Breaking News

ರಾಜ್ಯ

ರಾಹುಲ್‌ ತೊರೆದ ವಯನಾಡಲ್ಲಿ ಗೆಲ್ಲುತ್ತಾರಾ ಪ್ರಿಯಾಂಕಾ ಗಾಂಧಿ ?

ವಯನಾಡ್‌: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್‌ ಲೋಕಸಭೆ ಕ್ಷೇತ್ರದ ಉಪಚುನಾವಣೆ ಬುಧವಾರ(ನ.13) ನಡೆಯಲಿದೆ. ಕಾಂಗ್ರೆಸ್‌ನ ಗಾಂಧಿ ಕುಟುಂಬದ ಮತ್ತೊಂದು ಕುಡಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆಯಿಂದಾಗಿ ಈ ಉಪಚುನಾವಣೆಯು ದೇಶದ ಗಮನ ಸೆಳೆದಿದೆ. ಇಲ್ಲಿಂದ ಗೆದ್ದರೆ ಪ್ರಿಯಾಂಕಾ ಅವರು ಅಧಿಕೃತವಾಗಿ ಚುನಾವಣ ರಾಜಕಾರಣಕ್ಕೆ ಪ್ರವೇಶ ಪಡೆಯಲಿದ್ದಾರೆ. ಆಗಸ್ಟ್‌ನಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ತತ್ತರಿಸಿರುವ ವಯನಾಡು ಜನರು ಆರೇಳು ತಿಂಗಳಲ್ಲೇ ಮತ್ತೂಮ್ಮೆ ತಮ್ಮ ಬೆರಳಿಗೆ ಶಾಯಿ ಹಚ್ಚಿಸಿಕೊಳ್ಳಲು ಸಿದ್ಧರಾಗಿದ್ದಾರೆ. …

Read More »

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ

ಬೆಂಗಳೂರು: ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಚುನಾವಣ ಆಯೋಗ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 45 ಅಭ್ಯರ್ಥಿ ಗಳ ಭವಿಷ್ಯವನ್ನು ಮತದಾರ ಬರೆಯ ಲಿದ್ದಾನೆ. ಶಿಗ್ಗಾಂವಿ, ಸಂಡೂರು, ಚನ್ನ ಪಟ್ಟಣ ಸೇರಿ 3 ವಿಧಾನಸಭಾ ಕ್ಷೇತ್ರ ಗಳಲ್ಲಿ 7 ಲಕ್ಷಕ್ಕೂ ಅಧಿಕ ಮತ ದಾರ  ರಿದ್ದು, ಮತದಾನಕ್ಕಾಗಿ 770 ಮತಗಟ್ಟೆ …

Read More »

ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು: ರಾಜ್ಯಾದ್ಯಂತ ಲೋಕಾಯುಕ್ತ ಪೊಲೀಸರು ಭ್ರಷ್ಟರ ಬೇಟೆ ಮುಂದುವರಿಸಿದ್ದು, ಮಂಗಳವಾರ ರಾಜ್ಯಾದ್ಯಂತ ಏಕಕಾಲಕ್ಕೆ 8 ಅಧಿಕಾರಿಗಳಿಗೆ ಸೇರಿದ 37 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ದಾಳಿಗೆ ಒಳಗಾದ ಅಧಿಕಾರಿಗಳ ಬಳಿ 22.50 ಕೋಟಿ ರೂ. ಮೌಲ್ಯದ ಆದಾಯ ಮೀರಿದ ಆಸ್ತಿ ಪತ್ತೆಯಾಗಿದೆ.   ಕರ್ನಾಟಕ ಲೋಕಾಯುಕ್ತ ಪೊಲೀಸ್‌ ವಿಭಾಗದ ಬೆಳಗಾವಿಯಲ್ಲಿ 2, ಹಾವೇರಿ, ದಾವಣಗೆರೆ, ಬೀದರ್‌, ಮೈಸೂರು, ರಾಮನಗರ ಮತ್ತು ಧಾರವಾಡದಲ್ಲಿ ತಲಾ ಒಂದರಂತೆ ಜಿಲ್ಲಾ ಲೋಕಾಯುಕ್ತ ಪೊಲೀಸ್‌ ಠಾಣೆಗಳಲ್ಲಿ …

Read More »

ಹಾವೇರಿಯಲ್ಲಿ ಲೋಕಾ ದಾಳಿ ವೇಳೆ ಹೈಡ್ರಾಮ! 9 ಲಕ್ಷ ಹಣವನ್ನು ಗಂಟು ಕಟ್ಟಿ ಮನೆಯಿಂದ ಹೊರಗೆಸೆದ ಅಧಿಕಾರಿ

