Breaking News
Home / ರಾಜ್ಯ (page 486)

ರಾಜ್ಯ

SSLC ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು : ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಲಾಖೆಯ ಅಧಿಕೃತ ವೆಬ್​ಸೈಟ್ ಮೂಲಕ ತಾತ್ಕಾಲಿಕ ಅಂಕಪಟ್ಟಿ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ …

Read More »

ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿಕೆಶಿ

ನವದೆಹಲಿ/ಬೆಂಗಳೂರು: ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿಗಳನ್ನು ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಸಚಿವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಪೆನ್ನಾರ್ ಜಲಾನಯನ ನೀರು ಶುದ್ಧೀಕರಣ ಯೋಜನೆ ಮತ್ತು ಕರ್ನಾಟಕದ ವಿರುದ್ಧ ತಮಿಳುನಾಡು ರಾಜ್ಯ ಎತ್ತಿರುವ ಜಲ ವಿವಾದಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದರು. ತಮಿಳುನಾಡು ಮಾಡಿರುವ ಆರೋಪಗಳ ಬಗ್ಗೆ ಚರ್ಚಿಸಿ ನ್ಯಾಯಾಧಿಕರಣ …

Read More »

ಹೊಸಪೇಟೆ ಸಮೀಪ ಭೀಕರ ರಸ್ತೆ ಅಪಘಾತ: 7 ಜನ ಸ್ಥಳದಲ್ಲೇ ಸಾವು

ವಿಜಯನಗರ: ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಇಂದು ನಡೆದಿದೆ. ಮೃತರಲ್ಲಿ ಖಾಸಿಂ, ಯಾಸ್ಮಿನ್, ಉಮೇಶ್, ಜಹೀರಾ, ಮತ್ತು ಶ್ಯಾಮ, ಸೇರಿದಂತೆ ಒಟ್ಟು ಐವರ ಹೆಸರು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ಪತ್ತೆಯಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಸೇರಿದಂತೆ ಸ್ಥಳೀಯರು ಕಂದಕದಲ್ಲಿ ಬಿದ್ದ ಎರಡು ಆಟೋಗಳನ್ನು ಮೇಲೆತ್ತಿ ಗಾಯಾಳುಗಳನ್ನು ಹೊಸಪೇಟೆ …

Read More »

ಬೆಂಗಳೂರು- ಮೈಸೂರು ಹೆದ್ದಾರಿ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಮಂಡ್ಯ: ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಂಡ್ಯ ಜಿಲ್ಲೆಯಲ್ಲಿ ಶುಕ್ರವಾರ ಎಡಿಜಿಪಿ ಅಲೋಕ್‌ ಕುಮಾರ್‌ ಪರಿಶೀಲನೆ ನಡೆಸಿದರು. ದಶಪಥ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಿವೆ. ಕಳೆದ ವಾರ ರಾಮನಗರ ವ್ಯಾಪ್ತಿಯಲ್ಲಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದ್ದರು. ಇದೀಗ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ಮೈಸೂರು ಗಡಿಯವರೆಗೆ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಎಸ್ಪಿ ಎನ್.ಯತೀಶ್ ಜೊತೆಗಿದ್ದರು. ಹೆದ್ದಾರಿಯಲ್ಲಿ ಕಂಡುಬರುತ್ತಿರುವ ಸಮಸ್ಯೆಗಳು …

Read More »

ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ: ಸ್ವಾಮೀಜಿಗಳ ಧರ್ಮಸಭೆಯಲ್ಲಿ ನಿರ್ಧಾರ

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಸಂತರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಮಂಗಳೂರಿನಲ್ಲಿ ನಡೆದ ಸ್ವಾಮೀಜಿಗಳ ಧರ್ಮಸಭೆಯಲ್ಲಿ ‌ನಿರ್ಧರಿಸಲಾಗಿದೆ. ಬಾಳಂಭಟ್ ಸಭಾಂಗಣದಲ್ಲಿ ನಡೆದ ಧರ್ಮಸಭೆಯಲ್ಲಿ ಕರಾವಳಿಯ ಸಂತ ಸಮೂಹದಿಂದ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ಕಾಯ್ದೆ ವಾಪಸ್​ ನಿರ್ಧಾರ ಕೈಬಿಡುವಂತೆ ಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಮಾಣಿಲ ಮಠದ ಮೋಹನದಾಸ ಸ್ವಾಮೀಜಿ, …

