Home / ರಾಜ್ಯ (page 435)

ರಾಜ್ಯ

ಮಗಳನ್ನು ಮದುವೆ ಮಾಡಿಕೊಡದ್ದಕ್ಕೆ 850 ಅಡಿಕೆ ಗಿಡ ಕಡಿದು ಹಾಕಿದ ಯುವಕ’- ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

ಮೈಸೂರು: ಮಗಳನ್ನು ಮದುವೆ ಮಾಡಿಕೊಡಲು ಒಪ್ಪದ ತಂದೆಯ ನಿರ್ಧಾರದಿಂದ ಕೋಪಗೊಂಡ ಯುವಕನೊಬ್ಬ, ಯುವತಿಯ ತಂದೆಗೆ ಸೇರಿದ ಫಸಲಿಗೆ ಬಂದಿದ್ದ 850ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮನಬಂದಂತೆ ಕತ್ತರಿಸಿ ಹಾಕಿರುವ ಆರೋಪ ಪ್ರಕರಣ ಹುಣಸೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಈ ಸಂಬಂಧ ಯುವತಿಯ ತಂದೆ ಆರೋಪಿಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹುಣಸೂರು ತಾಲೂಕಿನ ಕಡೆಮನುಗನಹಳ್ಳಿ ಎಂಬ ಗ್ರಾಮದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಕಡೆಮನುಗನಹಳ್ಳಿ …

Read More »

ತುಂಗಭದ್ರಾ ತೀರದ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಸಿಬ್ಬಂದಿ ಮೇಲೆಯೇ ಹಲ್ಲೆ – ದೂರು ದಾಖಲು

ರಾಯಚೂರು : ಜಿಲ್ಲೆಯ ಮಾನವಿ ತಾಲೂಕಿನ ಚಿಕಲಪರ್ವಿ ಗ್ರಾಮ ಸೇರಿದಂತೆ ವಿವಿಧೆಡೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಟಿಪ್ಪರ್ ಹಾಗೂ ಜೆಸಿಬಿ ಜಪ್ತಿ ಮಾಡಿಕೊಂಡಿದ್ದಾರೆ. ಈ ವೇಳೆ ಆರು ಜನರ ತಂಡವೊಂದು ರಕ್ಷಣಾ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದು, ಅಧಿಕಾರಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮಾಜಿ ಸೈನಿಕ ಹಾಗೂ ಖನಿಜಾ ರಕ್ಷಣಾ ಪಡೆಯ ಸಿಬ್ಬಂದಿ ನೀಲಪ್ಪ ಹಲ್ಲೆಗೊಳಗಾದವರು. ಕಬ್ಬಿಣದ ರಾಡ್​​ನಿಂದ ಹಲ್ಲೆ ಮಾಡಲಾಗಿದ್ದು, …

Read More »

ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ: ಕ್ಯಾಬ್ ಚಾಲಕ ಪೊಲೀಸ್​ ವಶಕ್ಕೆ

ಬೆಂಗಳೂರು: ಮಹಿಳೆಗೆ ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಬೆಳ್ಳಂದೂರು ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೇಲೆ ಹಲ್ಲೆ ಮಾಡಿರುವುದಾಗಿ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಕ್ಯಾಬ್ ಚಾಲಕ ಬಸವರಾಜ್​ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳ್ಳಂದೂರಿ‌ನ ಬೋಗನಹಳ್ಳಿಯ ಅಪಾರ್ಟ್​​ಮೆಂಟ್​​​ನಲ್ಲಿ ಮಹಿಳೆಯ ಕುಟುಂಬ ವಾಸವಾಗಿದೆ. ಮಗನ ಚಿಕಿತ್ಸೆ ಸಲುವಾಗಿ ಬುಧವಾರ ಬೋಗನಹಳ್ಳಿಯಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಲು ಮಹಿಳೆಯು ಕ್ಯಾಬ್ ಬುಕ್ …

Read More »

ಮನೆ ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆಗೆ ಚಾಕು‌ವಿನಿಂದ ಇರಿದ ಬಾಡಿಗೆದಾರ..

