ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯಾವುದೇ ಆಣೆ-ಪ್ರಮಾಣ ನಡೆದಿಲ್ಲ. ಮಾಜಿ ಶಾಸಕ ಕೆ. ರಘುಪತಿ ಭಟ್ ಮೊದಲಾದವರು ಇದ್ದರು.
Read More »ಶ್ರೀರಾಮಸೇನೆಯಿಂದ 21ನೇ ವರ್ಷದ ದತ್ತಮಾಲಾ ಅಭಿಯಾನ
ಚಿಕ್ಕಮಗಳೂರು: ಶ್ರೀರಾಮಸೇನೆಯಿಂದ ಹಮ್ಮಿಕೊಂಡಿರುವ 21ನೇ ವರ್ಷದ ದತ್ತಮಾಲಾ ಅಭಿಯಾನ ಭಾನುವಾರ(ನ10) ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಆಗಮಿಸುವ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆದುಕೊಳ್ಳಲಿದ್ದಾರೆ. ದತ್ತಮಾಲಾ ಅಭಿಯಾನದ ಹಿನ್ನಲೆಯಲ್ಲಿ ದತ್ತದೀಪೋತ್ಸವ, ಪಡಿ ಸಂಗ್ರಹ ಕಾರ್ಯಗಳು ನಡೆದಿದ್ದು, ಭಾನುವಾರ ಬೆಳಗ್ಗೆ ನಗರದ ಶಂಕರಮಠ ಸಮೀಪದ ವೇದಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ಸ್ವಾಮೀಜಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಸಭೆಯ ನಂತರ ಶಂಕರಮಠ ಸಮೀಪದಿಂದ ಬಸವನಹಳ್ಳಿ ಮುಖ್ಯರಸ್ತೆ, ಹನುಮಂತಪ್ಪ …
Read More »ಸಲ್ಮಾನ್ ಖಾನ್ ಚಿತ್ರದ ಚಿತ್ರೀಕರಣ ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ
ಹೈದರಾಬಾದ್ : ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಹೈದರಾಬಾದ್ನ ಸ್ಟಾರ್ ಹೋಟೆಲ್ನಲ್ಲಿ ನಡೆಯುತ್ತಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಟಾಪ್ ಹೀರೋಗೆ ಬಂದಿರುವ ನಿರಂತರ ಬೆದರಿಕೆಗಳ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ನಡೆಸಲಾಗುತ್ತಿದೆ. ಸಲ್ಮಾನ್ ಖಾನ್ ಅವರು ‘ವೈ ಪ್ಲಸ್’ ವರ್ಗದ ಭದ್ರತೆ ಹೊಂದಿರುವುದರಿಂದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ಶನಿವಾರ(ನ9) ತಿಳಿಸಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿವೆ.’ಸಿಕಂದರ್’ ಚಿತ್ರದಲ್ಲಿ ‘ರಶ್ಮಿಕಾ …
Read More »30 ವರ್ಷ ಮೈತ್ರಿಯಿದ್ದರೂ ಶಿವಸೇನೆ ಬಿಜೆಪಿಯಾಗಲಿಲ್ಲ,ಕಾಂಗ್ರೆಸ್ ಹೇಗಾಗುತ್ತದೆ?
ಛತ್ರಪತಿ ಸಂಭಾಜಿನಗರ: ಬಿಜೆಪಿಯೊಂದಿಗೆ ಮೂರು ದಶಕಗಳ ಮೈತ್ರಿ ಮಾಡಿಕೊಂಡರೂ ಶಿವಸೇನೆ ತನ್ನ ಗುರುತನ್ನು ಕಳೆದುಕೊಂಡಿಲ್ಲ ಮತ್ತು ಈಗ ಅದು ಕಾಂಗ್ರೆಸ್ ಆಗಿ ಬದಲಾಗುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ(ನ9)ಹೇಳಿದ್ದಾರೆ. ನವೆಂಬರ್ 20 ರ ಮಹಾರಾಷ್ಟ್ರ ಚುನಾವಣೆಗೆ ಮುಂಚಿತವಾಗಿ ಕಲಂನೂರಿ, ಹಿಂಗೋಲಿ ಮತ್ತು ವಸ್ಮತ್ ವಿಧಾನಸಭಾ ಕ್ಷೇತ್ರಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಅಭ್ಯರ್ಥಿಗಳ ಪರ ಹಿಂಗೋಲಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಸೇನಾ (ಯುಬಿಟಿ) …
Read More »ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಸಮಿತಿ ಶಿಫಾರಸು
ಬೆಂಗಳೂರು: ‘ಕೋವಿಡ್ -19 ವೇಳೆಯಲ್ಲಿ ಉಪಕರಣಗಳು ಮತ್ತು ಔಷಧಿಗಳ ಖರೀದಿಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ತನಿಖಾ ಆಯೋಗವು ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ(ನ9) ಹೇಳಿಕೆ ನೀಡಿದ್ದಾರೆ. ”ಬಿಜೆಪಿ ಅಧಿಕಾರದಲ್ಲಿದ್ದಾಗ ಕೋವಿಡ್ ಸಮಯದಲ್ಲಿ ಉಪಕರಣಗಳು ಮತ್ತು ಔಷಧಿಗಳ ಖರೀದಿಯಲ್ಲಿ ಲೂಟಿ …
Read More »ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ
ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರೈಲು ಹಳಿ ಬಳಿ …
Read More »ಕಾರ್ಗಲ್ ನಾಡಕಚೇರಿಯಲ್ಲೇ ದಾಖಲೆ ಒದಗಿಸಲು ಒತ್ತಾಯ
