮಾನಿಗಳ ಕಣ್ಮಣಿ. ಸಚಿನ್ ಆಟವನ್ನು ನೋಡಿ ಬೆಳೆದವರು ಇಂದು ರಾಷ್ಟ್ರೀಯ ತಂಡದಲ್ಲಿ ಮಿಂಚುತಿದ್ದಾರೆ. ದೇಶಿ ಮತ್ತು ವಿದೇಶಿ ಅಭಿಮಾನಿಗಳಿಗೂ ಇವರು​ ‘ಗಾಡ್​ ಆಫ್​ ಕ್ರಿಕೆಟ್’​. ಇದೀಗ ಸಚಿನ್​ ತಮ್ಮ ಇನ್ನೊಂದು ಮಹತ್ತರ ಜವಾಬ್ದಾರಿಯುತ ನಾಗರಿಕ ಪಾತ್ರ ನಿರ್ವಹಿಸಲು ಮುಂದಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಾಸ್ಟರ್​ ಬ್ಲಾಸ್ಟರ್ ಕ್ರಿಕೆಟಿಗನನ್ನು​​ ತನ್ನ ರಾಷ್ಟ್ರೀಯ ರಾಯಭಾರಿ ಎಂದು ಗುರುತಿಸಿದೆ. 2024ರಲ್ಲಿ …

Read More »

ಡಿಸಿಎಂಗೆ ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಇಲ್ಲ:H.D.K.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು. …

Read More »

ರಾಜ್ಯದ 27 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ಈ ಸಂಬಂಧ ಸಮಸ್ಯೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಲಾಗಿದೆ.

ಬೆಂಗಳೂರು : ರಾಜ್ಯದಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬರ ಘೋಷಣೆಗೆ ಮುನ್ನ ಕೇಂದ್ರದ ಮಾನದಂಡದಂತೆ ಮಾಸಾಂತ್ಯದೊಳಗೆ ಬೆಳೆ ಸಮೀಕ್ಷೆ ನಡೆಸಿ ವರದಿ ಪಡೆಯಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ. ವಿಧಾನಸೌಧದಲ್ಲಿ ಇಂದು ಪ್ರಕೃತಿ ವಿಕೋಪದಿಂದ ಉದ್ಬವಿಸಬಹುದಾದ ಪರಿಸ್ಥಿತಿ ಪರಾಮರ್ಶಿಸಲು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿದ ನಂತರ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ …

Read More »

ರಾಷ್ಟ್ರೀಯ ಹೆದ್ದಾರಿ ಬಂದ್​ಗೆ ಮುಂದಾದ ಮಂಡ್ಯ ರೈತರು

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಕೆಆರ್​ಎಸ್​ ಅಣೆಕಟ್ಟೆಯಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ, ಇಂದು ರೈತ ಸಂಘಟನೆಗಳು ಬೆಂಗಳೂರು – ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಇಂಡುವಾಳ ಬಳಿಯಲ್ಲಿ ಇಂದು ರೈತರು ಕಾವೇರಿ ನೀರು ತಮಿಳುನಾಡಿಗೆ ರಾಜ್ಯ ಸರ್ಕಾರ ಹರಿಸುತ್ತಿರುವುದನ್ನು ವಿರೋಧಿಸಿ ಹೆದ್ದಾರಿಯಲ್ಲೇ ಅಡುಗೆ ಮಾಡಿ ಪ್ರತಿಭೆಟನೆಗೆ ನಿರ್ಧರಿಸಿದ್ದರು. ಈ …

Read More »

ಸೇಂಟ್ ಪಾಲ್ಸ್ ಪಿಯು ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಫುಟ್ಬಾಲ್ ಮತ್ತು ಬಾಕ್ಸಿಂಗ್

ಸೇಂಟ್ ಪಾಲ್ಸ್ ಪಿಯು ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಫುಟ್ಬಾಲ್ ಮತ್ತು ಬಾಕ್ಸಿಂಗ್ ಪಂದ್ಯಾವಳಿಯನ್ನು ಡಿಡಿಪಿಯು ಪ್ರೊ.ಬಿ.ವೈ.ಹನ್ನೂರ ಉದ್ಘಾಟಿಸಿ ಮಾತುನಾಡಿದ ಅವರು ಪಂದ್ಯಾವಳಿಯಲ್ಲಿ ಭಾಗವಹಿಸುವ ಸಂಸ್ಥೆಗಳು ಕ್ರೀಡಾ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು , ಸೇಂಟ್ ಪಾಲ್ಸ್ ಪಿಯು ಕಾಲೇಜು ವೃತ್ತಿಪರವಾಗಿ ಮಾಡಿದ ವ್ಯವಸ್ಥೆಗಳನ್ನು ಡಿಡಿಪಿಯು ಪ್ರೊ.ಹನ್ನೂರು ಶ್ಲಾಘಿಸಿದರು. “ಇದೇ ಮೊದಲ ಬಾರಿಗೆ ನಾನು ಕಡಿಮೆ ಅವಧಿಯಲ್ಲಿ ಇಂತಹ ವಿಸ್ತಾರವಾದ ವ್ಯವಸ್ಥೆಗಳನ್ನು ಅನುಭವಿಸುತ್ತಿದ್ದೇನೆ” ಎಂದು ಹೇಳಿದರು. ಇನ್ನೂ ಕಾರ್ಯಕ್ರಮಕ್ಕೆ ಹಿರಿಯ ಪತ್ರಕರ್ತ ಲೂಯಿಸ್ …

Read More »