Breaking News
Home / ರಾಜ್ಯ (page 480)

ರಾಜ್ಯ

ಸಾರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಎರಡೂ ಲಕ್ಷ

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಬರೋಬರಿ ಎರಡೂ ಲಕ್ಷ ಜನ ಮಹಿಳೆಯರು ಲಾಭ ಪಡೆದುಕೊಂಡಿದ್ದಾರೆ‌. ಶಕ್ತಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿಂತೆ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಗುರುತಿನ ಚೀಟಿಯನ್ನು (ನಕಲು/ ಮೂಲ/ಡಿಜಿಲಾಕರ್) ತೋರಿಸಿ ಪ್ರಯಾಣಿಸಲು ಅವಕಾಶ ನೀಡುವಂತೆ ಸಂಸ್ಥೆಯ ನಿರ್ವಾಹಕರಿಗೆ ಶಕ್ತಿ ಯೋಜನೆಯ ಅನುಷ್ಠಾನಕ್ಕಿಂತ ಮುಂಚಿತವಾಗಿಯೇ ತಿಳುವಳಿಕೆ ನೀಡುತ್ತಾ ಬರಲಾಗಿದೆ. ಅದರಂತೆ, ವಾಯವ್ಯ ಕರ್ನಾಟಕ …

Read More »

ಕೆ – ಸಿಇಟಿ ಇಂಜಿನಿಯರಿಂಗ್ ‌ನಲ್ಲಿ ರಾಜ್ಯಕ್ಕೆ 3 ನೇ ರ್ಯಾಂಕ್ , 1 ಲಕ್ಷ ರೂ. ಚೆಕ್ ನೀಡಿಸನ್ಮಾನ .

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ ರ್‍ಯಾಂಕ್ ಪಡೆದು ಹಿರಿಮೆ ನೆರೆದಿದ್ದಾನೆ. ಐಐಟಿ ಮೇನ್ಸ್‌ನಲ್ಲೂ ದೇಶಕ್ಕೆ ಈತ 31ನೇ ರ್‍ಯಾಂಕ್ ಪಡೆದು ಸಾಧನೆ …

Read More »

ಹೊಸ ಲುಕ್​ನಲ್ಲಿ ಯೋಗರಾಜ್ ಭಟ್

ಯೋಗರಾಜ್​ ಭಟ್ ಕರಟಕ ದಮನಕ ಸಿನಿಮಾದಲ್ಲಿ ಅಜ್ಜಯ್ಯ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ಲುಕ್​ನಲ್ಲಿ ಯೋಗರಾಜ್ ಭಟ್ ಮಧುರವಾದ ಪ್ರೇಮಕಥೆ ಜೊತೆಗೆ ಫಿಲಾಸಫಿ ಮೂಲಕ ಕನ್ನಡ ಚಿತ್ರರಂಗದಲ್ಲಿ ವಿಕಟಕವಿ ಎಂದೇ ಜನಪ್ರಿಯರಾಗಿರುವ ನಿರ್ದೇಶಕ ಯೋಗರಾಜ್ ಭಟ್. ಸದ್ಯ ಗರಡಿ ಸಿನಿಮಾ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಗರಡಿ ಚಿತ್ರದ ಮೊದಲ ಹಾಡನ್ನು ಭಟ್ರು ಅನಾವರಣಗೊಳಿಸಿದ್ದಾರೆ. ತಮಟೆ ಬಾರಿಸುವ ಮೂಲಕ ತಮ್ಮ ಗರಡಿ ಚಿತ್ರದ ಪ್ರಚಾರ ಮಾಡಿದ ಭಟ್ರ ಹೊಸ ಅವತಾರಕ್ಕೆ ಸಿನಿ …

Read More »

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿತ: ವಿದ್ಯಾರ್ಥಿ ಸಾವು, ಇನ್ನೊಬ್ಬ ಬಾಲಕನ ಸ್ಥಿತಿ ಗಂಭೀರ

ಹುಬ್ಬಳ್ಳಿ: ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ‌ ಶಾಲೆಯ ಆವರಣದಲ್ಲಿ ನಡೆದಿದೆ. ವಿಶೃತ್ ಬೆಳಗಲಿ (9) ಮೃತ ವಿದ್ಯಾರ್ಥಿಯಾಗಿದ್ದು, ಪ್ರಭು ನಾಗಾವಿ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವಿಶೃತ್ ನಿರ್ಮಾಣ ಹಂತದ ಕಟ್ಟಡದ ಕೆಳಭಾಗ ಆಟವಾಡುತ್ತಿದ್ದ. ಆಟವಾಡುವ ಸಂದರ್ಭದಲ್ಲಿ ಏಕಾಏಕಿ ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದಿದೆ. ಘಟನೆಗೆ ಕಳಪೆ …

