Home / ರಾಜ್ಯ (page 449)

ರಾಜ್ಯ

ಖಾನಾಪೂರ- ಗೋವಾ ರಾಜ್ಯ ಹೆದ್ದಾರಿಯ ರುಮೇವಾಡಿ ಕ್ರಾಸ್ ಬಳಿ ಈ ಸರ್ಕಸ್ ನಲ್ಲಿ ಇತ್ತೀಚೆಗೆ ಒಂದು ಜೀವಹಾನಿ ಕೂಡಾವಾಗಿದೆ.

ನೋಡಿ, ನೋಡಿ ಸರ್ಕಸ್ ನೋಡಿ ಅದು ಎಲ್ಲಿ ಅಂತೀರಾ ಅಲ್ಲೇ ರೀ ನಮ್ಮ ಖಾನಾಪೂರ- ಗೋವಾ ರಾಜ್ಯ ಹೆದ್ದಾರಿಯ ರುಮೇವಾಡಿ ಕ್ರಾಸ್ ಬಳಿ ಈ ಸರ್ಕಸ್ ನಲ್ಲಿ ಇತ್ತೀಚೆಗೆ ಒಂದು ಜೀವಹಾನಿ ಕೂಡಾವಾಗಿದೆ. ಗೋವಾ ದಿಂದ ಬೆಳಗಾವಿ, ಹಳಿಯಾಳ ದಿಂದ ಬೆಳಗಾವಿಗೆ ಸಂಪರ್ಕಿಸುವ ಈ ಮುಖ್ಯ ರಸ್ತೆ ಯು ಸುಮಾರು ಹತ್ತಾರು ಗ್ರಾಮಗಳಿಗೆ ಸಂಪರ್ಕದ ರಸ್ತೆ ಈ ರಸ್ತೆಯಲ್ಲಿ ಪ್ರತಿದಿನ, ಪ್ರತಿಕ್ಷಣವೂ ಸರ್ಕಸ್ ಮಾಡಿಯೇ ಮುಂದೆ ಹೋಗಬೇಕಾದ ಪರಿಸ್ಥಿತಿ. ಇದಕ್ಕೆ …

Read More »

ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಸ್ಕ್ರೂಡ್ರೈವರ್​ನಿಂದ ಚುಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಓರ್ವ ಕೈದಿ ಸ್ಕ್ರೂಡ್ರೈವರ್​ನಿಂದ ಮತ್ತೊಬ್ಬ ಕೈದಿಗೆ ಐದು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಶಂಕರ ಭಜಂತ್ರಿ ಕೊಲೆ ಮಾಡಲು ಯತ್ನಿಸಿದ ಕೈದಿ. ಮಂಡ್ಯ ಮೂಲದ ಸಾಯಿಕುಮಾರ್​ ಗಾಯಗೊಂಡ ವಿಚಾರಣಾಧೀನ ಕೈದಿ. ಸಾಯಿಕುಮಾರ್​ ಅವರಿಗೆ …

Read More »

ರಾಮತೀರ್ಥ ನಗರ ಕಾಲೋನಿಗೆಪಾಲಿಕೆ ಆಯುಕ್ತರ ಭೇಟಿ,

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಅವರು ಇಂದು ವಾರ್ಡ್ ನಂ. 46ರಲ್ಲಿ ರಾಮತೀರ್ಥ ನಗರ ಕಾಲೋನಿಗೆ ಎಲ್ ಅಂಡ್ ಟಿ ಅಧಿಕಾರಿ ಹಾರ್ದಿಕ್ ದೇಸಾಯಿ ಹಾಗೂ ಕರ್ನಾಟಕ ನಾಗರಿಕ ನೀರು ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ರಾಮತೀರ್ಥ ನಗರದಲ್ಲಿ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ನೇತೃತ್ವದಲ್ಲಿ ಎಲ್ಲ ಇಲಾಖೆ ಸಿಬ್ಬಂದಿಯೊಂದಿಗೆ ಸಮೀಕ್ಷೆ ನಡೆಸಲಾಯಿತು. ಈ ಭಾಗದಲ್ಲಿ 24/7 ನೀರಿನ ಯೋಜನೆಗಾಗಿ ಎಲ್ ಆ್ಯಂಡ್ ಟಿ …

