Home / ರಾಜ್ಯ (page 501)

ರಾಜ್ಯ

ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ l: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು ಪ್ರಾರ್ಥನೆ ಮಾಡಿದರು. ಇಲ್ಲಿಯತನಕ ಸಮರ್ಪಕ ಮಳೆಯಾಗದೇ …

Read More »

ಕೊಪ್ಪಳದ ವಿದ್ಯಾರ್ಥಿನಿಯಿಂದ ಸಿಎಂಗೆ ಅಭಿನಂದನಾ ಪತ್ರ: ಬಾಲಕಿಗೆ ಮರುಪತ್ರ ಬರೆದ ಸಿದ್ದರಾಮಯ್ಯ

ಕೊಪ್ಪಳ : ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ಸಿದ್ದರಾಮಯ್ಯರಿಗೆ ಅಭಿನಂದನೆ ಪತ್ರ ಬರೆದಿದ್ದಳು. ಈ ಪತ್ರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ವಿದ್ಯಾರ್ಥಿನಿ ಹರ್ಷ ವ್ಯಕ್ತಪಡಿಸಿದ್ದಾಳೆ. ಕೊಪ್ಪಳ ನಗರದ ಮಾಸ್ತಿ ಪಬ್ಲಿಕ್ ಸ್ಕೂಲ್‌ನಲ್ಲಿ 8ನೇ ತರಗತಿ ಓದುತ್ತಿರುವ ಶ್ರೇಯಾಂಕ ವಿ.ಮೆಣಸಗಿ ಎಂಬ ವಿದ್ಯಾರ್ಥಿನಿ ಸಿದ್ದರಾಮಯ್ಯರಿಗೆ ಮೇ 29ರಂದು ಪತ್ರ ಬರೆದಿದ್ದಳು. ಪತ್ರದಲ್ಲಿ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮದ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಳು. ಈ ಬಾರಿಯೂ ಉತ್ತಮ …

Read More »

ಗ್ರಾಮೀಣ ಇಂಧನ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಡಿಪ್ಲೊಮಾ ಇಂಜಿನಿಯರಿಂಗ್​ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರಾಮೀಣ ಇಂಧನ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಹುದ್ದೆ ಕಾರ್ಯ ನಿರ್ವಹಣೆ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷಣೆಯ ತರಗತಿಗಳನ್ನು ತೆಗೆದುಕೊಳ್ಳುವ ಜ್ಞಾನ ಹೊಂದಿರಬೇಕು. …

Read More »

ಅಕ್ಕಿ, ಮನೆ, ಸಿಲಿಂಡರ್ ಕೊಡಿ ಸಾಕು ಎಂದ ಮಹಿಳೆಯರು..

ಗಂಗಾವತಿ (ಕೊಪ್ಪಳ) : ಬಸ್ಸಿನಲ್ಲಿ ಹೆಣ್ಮಕ್ಕಳು ಫ್ರಿಯಾಗಿ ಓಡಾಡಾಕ ಶುರುವಾದಾಗಿನಿಂದ ಒಂದೂ ಬಸ್ ಖಾಲಿ ಇರವಲ್ವು. ಮನಿ ಬಿಟ್ಟು ಬಂದು ಗುಡಿಗೆ ಹೋಗಣಾಂದ್ರ ಹೈರಾಣ ಆಗಿವಿ. ಈ ಫ್ರೀ ಬಸ್ ಬಿಟ್ಟು ಸರ್ಕಾರದೋರು ಜನರಿಗೆ ಬೇಕಾದ ಅಕ್ಕಿ, ಸಿಲಿಂಡರ್, ಮನೆ ಕೊಡ್ಲಿ’.. ಹೀಗೆಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣಕ್ಕೆ ಅವಕಾಶ ಇರುವ ಶಕ್ತಿ ಯೋಜನೆಯ ಬಗ್ಗೆ ಕೆಲ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಆಗಿದ್ದರಿಂದ ಗಂಗಾವತಿ …

Read More »

BJP IT CELL ಉಸ್ತುವಾರಿ ಅಮಿತ್ ಮಾಳವೀಯ ವಿರುದ್ಧ ಎಫ್​ಐಆರ್​ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳಕಾರಿ ಪೋಸ್ಟ್ ಹಾಗೂ ವಿಡಿಯೊ ಬಿತ್ತರಿಸುವ ಮೂಲಕ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತೇಜೋವಧೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಕೆಪಿಸಿಸಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ನೀಡಿದ ದೂರಿನ‌ ಮೇರೆಗೆ ಅಮಿತ್ ಮಾಳವಿಯ ವಿರುದ್ಧ ಐಪಿಸಿ 153 ಬಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, 120ಬಿ ಒಳಸಂಚು, …

Read More »

