Breaking News
Home / ರಾಜ್ಯ (page 458)

ರಾಜ್ಯ

ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ – ಗದಗ ನಡುವೆ ವೋಲ್ವೊ ಬಸ್

ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ಸೌಲಭ್ಯ ಕಲ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ. ಹುಬ್ಬಳ್ಳಿ ಮತ್ತು ಗದಗ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೊ ಎಸಿ ಬಸ್​ಗಳನ್ನು ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ಹಾಗೂ ಗದಗ ಭಾಗದ ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿ- ಗದಗ ನಡುವೆ ತಡೆ …

Read More »

ದೇಶದ ಚುನಾವಣೆಯ ಮಹತ್ವ, ನಾಯಕತ್ವ ಗುಣವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಬಾಗಲಕೋಟೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಚುನಾವಣೆ ನಡೆಸಲಾಯಿತು.

ಬಾಗಲಕೋಟೆ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯ, ಮತದಾನದ ಮಹತ್ವ ಹಾಗು ನಾಯಕತ್ವದ ಗುಣಗಳನ್ನು ಅಭಿವೃದ್ಧಿಪಡಿಸಲು ವಿದ್ಯಾರ್ಥಿಗಳಿಂದಲೇ ಮತದಾನ ಮಾಡಿಸುವ ಮೂಲಕ ಬಾದಾಮಿ ತಾಲೂಕಿನ ಗೋವನಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವತ್ರಿಕ ಚುನಾವಣೆಯಂತೆ ಮಕ್ಕಳ ಸಂಸತ್ ಚುನಾವಣೆ ನಡೆಸಲಾಯಿತು. ಮಂತ್ರಿಮಂಡಲ ರಚನೆಗೆ ಪ್ರೌಢ ಶಾಲೆಯಲ್ಲಿ ನಡೆದ ಚುನಾವಣೆಯಲ್ಲಿ 18 ವಿದ್ಯಾರ್ಥಿಗಳು ಅಂತಿಮ ಸ್ಪರ್ಧಾಳುಗಳಾಗಿ ಕಣದಲ್ಲುಳಿದು ಪ್ರಚಾರ ನಡೆಸಿದರು. 8, 9 ಹಾಗು 10ನೇ ತರಗತಿಯ 235 ವಿದ್ಯಾರ್ಥಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಹೀಗಿತ್ತು ಚುನಾವಣೆ: ತಮ್ಮ ಗುರುತಿನ …

Read More »

ನಕಲಿ‌ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ನಗರದಲ್ಲಿ ವಿವಿಧ ಕಂಪನಿಗಳ ಲೇಬಲ್‌ ಅಂಟಿಸಿ ನಕಲಿ‌ ಮದ್ಯ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಸಿಸಿಬಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 4 ಲಕ್ಷ ರೂ. ಮೌಲ್ಯದ ಮದ್ಯ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ಗುರುವಾರ ಖಚಿತ ಮಾಹಿತಿ ಮೇರೆಗೆ ಪಿಐ ಅಲ್ತಾಫ್ ಮುಲ್ಲಾ ನೇತೃತ್ವದ ತಂಡ ಸದಾಶಿವ ನಗರದ ವಿರೂಪಾಕ್ಷಿ ರೆಸಿಡೆನ್ಸಿ ಅಪಾರ್ಟಮೆಂಟ್ ಮೇಲೆ ದಾಳಿ ಮಾಡಿ ಈ ಜಾಲವನ್ನು ಪತ್ತೆ ಹಚ್ಚಿದೆ. …

Read More »

ಮಹಾರಾಷ್ಟ್ರದ ಪಶ್ಚಿಮಘಟ್ಟಗಳಲ್ಲಿ ಭಾರಿ ಮಳೆ ಖಾನಾಪುರ ತಾಲ್ಲೂನಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.:

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಪ್ರತಿ ಗಂಟೆಗೂ ಹೆಚ್ಚಳವಾಗುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಕೆಳಹಂತದ ಏಳು ಸೇತುವೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಕೃಷ್ಣಾ ನದಿ ಹಾಗೂ ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಏಳು ಕೆಳಹಂತದ ಸೇತುವೆಗಳು ಈಗಾಗಲೇ ಜಲಾವೃತಗೊಂಡು ನದಿಯ ದಂಡೆಯ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಲಿಕವಾಡ – ದತ್ತವಾಡ ಸಂಪರ್ಕ ಕಲ್ಪಿಸುವ ಸೇತುವೆ …

