Breaking News

ರಾಜ್ಯ

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕವಾಗಿ‌ ದಿವಾಳಿಯಾಗಿದ್ದರಿಂದ ಪಡಿತರ ಚೀಟಿಗಳನ್ನು ಕಡಿತ ಮಾಡುತ್ತಿದ್ದೆ. ದಿಢೀರ್ ಆಗಿ ಯಾಕೆ ಬಿಪಿಎಲ್ ಕಾರ್ಡ್ ಕಡಿತ‌ ಯಾಕೆ ಎಂಬುದು‌ ತಿಳಿಯುತ್ತಿಲ್ಲ‌ ಎಂದು‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೇಸರ‌ ವ್ಯಕ್ತಪಡಿಸಿದರು. ರಾಜ್ಯದ ಆಹಾರ ಮತ್ತು‌ ನಾಗರಿಕ‌ ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಕೇಂದ್ರ ಸರ್ಕಾರ ಪ್ರತಿಯೊಬ್ಬ ಅರ್ಹ ಪಡಿತರದಾರನಿಗೆ 5 ಕೆ.ಜಿ.ಯಷ್ಟು …

Read More »

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ ರವಿವಾರ (ನ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ …

Read More »

ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ಬೆಳಗಾವಿ: ರಾಜ್ಯ ಮದ್ಯ ಮಾರಾಟಗಾರರು ನ.20 ರಂದು ಕರೆ ನೀಡಿರುವ ರಾಜ್ಯ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಉಮೇಶ್ ಬಾಳಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಮ್ಮ ಪ್ರವಾಸೋದ್ಯಮ ಹೋಟೆಲ್ ಬೇರೆ ಅವರ ಸಂಘಟನೆಯೇ ಬೇರೆ. ಹೀಗಾಗಿ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದರು. ಪ್ರವಾಸೋದ್ಯಮ ಹೋಟೆಲ್ ನವರು ಬ್ಯಾಂಕ್ ನಿಂದ ಸಾಲ ಪಡೆದು ಹೆಚ್ಚಿನ …

Read More »

ಬೆಳಗಾವಿ-ಧಾರವಾಡ ವಯಾ ಕಿತ್ತೂರು ನೇರ ರೈಲು ಮಾರ್ಗ ಯಾಕಿಷ್ಟು ವಿಳಂಬ?

ಬೆಳಗಾವಿ, ನವೆಂಬರ್ 17: ಬೆಳಗಾವಿ-ಧಾರವಾಡ ವಯಾ ಕಿತ್ತೂರು ನೇರ ರೈಲು ಮಾರ್ಗ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ಕನಸಿನ ಯೋಜನೆ ಇದು. ಯೋಜನೆಯ ಕಾಮಗಾರಿಗೆ ಭೂ ಸ್ವಾಧೀನ ಕಾರ್ಯವೇ ಅಡ್ಡಿಯಾಗಿದೆ. ಈಗಾಗಲೇ ಈ ಯೋಜನೆ ನಕ್ಷೆಯನ್ನು ಯಾವುದೇ ಕಾರಣಕ್ಕೂ ಬದಲಿಸಲಾಗದು. ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಮ್ಮ ಕೆಲಸ ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಭೆ ನಡೆಸಿದ …

Read More »