ಇಂದು ಬೆಳಗ್ಗೆ ಹಾವೇರಿ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳಗ್ಗೆಯಿಂದ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇದರ ನಡುವೆ ಹಾವೇರಿಯ ಅಧಿಕಾರಿಯೊಬ್ಬರ ನಿವಾಸದಲ್ಲಿ ಭಾರಿ ಹೈಡ್ರಾಮ ನಡೆದಿದೆ.   ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇ ಕಾಶೀನಾಥ ಭಜಂತ್ರಿ ಮನೆಯಲ್ಲಿ ಹೈಡ್ರಾಮ ನಡೆದಿದೆ. ಕಾಶೀನಾಥ್​ ಅವರು ಬರೋಬ್ಬರಿ 9 ಲಕ್ಷ ರೂಪಾಯಿ ಹಣವನ್ನು ಗಂಟು ಕಟ್ಟಿ, ಮನೆಯ …

Read More »

ಕುಮಾರಸ್ವಾಮಿಯವರ ನಾನು ಪ್ರೀತಿಯಿಂದ ಕರಿಯಣ್ಣಾಂತನೇ ಕರೆಯೋದುʼ: ಸಚಿವ ಜಮೀರ್‌

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಪರ ಪ್ರಚಾರದ ವೇಳೆ ವಸತಿ ಹಾಗೂ ವಕ್ಫ್‌ ಸಚಿವ ಬಿ. ಝಡ್​. ಜಮೀರ್​ ಅಹ್ಮದ್​ ಖಾನ್ ​​ ಭಾಷಣದ ಮಧ್ಯೆ ಕೇಂದ್ರ ಸಚಿವ ಎಚ್.​ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಹಲವೆಡೆಯಿಂದ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಸಮರ್ಥನೆ ನೀಡಿದ್ದಾರೆ.   ಈ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ “ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ …

Read More »

ಕಣ್ಣೀರು ಯಾರೂ ಹಾಕಬಹುದು.. ಬೆವರನ್ನಲ್ಲ:ಸಿ.ಪಿ.ಯೋಗೇಶ್ವರ್‌

ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಐದು ಬಾರಿ ಶಾಸಕನಾದರೂ ರಾಜಕೀಯವಾಗಿ ಸ್ಥಿರವಾಗಿ ನಿಲ್ಲಲು ಸಾಧ್ಯವಾಗಲಿಲ್ಲ. ಆದರೆ ಜನರ ಒಳಿತಿಗಾಗಿ ಈ ಸ್ಥಿತ್ಯಂತರ ಎಂಬ ಕಾರಣಕ್ಕೆ ನನಗೆ ಬೇಸರವಿಲ್ಲ. ಎರಡು ಬಾರಿಯ ಸೋಲಿಗೆ ಕಾರಣ ತಿಳಿಯದಿರುವುದು ಬೇಸರ ತರಿಸಿದೆ ಎಂದು ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಹೇಳಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕುಮಾರಸ್ವಾಮಿ ಚನ್ನಪಟ್ಟಣವನ್ನು ಸ್ಪಿನ್‌ಬೋರ್ಡ್‌ ಮಾಡಿಕೊಂಡರು. ಆದರೆ ಅಭಿವೃದ್ಧಿಯನ್ನೇ ಮಾಡಲಿಲ್ಲ. ರಾಮನಗರ ಜಿಲ್ಲೆ ನೀರಾವರಿಗೆ ಯಾಕೆ ನೀವು …

Read More »

BJP;10 ನಾಯಕರಿಂದ ಪ್ರತ್ಯೇಕ ಸಂಘಟನೆ: ರಮೇಶ್‌ ಜಾರಕಿಹೊಳಿ

BJP;10 ನಾಯಕರಿಂದ ಪ್ರತ್ಯೇಕ ಸಂಘಟನೆ: ರಮೇಶ್‌ ಜಾರಕಿಹೊಳಿ   ರಾಯಚೂರು: ವಿಜಯೇಂದ್ರ ನಾಯಕತ್ವವನ್ನು ಒಪ್ಪುವುದಿಲ್ಲ. ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಲು ಪ್ರತ್ಯೇಕವಾಗಿ ನಾವು 10 ನಾಯಕರು ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ನಾನು 6 ಜಿಲ್ಲೆಗಳ ಉಸ್ತುವಾರಿ ತೆಗೆದುಕೊಂಡಿ ದ್ದೇನೆ. ಯತ್ನಾಳ್‌, ಪ್ರತಾಪ ಸಿಂಹ, ಅರವಿಂದ ಲಿಂಬಾವಳಿ ಸೇರಿ ಕೆಲವು ನಾಯಕರು ಉಳಿದ ಜಿಲ್ಲೆಗಳ ಹೊಣೆ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಬಗ್ಗೆ …