ಬೆಂಗಳೂರು: ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ನಗರದ ನಿವಾಸಿ ಶ್ರೀದೇವಿ ತೀವ್ರ ಹಲ್ಲೆಗೊಳಗಾಗಿದ್ದು, ಈಕೆ ನೀಡಿದ ದೂರಿನ ಮೇರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಜೀರ್, ಈತನ ಪುತ್ರ ಸದ್ದಾಂ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ‌. ಮುನೇಶ್ವರ ನಗರದಲ್ಲಿ‌ ಕಳೆದ 16 ವರ್ಷಗಳಿಂದ ಶ್ರೀದೇವಿ ವಾಸವಾಗಿದ್ದಳು.‌ ಈಕೆ ಉಳಿದುಕೊಂಡಿದ್ದ ಕಟ್ಟಡದಲ್ಲಿ ನಜೀರ್ ವಾಸವಾಗಿದ್ದ. …

Read More »

ಹೊಸಪೇಟೆ ಎಸ್ಟಿ ಕಾಲೇಜು ಹಾಸ್ಟೆಲ್​ನಲ್ಲಿ ಚಿಕನ್​ ಊಟ ಮಾಡಿದ್ದ ವಿದ್ಯಾರ್ಥಿನಿಯರು ಅಸ್ವಸ್ಥ

ವಿಜಯನಗರ: ಹೊಸಪೇಟೆ ಎಸ್ಟಿ ಕಾಲೇಜು ಹಾಸ್ಟೆಲ್​ನಲ್ಲಿ ನಿನ್ನೆ ರಾತ್ರಿ ಚಿಕನ್​ ಊಟ ಮಾಡಿದ್ದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಘಟನೆ ಕುರಿತು ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್ ಮಾಹಿತಿ ನೀಡಿದ್ದಾರೆ. “ಜಂಬುನಾಥ ರಸ್ತೆಯಲ್ಲಿರೋ ಬಾಲಕಿಯರ ಮೆಟ್ರಿಕ್ ಎಸ್ಟಿ ಹಾಸ್ಟೆಲ್​ನಲ್ಲಿ ಒಟ್ಟು 148 ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ 17 ಸಸ್ಯಹಾರಿ ಮಕ್ಕಳಿದ್ದು, ಇವರನ್ನು ಬಿಟ್ಟು ಉಳಿದ ಮಕ್ಕಳೆಲ್ಲಾ ನಿನ್ನೆ ರಾತ್ರಿ 7.30 ರಿಂದ 8 ಗಂಟೆ ಒಳ ಸಮಯದಲ್ಲಿ ಚಿಕನ್ ಊಟ …

Read More »

ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಮತ್ತು ಒತ್ತುವರಿಯಾದ ಸರ್ಕಾರ ಭೂಮಿಯನ್ನು ತೆರವುಗೊಳಿಸಿರುವ ಬಗ್ಗೆ ವಿವರಣೆ ನೀಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರು : ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೆ ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ಒದಗಿಸಲು ಹಾಗೂ ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ವಿರುದ್ಧ ಅರ್ಜಿದಾರರು ಎತ್ತಿರುವ ಆಕ್ಷೇಪಗಳಿಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.   ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು …

Read More »

ರಾಜ್ಯದಲ್ಲಿ ನಮ್ಮ ಕ್ಲಿನಿಕ್​ಗಳನ್ನು ಇನ್ನಷ್ಟು ಜನಸ್ನೇಹಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ

ಬೆಂಗಳೂರು: ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ನಮ್ಮ ಕ್ಲಿನಿಕ್​​ಗಳಿಗೆ ಆರೋಗ್ಯ ಸಚಿವರು ಜನಸ್ನೇಹಿ ಸ್ಪರ್ಶ ನೀಡಿದ್ದು, ಕ್ಲಿನಿಕ್​​ಗಳ ಸಮಯ ಬದಲಾವಣೆ ಮಾಡಿ ಸಂಜೆ ವೇಳೆಯೂ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಕ್ಲಿನಿಕ್​​ಗಳ ಪೈಕಿ ಶೇಕಡಾ 25ರಷ್ಟು ನಮ್ಮ ಕ್ಲಿನಿಕ್​ಗಳ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಸಂಜೆ 4.30ಕ್ಕೆ ಬಾಗಿಲು ಮುಚ್ಚುತ್ತಿದ್ದ ನಮ್ಮ ಕ್ಲಿನಿಕ್​ಗಳು ಇನ್ನು ಮುಂದೆ ರಾತ್ರಿ 8 ಗಂಟೆಯ ತನಕ …

