ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 …
Read More »ಅಭಿಷೇಕ್ ಬಚ್ಚನ್ – ಐಶ್ವರ್ಯಾ ರೈ ಮದುವೆ ಕುರಿತು ಮಾತನಾಡಿದ್ದ ಸಲ್ಮಾನ್ ಹಳೆ ವಿಡಿಯೋ ವೈರಲ್
ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾಗಿರುವ ಐಶ್ವರ್ಯಾ ರೈ, ಈ ಹಿಂದೆ ಸಲ್ಮಾನ್ ಖಾನ್ ಅವರೊಂದಿಗೆ ಪ್ರಣಯ ಸಂಬಂಧದಲ್ಲಿದ್ದರು ಎಂದು ಹೇಳಲಾಗುತ್ತಿತ್ತು. ಐಶ್ವರ್ಯಾ ಮತ್ತು ಸಲ್ಮಾನ್ ತಮ್ಮ ಸಂಬಂಧವನ್ನು 2002 ರಲ್ಲಿ ಕೊನೆಗೊಳಿಸಿದರು ಎಂಬ ಮಾತುಗಳಿವೆ. ಇಬ್ಬರೂ ತಮ್ಮ ಡೇಟಿಂಗ್ ಜೀವನದ ಬಗ್ಗೆ ಎಂದಿಗೂ ಬಹಿರಂಗವಾಗಿ ಮಾತನಾಡದಿದ್ದರೂ, ಸಲ್ಮಾನ್ ಒಮ್ಮೆ ʼ ಆಪ್ ಕಿ ಅದಾಲತ್ʼ ನಲ್ಲಿ ಅಭಿಷೇಕ್ ಜೊತೆ ಐಶ್ವರ್ಯಾ ಅವರ ಮದುವೆಯ ಬಗ್ಗೆ ಮಾತನಾಡಿದ್ದು, ಈ ಹಳೆ ವಿಡಿಯೋ …
Read More »ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
ಬೆಳಗಾವಿ: ದೇಶದಲ್ಲಿ ಮಾನವ ಕಳ್ಳ ಸಾಗಾಣಿಕೆ ಮತ್ತು ಜೀತ ಪದ್ಧತಿಯಂತಹ ಅನಿಷ್ಠ ಪದ್ಧತಿಗಳಿಗೆ ಬಡತನ, ಅನಕ್ಷರತೆ, ನಿರುದ್ಯೋಗ ಕಾರಣವಾಗಿದೆ. ಜೀತ ಪದ್ಧತಿ ಎಲ್ಲಿದೆ ಎಂಬುದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ನಿರ್ಮೂಲನೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಪಿ. ಮುರಳಿಮೋಹನ್ ರೆಡ್ಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ಪಂದನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧದಲ್ಲಿ ಮಾನವ ಕಳ್ಳ …
Read More »ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
ಬೆಳಗಾವಿ: ಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಆಪರೇಷನ್ ಕಮಲ ಮಾಡುವ ಪರಿಸ್ಥಿತಿ ಅಥವಾ ಅನಿವಾರ್ಯತೆ ಇಲ್ಲ. ಕಾಂಗ್ರೆಸ್ದವರೇ ಅತಂತ್ರದಲ್ಲಿದ್ದಾರೆ. ನನ್ನನ್ನು ಮುಟ್ಟಿದರೆ ಕರ್ನಾಟಕದ ಜನರು ಸುಮ್ಮನೆ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ತಮ್ಮ ಪಕ್ಷದವರನ್ನು ಉದ್ದೇಶಿಸಿಯೇ ಹೇಳಿದ್ದಾರೆ. ಅವರು ಹೇಳಿರುವದು ಬಿಜೆಪಿಯವರಿಗೆ ಅಲ್ಲ. ಉಪಚುನಾವಣೆ ಫಲಿತಾಂಶದ ನಂತರ ಮುಖ್ಯಮಂತ್ರಿ …
Read More »ಬೆಳಗಾವಿಯ ವಡ್ಡರವಾಡಿಯಲ್ಲಿ ಬಟ್ಟೆ ಹರಿದು ಮಹಿಳೆ ಮೇಲೆ ಹಲ್ಲೆ
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ್ದ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಲಾಗಿದೆ. ಪಕ್ಕದ ಮನೆಯವರೇ ಮಹಿಳೆ ಮೇಲೆ ಹಲ್ಲೆ ನಡೆಸಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ. ವಡ್ಡರವಾಡಿ ಮನೆಯಲ್ಲಿ ತಾಯಿ-ಮಗಳು ಸೇರಿ ನಾಲ್ವರು ಮನೆಯೊಂದರಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡ್ಡಿಹೋಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣ
ತಿರುವನಂತಪುರಂ: ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇರಳ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಂದಿನ ಮಂಡಲೋತ್ಸವದ ವೇಳೆಗೆ ರೋಪ್ ವೇ ಸಿದ್ಧವಾಗಲಿದೆ. ಪಂಪಾದಿಂದ ಸನ್ನಿಧಾನದವರೆಗೆ ಮುಂದಿನ ವರ್ಷದೊಳಗೆ ರೋಪ್ ವೇ ನಿರ್ಮಿಸಲಾಗುವುದು ಎಂದು ಕೇರಳ ದೇವಸ್ವಂ ಸಚಿವ ವಿ.ವಿ. ವಾಸವನ್ ಹೇಳಿದ್ದಾರೆ. ವೃದ್ಧ ಯಾತ್ರಿಕರು, ಅನಾರೋಗ್ಯ ಪೀಡಿತರು, ಸರಕುಗಳ ಸಾಗಾಣಿಕೆಗೆ ಅನುಕೂಲವಾಗುವಂತೆ ಕೇಬಲ್ ಕಾರ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕೇರಳ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಗ್ರೀನ್ …
Read More »ಸುಕನ್ಯಾ ಸಮೃದ್ಧಿ ಯೋಜನೆ : ಪೋಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಭಾರತ ಸರ್ಕಾರವು ಬೇಟಿ ಬಚಾವೋ-ಬೇಟಿ ಪಢಾವೋ ಅಭಿಯಾನದ ಅಡಿಯಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ (SSY) ಅನ್ನು ಪ್ರಾರಂಭಿಸಿದೆ. ಈ ಯೋಜನೆ ವಿಶೇಷವಾಗಿ ಹೆಣ್ಣುಮಕ್ಕಳಿಗೆ. ಈ ಯೋಜನೆಯಲ್ಲಿ, ಪೋಷಕರು ತಮ್ಮ ಮಗಳ ಶಿಕ್ಷಣ ಮತ್ತು ಮದುವೆಗಾಗಿ ಹೂಡಿಕೆ ಮಾಡುತ್ತಾರೆ ಮತ್ತು ಮಗಳಿಗೆ 18 ವರ್ಷವಾದಾಗ, ಹೂಡಿಕೆ ಮೊತ್ತದೊಂದಿಗೆ ಬಡ್ಡಿಯನ್ನು ಪಡೆಯುತ್ತಾರೆ. ಈ ಯೋಜನೆಯಲ್ಲಿ ಹೂಡಿಕೆಯನ್ನು 15 ವರ್ಷಗಳವರೆಗೆ ಮಾಡಬೇಕು. ಇದರ ನಂತರ, ಯಾವುದೇ ಹೂಡಿಕೆ ಮಾಡಬೇಕಾಗಿಲ್ಲ ಮತ್ತು ಮಗಳಿಗೆ 18 …
Read More »ಕಬ್ಬು ಕಟಾವು ಋತು: ಮಹಾರಾಷ್ಟ್ರದಲ್ಲಿ ಮತದಾನದಿಂದ 12 ಲಕ್ಷ ಮಂದಿ ವಂಚಿತ?
ಪುಣೆ: ನವೆಂಬರ್ 20 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಯಲ್ಲಿ ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗದ ಸುಮಾರು 12 ಲಕ್ಷ ಮಂದಿ ಕಬ್ಬು ಕಟಾವು ಕಾರ್ಮಿಕರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ. ನವೆಂಬರ್ 15 ರಿಂದ ಕಬ್ಬು ಕಟಾವು ಋತು ಆರಂಭವಾಗಲಿದ್ದು, ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಕಬ್ಬು ಕಟಾವು ಮಾಡುವ ಕಾರ್ಮಿಕರು ಪಶ್ಚಿಮ ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ ಎಂದು ಮಹಾರಾಷ್ಟ್ರ ಕಬ್ಬು ಕಟಾವುಗಾರರ …
Read More »ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ
ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಈ ಘಟನೆ ನಡೆದಿದೆ. ಹಲೀಜಾ ಖಾನಂ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿರುವ ಮಗು. ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಗ್ಗೆರೆ ಗ್ರಾಮಸ್ಥರು ಬೀದಿ ನಾಯಿ ಹಾವಳಿಗೆ ರೋಸಿ ಹೋಗಿದ್ದು, ನೂರಾರು ಬೀದಿ ನಾಯಿಗಳು ರಸ್ತೆಯಲ್ಲಿಯೇ ಒಡಾಡುತ್ತಿವೆ. ಮಕ್ಕಳು, ಹಿರಿಯರನ್ನು …
Read More »
Laxmi News 24×7