Read More »

ಸಿದ್ದರಾಮಯ್ಯನವರನ್ನು ಕುಟುಕಿದ ಪ್ರತಾಪ್ ಸಿಂಹ,

ಮೈಸೂರು: ಡಿಕೆ ಶಿವಕುಮಾರ್ ಒಬ್ಬ ಫೈಟರ್. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವರ ಹೋರಾಟವೇ ಪ್ರಮುಖ ಕಾರಣ ಎಂದು ಸಂಸದ ಪ್ರತಾಪ್ ಸಿಂಹ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಹಾಡಿ ಹೊಗಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಸೈನ್‌ ಬಾಕ್ಸ್ ಏಜೆನ್ಸಿ ಮೂಲಕ ಗ್ಯಾರಂಟಿ ಯೋಜನೆ ರೂಪಿಸಿದವರು ಡಿಕೆ ಶಿವಕುಮಾರ್. ಅವರು ನಮ್ಮ ಎದುರಾಳಿ ಇರಬಹುದು. ನಾನು ರಾಜಕೀಯ ಕಾರಣಕ್ಕೆ ಈ ರೀತಿ ಹೇಳುತ್ತಿಲ್ಲ. …

Read More »

ಬಸ್ ನಿಂದ ಜಾರಿ ಬಿದ್ದ ವೃದ್ದೆ

ಚಿಕ್ಕೋಡಿಯಿಂದ ಕೇರೂರ ಮಾರ್ಗವಾಗಿ ಕಾಡಾಪೂರ ಕಡೆಗೆ ತುಂಬಿ ಹೊರಟ್ಟಿದ್ದ ಬಸ್‌ನಿಂದ ವೃದ್ದೆಯೊಬ್ಬಳು ಜಾರಿ ಬಿದ್ದ ಘಟನೆ ನಡೆದಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಭಾವಯಲ್ಲೆಡೆ ಜೋರಾಗಿಯೇ ಇದೆ ಉಚಿತ ಬಸ್ ಪ್ರಯಾಣ ಹಿನ್ನಲೆಯಲ್ಲಿ ಬೆಳಗಾವಿಯ ಚಿಕ್ಕೋಡಿ ಡಿಪೋ ದಿಂದ ಸರ್ಕಾರಿ ಸಾರಿಗೆ ಬಸ್ ಗಳು ಸಂಪೂರ್ಣ ತುಂಬಿ ಹೋಗುತ್ತಿವೆ. ಈ ಹಿನ್ನಲೆಯಲ್ಲಿ ಮಹಿಳೆಯರು ನಾ ಮುಂದು ತಾಮುಂದು ಎಂದು ಬಸ್ ಹತ್ತುವ ವೇಳೆ ವೃದ್ದೆಯೊಬ್ಬಳು ಜಾರಿ ಬಿದ್ದ ಘಟನೆ ಸಿ …

Read More »

ಹೆಸ್ಕಾಂ ಕಚೇರಿಗೆ ಬೀಗ ಜಡಿದರೈತರು

ವಿದ್ಯುತ್ ದರ ಹೆಚ್ಚಳ ಹಾಗೂ ಸಮರ್ಥವಾಗಿ ವಿದ್ಯುತ್ ಪೋರೈಸುತ್ತಿಲ್ಲ ಎಂದು ಸಿಟ್ಟುಗೆದ್ದ ಅನ್ನದಾತರು ಹೆಸ್ಕಾಂ ಕಚೇರಿಗೆ ಬೀಗ ಜಡಿದ ಘಟನೆ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಹೆಸ್ಕಾಂ ಕಚೇರಿ ದೊಡವಾಡ ಮತ್ತು ನನುಗುಂಡಿಕೊಪ್ಪ, ಚಿಕ್ಕಬೆಳ್ಳಿಕಟ್ಟಿ ಗ್ರಾಮದ ರೈತರು ಪ್ರತಿಭಟನೆ ನಡೆಸಿ ಹೆಸ್ಕಾಂ ಕಚೇರಿಗೆ ಬೀಗ ಹಾಕಿದ್ದಾರೆ. ಹೆಸ್ಕಾಂ ಅಧಿಕಾರಿಗಳೇ ಕೊಟ್ಟ ಮಾತಿನಂತೆ ವಿದ್ಯುತ್ ಪೂರೈಸುತ್ತಿಲ್ಲ ಅಲ್ಲದೆ ಈಗ ವಿದ್ಯುತ್ ದರವನ್ನು ಸಹ …