ಸಾಗರ: ಕಾರ್ಗಲ್ನ ನಾಡಕಚೇರಿಯಲ್ಲಿನ ದಾಖಲೆಗಳು ಕಾರ್ಗಲ್ನಲ್ಲೆ ಸಿಗುವಂತಾಗಬೇಕು ಎಂದು ಒತ್ತಾಯಿಸಿ ಇಲ್ಲಿನ ದಲಿತ ಸಂಘರ್ಷ ಸಮಿತಿಯ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಶುಕ್ರವಾರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. 2013ನೇ ಸಾಲಿನಲ್ಲಿ ಕಾರ್ಗಲ್ನಲ್ಲಿ ನಾಡಕಚೇರಿ ಆರಂಭಿಸಲಾಗಿದೆ. 2019ರಲ್ಲಿ ಅಲ್ಲಿನ ನಾಡಕಚೇರಿಗೆ ನೂತನ ಕಟ್ಟಡ ಕೂಡ ಲಭ್ಯವಾಗಿದೆ. ಆದರೆ, ಪ್ರಸ್ತುತ ಆ ಕಚೇರಿ ವ್ಯಾಪ್ತಿಗೆ ಬರುವ ಗ್ರಾಮಗಳ ದಾಖಲೆಗಳು ಅಲ್ಲಿ ಲಭ್ಯವಿಲ್ಲದೆ ಇರುವುದು ಸುತ್ತಮುತ್ತಲ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ. ಕಾರ್ಗಲ್ …
Read More »ವಕ್ಫ್ ಕಾಯ್ದೆ ರದ್ದಿಗೆ ಆಗ್ರಹಿಸಿ ನ.12ರಂದು ಪ್ರತಿಭಟನಾ ಸಭೆ
ಬೆಳಗಾವಿ: ‘ವಕ್ಫ್ ಕಾಯ್ದೆ ರದ್ದುಪಡಿಸಬೇಕು ಒತ್ತಾಯಿಸಿ ಹಾಗೂ ಈ ಕಾಯ್ದೆಯಿಂದ ಹಿಂದೂ ಧಾರ್ಮಿಕ ಸಂಸ್ಥೆಗಳ ಮೇಲೆ ಆಗುತ್ತಿರುವ ಅನ್ಯಾಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಇಲ್ಲಿನ ಸಂಭಾಜಿ ಉದ್ಯಾನದಲ್ಲಿ ನ.12ರಂದು ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದೇವೆ’ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಮುಖಂಡ ಬಸವರಾಜ ಭಾಗೋಜಿ ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಕೊಲ್ಹಾಪುರದ ಕನ್ಹೇರಿಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಸಭೆ ಉದ್ದೇಶಿಸಿ ಮಾತನಾಡುವರು. ಜಿಲ್ಲೆಯ ವಿವಿಧ ಮಠಾಧೀಶರು, ಸಂತರು, …
Read More »ವ್ಯಾನ್ನಲ್ಲಿ ಸಾಗಿಸುತ್ತಿದ್ದ ₹3.70 ಕೋಟಿ ನಗದು ವಶ
ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವ್ಯಾನ್ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹3.70 ಕೋಟಿಗೂ ಹೆಚ್ಚು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ‘ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಶುಕ್ರವಾರ ರಾತ್ರಿ ಕಾರ್ಯಾಚರಣೆಯನ್ನು ನಡೆಸಿದ್ದು, ಪಾಲ್ಘರ್ ಜಿಲ್ಲೆಯ ವಾಡಾದಲ್ಲಿ ನಗದನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಇನ್ಸ್ಪೆಕ್ಟರ್ ದತ್ತ ಕಿಂದ್ರೆ ತಿಳಿಸಿದ್ದಾರೆ. ‘ಶೋಧ ವೇಳೆಯಲ್ಲಿ ₹3.70 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳು ಈ ನಗದಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆ ಹಾಜರುಪಡಿಸಿಲ್ಲ. …
Read More »ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ
ಬೆಂಗಳೂರು : ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಹೂವಿನ ಕುಂಡದಲ್ಲಿ ಗಾಂಜಾ ( Marijuana ) ಗಿಡ ಬೆಳೆಸಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಊರ್ಮಿಳಾ ಮತ್ತು ಗುರುಂಗ್ ಎಂಬ ದಂಪತಿ ವಿರುದ್ಧ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 54 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಊರ್ಮಿಳಾ ಮನೆಯ ಬಾಲ್ಕನಿಯಲ್ಲಿ ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದಳು. ಊರ್ಮಿಳಾ ಮಾಡಿದ್ದ ರೀಲ್ಸ್ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದೆ. ಗಾಂಜಾ ಗಿಡ ಕುರಿತು ವ್ಯಕ್ತಿಯೋರ್ವ …
Read More »
Laxmi News 24×7