Breaking News
Home / ರಾಜ್ಯ (page 539)

ರಾಜ್ಯ

ವಿಧಾನಸಭೆ ಚುನಾವಣೆ: ಎಲ್ಲೆಡೆ ಬಿರುಸಿನ ಮತದಾನ ಆರಂಭ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಚುನಾವಣೆ ದಿನ ಬಂದಿದೆ. ರಾಜ್ಯದ ಎಲ್ಲೆಡೆ ಮುಂಜಾನೆಯಿಂದಲೇ ಬಿರುಸಿನ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಮತದಾನ ಪ್ರಭುಗಳು ಆಯಾ ಮತಕ್ಷೇತ್ರಕ್ಕೆ ಬಂದು ತಮ್ಮ ಮತವನ್ನು ಚಲಾಯಿಸಿದ್ದಾರೆ. ಹಿರಿಯ ನಾಗರಿಕರು ತಮ್ಮ ಮಕ್ಕಳು, ಮೊಮ್ಮಕ್ಕಳೊಂದಿಗೆ ಬಂದು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿದರು.   ಎಲ್ಲೆಲ್ಲಿ ಯಾರು ಮತದಾನ ಮಾಡಿದರು: ಶಿಕಾರಿಪುರ: ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್‌ ವೈ ಕುಟುಂಬ ಮುಂಜಾನೆಯೇ ತಮ್ಮ ಮತವನ್ನು ಚಲಾಯಿಸಿದರು. ಬೆಳಗಾವಿ: ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ …

Read More »

ವೊಟರ್ ಐಡಿ ಇಲ್ಲದಿದ್ದರೂ ಈ ದಾಖಲೆಗಳಿದ್ದರೆ ಮತದಾನ ಮಾಡಬಹುದು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದಲೆ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ವೋಟರ್ ಐಡಿ ಇಲ್ಲದಿದ್ದರೂ ಮತದಾರರು ಈ ದಾಖಲೆಗಳು ಇದ್ದರೆ ಮತದಾನ ಮಾಡಬಹುದು. ಪಾಸ್ ಪೋರ್ಟ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಎಂನರೇಗಾ ಜಾಬ್ ಕಾರ್ಡ್, ಕಚೇರಿ, ಕಂಪನಿಗಳು ತಮ್ಮ ಸಿಬ್ಬಂದಿಗಳಿಗೆ ನೀಡಿರುವ ಫೋಟೋ …

Read More »

ರಾಜ್ಯಾದ್ಯಂತ ಮತದಾನ ಆರಂಭ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಆರಂಭವಾಗಿದೆ. 224 ವಿಧಾನ ಸಭೆ ಕ್ಷೇತ್ರಗಳಿಗೆ ಒಟ್ಟೂ 58,545 ಮತಗಟ್ಟೆ ತೆರೆಯಲಾಗಿದ್ದು, ಎಲ್ಲ ಕಡೆ ಶಾಂತವಾಗಿ ಮತದಾನ ನಡೆಯುತ್ತಿದೆ. ಒಟ್ಟೂ 5.30 ಕೋಟಿ ಜನ ಮತದಾನದ ಹಕ್ಕು ಹೊಂದಿದ್ದಾರೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗ್ಗೆ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮತಗಟ್ಟೆಗೆ ತೆರಳಿದ್ದಾರೆ. ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪುತ್ರ ಭರತ ಹಾಗೂ ಪುತ್ರಿ …

Read More »

ರಾಮದುರ್ಗದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಬೆಳಗಾವಿಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಮದುರ್ಗದಲ್ಲಿ ಸಿಡಿಲು ಬಡಿದ ಪರಿಣಾಮ ಓರ್ವ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮದುರ್ಗದ ಓಬಳಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಪಾರ್ಲೆಷ್ ರಾಠೋಡ್ ಮೃತ ವ್ಯಕ್ತಿ. ಸ್ಥಳಕ್ಕೆ ರಾಮದುರ್ಗ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Read More »

ಬುಧವಾರ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ

ಬೆಳಗಾವಿ:  ಬುಧವಾರ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. 1951 ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷೆನ್ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3 (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ …

Read More »

AI ಸೃಷ್ಟಿ: ಭಾರತದ ಕ್ರಿಕೆಟಿಗರು ಪ್ರಾಯಸ್ಥರಾದಾಗ ಹೀಗಿರ್ತಾರೆ ನೋಡಿ..!

ಮುಂಬೈ: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌ ಇತ್ತೀಚಿನ ಕೆಲ ದಿನಗಳಿಂದ ವಿಶ್ವದಾದ್ಯಂತ ಸುದ್ದಿಯಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಹೊಸ ಹೊಸ ಕ್ರಿಯೆಟಿವ್‌ ಪೋಸ್ಟ್‌ಗಳು ವೈರಲ್‌ ಆಗುತ್ತಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿಗಳು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುತ್ತಿರುವ ಚಿತ್ರಗಳು ವೈರಲ್‌ ಆಗಿದ್ದವು. ಅದರಲ್ಲಿ ಎಲಾನ್‌ ಮಸ್ಕ್‌ನಿಂದ ಹಿಡಿದು ಭಾರತದ ಮುಖೇಶ್‌ ಅಂಬಾನಿ, ರತನ್‌ ಟಾಟಾ ಅವರೆಲ್ಲ ಜಿಮ್‌ನಲ್ಲಿರುವಂತೆ ಸೃಷ್ಟಿಸಲಾಗಿತ್ತು. ಆದರೆ ಈಗ ಭಾರತೀಯ ಕ್ರಿಕೆಟ್‌ ತಂಟದ ಆಟಗಾರರು …