Read More »

1,38,000 ಮೌಲ್ಯದ 12 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡ ಹಾರೂಗೇರಿ ಪೊಲೀಸರು

ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ವಾಹನ ತಪಾಸಣೆ ನಡೆಸಿ 1,38,000 ಮೌಲ್ಯದ 12 ಕದ್ದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸರು ಹಾರೂಗೇರಿ ಕ್ರಾಸನಲ್ಲಿ ಮಹಾರಾಷ್ಟ್ರದ ಟಾಟಾ ಎಸ್ ವಾಹನವನ್ನು (ಸಂಖ್ಯೆ ಎಂಎಚ್13ಎಎನ್ 5310) ಅಡ್ಡಗಟ್ಟಿ ಆ ವಾಹನದಲ್ಲಿ 12 ಬ್ಯಾಟರಿಗಳು ಪತ್ತೆಯಾಗಿವೆ. ವಾಹನದಲ್ಲಿದ್ದ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಇತರ ಮೂವರೊಂದಿಗೆ ಸೇರಿ ಬ್ಯಾಟರಿ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಬಂಧಿಸಿ …

Read More »

ಮುಂಬೈ ಛಾಬ್ರಾ ಹೌಸ್ ಮತ್ತೊಮ್ಮೆ ಉಗ್ರರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ

ಮುಂಬೈ(ಮಹಾರಾಷ್ಟ್ರ): ಮುಂಬೈನ ಕೊಲಾಬಾದಲ್ಲಿರುವ ಛಾಬ್ರಾ ಹೌಸ್ ಮತ್ತೊಮ್ಮೆ ಉಗ್ರರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಏಕೆಂದರೆ ತನಿಖಾಧಿಕಾರಿಗಳು ಪುಣೆಯಲ್ಲಿ ಬಂಧಿತ ಉಗ್ರರೊಂದಿಗೆ ಕೊಲಾಬಾದಲ್ಲಿರುವ ತಾಜ್ ಹೋಟೆಲ್ ಬಳಿಯ ಛಾಬ್ರಾ ಹೌಸ್ ಫೋಟೋಗಳನ್ನು ಪತ್ತೆ ಮಾಡಿದ್ದಾರೆ. ಬಂಧಿತ ಉಗ್ರರು ಮುಂಬೈಗೆ ಬಂದು ಛಾಬ್ರಾ ಹೌಸ್ ಮೇಲೆ ದಾಳಿ ನಡೆಸಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಮುಂಬೈ ಪೊಲೀಸರು ಕೊಲಾಬಾದಲ್ಲಿರುವ ಛಾಬ್ರಾ ಹೌಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ದಳದ ನೆರವಿನೊಂದಿಗೆ ಭದ್ರತೆ ಹೆಚ್ಚಿಸಿದ್ದಾರೆ. ಛಾಬ್ರಾ …

Read More »

ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ದೆಹಲಿಯಲ್ಲಿ ರಾಜ್ಯದ ಕಾಂಗ್ರೆಸ್​ ನಾಯಕರೊಂದಿಗೆ ಸಭೆ

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್​ನಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಎರಡು ಸಭೆಗಳನ್ನು ಕರೆದಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಮತ್ತು ಕರ್ನಾಟಕ ಕಾಂಗ್ರೆಸ್​ ಉನ್ನತ ನಾಯಕರ ನಡುವೆ ಮೊದಲ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, …

Read More »

ಕ. ಸಾ.ಪ.​ ವತಿಯಿಂದ ನೀಡಲಾಗುವ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್​ 2018, 2019, 2020, 2021, 2022 ಹಾಗೂ 2023ನೇ ಸಾಲಿನ ಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ 6 ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದಿರುವುದರಿಂದ ಈ ಬಾರಿ 6 ಮಂದಿ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ …

