Breaking News
Home / ರಾಜ್ಯ (page 509)

ರಾಜ್ಯ

500 ಉದ್ಯೋಗಿಗಳನ್ನು ವಜಾಗೊಳಿಸಿದಜೆಪಿ ಮೋರ್ಗಾನ್

ನ್ಯೂಯಾರ್ಕ್: ಜೆಪಿ ಮೋರ್ಗಾನ್ ಚೇಸ್ ಆ್ಯಂಡ್ ಕಂಪನಿ ಈ ವಾರ ಸುಮಾರು 500 ಉದ್ಯೋಗಿಗಳನ್ನು ವಜಾಗೊಳಿಸಿದೆ. ಕೆಯು ಗ್ರಾಹಕ, ವಾಣಿಜ್ಯ ಬ್ಯಾಂಕಿಂಗ್, ಆಸ್ತಿ ಮತ್ತು ಸಂಪತ್ತು ನಿರ್ವಹಣೆ ಸೇರಿದಂತೆ ಬ್ಯಾಂಕ್‌ನ ಪ್ರಮುಖ ವ್ಯವಹಾರಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಜೆಪಿ ಮೊರ್ಗಾನ್ ಇತ್ತೀಚೆಗೆ ಸ್ವಾಧೀನಪಡಿಸಿಕೊಂಡ ಫಸ್ಟ್ ರಿಪಬ್ಲಿಕ್ ಬ್ಯಾಂಕ್‌ನ ಸುಮಾರು 1,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದರ ಭಾಗವಾಗಿ ತನ್ನ ವಿವಿಧ ಇಲಾಖೆಗಳಲ್ಲಿ ಈ ವಾರ ಸುಮಾರು …

Read More »

ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ : ಡಿ.ಕೆ. ಶಿವಕುಮಾರ

ಬೆಂಗಳೂರು: “ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ” ಎಂದು ತಿಳಿಸಿದರು.ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರಕಾರ. ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ” ಎಂದರು. “ಯುವಕರು, …

Read More »

ಬಿಜೆಪಿ ಆಡಳಿತವಿರುವ ರಾಜ್ಯಗಳ ಸಿಎಂ, ಡಿಸಿಎಂ ಗಳೊಂದಿಗೆ ಪ್ರಧಾನಿ ಮೋದಿ ಸಭೆ

ಹೊಸದಿಲ್ಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. “ಈ ಸಭೆಯಲ್ಲಿ ಅಭಿವೃದ್ಧಿಯನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಗಿದೆ” ಎಂದು ಮಾಹಿತಿ ನೀಡಿರುವ ನರೇಂದ್ರ ಮೋದಿ, “ಸಭೆ ಬಿಜೆಪಿಯ ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತದ ವಿಧಾನ ಮತ್ತು ಹಲವಾರು ಜನಪರ ಯೋಜನೆಗಳ ಅನುಷ್ಠಾನಗಳ ಬಗ್ಗೆ ವಿವರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಬಗ್ಗೆಯೂ …

Read More »

ಕಾರಿಗೆ ಹಿಂಬದಿಯಿಂದ ಡಿಕ್ಕಿ,ಬೈಕ್ ; ಸವಾರ ಸ್ಥಳದಲ್ಲೇ ಸಾವು.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಸಮೀಪ ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೈಕ್ ಸವಾರ ಶಿವಾನಂದ ಭೂಸಗೋಳ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂಕೇಶ್ವರ ನರಗುಂದ ರಾಜ್ಯ ಹೆದ್ದಾರಿ ಕೊಟಬಾಗಿ ಸಮೀಪ ಈ ಅಪಘಾತ ಸಂಭವಿಸಿದೆ. ರಸ್ತೆ ಹಂಪ್ ಹತ್ತಿರ ನಿಧಾನವಾಗಿ ಚಲಿಸುತ್ತಿದ್ದ ಇಂಡಿಕಾ ಕಾರಿಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ …

Read More »