Read More »

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗದ ಭೇಟಿ ವೇಳೆ ಮಾತನಾಡಿದ ಅವರು, ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಸಿಎಂ ತಿಳಿಸಿದರು. ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ …

Read More »

ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ3 ವರೆಗೆ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 3ರ ವರೆಗೆ ವರ್ಗಾವಣೆ ಅವಧಿಯನ್ನು ಸರ್ಕಾರ ವಿಸ್ತರಿಸಿದೆ. 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್​ 15ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಬಳಿಕ ಜೂನ್ 30ರವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಸಾರ್ವತ್ರಿಕ …

Read More »

ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ

ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದ್ದು, ದೊಡ್ಡ ಅವಘಡ ತಪ್ಪಿದಂತಾಗಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಪಕ್ಕದಲ್ಲಿಯೇ ವಿದ್ಯುತ್ ಹೈಪರ್ ಲೈನ್ ಇದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಅಗ್ನಿ ಅವಘಡದಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ಮನೆಮಾಡಿತ್ತು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆಂದು ತಿಳಿದು ಬಂದಿದೆ.

Read More »

ಪೆಟ್ರೋಲ್ ಪಂಪಿಗೆ ಆಗಮಿಸಿ, ಸಾವಿರ ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು, ಪರಾರಿ

ದ್ವಿಚಕ್ರ ವಾಹನ ಸವಾರನು ಪೆಟ್ರೋಲ್ ಪಂಪಿಗೆ ಆಗಮಿಸಿ, ಸಾವಿರ ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು, ಪರಾರಿ ಆಗುತ್ತಿರುವ ಘಟನೆಯೊಂದು ಶಿರುಗುಪ್ಪಿ ಗ್ರಾಮದ ಪಂಪುಗಳಲ್ಲಿ ಸಂಭವಿಸುತ್ತಿದ್ದು, ಪಂಪ್ ಕಾರ್ಮಿಕರು ಹೈರಾಣಾಗಿದ್ದಾರೆ. ಶಿರುಗುಪ್ಪಿ ಗ್ರಾಮದಲ್ಲಿ ಸುಮಾರು ಮೂರು ಪೆಟ್ರೋಲ್ ಪಂಪ್‌ಗಳಿದ್ದು, ಉಗಾರ್ ರಸ್ತೆಯಲ್ಲಿರುವ ಪೆಟ್ರೋಲ್ ಪಂಪಿನಲ್ಲಿ ಸತತ ಮೂರನೇ ಬಾರಿಗೆ ಇಂಥದೊಂದು ಘಟನೆ ಸಂಭವಿಸಿದೆ. ಇದಲ್ಲದೆ ಜುಗೂಳ ರಸ್ತೆಯಲ್ಲಿರುವ ಪಂಪ್‌ನಲ್ಲಿಯೂ ಸಹ ಇಂಥದೇ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ . ಈ ಕುರಿತು …

Read More »

ಎರಡನೇ ಆಷಾಢ ಶುಕ್ರವಾರ: ಸಿಂಹವಾಹಿನಿ ಅಲಂಕಾರದಲ್ಲಿ ಚಾಮುಂಡೇಶ್ವರಿ ದೇವಿ, ದರ್ಶನಕ್ಕೆ ಭಕ್ತರ ದಂಡು

ಮೈಸೂರು : ಇಂದು ಎರಡನೇ ಆಷಾಢ ಶುಕ್ರವಾರವಾದ ಪ್ರಯುಕ್ತ ನಾಡ ಅಧಿದೇವತೆ ಚಾಮುಂಡಿ ತಾಯಿಯ ಮೂಲ ಮೂರ್ತಿಗೆ ವಿಶೇಷ ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದಲೇ ನಾಡಿನ ವಿವಿಧ ಕಡೆಗಳಿಂದ ಆಗಮಿಸಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಶುಕ್ರವಾರದ ನಿಮಿತ್ತ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರು ಅನುಕೂಲಕ್ಕಾಗಿ ನಗರದ …

Read More »