Read More »

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ B.J.P. ಪೂರ್ವಸಿದ್ಧತಾ ಸಭೆ

ಬೆಂಗಳೂರು : ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯ ನೇತೃತ್ವವನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಲೋಕಸಭಾ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ವಹಿಸಿಕೊಂಡಿದ್ದರು. ಬೆಂಗಳೂರಿನ 3 ಲೋಕಸಭೆ ಕ್ಷೇತ್ರಗಳ ಸಿದ್ಧತೆ, ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ, ಸೂಚನೆಗಳನ್ನು ನೀಡಲಾಯಿತು. ಬಳಿಕ ಮಾತನಾಡಿದ ವಿನೋದ್ ತಾವ್ಡೆ, “ಲೋಕಸಭಾ ಚುನಾವಣೆಗೆ ಸಿದ್ಧತೆ …

Read More »

ಭಾರತದ ವಿರುದ್ಧ ನಡೆದ 2ನೇ ಏಕದಿನ ಪಂದ್ಯದಲ್ಲಿ ವಿಂಡೀಸ್​ ತಂಡ 6 ವಿಕೆಟ್​ಗಳ ಗೆಲುವು

ಬಾರ್ಬಡೋಸ್​: ತವರಿನಲ್ಲಿ ನಡೆಯುವ ಏಕದಿನ ಕ್ರಿಕೆಟ್ ವಿಶ್ವಕಪ್​ಗೆ ಇನ್ನೂ ಪ್ರಯೋಗ ನಡೆಸುತ್ತಿರುವ ಭಾರತ ತಂಡ, ವೆಸ್ಟ್ ಇಂಡೀಸ್​ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದೆ. ನಾಯಕ ರೋಹಿತ್​ ಶರ್ಮಾ, ವಿರಾಟ್​ ಕೊಹ್ಲಿಗೆ ವಿಶ್ರಾಂತಿ ನೀಡಿದ ಪಂದ್ಯದಲ್ಲಿ ಭಾರತದ ಕಳಪೆ ಬ್ಯಾಟಿಂಗ್​ನಿಂದಾಗಿ ವಿಂಡೀಸ್​ 6 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಮೂಲಕ ಭಾರತದ ವಿರುದ್ಧ 2019ರ ಬಳಿಕ ಮೊದಲ, ತವರಿನಲ್ಲಿ 6 ವರ್ಷಗಳ ನಂತರ ಪ್ರಥಮ ಗೆಲುವು ದಾಖಲಿಸಿದೆ. ಮೊದಲು …

Read More »

ನ್ನಭಾಗ್ಯದಡಿ ಈವರೆಗೆ 3.29 ಕೋಟಿ ಫಲಾನುಭವಿಗಳಿಗೆ ಹಣ ಜಮೆ:C.M.

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ ಹಿನ್ನೆಲೆಯಲ್ಲಿ ಫಲಾನುಭವಿಗಳ ಖಾತೆಗೆ ನಗದು ಜಮಾವಣೆ ಪ್ರಕ್ರಿಯೆ ಆರಂಭವಾಗಿ ತಿಂಗಳಾಗುತ್ತಿದೆ. ಇನ್ನೂ ಸುಮಾರು 1 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ನಗದು ಜಮೆ ಬಾಕಿ ಉಳಿದುಕೊಂಡಿದೆ. ಅನ್ನಭಾಗ್ಯ ಯೋಜನೆಯಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಕೆ.ಜಿ ಅಕ್ಕಿ ವಿತರಿಸಲು ಯೋಜಿಸಿತ್ತು.‌ ರಾಜ್ಯದ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರದಾರರಿಗೆ ಐದು ಕೆ.ಜಿ ಉಚಿತ ಅಕ್ಕಿ ನೀಡಲು ನಿರ್ಧರಿಸಿತ್ತು. ಆದರೆ, …

Read More »