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ: ಮದ್ಯಪಾನ ವ್ಯಸನಿಯಾಗಿದ್ದ ಪತಿರಾಯನೊಬ್ಬ ತನ್ನ ಪತ್ನಿ ಲೈಂಗಿಕ ಕ್ರಿಯೆಗೆ ಸಹಕಾರ ಮಾಡಿಲ್ಲ ಎಂದು ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.   19/02/20ರಂದು ದಾವಣಗೆರೆ ಜಿಲ್ಲೆಯ ಅಮರಾವತಿ ಗ್ರಾಮದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಈ ಘಟನೆ ನಡೆದಿತ್ತು. ಮರಿಯಪ್ಪ(54) ಶಿಕ್ಷೆಗೊಳಗಾದ ಆರೋಪಿ. ಸೌಭಾಗ್ಯಮ್ಮ ಕೊಲೆಯಾದ ಪತ್ನಿ. ಆರೋಪಿ ಮರಿಯಪ್ಪ ಕುಡಿದು ಬಂದು ಮನೆಯಲ್ಲಿ ಹೆಂಡತಿ ಸೌಭಾಗ್ಯಮ್ಮ ಜೊತೆ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊದಲಿಗೆ ಕ್ಯಾತೆ …

Read More »

ಲೋಕಾಯುಕ್ತ ದಾಳಿ ಸಮಯದಲ್ಲಿ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಪತ್ತೆ

ಬಾಗಲಕೋಟೆ: ಲೋಕಾಯುಕ್ತ ದಾಳಿ ಸಮಯದಲ್ಲಿ ಎರಡು ನಕ್ಷತ್ರ ಆಮೆ ಅಧಿಕಾರಿಗಳ ಮನೆಯಲ್ಲಿ ಪತ್ತೆಯಾಗಿವೆ. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆಗಿರುವ ಚೇತನಾ ಪಾಟೀಲ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು. ದಾಖಲೆ ಹಾಗೂ ನಗದು ಹಣ ಪರಿಶೀಲನೆ ಮಾಡುವ ವೇಳೆ ಎರಡು ಆಮೆ ಪತ್ತೆಯಾಗಿವೆ. ಮನೆಯಲ್ಲಿ ಹಲವು ದಿನಗಳಿಂದ ಆಮೆ ಸಾಕಿದ್ದರು ಎನ್ನಲಾಗಿದೆ. ಅರಣ್ಯ ಕಾಯ್ದೆ ಅಡಿ ಪ್ರಾಣಿಗಳು ಸಾಕುವುದು ನಿಷೇಧ ಇದ್ದರೂ ಸಹ, ಸರ್ಕಾರಿ ಅಧಿಕಾರಿಯಾಗಿ ಕಾನೂನು ಉಲ್ಲಂಘನೆ …

Read More »

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳ.

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ, ಆದಾಯ ಮೀರಿ ಆಸ್ತಿಗಳಿಕೆ ಆರೋಪಗಳಡಿ ದಾಳಿ ನಡೆಸಲಾಗಿದೆ. ಇನ್ನು ಅಕ್ರಮ ಆಸ್ತಿಗಳಿಕೆ ಆರೋಪದಡಿ ಕೆ.ಆರ್.​ಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಹಶೀಲ್ದಾರ್ ಅಜೀತ್ ರಾಜ್ ರೈ ಎಂಬುವವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿ ಬಂದಿದ್ದು, ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಏಕಾಏಕಿ ಅವರ ಮನೆ, ಕಚೇರಿ …

Read More »

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ: ಅಕ್ಕಿ ಬದಲು ಹಣ ಪಾವತಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಅನ್ನಭಾಗ್ಯದಡಿ ಅಕ್ಕಿ ಸಿಗದ ಕಾರಣ ಅಕ್ಕಿ ಬದಲಿಗೆ ಬಿಪಿಎಲ್ ಕಾರ್ಡುದಾರಿಗೆ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಫ್​ಸಿಐ ದರ ಪ್ರತಿ ಕೆಜಿಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ಕುಟುಂಬದವರಿಗೆ ಹಣ ಪಾವತಿ ಮಾಡಲು ತೀರ್ಮಾನಿಸಲಾಗಿದೆ. ಮನೆಯ ಯಜಮಾನನ ಖಾತೆಗೆ ಕುಟುಂಬ ಸದಸ್ಯರ ಹಣವನ್ನೂ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. …

Read More »

ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತಗಳು ಸಂಭವಿಸಲು ಚಾಲಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಕಾರಣ ಎಂದ ಪ್ರತಾಪ್ ಸಿಂಹ

ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತಗಳು ಸಂಭವಿಸಲು ಚಾಲಕರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು: ದಶಪಥ ಮೈಸೂರು- ಬೆಂಗಳೂರು ನಡುವಿನ ಎಕ್ಸ್‌ಪ್ರೆಸ್‌ ವೇ ಅವೈಜ್ಞಾನಿಕವಾಗಿದ್ದು, ಇದು ಸಾವಿನ ಹೆದ್ದಾರಿಯಾಗಿದೆ ಎಂಬ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಇದು ರೇಸಿಂಗ್ ಟ್ರ್ಯಾಕ್ ಅಲ್ಲ, ಬೆಂಗಳೂರು- ಮೈಸೂರು ನಡುವೆ ಕಡಿಮೆ ಅವಧಿಯಲ್ಲಿ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೈವೇ. ಇದು …

Read More »