ಬೆಂಗಳೂರು: ಉಂಡ ಮನೆಗೆ ದ್ರೋಹ ಎಂಬಂತೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲ್ಯಾಪ್ ಟಾಪ್ಗಳನ್ನು ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಿಂದ ಬೆಟ್ಟಿಂಗ್ ಆಡುತ್ತಿದ್ದ ಮಾಜಿ ನೌಕರನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ಮಂಗಳೂರು ಮೂಲದ ಸುಬ್ರಹ್ಮಣ್ಯ ಪ್ರಸಾದ್ (34) ಬಂಧಿತ ಆರೋಪಿ. ಆರೋಪಿಯಿಂದ 19 ಲಕ್ಷ ರೂ. ಮೌಲ್ಯದ ಲ್ಯಾಪ್ ಟಾಪ್ಗಳು, 5 ಐಫೋನ್ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ 2ನೇ …
Read More »ಮಹಾಪೌರ ಹಾಗೂ ನಗರಸೇವಕರ ಸದಸ್ಯತ್ವ ರದ್ದತಿ ಹೈಕೋರ್ಟ್ ತಡೆಯಾಜ್ಞೆ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರಸೇವಕ ಜಯಂತ್ ಜಾಧವ್’ಗೆ ತಾತ್ಕಾಲಿಕ ರಿಲೀಫ್
ಮಹಾಪೌರ ಹಾಗೂ ನಗರಸೇವಕರ ಸದಸ್ಯತ್ವ ರದ್ದತಿ ಹೈಕೋರ್ಟ್ ತಡೆಯಾಜ್ಞೆ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರಸೇವಕ ಜಯಂತ್ ಜಾಧವ್’ಗೆ ತಾತ್ಕಾಲಿಕ ರಿಲೀಫ್ ‘ಖಾವು ಕಟ್ಟಾ’ ಪ್ರಕರಣದಲ್ಲಿ ಪ್ರಾದೇಶಿಕ ಆಯುಕ್ತರ ನಿರ್ಣಯಕ್ಕೆ ತಡೆಯಾಜ್ಞೆ ಸೋಮವಾರದವರೆಗೆ ವಿಚಾರಣೆ ಮುಂದೂಡಿಕೆ ಶಾಸಕ ಅಭಯ ಪಾಟೀಲ್ ಸರಕಾರಕ್ಕೆ ಸವಾಲು ಮಂಗೇಶ್ ಪವಾರ್ ಮತ್ತು ಜಯಂತ ಜಾಧವ್ಗೆ ತಾತ್ಕಾಲಿಕ ರಿಲೀಫ್ ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರ ಜಯಂತ ಜಾಧವ್ ಅವರ ಸದಸ್ಯತ್ವ …
Read More »ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ
ದಾವಣಗೆರೆ: ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿ ತಾಯಿ – ಮಗ ಮೃತಪಟ್ಟಿರುವ ದಾರುಣ ಘಟನೆ ನಗರದ ಕಾಯಿಪೇಟೆಯಲ್ಲಿ ನಡೆದಿದೆ. ಬೆಂಕಿಯಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಮಲಾ (75) ಮತ್ತು ಅವರ ಪುತ್ರ ಕುಮಾರ್ (35) ಪ್ರಾಣ ಕಳೆದುಕೊಂಡ ದುರ್ದೈವಿಗಳು. ಮೃತರು ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಅವರ ಸಂಬಂಧಿಗಳಾಗಿದ್ದಾರೆ. ತಡರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿವೆ. ಇದರಿಂದ ದಟ್ಟ ಹೊಗೆ ಆವರಿಸಿದೆ. ಮನೆಯಲ್ಲಿದ್ದ 6 ಮಂದಿಯ …
Read More »ಹೃದಯಾಘಾತದಿಂದ ಸಾವನ್ನಪ್ಪಿದ ಡಾ.ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ
ಶಿವಮೊಗ್ಗ/ತುಮಕೂರು: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹಾಗೂ ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿದ್ದ ಡಾ.ಸಂದೀಪ್ ಅವರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದರು. ಶುಕ್ರವಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು …
Read More »ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್
ಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾರಾಯಣ್ ಲಾಲ್, ಪುಷ್ಪೇಂದ್ರ ಸಿಂಗ್, ಕೀರ್ತನ್ ರಾಮ್, ಮಹೇಂದ್ರ ಗೆಹ್ಲೋಟ್ ಹಾಗೂ ದಿಲೀಪ್ ಕುಮಾರ್ ಎಂಬಾತನನ್ನ ಬಂಧಿಸಲಾಗಿದ್ದು, 50 ಲಕ್ಷ ರೂಪಾಯಿ ಮೌಲ್ಯದ 480 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆ. ಆರ್. ಪುರಂ ವ್ಯಾಪ್ತಿಯಲ್ಲಿ ಮನೆ, ಅಂಗಡಿಗಳಿಗೆ ಫೆನಾಯಿಲ್ ಸರಬರಾಜು ಮಾಡಿಕೊಂಡಿದ್ದ …
Read More »ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (
ಬೆಂಗಳೂರು, ಜುಲೈ 1: ‘ನಾನು ಬಾಯಿಬಿಟ್ಟರೆ ಸರ್ಕಾರವೇ ಅಲುಗಾಡುತ್ತೆ’ ಎಂದು ಅಳಂದ ಶಾಸಕ ಬಿಆರ್ ಪಾಟೀಲ್ (BR Patil) ಆಡಿದ್ದ ಅಬ್ಬರದ ಮಾತು ಕಾಂಗ್ರೆಸ್ (Congress) ಮನೆಯನ್ನನ್ನು ನಡುಗಿಸಿತ್ತು. ಸರ್ಕಾರವನ್ನು ಅಲುಗಾಡಿಸಿತ್ತು. ವಸತಿ ಯೋಜನೆಯಲ್ಲಿ ಮನೆ ನೀಡಲು ಲಂಚ ಪಡೆಯಲಾಗುತ್ತಿದೆ ಎಂಬ ಬಿಆರ್ ಪಾಟೀಲ್ ಆರೋಪದಿಂದ ಶುರುವಾದ ಅಸಮಾಧಾನದ ಜ್ವಾಲೆ ಕೈಪಡೆಯನ್ನು ಬಡಿದೆಬ್ಬಿಸಿತ್ತು. ಬಿಆರ್ ಪಾಟೀಲ್ ಬೆನ್ನಲ್ಲೇ ಶಾಸಕರಾದ ರಾಜುಕಾಗೆ, ಬೇಳೂರು ಗೋಪಾಲಕೃಷ್ಣ, ವೈ.ಎನ್ ಗೋಪಾಲಕೃಷ್ಣ ಅಸಮಾಧಾನ ಹೊರಹಾಕಿದ್ದರು. ಶಾಸಕರ ಈ ಸಿಟ್ಟು ಯಾರನ್ನು ಎಚ್ಚರಿಸಿದೆಯೋ ಬಿಟ್ಟಿದೆಯೋ, …
Read More »ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್
ಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಕಾರಣಿಗಳ ಜತೆ ಹಾಗೂ ಸಹಚಚರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ (Talaq) ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಅತ್ತೆ-ಮಾವನ ವಿರುದ್ಧವೂ ದೂರು ದಾಖಲಿಸಿದ್ದಾರೆ. …
Read More »ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ
ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ …
Read More »2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು
ಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಪ್ರತಿ ಘಟಕಕ್ಕೂ 11 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಈ ಘಟಕಗಳಲ್ಲಿ ಐದು ರೂಪಾಯಿ ನೀಡಿದರೆ 20 ಲೀಟರ್ ಶುದ್ಧ ಕುಡಿಯುವ ನೀರು ಸಿಗುವ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಆರು ಘಟಕಗಳಲ್ಲಿ ಕೇವಲ ನಾಲ್ಕು ಘಟಕಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಉಳಿದ ಎರಡು ಘಟಕಗಳ ಕಾಮಗಾರಿ ಪೂರ್ಣಗೊಂಡರೂ ಸಹ …
Read More »ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಅಮಾಯಕನಿಗೆ ಶಿಕ್ಷೆ: ಮೂವರು ಇನ್ಸ್ಪೆಕ್ಟರ್ಗಳು ಸಸ್ಪೆಂಡ್
ಮೈಸೂರು: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಕುಶಾಲನಗರ ಸರ್ಕಲ್ ಇನ್ಸ್ಪೆಕ್ಟರ್ ಬಿ.ಜಿ.ಪ್ರಕಾಶ್, ಇಲವಾಲ ಇನ್ಸ್ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಜಯಪುರ ಠಾಣೆ ಇನ್ಸ್ಪೆಕ್ಟರ್ ಪ್ರಕಾಶ್ ಎತ್ತಿನಮನೆ ಅಮಾನತಾದವರು. ಏನಿದು ಪ್ರಕರಣ?: ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಸುರೇಶ್ ಅಲಿಯಾಸ್ ಕುರುಬರ ಸುರೇಶ್ ಎಂಬವರ ವಿರುದ್ಧ ಪತ್ನಿಯನ್ನು ಕೊಲೆ ಮಾಡಿದ ಆರೋಪದ …
Read More »