ಬೈಲಹೊಂಗಲ: ಮರಡಿ ಬಸವೇಶ್ವರ ಜಾತ್ರೆಗೆ ಸಜ್ಜು; ಗ್ರಾಮೀಣ ಸೊಗಡು ಅನಾವರಣ

ಬೈಲಹೊಂಗಲ: ರೈತ ಸಮುದಾಯದ ಅಧ್ಯಾತ್ಮಿಕ ಕೇಂದ್ರವಾಗಿರುವ, ಇತಿಹಾಸ ಪ್ರಸಿದ್ಧ ಇಲ್ಲಿನ ಮರಡಿ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 18 ರಂದು ಸಂಜೆ 4.30ಕ್ಕೆ ನವಿಲಿನ ಕಳಶ ಹೊತ್ತ ಮಹಾರಥ ಎಳೆಯಲು ಭಕ್ತರು ಕಾಯುತ್ತಿದ್ದಾರೆ.   80 ಅಡಿ ಎತ್ತರದ ರಥಃ ಪ್ರತಿವರ್ಷ ಮರಡಿ ಬಸವೇಶ್ವರ ಜಾತ್ರೆಗೆ ಒಂದು ತಿಂಗಳ ಮುನ್ನವೇ ಸಿದ್ಧತೆ ಆರಂಭಿಸಲಾಗುತ್ತದೆ. ವಿಜಯದಶಮಿ ದಿನದಂದು ದೇವಸ್ಥಾನದಲ್ಲಿರುವ ಬೃಹತ್ ಆಕಾರದ ಕಲ್ಲಿನ ಗಾಲಿಗಳಿಗೆ ಪೂಜೆ ಸಲ್ಲಿಸಿ ಮೆರವಣಿಗೆ …

Read More »

ಬಹುಮತ ಹೊಂದಿರುವ ಸರ್ಕಾರ ಬೀಳಿಸುವುದು ಹುಚ್ಚುತನದ ಪರಮಾವಧಿ: B.S.Y.

ಶಿವಮೊಗ್ಗ: ‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಕೆಲಸವನ್ನು ಯಾರೂ ಮಾಡುತ್ತಿಲ್ಲ. ಪೂರ್ಣ ಬಹುಮತ ಹೊಂದಿರುವ ಸರ್ಕಾರವನ್ನು ಬೀಳಿಸುವುದು ಹುಚ್ಚುತನದ ಪರಮಾವಧಿ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು. ‘ಸರ್ಕಾರ ಬೀಳಿಸುವುದಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಯಾರೂ ಬಿಜೆಪಿಗೆ ಕರೆಯುತ್ತಿಲ್ಲ’ ಎಂದು ಶನಿವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.   ‘ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸುವ ಕೆಲಸ ಮಾಡಿದ್ದೇವೆ. ಯಾವುದೇ ಭ್ರಷ್ಟಾಚಾರ ಅಥವಾ ಹಣಕಾಸಿನ ಏರುಪೇರು ಆಗಿಲ್ಲ.‌ ರಾಜ್ಯ ಸರ್ಕಾರ ದುರುದ್ದೇಶದಿಂದ …

Read More »

ಕುಷ್ಟಗಿ: ಹರಾಜು ಹಣ ಪಾವತಿಸದಿದ್ದರೂ ಕರ ವಸೂಲಿ

ಕುಷ್ಟಗಿ: ಪುರಸಭೆ ವ್ಯಾಪ್ತಿಯ ದಿನದ ಸಂತೆಯಲ್ಲಿ ವ್ಯಾಪಾರಿಗಳಿಂದ ವರ್ಷದ ಅವಧಿಗೆ ಶುಲ್ಕ ವಸೂಲಿ ಮಾಡುವ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ಮುಂಚಿತವಾಗಿ ಸಂಪೂರ್ಣ ಹಣ ಪಾವತಿಸದಿದ್ದರೂ ಸಂತೆಯಲ್ಲಿ ಶುಲ್ಕ ವಸೂಲಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ದೂರು ಕೇಳಿ ಬಂದಿದೆ.   ತರಕಾರಿ, ಮಾಂಸದ ಅಂಗಡಿಗಳು, ಹಣ್ಣು, ಮಾರಾಟದ ಬಂಡಿ, ಫಾಸ್ಟ್‌ಫುಡ್, ಹೋಟೆಲ್‌ ಸೇರಿ ವಾರದ, ದೈನಂದಿನ ಸಂತೆ ಹಾಗೂ ಜಾನುವಾರು ಸಂತೆಯಲ್ಲಿ ವ್ಯಾಪಾರ ವಹಿವಾಟು ನಡೆಸುವವರಿಂದ ನಿಗದಿಪಡಿಸಿದ ಶುಲ್ಕ ವಸೂಲಿ ಮಾಡುವ ಹಕ್ಕನ್ನು …