Read More »

ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಸಿಸಿಬಿ ರವರ ನೇತೃತ್ವದ ತಂಡದಿಂದ ಸದಾಶಿವ ನಗರದ ಅಪಾರ್ಟ್ಮೆಂಟದಲ್ಲಿ ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ, ಸುಮಾರು 4 ಲಕ್ಷ ಮೌಲ್ಯದ ಅಕ್ರಮ ಮದ್ಯ, ಕಾರು, ಮೊಬೈಲ್ ಹಾಗು ಹಣ ಜಪ್ತ ಮಾಡಿ ಇಬ್ಬರೂ ಆರೋಪಿತರನ್ನು ದಸ್ತಗಿರ ಮಾಡಿದ್ದು, ಇನ್ನು 2 ಆರೋಪಿತರು ಫರಾರಿ ಇರುತ್ತಾರೆ. ರೇಡ್ ತಂಡಕ್ಕೆ ನಗದು …

Read More »

ಚೆನ್ನೈ ಸೆಂಟ್ರಲ್​ನಲ್ಲಿ ನಕಲಿ ರೈಲು ಟಿಕೆಟ್ ಮಾರಾಟ

ಚೆನ್ನೈ(ತಮಿಳುನಾಡು): ಚೆನ್ನೈ ಸೆಂಟ್ರಲ್ ಸಬರ್​​ಬನ್​​ ರಿಸರ್ವೇಶನ್ ಸೆಂಟರ್ ಎದುರು ಕೈಯಲ್ಲಿ ನೋಟ್ ಪ್ಯಾಡ್ ಹಿಡಿದು ರೈಲು ಪ್ರಯಾಣಿಕರಿಗೆ ನಕಲಿ ಟಿಕೆಟ್ ನೀಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಂಗಳವಾರ ರೈಲ್ವೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ತನಿಖೆಯ ವೇಳೆ ಈತ ರಾಜಸ್ಥಾನ ಮೂಲದ ಜಿತೇಂದ್ರ ಶಾ (38) ಎಂದು ಗೊತ್ತಾಗಿದ್ದು, ಚೆನ್ನೈನ ಕೊಡಂಗಯ್ಯೂರಿನಲ್ಲಿ ಆರೋಪಿ ವಾಸವಾಗಿದ್ದ ಎಂಬುದು ತಿಳಿದು ಬಂದಿದೆ. 10ನೇ ತರಗತಿ ಓದಿರುವ ಅಪರಾಧಿ, ತಂದೆಯ ಆಭರಣ ಅಂಗಡಿಯಲ್ಲಿ ಲೆಕ್ಕಪರಿಶೋಧಕನಾಗಿ ಕೆಲಸ …

Read More »

ಈಗ ನಾನೇ ವಿರೋಧ ಪಕ್ಷದ ನಾಯಕ!: ಅಚ್ಚರಿಯ ಹೇಳಿಕೆ ನೀಡಿದ ಬಿಜೆಪಿ ರೆಬೆಲ್ ಸದಸ್ಯ

ಬೆಂಗಳೂರು: 15 ದಿನಗಳ ಕಾಲ ನಡೆದ ಬಜೆಟ್ ಅಧಿವೇಶನಕ್ಕೆ ತೆರೆ ಬಿದ್ದಿದ್ದು, ಪ್ರತಿಪಕ್ಷಗಳ ಗೈರಿನಲ್ಲೇ ಧನ ವಿನಿಯೋಗ ವಿಧೇಯಕಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ. ಸದನ ನಡೆಸಲು ಸಹಕರಿಸಿದ ಸರ್ವರಿಗೂ ಧನ್ಯವಾದ ಅರ್ಪಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದರು. ಬಜೆಟ್ ಮೇಲಿನ ಚರ್ಚೆಯ ನಂತರ ಮಾತನಾಡಿದ ಸಭಾನಾಯಕ ಬೋಸರಾಜ್, ಕಲಾಪ ನಡೆಸಲು ಸಹಕರಿಸಿದ ಸದಸ್ಯರು, ಸಚಿವರು,ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು. ನಂತರ ಸಭಾಪತಿ ಬಸವರಾಜ ಹೊರಟ್ಟಿ, ಸಭಾನಯಕರ ನಂತರ …

