Breaking News

ರಾಜ್ಯ

BPL’ ಕಾರ್ಡ್ ಬೆನ್ನಲ್ಲೆ, ರಾಜ್ಯದ 2 ಲಕ್ಷಕ್ಕೂ ಅಧಿಕ ‘ನಕಲಿ’ ಕಟ್ಟಡ ಕಾರ್ಮಿಕರ ಕಾರ್ಡ್ ಗಳು ರದ್ದು!

ಬೆಂಗಳೂರು : ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ. 2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಹೌದು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ …

Read More »

ರಾಜ್ಯದಲ್ಲಿ ಶ್ರೀಮಂತರ ‘BPL ಕಾರ್ಡ್’ಗಳು ಮಾತ್ರ ರದ್ದಾಗುತ್ತದೆ : DCM

ಬೆಂಗಳೂರು : ರಾಜ್ಯದಲ್ಲಿ ಶ್ರೀಮಂತರ ‘BPL ಕಾರ್ಡ್’ಗಳು ಮಾತ್ರ ರದ್ದಾಗುತ್ತದೆ, ಬಡವರ ಕಾರ್ಡ್ ರದ್ದಾಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ BPL ಕಾರ್ಡ್ಗಳು ರದ್ದಾಗುತ್ತವೆ ಎನ್ನುವ ಆತಂಕ ಯಾರಿಗೂ ಬೇಡ. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಮರು ಪರಿಶೀಲನೆ ಮಾಡುತ್ತಿದ್ದೇವೆ. ನೀವು ಅರ್ಹರೇ ಆಗಿದ್ದರೆ ಖಂಡಿತವಾಗಿಯೂ ನಿಮಗೆ BPL ಸೌಲಭ್ಯಗಳು ಸಿಗಲಿವೆ. ಒಂದು ವೇಳೆ ಅರ್ಹರಾಗಿದ್ದರೂ ರದ್ದಾಗಿದ್ದರೆ …

Read More »

ಕಲಬುರ್ಗಿಯಲ್ಲಿ ಬಿಸಿ ನೀರಿದ್ದ ಬಕೆಟ್ ಗೆ ಬಿದ್ದು 5 ವರ್ಷದ ಮಗು ಸಾವು!

ಕಲಬುರ್ಗಿ : ಕಲ್ಬುರ್ಗಿಯಲ್ಲಿ ದಾರುಣವಾದ ಘಟನೆಯೊಂದು ನಡೆದಿದ್ದು, ಬಿಸಿ ನೀರಿದ್ದ ಬಕೆಟ್ ಗೆ ಐದು ವರ್ಷದ ಹೆಣ್ಣು ಮಗುವೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ನಗರದ ತಾಜ್ ನಗರದಲ್ಲಿ ನಡೆದಿದೆ.ಕಳೆದ ನವೆಂಬರ್ 12 ರಂದು ಈ ಘಟನೆ ನಡೆದಿದ್ದು ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ, ಆಫ್ರೀನ್ ಬಾನು (5) ಸಾವನ್ನಪ್ಪಿದ್ದಾಳೆ.   ತಾಜ್ ನಗರದ ಮಹಮದ್ ಗೌಸ್ ಮತ್ತು ತಾಹೇರ ಬಾನು ದಂಪತಿ ಪುತ್ರಿ ಆಫ್ರೀನ್ ಬಾನು ಎಂದು …

Read More »

ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್‌ ಕಾರ್ಡ್‌ ರದ್ದು : ಸಂತೋಷ್‌ ಲಾಡ್‌

ಬೆಂಗಳೂರು, ನ.20-ರಾಜ್ಯದಲ್ಲಿ ಶೇ.15ರಷ್ಟು ಅನರ್ಹ ಬಿಪಿಎಲ್‌ ಪಡಿತರ ಚೀಟಿ ರದ್ದಾಗಬಹುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.15ಕ್ಕಿಂತ ಹೆಚ್ಚು ಪಡಿತರ ಚೀಟಿಗಳು ರದ್ದಾಗುವುದಿಲ್ಲ. ಕೆಲವು ಕಡೆ ಬಿಪಿಎಲ್‌ ಕಾರ್ಡ್‌ ರದ್ದು ಮಾಡಿರುವ ಆರೋಪಗಳು ಬರುತ್ತಿವೆ. ನಮ ಕಲಘಟಗಿಯಲ್ಲಿ 400 ಕಾರ್ಡ್‌ ರದ್ದಾಗಿವೆ ಎಂದರು. ಪಡಿತರ ಚೀಟಿಗಳ ಪರಿಶೀಲನೆ ವೇಳೆ ಅರ್ಹರು ಇದ್ದರೆ, ಅಂಥವರ ಕಾರ್ಡ್‌ಗಳನ್ನು ವಾಪಸ್‌‍ ಕೊಡುತ್ತೇವೆ. ಕೆಲವರು ಕಾರ್ಡ್‌ ಬೇಡ ಎನ್ನುತ್ತಿದ್ದರು. ಒಂದು …

