Breaking News

ರಾಜ್ಯ

ಪ್ರಕಾಶ್ ಅಂಬೇಡ್ಕರ್‌ಗೆ ಎದೆ ನೋವು; ಆಸ್ಪತ್ರೆಗೆ ದಾಖಲು

ಮುಂಬೈ: ವಂಚಿತ್ ಬಹುಜನ್ ಅಘಾಡಿ (ವಿಬಿಎ) ಪಕ್ಷದ ಸಂಸ್ಥಾಪಕ ಪ್ರಕಾಶ್‌ ಅಂಬೇಡ್ಕರ್‌ (70) ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಪುಣೆಯ ಆಸ್ಪತ್ರೆಗೆ ಗುರುವಾರ ಮುಂಜಾನೆ ದಾಖಲಿಸಲಾಗಿದೆ. ಪ್ರಕಾಶ್‌ ಅಂಬೇಡ್ಕರ್‌ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಮೊಮ್ಮಗ. ವೃತ್ತಿಯಿಂದ ವಕೀಲ, ಸಾಮಾಜಿಕ ಹೋರಾಟಗಾರ ಮತ್ತು ರಾಜಕಾರಣಿಯೂ ಆಗಿರುವ ಅವರು ‘ಬಾಳಾ ಸಾಹೇಬ್‌ ಅಂಬೇಡ್ಕರ್‌’ ಎಂದು ಜನಪ್ರಿಯ. ಅವರು, ಅಕೋಲ ಕ್ಷೇತ್ರದಿಂದ ಎರಡು ಬಾರಿ ಸಂಸದ ಮತ್ತು …

Read More »

ಬೆಳಕಿನ ಹಬ್ಬಕ್ಕೆ ‍ಪಗಡೆಯಾಟದ ಸಡಗರ

ದೀಪಾವಳಿ ಹಬ್ಬ ಬರುತ್ತಿದ್ದಂತೆ ಮೂಡಲಗಿ ತಾಲ್ಲೂಕಿನ ಹಳ್ಳಿಗಳಲ್ಲಿ ಪಗಡೆ ಆಟ ಆಡುವುದಕ್ಕೆ ಸಜ್ಜಾಗುತ್ತಾರೆ. ದೀಪಾವಳಿಗೆ ಉತ್ತರ ಕರ್ನಾಟಕದ ಬಹುತೇಕ ಗ್ರಾಮಗಳಲ್ಲಿ ಪಗಡೆ ಆಟದ ಸಂಭ್ರಮ ತುಂಬಿಕೊಳ್ಳುತ್ತದೆ. ಕೈಯಲ್ಲಿ ಪಗಡೆ ಹಾಸು, ಕವಡೆ ಕಾಯಿಗಳನ್ನು ಹಿಡಿದುಕೊಂಡು ಗ್ರಾಮದ ಅಗಸಿ ಕಟ್ಟೆ, ಪಂಚಾಯಿತಿ ಕಟ್ಟೆ, ದೇವಸ್ಥಾನದ ಕಟ್ಟೆಗೋ ಹೊರಟರೆಂದರೆ ದೀಪಾವಳಿ ಮೈದುಂಬಿಕೊಂಡಿದೆ ಎಂದರ್ಥ.   ದೀಪಾವಳಿಯ ಸುತ್ತ ಐದು ದಿನಗಳ ವರೆಗೆ ಪಗಡೆ ಆಟದ ರಂಗು ಏರುತ್ತದೆ. ಊರುಗಳಲ್ಲಿ ಆಕಾಶಬುಟ್ಟಿ ಮತ್ತು ಹಣತೆಗಳ …

Read More »

ವೈವಿಧ್ಯಮಯ ವಿನ್ಯಾಸಗಳ ಆಕಾಶಬುಟ್ಟಿಗಳು

ವೈವಿಧ್ಯಮಯ ವಿನ್ಯಾಸಗಳ ಆಕಾಶಬುಟ್ಟಿಗಳು ಬೆಳಗಾವಿ ಮಾರುಕಟ್ಟೆಯ ಬಣ್ಣವನ್ನು ಆಕರ್ಷಕಗೊಳಿಸಿದೆ. ತರಕಾರಿ, ಹಣ್ಣು-ಹಂಪಲುಗಳ ರಾಶಿ ಕಾಣಿಸುತ್ತಿದ್ದ ರಸ್ತೆಗಳಲ್ಲಿ ಏಕಾಏಕಿ ಕಾಮನಬಿಲ್ಲಿನಂಥ ಲೋಕ ಸೃಷ್ಟಿಯಾಗಿದೆ. ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಸಾಮಾನ್ಯ ಮಾರುಕಟ್ಟೆ ಈಗ ವರ್ಣರಂಜಿತ ರೂಪ ಪಡೆದು ಕಂಗೊಳಿಸುತ್ತಿದೆ. ಜನರಿಂದ ಕಿಕ್ಕಿರಿದು ಸೇರಿರುವ ಮಾರುಕಟ್ಟೆಗೆ ಕಾಲಿಟ್ಟರೆ ಸಾಕು; ಹೂಮಾಲೆಗಳು, ನಕ್ಷತ್ರಗಳು, ಬಗೆಬಗೆಯ ವಿನ್ಯಾಸಗಳ ಆಭರಣಗಳು, ಬಟ್ಟೆಗಳು, ವಿದ್ಯುದ್ದೀಪಗಳು ಚುಂಬಕಶಕ್ತಿಯಂತೆ ಸೆಳೆಯುತ್ತಿವೆ. ವರ್ಣರಂಜಿತ ಶಿವನಬುಟ್ಟಿಗಳಂತೂ ಒಂದಕ್ಕಿಂತ ಮತ್ತೊಂದು ಸುಂದರವಾಗಿವೆ. ಅವುಗಳ ಖರೀದಿಗೆ …