Read More »

ಮುಖ್ಯಮಂತ್ರಿ ಏಕನಾಥ ಶಿಂಧೆ ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿದ ಅವರು ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಬೆಳ್ತಂಗಡಿ ಕ್ಷೇತ್ರದ ಜನತೆಯ ಪರವಾಗಿ ಶಾಸಕ ಹರೀಶ್‌ ಪೂಂಜ ಸ್ವಾಗತಿಸಿದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಡಿ.ಹರ್ಷೇಂದ್ರ ಕುಮಾರ್‌ ಸ್ವಾಗತಿಸಿದರು. …

Read More »

ಶ್ರೀನಿವಾಸ್‌ ಬಿ.ವಿ FIR ವಜಾ ಕೋರಿ ಸುಪ್ರೀಂಗೆ ಮೊರೆ

ನವದೆಹಲಿ: ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ. ಅವರು ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ಎಫ್‌ಐಆರ್‌ ವಜಾ ಮಾಡಬೇಕೆಂದು ಅವರು ನ್ಯಾಯವಾದಿ ದೇವದತ್ತ ಕಾಮತ್‌ ಅವರ ಮೂಲಕ ಅರಿಕೆ ಮಾಡಿಕೊಂಡಿದ್ದಾರೆ.   ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠದ ಮುಂದೆ ಪ್ರಕರಣ ವಿಚಾರಣೆಗೆ ಬಂದಿದೆ. ಪ್ರತಿಪಕ್ಷದ ಪ್ರಮುಖ ನಾಯಕರೊಬ್ಬರಿಗೆ ಅಸ್ಸಾಂನಲ್ಲಿ ವಿನಾ ಕಾರಣ ಕಿರುಕುಳ ನೀಡಲಾಗುತ್ತಿದೆ ಎಂದು ಕಾಮತ್‌ ನ್ಯಾಯಪೀಠದ ಮುಂದೆ …

Read More »

ಸೋಲು-ಗೆಲುವಿಗೆ ಒಂದೊಂದು ಮತವೂ ನಿರ್ಣಾಯಕ

ಬೆಂಗಳೂರು: ಕೇವಲ ಒಂದು ಓಟಿನಿಂದ ಒಬ್ಬರು ಗೆದ್ದು, ಇನ್ನೊಬ್ಬರು ಸೋತಿರುವ ರೋಚಕ ಇತಿಹಾಸ ರಾಜ್ಯ ಹಾಗೂ ದೇಶದಲ್ಲಿದೆ. ಕೇವಲ ಒಂದು ಮತದಿಂದ ಸೋತವರು, ಅತಿ ಕಡಿಮೆ ಅಂತರದಿಂದ ಗೆದ್ದವರ ಕಥೆ ಮತ್ತು ವ್ಯಥೆಗೆ ಸುದೀರ್ಘ‌ ಇತಿಹಾಸವಿದೆ. ಪ್ರಜಾಪ್ರಭುತ್ವ ಎಂಬ ಭವ್ಯ ಬಂಗಲೆಗೆ ಮತಗಳೇ ಅಡಿಪಾಯ. ಕಟ್ಟಡ ಗಟ್ಟಿಯಾಗಿರಲು ಒಂದೊಂದು ಇಟ್ಟಿಗೆಯೂ ಮುಖ್ಯ. ಅದರಂತೆ ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಒಂದೊಂದು ಮತವೂ ನಿರ್ಣಾಯಕವಾಗುತ್ತದೆ. ಜನತಂತ್ರ ವ್ಯವಸ್ಥೆಯಲ್ಲಿ ಒಂದೊಂದು ಮತಕ್ಕೂ ಮೌಲ್ಯವಿದೆ. ಅಭ್ಯರ್ಥಿಗಳ ಸೋಲು-ಗೆಲುವು …

Read More »

ಎಲೆಕ್ಷನ್ ಫೈಟ್: ಬಿಜೆಪಿ ಅಭ್ಯರ್ಥಿ,ಕಾಂಗ್ರೆಸ್ ಶಾಸಕನ ಪತ್ನಿ ಮೆಲೆ ದಾಳಿಯ ಆರೋಪ-ಪ್ರತ್ಯಾರೋಪ

ವಿಜಯಪುರ: ವಿಧಾನಸಭೆ ಚುನಾವಣೆಯ ಮತದಾನಕ್ಕೆ ಒಂದು ದಿನ ಬಾಕಿ ಇರುವಂತೆ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ ಅಭ್ಯರ್ಥಿಯ ಸೊಸೆ-ಶಾಸಕರೊಬ್ಬರ ಪತ್ನಿಯ ಮೆಲೆ ದಾಳಿ ನಡೆದಿರುವ ಆರೋಪ ಕೇಳಿ ಬಂದಿವೆ. ಎರಡೂ ಪ್ರಕರಣದಲ್ಲಿ ಪೊಲೀಸ್ ಠಾಣೆಗೆ ಯಾರೂ ದೂರು ನೀಡಿಲ್ಲ. ಆದರೆ ಎರಡೂ ಪ್ರಕರಣಗಳಲ್ಲಿ ಬಾಧಿತ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಸದರಿ ಘಟನೆಯ ಕುರಿತು ಮಾಹಿತಿ ನೀಡಲು ಎಂ.ಬಿ.ಪಾಟೀಲ ಮಂಗಳವಾರ ಬೆಳಿಗ್ಗೆ 9-15 ಕ್ಕೆ ನಗರದಲ್ಲಿರುವ …

Read More »