Read More »

ಹಾಡು ಹಗಲೇ ನಡು ರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

ಹಾಡು ಹಗಲೇ ನಡು ರಸ್ತೆಯಲ್ಲಿ ಯುವತಿಯ ಬರ್ಬರ ಹತ್ಯೆ ಮಾಡಲಾಗಿದೆ‌‌. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿನ ಕೊಬೊಟೊ ಶೋರೂಂ ಬಳಿ ಗಂಗೂಬಾಯಿ ಯಂಕಂಚಿ (28) ಎಂಬ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ರಸ್ತೆಯಲ್ಲೆ ಮಾರಕಾಸ್ತ್ರಗಳಿಂದ ಯುವತಿಯ ಮೇಲೆ ದಾಳಿ ಮಾಡಿ ಹತ್ಯೆ ನಡೆಸಲಾಗಿದೆ‌. ಮಹಿಳೆ ಸ್ಕೂಟಿ ಮೇಲೆ ಹೊರಟಿದ್ದ ವೇಳೆ ದುಷ್ಕರ್ಮಿಗಳ ದಾಳಿ ನಡೆಸಿ ಹತ್ಯೆ ನಡೆಸಿದ ಬಳಿಕ ಹತ್ಯೆ ಮಾಡಿ ಸ್ಕೂಟಿಯನ್ನು ಕೊಂಡೊಯ್ದಿದ್ದಾರೆ. ಅಪರಿಚಿತ ದುಷ್ಕರ್ಮಿಗಳಿಂದ ನಡೆದ ದಾಳಿ …

Read More »

ಗೃಹ ಜ್ಯೋತಿ: ಬಾಡಿಗೆದಾರರು ವಾಸದ ವಿಳಾಸಕ್ಕೆ ಆಧಾರ್ ಲಿಂಕ್​ ಮಾಡುವುದು ಕಡ್ಡಾಯ: ಮತ್ತೆ ಗೊಂದಲ?

ಬೆಂಗಳೂರು : ಗೃಹ ಜ್ಯೋತಿ ಯೋಜನೆಯಡಿ ಫಲಾನುಭವಿಗಳ ಸಂಬಂಧ ಏರ್ಪಟ್ಟ ಗೊಂದಲಗಳ ಬಗ್ಗೆ ಸ್ಪಷ್ಟೀಕರಣ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಬಾಡಿಗೆದಾರರು ತಮ್ಮ ವಾಸದ ಮನೆ ವಿಳಾಸಕ್ಕೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಷರತ್ತು ಹಾಕಿದೆ. ಆದರೆ, ಈ ಸ್ಪಷ್ಟೀಕರಣದ ಷರತ್ತು ಇದೀಗ ಬಾಡಿಗೆದಾರರಲ್ಲಿ ಮತ್ತಷ್ಟು ಗೊಂದಲ ಉಂಟಾಗುವಂತೆ ಮಾಡಿದೆ. ಉಚಿತ 200 ಯೂನಿಟ್ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಬಗ್ಗೆ ಫಲಾನುಭವಿಗಳಲ್ಲಿ ಸಾಕಷ್ಟು ಅನುಮಾನ, ಗೊಂದಲ ಏರ್ಪಟ್ಟಿತ್ತು.‌ ಈ …

Read More »

ಹಿಂದೆ ನಡೆದ ಅಕ್ರಮಗಳ ತನಿಖೆಗಾಗಿ ಎಸ್‌ಐಟಿ ರಚನೆ?:

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ನೇಮಕಾತಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚಿಸಿವ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಆ ಮೂಲಕ ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳನ್ನು ತನಿಖೆಗೆ ಒಳಪಡಿಸಿ ಬಿಜೆಪಿಯನ್ನು ಮತ್ತಷ್ಟು ಕಟ್ಟಿ ಹಾಕಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಎಸ್​​​ಐಟಿ ರಚಿಸುವ ಬಗ್ಗೆ ಸಮಾಲೋಚನೆ ನಡೆದಿದೆ. ಪಿಎಸ್‌ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ …

Read More »