Read More »

ಸಾಂಪ್ರದಾಯಿಕ ಹಣತೆಗಳು, ಬೇಕಿದೆ ಸರ್ಕಾರದ ನೆರವು

ಚಿಕ್ಕೋಡಿ: ದೀಪಾವಳಿ ಬಂದರೆ ಸಾಕು; ತಾಲ್ಲೂಕಿನ ಕೋಥಳಿ ಗ್ರಾಮದಲ್ಲಿ ಸಡಗರ ಇಮ್ಮಡಿಯಾಗುತ್ತಿತ್ತು. ಮಣ್ಣಿನ ಹಣತೆಗಳನ್ನು ಮಾಡಲು ನಾಲ್ಕು ತಿಂಗಳು ಮೊದಲು ಸಿದ್ಧತೆ ನಡೆಯುತ್ತಿದ್ದವು. ಇಲ್ಲಿನ 30ಕ್ಕೂ ಹೆಚ್ಚು ಕುಂಬಾರ ಕುಟುಂಬಗಳು ಈ ಹಬ್ಬಕ್ಕಾಗಿ ಕಾಯುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಕುಂಬಾರರಿಗೂ ದೀಪಾವಳಿಗೆ ಸಂಬಂಧವೇ ಇಲ್ಲ ಎಂಬಷ್ಟು ಸಮಸ್ಯೆ ತಲೆದೋರಿದೆ. ಜೇಡಿಮಣ್ಣಿನ ಹಣತೆಗೆ ಬೇಡಿಕೆ ಇಲ್ಲದೇ ಕುಂಬಾರರು ಕುಂಬಾರಿಕೆಯಿಂದ ವಿಮುಖರಾಗುತ್ತಿದ್ದಾರೆ. ದೀಪಾವಳಿ ಹಬ್ಬದಲ್ಲಿ ಮಣ್ಣಿನ ಹಣತೆಯಲ್ಲಿ ದೀಪ ಬೆಳಗಿಸುವುದು ಸಾಮಾನ್ಯವಾಗಿತ್ತು. ಆದರೆ ಇಂದು …

Read More »

ಬಯಲು ನಾಡ’ಲ್ಲಿ ಬೆಳಕಿನ ಹಬ್ಬ: ಖರೀದಿ ಭರಾಟೆ ಜೋರು, ತರಹೇವಾರಿ ಖಾದ್ಯದ ಘಮಲು

ಬೈಲಹೊಂಗಲ: ಇದೀಗ ತಾನೆ ಚನ್ನಮ್ಮನ ವಿಜಯೋತ್ಸವದ ಸಂಭ್ರಮದಲ್ಲಿ ಮಿಂದೆದ್ದ ಬೈಲಹೊಂಗಲ ಜನರಿಗೆ ಮತ್ತೊಂದು ಸಡಗರ ಬಂದಿದೆ. ಪಟ್ಟಣ ಹಾಗೂ ತಾಲ್ಲೂಕಿನ ಎಲ್ಲೆಡೆ ಈಗ ದೀಪಾವಳಿಯ ಸಂಭ್ರಮ ಮನೆಮಾಡಿದೆ. ತೋರಣ, ಕಬ್ಬು, ಕಾರ್ತಿಕ ಬುಟ್ಟಿ, ಹೊಸ ಬಟ್ಟೆ ಖರೀದಿ ಜೋರಾಗಿದೆ. ದೀಪಾವಳಿಯ ಹಬ್ಬದ ಉಡುಗೊರೆಯಾಗಿ ಕಳೆದ ಒಂದು ತಿಂಗಳ ಹಿಂದೆ ಸುರಿದ ದೊಡ್ಡ ಮಳೆಯಿಂದ ರೈತರು, ವ್ಯಾಪಾರಸ್ಥರು ಖುಷಿಯಾಗಿದ್ದಾರೆ. ದೀಪಾವಳಿ ಸಂಭ್ರಮ ಮನೆಮನೆಗಳಲ್ಲಿ ತುಪ್ಪದ ಘಮಲು ಬೀರುವಂತೆ ಮಾಡಿದೆ. ಭರ್ಜರಿ ಹೋಳಿಗೆ, ವಡೆ, …