ಯಾರಿಗೆ ಯಾವ ಖಾತೆ? ಸಂಪೂರ್ಣ ವಿವರ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಎಲ್ಲ 34 ಜನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಸಿದ್ದರಾಮಯ್ಯ ನಿರೀಕ್ಷೆಯಂತೆ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಇಲಾಖೆಗಳನ್ನು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಸಚಿವರುರಾಮಲಿಂಗಾರೆಡ್ಡಿಗೆ ಸಾರಿಗೆ ಇಲಾಖೆ: ಬೆಂಗಳೂರು ಅಭಿವೃದ್ಧಿ ಖಾತೆಗಾಗಿ ಹಿರಿಯ ಸಚಿವ ರಾಮಲಿಂಗ ರೆಡ್ಡಿ ಸೇರಿದಂತೆ ಹಲವರು ಬೇಡಿಕೆ ಇಟ್ಟಿದ್ದರೂ ಸಹ ಅಂತಿಮವಾಗಿ ಅದನ್ನು ಡಿ.ಕೆ.ಶಿವಕುಮಾರ್ …

Read More »

ಅಥಣಿ ಸಬ್ ರಿಜಿಸ್ಟ್ರಾರ್​ ಕಚೇರಿಯಲ್ಲಿ ಲಂಚ ಆರೋಪ; ಅಧಿಕಾರಿಗೆ ತರಾಟೆ

ಚಿಕ್ಕೋಡಿ (ಬೆಳಗಾವಿ): ಪ್ರತಿಯೊಂದು ಕೆಲಸಕ್ಕೂ ರೈತರು ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಬರುವ ಜನಸಾಮಾನ್ಯರಿಂದ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ರೈತರು ಅಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಂದು ನಡೆಯಿತು. ಸಬ್ ರಿಜಿಸ್ಟ್ರಾರ್ ಅವರು ಕಚೇರಿಗೆ ಬರುವ ರೈತರಿಂದ ಹೆಚ್ಚುವರಿ ಹಣ ಪಡೆದು ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರೈತರು ಆಕ್ರೋಶ ಹೊರಹಾಕಿದರು. ಪ್ರತಿ ನೋಂದಣಿಗೂ 15 ಸಾವಿರ ರೂ. ಹೆಚ್ಚುವರಿಯಾಗಿ ಪಾವತಿ ಮಾಡಬೇಕಾಗಿದೆ. …

Read More »

ಸಾಮಾನ್ಯ ಪಾಸ್‌ಪೋರ್ಟ್​ಗೆ ಅನುಮತಿ… ನಾಳೆ ಸಂಜೆ ಅಮೆರಿಕಕ್ಕೆ ರಾಹುಲ್ ಗಾಂಧಿ ಪಯಣ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಸಾಮಾನ್ಯ ಪಾಸ್​ಪೋರ್ಟ್​ ಸ್ವೀಕರಿಸಿದ್ದಾರೆ. ಶುಕ್ರವಾರ ದೆಹಲಿಯ ನ್ಯಾಯಾಲಯವು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಿ ಮೂರು ವರ್ಷಗಳ ಅವಧಿಗೆ ಪಾಸ್‌ಪೋರ್ಟ್​ಗೆ ಒಪ್ಪಿಗೆ ನೀಡಿತ್ತು. ರಾಹುಲ್​ ಗಾಂಧಿ ಹತ್ತು ವರ್ಷಗಳ ಅವಧಿಯ ಪಾಸ್​ಪೋರ್ಟ್​ಗೆ ಮನವಿ ಮಾಡಿದ್ದರು. ಆದರೆ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಮೂರು ವರ್ಷದ ಅವಧಿಗೆ ಪಾಸ್​ಪೋರ್ಟ್ ಲಭ್ಯವಾದ ಹಿನ್ನೆಲೆ ಸೋಮವಾರ ಸಂಜೆ ರಾಹುಲ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ಪ್ರಯಾಣ …

Read More »

