Breaking News

ರಾಜ್ಯ

ಈಜಲು ತೆರಳಿದ್ದ ಇಬ್ಬರು ಸ್ನೇಹಿತರು ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿ ಗ್ರಾಮದ ಬಳಿಯ ಭದ್ರಾ ನಾಲೆಯಲ್ಲಿ ಸಂಭವಿಸಿದೆ.

ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ ಪಾಂಡು ಹಾಗೂ ಯತೀಂದ್ರ ಮೃತಪಟ್ಟ ಮಕ್ಕಳೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶಾಲೆಗೆ ರಜೆ ಹಿನ್ನೆಲೆ ಈಜಲು ಬಂದಿದ್ದ ಮಕ್ಕಳು: ಮೃತ ಮಕ್ಕಳಿಬ್ಬರು ದೂರದ ತುರ್ಚಘಟ್ಟ ಗ್ರಾಮದ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಸ್ನೇಹಿತರಾಗಿದ್ದು ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಕುರ್ಕಿ …

Read More »

ಇಡೀ ರಾಮನಗರ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ : ಡಿಸಿಎಂ ಡಿ ಕೆ

ರಾಮನಗರ : ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ತಿಳಿಸಿದರು. ಭಾನುವಾರ ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಅವರು ಮಾತನಾಡಿದರು. ಇದು ಋಣ ತೀರಿಸುವ ಕಾರ್ಯಕ್ರಮ. ನೀವು ನಮಗೆ ಕೊಟ್ಟ ಶಕ್ತಿಗೆ ಅಭಿನಂದನೆ ಸಲ್ಲಿಸಲು ಈ ಕಾರ್ಯಕ್ರಮ …

Read More »

ಮೊಸಳೆಯನ್ನೆ ಹೆಗಲ ಮೇಲೆ ಹೊತ್ತ ಭೂಪರು…!!!

 ಮೊಸಳೆಯನ್ನೆ ಹೆಗಲ ಮೇಲೆ ಹೊತ್ತ ಭೂಪರು…!!! ಕಳೆದ ಆರು ತಿಂಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಮೊಸಳೆಯನ್ನ ಸೆರೆಹಿಡಿದು ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅಥಣಿ: ಕಳೆದ ಆರು ತಿಂಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಮೊಸಳೆಯನ್ನ ಸೆರೆಹಿಡಿದು ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಗ್ರಣಿ ನದಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಆರು ಅಡಿ ಧೈತ್ಯ ಗಾತ್ರದ ಮೊಸಳೆಯನ್ನ ಗ್ರಾಮದ ಯುವಕರು ರಾತ್ರಿ ಹೊತ್ತು ಸುರಕ್ಷಿತ ವಾಗಿ ಸೆರೆ ಹಿಡಿದಿದ್ದಾರೆ. ನಿನ್ನೆ …

Read More »

ಖಾನಾಪೂರ ಕೋ ಆಪ್ (ಅರ್ಬನ್ ಬ್ಯಾಂಕ್)ಬ್ಯಾಂಕಿನ ಮತ ಎಣಿಕೆ ಮಂಗಳವಾರ ನಡೆಯುವ ಸಾಧ್ಯತೆ.

ಖಾನಾಪೂರ :-ಖಾನಾಪೂರ ಕೋ ಆಪ್ ಬ್ಯಾಂಕ್ (ಅರ್ಬನ್ ಬ್ಯಾಂಕ್) ನ ಚುನಾವಣೆ ನಡೆದು ಹದಿನೈದರಿಂದ ಇಪ್ಪತ್ತು ದಿನಗಳು ಕಳೆದಿವೆ, ಆದರೆ ಹೊಸ ಮತದಾರರ ಪಟ್ಟಿಯ ಗೊಂದಲದ ಮೇಲೆ ಚುನಾವಣಾ ಫಲಿತಾಂಶಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಮತ ಎಣಿಕೆ ನಡೆಯಲು ಸಾಧ್ಯವಾಗಿರಲಿಲ್ಲ. ಆದರೆ ಬಲ ಮಾಹಿತಿ ಪ್ರಕಾರ ಚುನಾವಣೆಯ ಮತ ಎಣಿಕೆಯು ಫೆಬ್ರವರಿ 4, 2025 ರ ಮಂಗಳವಾರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಮತ ಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿ ರವೀಂದ್ರ …

Read More »

ಫೆ. 5 ರಿಂದ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ನೀರು

ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವರ 2024-25ನೇ ಸಾಲಿನ ಜಾತ್ರೆ ಮತ್ತು ಕಾರ್ಣಿಕೋತ್ಸವ ಇದೇ ತಿಂಗಳಲ್ಲಿ ಜರುಗಲಿದೆ. ಈ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆಬ್ರವರಿ 5 ರಿಂದ 11ರ ವರೆಗೆ 5,800 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಫೆಬ್ರವರಿ 5ರ ರಾತ್ರಿ 100 ಕ್ಯೂಸೆಕ್​ ಮತ್ತು ಫೆಬ್ರವರಿ 6 ರಿಂದ ಫೆಬ್ರವರಿ 11ರ ವರೆಗೆ ಪ್ರತಿದಿನ 800 …

Read More »