Read More »

ದೀಪಾವಳಿ, ಸಾಲು ಸಾಲು ರಜೆಗೆ ಊರಿಗೆ ಹೊರಟ ಭಾರೀ ಜನ: ಬೆಂಗಳೂರಲ್ಲಿ ಟ್ರಾಫಿಕ್ ಜಾಮ್: ಬಸ್ ಸೀಟ್ ಗಾಗಿ ನೂಕುನುಗ್ಗಲು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಜನ ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದು, ಟೌನ್ ಹಾಲ್ ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜೇಸಿ ರಸ್ತೆ, ಮೈಸೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಗಾಂಧಿನಗರ ಸುತ್ತಮುತ್ತ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ 2 ಗಂಟೆಯಿಂದಲೂ ವಾಹನ ಸಂಚಾರ ಮಂದಗತಿಯಲ್ಲಿ ಸಾಗಿದೆ. ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ಎಲ್ಲೆಂದರಲ್ಲಿ ಬೈಕ್ ಸವಾರರು ಯುಟರ್ನ್ ತೆಗೆದುಕೊಳ್ಳುತ್ತಿದ್ದಾರೆ. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಎಐ ಸಿಗ್ನಲ್ ಗಳು ಕೆಲಸಕ್ಕೆ ಬಾರದಂತಾಗಿದೆ. ವಾಹನಗಳ …

Read More »

ಕರ್ನಾಟಕದಲ್ಲಿ ಹೊಸ 11 ವೈದ್ಯಕೀಯ ಕಾಲೇಜು ನಿರ್ಮಾಣ

ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ.   ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ. ಆದ್ದರಿಂದ ಸರ್ಕಾರ …

Read More »

ಕೃಷ್ಣೆ ಮಡಿಲ ಕುವರನಿಗೆ ‘ರಾಜ್ಯೋತ್ಸವ’ ಗರಿ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿ ಮೂಲದವರಾದ, ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. 1955ರ ಆಗಸ್ಟ್‌ 1ರಂದು ತವನಪ್ಪ ಹಾಗೂ ಸಂಕವ್ವ ದಂಪತಿ ಪುತ್ರರಾಗಿ ಬಾಳಾಸಾಹೇಬ ಜನಿಸಿದರು. ಬಾಗಲಕೋಟೆಯ ಎಸ್‌.ಸಕ್ರಿ ಪದವಿಪೂರ್ವ ಕಾಲೇಜಿನಲ್ಲಿ ಭೂಗೋಳ ವಿಜ್ಞಾನ ವಿಷಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.   8 ಕಥಾ ಸಂಕಲನಗಳು, 10 ಕಾದಂಬರಿಗಳು, 6 ವಿಮರ್ಶಾ ಕೃತಿಗಳು, ಎರಡು ಸಂಶೋಧನಾ ಗ್ರಂಥ, ಎರಡು …

Read More »

ವಕ್ಫ್‌ ಆಸ್ತಿ ಗೊಂದಲ ನಿವಾರಿಸದಿದ್ದರೆ ಹೋರಾಟ: ರಾಜೂಗೌಡ

ಹುಣಸಗಿ: ಸುರಪುರ ಮತಕ್ಷೇತ್ರದ ಸೇರಿ ಯಾದಗಿರಿ ಜಿಲ್ಲೆಯಲ್ಲಿ ಸ್ವಂತ ಮಾಲಿಕತ್ವ ಹೊಂದಿದ ರೈತನ ಜಮೀನನ್ನು ವಕ್ಫ್‌ ಎಂದು ಪಹಣಿ ನಮೂದಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇದನ್ನು ತಕ್ಷಣವೇ ಸರಿಪಡಿಸದಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೂಗೌಡ ಹೇಳಿದ್ದಾರೆ.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಹಲವೆಡೆ ರೈತರ ಪಹಣಿಯ ಕಾಲಂ ನಂ 11 ರಲ್ಲಿ ವಕ್ಫ್‌ ಎಂದು ನಮೂದಾಗಿರುವ ಸಂದರ್ಭದಲ್ಲಿ …

Read More »

‘ಬೈ ಎಲೆಕ್ಷನ್’ ನಂತರ ರಾಜ್ಯದಲ್ಲಿ ‘ರಾಜ್ಯಪಾಲರ ಆಳ್ವಿಕೆ’ ಜಾರಿ : HD K

ರಾಮನಗರ : ಕೆಲವು ದಿನಗಳ ಹಿಂದೆ 2028 ರ ವರೆಗೆ ಕಾಂಗ್ರೆಸ್ ಸರ್ಕಾರ ಇರಲ್ಲ, ಬಳಿಕ ನಾನೇ ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಎಚ್ ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು ಬಳಿಕ ರಾಜ್ಯಪಾಲರ ಆಳ್ವಿಕೆ ಜಾರಿಯಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದರು. …

Read More »