ಬಿರುಬಿಸಿಲಿಗೆ 10 ಸಾವಿರ ಎಕರೆಗೂ ಹೆಚ್ಚು ಕಬ್ಬು ನಾಶ

ಕಾಗವಾಡ: ತಾಲ್ಲೂಕಿನ ಉತ್ತರ ಭಾಗದಲ್ಲಿ ಹಳ್ಳಿಗಳಲ್ಲಿ ಬೇಸಿಗೆಯಿಂದ ನೀರಿನ ಅಭಾವ ಉಂಟಾಗಿ, ಹಲವು ಬೆಳೆಗಳು ಒಣಗುತ್ತಿವೆ. ಅದರಲ್ಲೂ ಸಾಕಷ್ಟು ಕಬ್ಬು ಬೆಳೆಗಾರರು ಕೈ ಸುಟ್ಟುಕೊಳ್ಳುವ ಆತಂಕ ಎದುರಾಗಿದೆ.   ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಹಳ್ಳಿಗಳಾದ ಕಿರಣಗಿ, ಸಂಬರಗಿ, ಕಲ್ಲೂತಿ, ಪಾಂಡೇಗಾಂವ, ಜಂಬಗಿ… ಹಲವು ಗ್ರಾಮಗಳಲ್ಲಿ ಬೆಳೆದ ಕಬ್ಬಿನ ಬೆಳೆ ನೀರು ಇಲ್ಲದೆ ನಾಶವಾಗಿದೆ. ರೈತರಿಗೆ ಆತಂಕ ಎದುರಾಗಿದೆ. ಈ ಎಲ್ಲ ಗ್ರಾಮಗಳು ಸೇರಿ ಸಂದಾಜು 40 ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ರೈತರು …

Read More »

ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ: ಹೊಸ ಸರ್ಕಾರದತ್ತ ನಿರೀಕ್ಷೆಯ ನೋಟ

ಬೆಳಗಾವಿ: ದಶಕದ ಹಿಂದೆ ಉದ್ಘಾಟನೆಯಾದ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಲ್ಲಿರುವ ಪ್ರಮುಖ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರ ವಿಚಾರವಾಗಿ, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ನಿಲುವು ತಳೆಯಲಿದೆ ಎಂಬ ಜಿಜ್ಞಾಸೆ ಈಗ ಗಡಿಭಾಗದ ಕನ್ನಡಿಗರಲ್ಲಿ ಉಂಟಾಗಿದೆ.   2013ರಲ್ಲಿ ಅಧಿಕಾರಕ್ಕೇರಿದ್ದ ಕಾಂಗ್ರೆಸ್‌ ಸರ್ಕಾರದಲ್ಲಿ ಸಿದ್ದರಾಮಯ್ಯ ಐದು ವರ್ಷಗಳ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದರು. ಆದರೆ, ಸೌಧಕ್ಕೆ ಕಚೇರಿಗಳ ಸ್ಥಳಾಂತರಕ್ಕೆ ಸಕಾರಾತ್ಮಕ ನಿಲುವು ತಳೆಯಲಿಲ್ಲ ಎಂಬುದು ಗಡಿ ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರನ್ನು ಐದು …

Read More »

ಉದ್ಯೋಗ ಅರಸಿ ವಲಸೆ ಹೋಗುವವರ ಸಮಸ್ಯೆ ನೀಗಿಸುರುವರೇ ಶಾಸಕ ಮಹಾಂತೇಶ ಕೌಜಲಗಿ?

ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಹೆಸರಲ್ಲೇ ಒಂದು ಐತಿಹಾಸಿಕ, ಕ್ರಾಂತಿಕಾರಕ ಶಕ್ತಿ ಅಡಗಿದೆ. ಎರಡನೇ ಬಾರಿ ಆಯ್ಕೆಯಾದ ಶಾಸಕ ಮಹಾಂತೇಶ ಕೌಜಲಗಿ ಅವರು ಹಳೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಜನರ ಹೊಸ ನಿರೀಕ್ಷೆಗಳನ್ನು ಈಡೇರಿಸುವ ಸವಾಲು ಎದುರಿಸಬೇಕಾಗಿದೆ.‌ ಈ ಕ್ಷೇತ್ರದಲ್ಲಿ ಅವರ ಎರಡೂ ಗೆಲುವುಗಳಿಗೆ ಅವರಿಗಿಂತ ಹೆಚ್ಚಾಗಿ ಬಿಜೆಪಿ ನಾಯಕರ ಒಳಜಗಳವೇ ಕಾರಣ ಎಂಬುದು ಈಗ ಜನಜನಿತ. ಈ ಅವಕಾಶವು ಮಹಾಂತೇಶ ಅವರಿಗೆ ಎರಡು ಬಾರಿ ಒಲಿದಿದೆ. ಆದರೆ, ಇದು …

Read More »