Read More »

ಇ-ಖಾತಾ ಸಮಸ್ಯೆ: ಇಂದು ಸಚಿವರ ಸಭೆ

ಬೆಂಗಳೂರು: ಸಾರ್ವಜನಿಕರಿಗೆ ದಸ್ತಾವೇಜು ನೋಂದಣಿ ವಿಚಾರದಲ್ಲಿ ಸೃಷ್ಟಿಯಾಗಿ ರುವ ಇ-ಖಾತಾ ಸಮಸ್ಯೆ ಪರಿಹರಿ ಸುವುದಕ್ಕಾಗಿ ಬುಧವಾರ ಉನ್ನತ ಮಟ್ಟದ ಸಭೆ ಆಯೋಜಿಸಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಪೌರಾಡಳಿತ ಸಚಿವ ರಹೀಂ ಖಾನ್‌ ಭಾಗವಹಿಸಲಿದ್ದಾರೆ.   ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ಮತ್ತು ಇ-ಸ್ವತ್ತು ತಂತ್ರಾಂಶವನ್ನು 2014ರಲ್ಲೇ ಸಂಯೋಜನೆ ಗೊಳಿಸಲಾಗಿದೆ. ಹೀಗಾಗಿ ಈಗ ಇ-ಖಾತಾ ಕಡ್ಡಾಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ …

Read More »

ಕಿರಾಣಿ ಅಂಗಡಿಗಳಲ್ಲೂ ಭಾರತ್‌ ಬ್ರ್ಯಾಂಡ್ ಆಹಾರ ಧಾನ್ಯ: ಜೋಶಿ

ಹುಬ್ಬಳ್ಳಿ: ಕೇಂದ್ರ ಸರಕಾರ ರಿಯಾಯಿತಿ ದರದಲ್ಲಿ ನೀಡುತ್ತಿರುವ ಭಾರತ್‌ ಬ್ರ್ಯಾಂಡ್ ನ‌ ಅಕ್ಕಿ, ಗೋಧಿ ಹಿಟ್ಟು, ಬೇಳೆ ಇನ್ನಿತರ ಆಹಾರ ಪದಾರ್ಥಗಳನ್ನು ದೇಶಾದ್ಯಂತ ಎಲ್ಲ ಸೂಪರ್‌ ಬಜಾರ್‌ ಹಾಗೂ ಸಾಮಾನ್ಯ ಕಿರಾಣಿ ಅಂಗಡಿಗಳಲ್ಲಿಯೂ ಮಾರಾಟಕ್ಕಿಡಲು ಯೋಚಿಸಲಾಗಿದೆ. ಅಂಗಡಿಯವ ರಿಗೆ ಕಮಿಷನ್‌ ನಿಗದಿ ಪಡಿಸಲಾಗುತ್ತಿದೆ. ಆನ್‌ಲೈನ್‌ ಮೂಲಕವೂ ಖರೀದಿ ಮಾಡಬಹುದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕರ ಪೂರೈಕೆ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಸೋಮವಾರ ಮೂರುಸಾವಿರ ಮಠ ಶಾಲೆ ಆವರಣದಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ …

Read More »

ವಾಲ್ಮೀಕಿ ಹಗರಣ ಸಿಬಿಐಗೆ: ಇಂದು ಹೈಕೋರ್ಟ್‌ ತೀರ್ಪು

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಕುರಿತು ಹೈಕೋರ್ಟ್‌ ಮಂಗಳವಾರ ತನ್ನ ತೀರ್ಪು ಪ್ರಕಟಿಸಲಿದೆ. ಈ ವಿಚಾರವಾಗಿ ಬ್ಯಾಂಕ್‌ ಸಲ್ಲಿಸಿರುವ ಅರ್ಜಿಯ ಕುರಿತು ವಾದ- ಪ್ರತಿವಾದ ಆಲಿಸಿ ವಿಚಾರಣೆ ಯನ್ನು ಸೆ. 30ಕ್ಕೆ ಪೂರ್ಣಗೊಳಿಸಿದ್ದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿತ್ತು. ಈ ಪ್ರಕರಣವು ಕೇಂದ್ರ ಮತ್ತು ರಾಜ್ಯ ಸರಕಾರಗಳ …

Read More »