Breaking News
Home / ರಾಜ್ಯ (page 418)

ರಾಜ್ಯ

ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಖಂಡಿಸಿ ರೈತರ ಪ್ರತಿಭಟನೆ; ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಥ್‌

ಮಂಡ್ಯ : ತಮಿಳುನಾಡಿಗೆ ಕಾವೇರಿಯಿಂದ ಹೆಚ್ಚುವರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಜಿಲ್ಲೆಯಲ್ಲಿ ರೈತರು ಪ್ರತಿಭಟಿಸಿದ್ದಾರೆ. ಕಾವೇರಿಯಿಂದ ತಮ್ಮ ಪಾಲಿಗೆ ಬರಬೇಕಾದ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಕಳೆದ ಹಲವು ದಿನಗಳಿಂದ ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ 5 ಸಾವಿರ ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಈ ಮಧ್ಯೆ ತಮಿಳುನಾಡು ಸರ್ಕಾರ ತಗಾದೆ ತೆಗೆದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೀಗಾಗಿ ಜಲಾಶಯದಿಂದ ಕಾವೇರಿಯ …

Read More »

ಮೂಲಸೌಕರ್ಯದ ಕೊರತೆಯಿಂದಾಗಿ 13 ಸರ್ಕಾರಿ ಶಾಲೆಗಳಿಗೆ ಬೀಗ

ಚಾಮರಾಜನಗರ: ಮೂಲಸೌಕರ್ಯದ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಲವು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿವೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳಿಂದ ಆತಂಕಗೊಂಡು ಮಕ್ಕಳ ಶೂನ್ಯ ದಾಖಲಾತಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ. ಈ ಪೈಕಿ ಒಂದು ಉರ್ದು ಮಾಧ್ಯಮದ ಶಾಲೆಯೂ ಸೇರಿದೆ. ಕೋವಿಡ್ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ದಿಢೀರ್ ಏರಿಕೆ ಆಗಿತ್ತು. ಆದರೆ …

Read More »

ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಕೆಜಿಗೆ 100 ರಿಂದ 140 ರೂ ತಲುಪಿದೆ.

ಬೆಂಗಳೂರು: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ. ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ. …

Read More »

ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಪುನರ್‌ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ

ಬೆಂಗಳೂರು : ಪ್ರತಿನಿತ್ಯ 10,000 ಕ್ಯೂಸೆಕ್‌​ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರವನ್ನು ಪುನರ್‌ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾ ಬಳಿ ಮಾತನಾಡಿದ ಅವರು, ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಹೀಗಿದ್ದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ …

Read More »

ಶ್ರಾವಣ ಮಾಸ ಇಂದಿನಿಂದ ಆರಂಭವಾಗಿದೆ. ಎಲ್ಲೆಲ್ಲೂ ದೇವರ ಸ್ಮರಣೆ, ಧ್ಯಾನ

ಬೆಳಗಾವಿ: ಶ್ರಾವಣ ಮಾಸ ಇಂದಿನಿಂದ ಆರಂಭವಾಗಿದೆ. ಎಲ್ಲೆಲ್ಲೂ ದೇವರ ಸ್ಮರಣೆ, ಧ್ಯಾನ ನಡೆಯುತ್ತಿದೆ. ಇನ್ನು ಎಲ್ಲ ಊರುಗಳಲ್ಲಿ ವರ್ಷದಲ್ಲಿ ಒಂದು ತಿಂಗಳು ಮಾತ್ರ ಶ್ರಾವಣ ಇದ್ದರೆ ಈ ಊರಲ್ಲಿ ಮಾತ್ರ ಪ್ರತಿದಿನವೂ ಶ್ರಾವಣ. ಮಾಂಸಾಹಾರ ಸೇವನೆ ನಿಷಿದ್ಧ.‌ ಇಂತಹ ಅಪರೂಪದ‌ ಊರಿನ ಪರಿಚಯ ನಿಮಗಾಗಿ. ಕುಂದಾನಗರಿ ಬೆಳಗಾವಿಗೆ ಹೊಂದಿಕೊಂಡಿರುವ ಹಲವು ಐತಿಹಾಸಿಕ ಹಿನ್ನೆಲೆ ಇರುವ ಬಸವನಕುಡಚಿ ಗ್ರಾಮದಲ್ಲಿಯೇ ನಿತ್ಯ ಶ್ರಾವಣ ಸಂಭ್ರಮ ಮೇಳೈಸಿದೆ. ಇಂದಿನಿಂದ ಎಲ್ಲೆಡೆ ಶ್ರಾವಣ ಆರಂಭವಾಗಿದ್ದರಿಂದ ಶ್ರಾವಣ ಪಾಲಿಸುವವರು …

Read More »

ಶ್ರಾವಣ ಮಾಸದ ನಿಮಿತ್ತ ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮನ ಗುಡ್ಡದಲ್ಲಿ‌ ವಿಶೇಷ ಪೂಜೆ

ಬೆಳಗಾವಿ: ಉತ್ತರ ಕರ್ನಾಟಕ‌ದ ಶಕ್ತಿದೇವತೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಶ್ರಾವಣ ಮಾಸದ ಮೊದಲ ದಿನ ಭಕ್ತಸಾಗರವೇ ಹರಿದುಬಂತು. ಬೆಳಗ್ಗೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮಗುಡ್ಡದಲ್ಲಿ‌ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಇಂದು ರಾತ್ರಿ 2 ಗಂಟೆಗೆ ವಿಶೇಷ ಪೂಜೆ ನೆರವೇರಿದ್ದು, ಬೆಳಗ್ಗೆ 4 ಗಂಟೆಯಿಂದ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಯಿತು. ಬೆಳಗ್ಗೆ ಸಾವಿರಾರು …

Read More »

ರಾಜ್ಯದ 9 ಜಿಲ್ಲೆಯ 14 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಯಾರ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆ?