Read More »

ಬೆಳ್ಳುಳ್ಳಿ ಬೆಲೆ ಕೆ.ಜಿಗೆ ₹400: ಬಹುತೇಕ ತರಕಾರಿ ಬೆಲೆ ಸ್ಥಿರ

ರಾಯಚೂರು: ಮಳೆಗಾಲ ಮುಗಿದು ಚಳಿಗಾಲ ಪ್ರವೇಶ ಮಾಡಿದೆ. ಬಿಸಿಲ ಧಗೆ ಮುಂದುವರಿದರೂ ರಾತ್ರಿ ಸ್ವಲ್ಪ ಮಟ್ಟಿಗೆ ಸೆಕೆ ಕಡಿಮೆ ಇದೆ. ತರಕಾರಿ ಬೆಲೆಗಳಲ್ಲೂ ಏಳಿತವಾಗಿದೆ. ರಾಯಚೂರಿಗೆ ಹೊರ ಜಿಲ್ಲೆಗಳಿಂದ ತರಕಾರಿ ಬರುವುದು ಮುಂದುವರಿದೆ. ಬೆಳ್ಳುಳ್ಳಿ ಬೆಲೆ ಪ್ರತಿ ಕೆಜಿಗೆ ₹400 ತಲುಪಿದ್ದು, ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. ಗಜ್ಜರಿ, ಬೀಟ್‌ರೂಟ್‌, ತೊಂಡೆಕಾಯಿ, ಹಿರೇಕಾಯಿ ₹ 2 ಸಾವಿರ, ಡೊಣಮೆಣಸಿನಕಾಯಿ ₹1 ಸಾವಿರ, ನುಗ್ಗೆಕಾಯಿ ₹8 ಸಾವಿರ ಹೆಚ್ಚಾಗಿದೆ. ಆಲೂಗಡ್ಡೆ, ಮೆಣಸಿನಕಾಯಿ ಹಾಗೂ ಚವಳೆಕಾಯಿ …

Read More »

ಹುಬ್ಬಳ್ಳಿ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಹುಬ್ಬಳ್ಳಿ: ತಾಲ್ಲೂಕಿನ ಮಂಟೂರು, ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಅಡವಿಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ (82) ಭಾನುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.   ಹೃದಯಾಘಾತವಾಗಿದ್ದ ಸ್ವಾಮೀಜಿ ಅವರನ್ನು ಇಲ್ಲಿನ ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.‌ ಮಂಟೂರು ಮಠದ ಅವರಣದಲ್ಲಿ ಅಂತ್ಯಕ್ರಿಯೆ …

Read More »

ರಾಜ್ಯ ಸರ್ಕಾರ ನಿಷ್ಕ್ರೀಯ: ಸಿ.ಸಿ.ಪಾಟೀಲ

ನರಗುಂದ: ‘ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ. ಮುಡಾ ಹಗರಣ ಬೇರೆಡೆ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯಿಂದ ₹50 ಕೋಟಿಗೆ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಸಂಚು ನಡೆದಿದೆ ಎಂಬ ಗಂಭೀರ ಆರೋಪ ಮಾಡಿದ್ದು ಸರಿಯಲ್ಲ. ಇದು ನಿಜವಿದ್ದರೆ ತಮ್ಮದೇ ಸರ್ಕಾರವಿದೆ, ತನಿಖೆ ನಡೆಸಲಿ’ ಎಂದು ಶಾಸಕ ಸಿ.ಸಿ.ಪಾಟೀಲ ಹೇಳಿದರು.   ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಶನಿವಾರ ನಡೆದ ರೈತ ಸಂಪರ್ಕ ಕೇಂದ್ರದ ಗೋದಾಮು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಬಳಿಕ …

Read More »