Read More »

ಹುಟ್ಟೂರಿನಲ್ಲಿ ನಕ್ಸಲ್ ನಾಯಕ ‘ವಿಕ್ರಂಗೌಡ’ನ ಅಂತ್ಯಸಂಸ್ಕಾರ, ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಸಹೋದರ.!

ಹೆಬ್ರಿ : ಎನ್ ಕೌಂಟರ್ ನಲ್ಲಿ ಹತನಾದ ನಕ್ಸಲ್ ನಾಯಕ ವಿಕ್ರಂಗೌಡನ ಮೃತದೇಹದ ಅಂತ್ಯಸಂಸ್ಕಾರ ಹುಟ್ಟೂರಿನಲ್ಲಿ ಇಂದು ನೆರವೇರಿದೆ. ಹೆಬ್ರಿಯ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ವಿಕ್ರಂಗೌಡನ ಅಂತ್ಯಸಂಸ್ಕಾರ ನೆರವೇರಿದ್ದು, ಚಿತೆಗೆ ತಮ್ಮ ಸುರೇಶ್ ಗೌಡ ಅಗ್ನಿ ಸ್ಪರ್ಶ ಮಾಡಿದರು. ಈ ವೇಳೆ ಗ್ರಾಮದ ಜನರು, ಪೊಲೀಸರು ಹಾಜರಿದ್ದರು. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ(ANF) ನಡೆಸಿದ ಎನ್ಕೌಂಟರ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ …

Read More »

ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್‌ ಶಾಸಕರ ಪಟ್ಟು

ಬೆಳಗಾವಿ: ಇತ್ತೀಚೆಗೆ ಮೈಸೂರು ಜಿಲ್ಲೆ ಎಚ್‌.ಡಿ. ಕೋಟೆಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದ ಬೆನ್ನಲ್ಲೇ, ಇದೀಗ ಸಚಿವ ಸ್ಥಾನಕ್ಕೆ ಇಬ್ಬರು ಶಾಸಕರು ಬೇಡಿಕೆ ಇಟ್ಟಿದ್ದಾರೆ.   ಅಪರೇಷನ್‌ ಕಮಲ ಚರ್ಚೆಯ ನಡುವೆಯೇ, ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆಸಿಫ್ ಸೇಠ್ …

Read More »

ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

ಮುಂಬಯಿ: ‘ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ಅಕ್ರಮ ಬಿಟ್‌ಕಾಯಿನ್ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬಿಜೆಪಿಯ ಆರೋಪವನ್ನು ಸಂಸದೆ ಮತ್ತು ಎನ್‌ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಬುಧವಾರ(ನ20)ತಳ್ಳಿಹಾಕಿದ್ದಾರೆ.   ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಳೆ “ಆಡಿಯೋ ಕ್ಲಿಪ್‌ ನಲ್ಲಿ ಇರುವುದು ನನ್ನ ಧ್ವನಿ ಅಲ್ಲ. ಈ ಎಲ್ಲಾ ಧ್ವನಿ ಟಿಪ್ಪಣಿಗಳು ಮತ್ತು ಸಂದೇಶಗಳು ನಕಲಿ” ಎಂದರು. ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಅವರು …

Read More »

ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಾಲ್ಘರ್‌ನ ಹೋಟೆಲ್‌ನಲ್ಲಿ ಮತದಾರರಿಗೆ ನಗದು ಹಂಚಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಪಕ್ಷದ ಅಭ್ಯರ್ಥಿ ರಾಜನ್ ನಾಯಕ್ ಮತ್ತು ಇತರರ ವಿರುದ್ಧ ಪೊಲೀಸರು ಮಂಗಳವಾರ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ರಾಜ್ಯದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ …

Read More »

ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ನವದೆಹಲಿ: ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್‌ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ. ಇತ್ತ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ನಾಂದೇಡ್‌ ಲೋಕಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, …

Read More »

ಹೇರ್ ಡ್ರೈಯರ್’ ಸ್ಪೋಟಗೊಂಡು ಮಹಿಳೆಯ ಮುಂಗೈ. ಬೆರಳು ಕಟ್!

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ. ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೋರಿಯರ್ ಓಪನ್ ಮಾಡಿ …

Read More »