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ ಹೆಚ್ಚು …

Read More »

ಯಾರೂ ಬಿಜೆಪಿ ಬಿಡುವುದಿಲ್ಲ: ಬೊಮ್ಮಾಯಿ

ಬೆಂಗಳೂರು: ಕಾವೇರಿ ‌ನೀರು ಉಳಿಸಿಕೊಳ್ಳಲು ರೈತರು ಸುಪ್ರೀಂ ಕೊರ್ಟ್ ಗೆ ಹೋಗುವುದಾದರೆ ನೀವೇಕೆ ಅಧಿಕಾರದಲ್ಲಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಡಿಸಿಎಂ ಡಿಕೆ‌ ಶಿವಕುಮಾರ್ ಅವರು ಬೀಗದ ಕೈ ನಮ್ಮ ಕಡೆ ಇಲ್ಲ ಅಂತ ಹೇಳಿದ್ದಾರೆ. ನಮ್ಮ ರಾಜ್ಯದ ಹಕ್ಕಿದೆ ಡ್ಯಾಮ್ ನಮ್ಮಲಿದೆ ನಮ್ಮ ಹಕ್ಕನ ಇವರು ಬಿಟ್ಟು ಕೊಡುತ್ತಿದ್ದಾರೆ. ಇದರ ಬಗ್ಗೆ ಅವರಿಗೆ …

Read More »

ನಿನ್ನೆ ಸಂಜೆ ಗ್ಯಾಸ್ ಲೀಕ್ 18 ಗಂಟೆ ನಂತರ ಆ ರಸ್ತೆ ಮೂಲಕ ವಾಹನ ಸಂಚಾರ ಪುನರಾರಂಭವಾಗಿದೆ.

ಧಾರವಾಡ ಹೈಕೋರ್ಟ್‌ ಪೀಠದ ಎದುರಿಗೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ಗ್ಯಾಸ್ ಲೀಕ್ ಆಗಿದ್ದ ವಾಹನವನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸರು ಯಶಸ್ವಿಯಾಗಿ ತೆರವುಗೊಳಿಸಿದ್ದು, 18 ಗಂಟೆ ನಂತರ ಆ ರಸ್ತೆ ಮೂಲಕ ವಾಹನ ಸಂಚಾರ ಪುನರಾರಂಭವಾಗಿದೆ. ಗ್ಯಾಸ್ ಸಿಲಿಂಡರ್ ವಾಹನ ಬ್ರಿಡ್ಜ್ ದಾಟುತ್ತಿದ್ದ ವೇಳೆ ಬ್ರಿಡ್ಜ್‌ಗೆ ತಾಗಿ ಗ್ಯಾಸ್ ಲೀಕ್ ಆಗಿತ್ತು. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಿದ್ದರು. …

Read More »

ಕಸ ವಿಲೇವಾರಿಗೆ ಸಹಕರಿಸಲು ಸಾರ್ವಜನಿಕರಿಗೆ ಪಾಲಿಕೆ ಆಯುಕ್ತ ಅಶೋಕ ದುಡಗುಂಟೆ ಮನವಿ

ಬೆಳಗಾವಿ,  ಸಾರ್ವಜನಿಕರು ತಮ್ಮಲ್ಲಿ ಉತ್ಪತ್ತಿಯಾಗುವ ದೈನಂದಿನ ತ್ಯಾಜ್ಯವನ್ನು ಹಸಿ ಕಸ, ಒಣ ಕಸ & ಅಪಾಯಕಾರಿ ತ್ಯಾಜ್ಯವೆಂದು ಬೇರ್ಪಡಿಸಿ ಕಸ ಸಂಗ್ರಹಣಕಾರರಿಗೆ ನೀಡುವುದರೊಂದಿಗೆ ಬೆಳಗಾವಿ ನಗರವನ್ನು ಸ್ವಚ್ಛ ನಗರವನ್ನಾಗಿಸುವಲ್ಲಿ ಹಾಗೂ ಘನತ್ಯಾಜ್ಯ ವಸ್ತು ವಿಲೇವಾರಿ ನಿಯಮ 2016 ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಹಕರಿಸಬೇಕು ಎಂದು ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ ಅವರು ತಿಳಿಸಿದ್ದಾರೆ. ಮಹಾನಗರ ಪಾಲಿಕೆ ವತಿಯಿಂದ ಮನೆ-ಮನೆ ಕಸ ಸಂಗ್ರಹಣೆ ಕುರಿತು ವಾರ್ಡವಾರು ಅವಶ್ಯಕತೆಯನುಸಾರ ಬೆಳಿಗ್ಗೆ ರಹವಾಸಿ ಪ್ರದೇಶಗಳಲ್ಲಿ …

Read More »