Read More »

ಬಿಜೆಪಿ ಹತ್ತು ಶಾಸಕರ ಅಮಾನತು ಯಾರ ಒತ್ತಡದಿಂದ ಮಾಡಿಲ್ಲ ಎಂದು ಸ್ಪೀಕರ್

ಬೆಂಗಳೂರು: ಬಿಜೆಪಿ ಹತ್ತು ಶಾಸಕರ ಅಮಾನತು ಯಾರ ಒತ್ತಡದಿಂದ ಮಾಡಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದರು. ಅಧಿವೇಶನ ಮುಕ್ತಾಯದ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ನಡೆಸುವುದು ಎಲ್ಲ ನಾಯಕರ ಜವಾಬ್ದಾರಿ.‌ ಅದಕ್ಕಾಗಿ ಎಲ್ಲರ ಸಹಕಾರ ಬೇಕು. ಯಾರೇ ಸದಸ್ಯರು ಪೀಠಕ್ಕೆ ಅಗೌರವದಿಂದ ನಡೆದುಕೊಂಡರೆ ಆ ಪೀಠದ ಸಭಾಧ್ಯಕ್ಷನಾಗಿ ನಾನು ಕ್ರಮ ಕೈಗೊಂಡಿದ್ದೇನೆ ಎಂದರು. ಇದರಲ್ಲಿ ಪಕ್ಷದ ವಿಚಾರ ಇಲ್ಲ. ನೋಟೀಸ್ ನೀಡದೇ ಇದ್ದರೂ ಅವರಿಗೆ ಮಾತನಾಡಲು ಅವಕಾಶ …

Read More »

ಎನ್​ಡಿಎನೂ ಇಲ್ಲ, ಯುಪಿಎನೂ ಇಲ್ಲ: ಯಾವ ಮೈತ್ರಿಕೂಟದ ಜೊತೆಗೂ ಸೇರುವ ಪ್ರಶ್ನೆ:H.D.D.

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಹಾಗೂ ಜೆಡಿಎಸ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು. ಆದರೆ, ನಿನ್ನೆ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಈ ಕುರಿತು ಶಾಸಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ.ದೇವೇಗೌಡ, ಯಾವ ಮೈತ್ರಿಕೂಟದ ಜೊತೆಯೂ ಸೇರುವ ಪ್ರಶ್ನೆಯೇ ಇಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಈ …

Read More »

ಬಸ್​ನಲ್ಲಿ ಮೂರ್ಛೆ ಹೋದ ಪ್ರಯಾಣಿಕ: ಆಸ್ಪತ್ರೆಗೆ ಸೇರಿಸಿ ಪ್ರಾಣ ಕಾಪಾಡಿದ ಚಾಲಕ – ನಿರ್ವಾಹಕ.

ತುಮಕೂರು : ಚಲಿಸುತ್ತಿದ್ದ ಬಸ್​ನಲ್ಲಿ ಮೂರ್ಛೆ ಹೋದ ಪ್ರಯಾಣಿಕನನ್ನು ತಕ್ಷಣ ಚಿಕಿತ್ಸೆ ಕೊಡಿಸಲು ಬಸ್​ನ ಚಾಲಕ ಮತ್ತು ನಿರ್ವಾಹಕ ಸಮಯ ಪ್ರಜ್ಞೆ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಬಸ್​ನಲ್ಲಿಯೇ ಮೂರ್ಛೆ ತಪ್ಪಿ ಬಿದ್ದು ಪ್ರಯಾಣಿಕನಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಪ್ರಯಾಣಿಕರ ಸಮೇತ ಬಸ್​ ಅನ್ನು ಆಸ್ಪತ್ರೆ ಕಡೆ ಓಡಿಸಿದ ಚಾಲಕ, ಪ್ರಶಂಸೆಗೆ ಪಾತ್ರರಾಗಿದ್ದಾರೆ. ತುಮಕೂರಿನ ತಿಪಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಆಂಬ್ಯುಲೆನ್ಸ್ ರೀತಿ ಬಸ್ ಚಲಾಯಿಸಿ ಡ್ರೈವರ್​ ಪ್ರಯಾಣಿಕನ ಪ್ರಾಣ …

Read More »