Read More »

ಹುಬ್ಬಳ್ಳಿ – ಧಾರವಾಡ ಮೊಟ್ಟ ಮೊದಲ ಮಹಿಳಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ

ಹುಬ್ಬಳ್ಳಿ/ಬೆಂಗಳೂರು: ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದೆ. ಹುಬ್ಬಳ್ಳಿ ಧಾರವಾಡ ನೂತ‌ನ ಪೊಲೀಸ್ ಆಯುಕ್ತರನ್ನಾಗಿ ಮಹಿಳಾ ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರೇಟ್​ನ ಮೊಟ್ಟ ಮೊದಲ ಮಹಿಳಾ ಕಮಿಷನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ರೇಣುಕಾ ಸುಕುಮಾರ ಅವರು 2011ರ ಐಪಿಎಸ್ …

Read More »

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ವಾರಾಹಿ ಯಾತ್ರೆಯ ಮೂರನೇ ಹಂತ ಇಂದಿನಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ.

  ವಿಶಾಖಪಟ್ಟಣಂ, ಆಂಧ್ರಪ್ರದೇಶ: ನಟ ರಾಜಕಾರಣಿ ಪವನ್​ ಕಲ್ಯಾಣ್​ ಅವರಿಂದ ನಡೆಯುತ್ತಿರುವ ವಾರಾಹಿ ಯಾತ್ರೆ ಮುಂದುವರಿಯಲಿದೆ.ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಮೂರನೇ ಹಂತದ ವಾರಾಹಿ ಯಾತ್ರೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಈ ಯಾತ್ರೆ ಇದೇ ತಿಂಗಳ 19ರವರೆಗೆ ಮುಂದುವರಿಯಲಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನದಂದು ತಮ್ಮ ಈ ವಾರಾಹಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇಂದು ಮಧ್ಯಾಹ್ನ ಪವನ್ ಕಲ್ಯಾಣ್ ನಗರವನ್ನು ತಲುಪಲಿದ್ದು, …

Read More »

ಚುನಾವಣೆ ಗೆಲ್ಲಲು ಕೈ ಮಹಾಪ್ಲಾನ್​.. ವಿದ್ಯಾರ್ಥಿನಿಗೆ ಸ್ಮಾರ್ಟ್​​​ ಫೋನ್​ ವಿತರಿಸಿದ ರಾಹುಲ್

ಜೈಪುರ(ರಾಜಸ್ಥಾನ): ಮತ್ತೆ ಅಧಿಕಾರಕ್ಕೆ ಮರಳಲು ಪ್ಲಾನ್​ ಹಾಕಿರುವ ಸಿಎಂ ಅಶೋಕ್​ ಗೆಹ್ಲೋಟ್​ ಅದಕ್ಕಾಗಿ ಭರ್ಜರಿ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಜೈಪುರದ ಬಿರ್ಲಾ ಆಡಿಟೋರಿಯಂನಲ್ಲಿ ಇಂದು ಸ್ಮಾರ್ಟ್​ಫೋನ್​ ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಗೆ ಚಾಲನೆ ಸಿಗುವ ಮುನ್ನವೇ ಕಾಂಗ್ರೆಸ್​ ನೇತಾರ, ರಾಹುಲ್​ ಗಾಂಧಿ ನಿನ್ನೆ ಮಂಗರ್‌ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸ್ಮಾರ್ಟ್‌ಫೋನ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಚಿರಂಜೀವಿ ಕುಟುಂಬದ ಮಹಿಳಾ ಮುಖ್ಯಸ್ಥರು …

Read More »