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ವಾಟಾಳ್ ನಾಗರಾಜ್​ರಿಂದ ಒನಕೆ ಪ್ರತಿಭಟನೆ

ಮೈಸೂರು : ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಒನಕೆ ಹಿಡಿದು ವಿನೂತನವಾಗಿ ಭಾನುವಾರ ಹಾರ್ಡಿಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳ ಕಪ್ಪು ಹಣ ತಂದು ರಾಜ್ಯದ ಜನರಿಗೆ ಹಿಂಸೆ ಕೊಡುವ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ತಲೆ …

Read More »

ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಅಭಿಯಾನಕ್ಕೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ಗುಲಾಬಿ ಹೂವು ನೀಡಿ ಹೆಲ್ಮೆಟ್ ಧರಿಸುವಂತೆ ವಿನಂತಿ

ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಅಭಿಯಾನಕ್ಕೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ಗುಲಾಬಿ ಹೂವು ನೀಡಿ ಹೆಲ್ಮೆಟ್ ಧರಿಸುವಂತೆ ವಿನಂತಿ ಬೆಳಗಾವಿ ನಗರ ಪೊಲೀಸ ವತಿಯಿಂದ ಹಮ್ಮಿಕೊಂಡ “ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಮತ್ತು ಜಾರಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಚಾಲನೆಯನ್ನು ನೀಡಿದರು. ಬೆಳಗಾವಿ ನಗರ ಪೊಲೀಸನ ವತಿಯಿಂದ ಹಮ್ಮಿಕೊಂಡಿದ್ದ “ಪ್ರಾಜೆಕ್ಟ್ ಹೆಲ್ಮೆಟ್” ರಸ್ತೆ ಸುರಕ್ಷಾ, ಜಾಗೃತಿ ಮತ್ತು …

Read More »

ಕಾಂಗ್ರೆಸ್ಸಿನ ಪ್ರಬಲ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ

ಕಾಂಗ್ರೆಸ್ಸಿನ ಪ್ರಬಲ ಶಾಸಕ ಬಿ ಆರ್ ಪಾಟೀಲ್ ರಾಜೀನಾಮೆ ಕಾರಣವೇನು ಗೊತ್ತಾ… ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಆಘಾತ ಎದುರಾಗಿದ್ದು ಕಾಂಗ್ರೆಸ್ಸಿನ ಪ್ರಬಲ ಶಾಸಕ ಬಿ ಆರ್ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಸಚಿವ ಸ್ಥಾನಕ್ಕಾಗಿ ನಾನು ಕೆಳಮಟ್ಟದ ರಾಜಕಾರಣ ಮಾಡುತ್ತಿಲ್ಲ ಎಂದು ಬಿ.ಆರ್. ಪಾಟೀಲ್ ಸ್ಪರ್ಷಪಡಿಸಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮೊದಲೇ ರಾಜೀನಾಮೆ ಕೊಡುವ ನಿರ್ಧಾರವನ್ನು …

Read More »

ಬಿಮ್ಸನಲ್ಲಿ ಆತಂಕ ಸೃಷ್ಠಿಸಿದ ನಕಲಿ ವಿದ್ಯಾರ್ಥಿ ಓಡಾಟ…!!! ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಪಿಜಿ ವಿದ್ಯಾರ್ಥಿ ಎಂದು ಹೇಳಿ ಬಿಮ್ಸ್ ಆಸ್ಪತ್ರೆಯಲ್ಲಿ ಯುವಕನೊಬ್ಬ ಹುಚ್ಚಾಟ ನಡೆಸಿದ್ದಾನೆ. ಈತನ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ವೇಷ ಧರಿಸಿ ಬೀಮ್ಸ್ ಆಸ್ಪತ್ರೆಯ ಈತ, ಕ್ಲಾಸ್ ರೂಂ, ಹೆರಿಗೆ ವಾರ್ಡ್, ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಓಡಾಟ ನಡೆಸಿದ್ದಾನೆ. ಬಿಮ್ಸ್ ನಲ್ಲಿ ಬಂದು ಕುಳಿತು ವಿದ್ಯಾರ್ಥಿಗಳಿಗೆ ಆತಂಕ ಸೃಷ್ಟಿಸಿದ ಘಟನೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಿಮ್ಸ್ ನಲ್ಲಿ ನರ್ಸಿಂಗ್ ಸ್ಟಾಪ್, ‌ವಿದ್ಯಾರ್ಥಿಗಳ ಜೊತೆಗೆ …

Read More »

ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರೇ ಹುಷಾರ್: 10 ವರ್ಷದವರೆಗೆ ಶಿಕ್ಷೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡುವ ಕಸರತ್ತು ನಡೆಸುವ ಮಧ್ಯೆಯೇ ಇತ್ತ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ ತಿದ್ದುಪಡಿಗೆ ಸಹಕಾರ ಇಲಾಖೆಯೂ ಸಿದ್ಧತೆ ನಡೆಸಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿಗಾರರ ವಿರುದ್ಧ ನಿಯಂತ್ರಣ ಹೇರಲು ಇರುವ ಕಾನೂನನ್ನೇ ಪ್ರಯೋಗ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುಗ್ರೀವಾಜ್ಞೆ …

Read More »